HomeUncategorizedಬಡ ಭೀಮಣ್ಣನ ಮೇಲೆ ರಾಯಚೂರು ಪೊಲೀಸರ ಸವಾರಿ...

ಬಡ ಭೀಮಣ್ಣನ ಮೇಲೆ ರಾಯಚೂರು ಪೊಲೀಸರ ಸವಾರಿ…

- Advertisement -
- Advertisement -

| ಸೋಮಶೇಖರ್ ಚಲ್ಯ |

ರಾಯಚೂರಿನ ಸುರಕ್ಷಾ ಆಸ್ಪತ್ರೆಯ ಹಾಸಿಗೆಯ ಮೇಲೆ ಮಲಗಿರುವ ಈ ಯುವಕನ ಹೆಸರು ಭೀಮಣ್ಣ. ಇಪ್ಪತ್ನಾಲ್ಕನೇ ವಯಸ್ಸಿನ ಈತನೇ ಇವನ ಕುಟುಂಬದ ಆಧಾರ ಸ್ತಂಭ. ಇರೋ ನಾಲ್ಕು ಎಕರೆ ಒಣಭೂಮಿಯಲ್ಲಿ ಒಂದಷ್ಟು ದವಸ ಧಾನ್ಯ ಬೆಳೆದುಕೊಂಡು, ಕೆಲಸ ಇಲ್ಲದ ಸಮಯದಲ್ಲಿ ಕೂಲಿನಾಲಿ ಮಾಡುತ್ತಾ ಜೀವನ ಸಾಗಿಸುತ್ತಿರುವ ಕುಟುಂಬ ಈತನದು.

ಐದು ತಿಂಗಳ ಹಿಂದೆ ಹುಟ್ಟಿದ ಎರಡನೇ ಮಗು ಸಮಸ್ಯೆಯೊಂದಿಗೇ ಹುಟ್ಟಿತು. ಖಾಸಗಿ ಆಸ್ಪತ್ರೆಯಲ್ಲಿ ಎಷ್ಟೇ ಖರ್ಚು ಮಾಡಿದರೂ ಮಗು ಉಳಿಯಲಿಲ್ಲ. ಇದಾದ ಕೆಲವೇ ದಿನಗಳಲ್ಲಿ ಆತನ ತಂದೆಯೂ ತೀರಿಕೊಂಡರು. ಆಸ್ಪತ್ರೆ, ಮಗು ಮತ್ತು ತಂದೆಯ ಸಂಸ್ಕಾರಕ್ಕಾಗಿ ಹೆಚ್ಚು ಸಾಲದ ಹೊರೆ ಹೆಚ್ಚಾಗಿತ್ತು. ಶವಸಂಸ್ಕಾರದ ನಂತರದ ಕಾರ್ಯಗಳಿಗಾಗಿ ಭೀಮಣ್ಣ ಹುಲಿಗೆಮ್ಮ ಮತ್ತು ಆಕೆಯ ಗಂಡ ಬಾರ್ ಆಂಜನೇಯನಿಂದ ಮೂರು ಸಾವಿರ ರೂಪಾಯಿಗಳನ್ನು ಸಾಲ ಪಡೆದಿದ್ದ.

