HomeUncategorizedಬಡ ಭೀಮಣ್ಣನ ಮೇಲೆ ರಾಯಚೂರು ಪೊಲೀಸರ ಸವಾರಿ...

ಬಡ ಭೀಮಣ್ಣನ ಮೇಲೆ ರಾಯಚೂರು ಪೊಲೀಸರ ಸವಾರಿ…

- Advertisement -
- Advertisement -

| ಸೋಮಶೇಖರ್ ಚಲ್ಯ |

ರಾಯಚೂರಿನ ಸುರಕ್ಷಾ ಆಸ್ಪತ್ರೆಯ ಹಾಸಿಗೆಯ ಮೇಲೆ ಮಲಗಿರುವ ಈ ಯುವಕನ ಹೆಸರು ಭೀಮಣ್ಣ. ಇಪ್ಪತ್ನಾಲ್ಕನೇ ವಯಸ್ಸಿನ ಈತನೇ ಇವನ ಕುಟುಂಬದ ಆಧಾರ ಸ್ತಂಭ. ಇರೋ ನಾಲ್ಕು ಎಕರೆ ಒಣಭೂಮಿಯಲ್ಲಿ ಒಂದಷ್ಟು ದವಸ ಧಾನ್ಯ ಬೆಳೆದುಕೊಂಡು, ಕೆಲಸ ಇಲ್ಲದ ಸಮಯದಲ್ಲಿ ಕೂಲಿನಾಲಿ ಮಾಡುತ್ತಾ ಜೀವನ ಸಾಗಿಸುತ್ತಿರುವ ಕುಟುಂಬ ಈತನದು.

ಐದು ತಿಂಗಳ ಹಿಂದೆ ಹುಟ್ಟಿದ ಎರಡನೇ ಮಗು ಸಮಸ್ಯೆಯೊಂದಿಗೇ ಹುಟ್ಟಿತು. ಖಾಸಗಿ ಆಸ್ಪತ್ರೆಯಲ್ಲಿ ಎಷ್ಟೇ ಖರ್ಚು ಮಾಡಿದರೂ ಮಗು ಉಳಿಯಲಿಲ್ಲ. ಇದಾದ ಕೆಲವೇ ದಿನಗಳಲ್ಲಿ ಆತನ ತಂದೆಯೂ ತೀರಿಕೊಂಡರು. ಆಸ್ಪತ್ರೆ, ಮಗು ಮತ್ತು ತಂದೆಯ ಸಂಸ್ಕಾರಕ್ಕಾಗಿ ಹೆಚ್ಚು ಸಾಲದ ಹೊರೆ ಹೆಚ್ಚಾಗಿತ್ತು. ಶವಸಂಸ್ಕಾರದ ನಂತರದ ಕಾರ್ಯಗಳಿಗಾಗಿ ಭೀಮಣ್ಣ ಹುಲಿಗೆಮ್ಮ ಮತ್ತು ಆಕೆಯ ಗಂಡ ಬಾರ್ ಆಂಜನೇಯನಿಂದ ಮೂರು ಸಾವಿರ ರೂಪಾಯಿಗಳನ್ನು ಸಾಲ ಪಡೆದಿದ್ದ.

ಅದಾದ ಕೆಲವು ದಿನಗಳ ನಂತರ ತಮ್ಮ ಮನೆಯಲ್ಲಿ 55,000 ರೂಪಾಯಿ ಕಳ್ಳತನವಾಗಿದೆ, ಕದ್ದಿರುವುದು ಭೀಮಣ್ಣನೇ ಇರಬೇಕೆಂಬ ಅನುಮಾನ ಆತನ ಮೇಲೆ ಇಡಪನೂರು ಪೊಲೀಸ್ ಸ್ಟೇಷನ್‍ನಲ್ಲಿ ದೂರು ನೀಡಿದರು. ಪೊಲೀಸರು ವಿಚಾರಣೆಗಾಗಿ ಕರೆದಾಗ ಬೀಮಣ್ಣನ ಜೊತೆ ಹೋದ ಊರಿನ ಜನರು ಆತ ಹಣ ಕದ್ದಿಲ್ಲ. ನಾವು ಈ ವಿಷಯವನ್ನು ಊರಿನಲ್ಲೇ ಬಗೆಹರಿಸಿಕೊಳ್ಳುತ್ತೇವೆಂದು ಹೇಳಿ ಬಂದಿದ್ದಾರೆ. ಇದನ್ನು ನಿರಾಕರಿಸಿದ ಬಾರ್ ಆಂಜನೇಯ ಮತ್ತೆ ಅದೇ ಪೊಲೀಸರಿಗೆ ದೂರು ನೀಡಿದ್ದಾನೆ.

ಭೀಮಣ್ಣನನ್ನು ವಿಚಾರಣೆ ನಡೆಸಿ ವಾಪಸ್ ಕಳಿಸುವುದಾಗಿ ಹೇಳಿ ಆತನನ್ನು ಎತ್ತಾಕಿಕೊಂಡು ಹೋದ ಪೊಲೀಸರು ಮನಸೋಯಿಚ್ಛೆ ಹೊಡೆದಿದ್ದಾರೆ. ಭೀಮಣ್ಣ ತಾನು ಯಾವ ತಪ್ಪನ್ನೂ ಮಾಡಿಲ್ಲ, ತಾನು ಹಣವನ್ನು ಕದ್ದಿಲ್ಲ. ನೀವು ಹೀಗೆ ಹೊಡೆದರೆ ಸತ್ತು ಹೋಗುತ್ತೇನೆ. ನನ್ನ ಹೆಂಡತಿ, ಮಗು, ಅಮ್ಮನನ್ನು ಯಾರು ಸಾಕ್ತಾರೆ?” ಅಂತೆಲ್ಲಾ ಗೋಗರೆದರೂ ಕರಗದ ಪೊಲೀಸರು ಆತನಿಗೆ ಮತ್ತಷ್ಟು ಚಿತ್ರಹಿಂಸೆ ನೀಡಿದ್ದಾರೆ. ಹಿಂಸೆ ತಾಳಲಾರದೆ ಭೀಮಣ್ಣ ಕಣ್ಣು ಮಂಜಾಗಿ ಕುಸಿದು ಬಿದ್