ಅದಾದ ಕೆಲವು ದಿನಗಳ ನಂತರ ತಮ್ಮ ಮನೆಯಲ್ಲಿ 55,000 ರೂಪಾಯಿ ಕಳ್ಳತನವಾಗಿದೆ, ಕದ್ದಿರುವುದು ಭೀಮಣ್ಣನೇ ಇರಬೇಕೆಂಬ ಅನುಮಾನ ಆತನ ಮೇಲೆ ಇಡಪನೂರು ಪೊಲೀಸ್ ಸ್ಟೇಷನ್‍ನಲ್ಲಿ ದೂರು ನೀಡಿದರು. ಪೊಲೀಸರು ವಿಚಾರಣೆಗಾಗಿ ಕರೆದಾಗ ಬೀಮಣ್ಣನ ಜೊತೆ ಹೋದ ಊರಿನ ಜನರು ಆತ ಹಣ ಕದ್ದಿಲ್ಲ. ನಾವು ಈ ವಿಷಯವನ್ನು ಊರಿನಲ್ಲೇ ಬಗೆಹರಿಸಿಕೊಳ್ಳುತ್ತೇವೆಂದು ಹೇಳಿ ಬಂದಿದ್ದಾರೆ. ಇದನ್ನು ನಿರಾಕರಿಸಿದ ಬಾರ್ ಆಂಜನೇಯ ಮತ್ತೆ ಅದೇ ಪೊಲೀಸರಿಗೆ ದೂರು ನೀಡಿದ್ದಾನೆ.

ಭೀಮಣ್ಣನನ್ನು ವಿಚಾರಣೆ ನಡೆಸಿ ವಾಪಸ್ ಕಳಿಸುವುದಾಗಿ ಹೇಳಿ ಆತನನ್ನು ಎತ್ತಾಕಿಕೊಂಡು ಹೋದ ಪೊಲೀಸರು ಮನಸೋಯಿಚ್ಛೆ ಹೊಡೆದಿದ್ದಾರೆ. ಭೀಮಣ್ಣ ತಾನು ಯಾವ ತಪ್ಪನ್ನೂ ಮಾಡಿಲ್ಲ, ತಾನು ಹಣವನ್ನು ಕದ್ದಿಲ್ಲ. ನೀವು ಹೀಗೆ ಹೊಡೆದರೆ ಸತ್ತು ಹೋಗುತ್ತೇನೆ. ನನ್ನ ಹೆಂಡತಿ, ಮಗು, ಅಮ್ಮನನ್ನು ಯಾರು ಸಾಕ್ತಾರೆ?” ಅಂತೆಲ್ಲಾ ಗೋಗರೆದರೂ ಕರಗದ ಪೊಲೀಸರು ಆತನಿಗೆ ಮತ್ತಷ್ಟು ಚಿತ್ರಹಿಂಸೆ ನೀಡಿದ್ದಾರೆ. ಹಿಂಸೆ ತಾಳಲಾರದೆ ಭೀಮಣ್ಣ ಕಣ್ಣು ಮಂಜಾಗಿ ಕುಸಿದು ಬಿದ್ದಿದ್ದಾನೆ. ಇದನ್ನ ನೋಡಿ ಗಾಬರಿಗೊಂಡ ಪೊಲೀಸರು ಭೀಮಣ್ಣ ಲಾಕಪ್ಪಿನಲ್ಲೇ ಸತ್ತರೆ ತಾವು ತೊಂದರೆಗೆ ಸಿಲುಕಿಕೊಳ್ಳುತ್ತೇವೆಂದು ಸ್ಟೇಷನ್ನಿನಿಂದ ದೂರ ಕಳಿಸಿದ್ದ ಭೀಮಣ್ಣನ ನಾಲ್ವರು ಸಂಬಂಧಿಗಳ ಕೈಗೆ ಭೀಮಣ್ಣನನ್ನು ಒಪ್ಪಿಸಿ, “ಇವನನ್ನು ಸೀದಾ ಊರಿಗೆ ಕರೆದುಕೊಂಡು ಹೋಗಿ. ಅಲ್ಲಿ-ಇಲ್ಲಿ ಹೋಗಿ ನಮ್ಮ ವಿರುದ್ಧ ಏನಾದರೂ ಮಾತಾಡಿದರೆ ಮತ್ತೆ ಅವನನ್ನು ಎತ್ತಾಕಿಕೊಂಡು ಬಂದು ಇವತ್ತು ಮಾಡಿದ್ದರ ಹತ್ತು ಪಟ್ಟು ಮಾಡಿ, ಅವನನ್ನು ಕೊಂದು ಹೆಣ ಕೂಡ ಸಿಗದಂತೆ ಬಿಸಾಕುತ್ತೇವೆ,” ಎಂದು ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಡಾಕೇಶ ಹೆದರಿಸಿದ್ದಾನೆ.

ಚಿಂತಾಜನಕಸ್ಥಿತಿಯಲ್ಲಿದ್ದ ಭೀಮಣ್ಣನನ್ನು ರಾಯಚೂರಿನ ಸುರಕ್ಷಾ ಎಂಬ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಅಲ್ಲಿಗೆ ಬಂದ ಇಡಪನೂರು ಪೊಲೀಸರು ಮೇಲಧಿಕಾರಿಗಳಿಗೆ, ಸರ್ಕಾರಕ್ಕೆ ಈ ಕುರಿತು ಕಂಪ್ಲೇಂಟ್ ಕೊಡಬಾರದೆಂದು ಭೀಮಣ್ಣ ಮತ್ತು ಆತನ ಕುಟುಂಬದವರಿಗೆ ಖಾಸಗಿ ಆಸ್ಪತ್ರೆಗೆ ಸೇರಿದ್ದೀರಾ, ಆಸ್ಪತ್ರೆಯ ಖರ್ಚನ್ನೆಲ್ಲಾ ನಾವು ನೋಡಿಕೊಳ್ಳುತ್ತೇವೆಂದು ಆಮಿಷವನ್ನೂ, ಇದನ್ನು ದೊಡ್ಡ ಇಶ್ಯೂ ಮಾಡಿದರೆ ಮುಂದೆಯೂ ಇಂತಹ ಹಿಂಸೆಗಳನ್ನು ಅನುಭವಿಸಬೇಕಾಗುತ್ತದೆಂದು ಬೆದರಿಕೆಯನ್ನೂ ಒಡ್ಡಿದ್ದಾರೆ.

“ಸಾರ್, ನಾವು ಬಡವರು. ದುಡಿದು ತಿನ್ನುವ ಮಂದಿ. ಏನೂ ತಪ್ಪು ಮಾಡದಿದ್ದರೂ ಈ ಪೊಲೀಸರು ನನಗೆ ಕಳ್ಳತನದ ಹಣೆಪಟ್ಟಿ ಕಟ್ಟಿ ಚಿತ್ರಹಿಂಸೆ ಕೊಟ್ಟರು. ಸತ್ತೇ ಹೋಗುತ್ತೇನೆ ಎಂದುಕೊಂಡಿದ್ದೆ. ಹೇಗೋ ಬದುಕಿಬಿಟ್ಟೆ. ತಪ್ಪು ಮಾಡದಿದ್ದ ನನಗೆ ಚಿತ್ರಹಿಂಸೆ ಕೊಟ್ಟ ಪೊಲೀಸರನ್ನು ಸುಮ್ಮನೇ ಬಿಡಬಾರದು ಅನ್ನಿಸುತ್ತೆ. ಆದರೆ, ನಾವು ಬಡವರು. ಪೊಲೀಸರನ್ನು ಎದುರುಹಾಕಿಕೊಂಡರೆ ಮತ್ತೆ ನಾಳೆ ಯಾವ್ಯಾವುದೋ ಕೇಸು ಹಾಕಿ ಠಾಣೆಗೆ ಕರೆತಂದು ಚಿತ್ರಹಿಂಸೆ ಕೊಡಬಹುದು ಅಂತ ಹೆದರಿಕೆಯಾಗುತ್ತದೆ. ಅದಕ್ಕೆ ಸುಮ್ಮನಾಗಿದ್ದೇವೆ” ಎಂದು ತನ್ನ ಅಸಹಾಯಕತೆಗೆ ಬೇಸರ ವ್ಯಕ್ತಪಡಿಸಿದ ಭೀಮಣ್ಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...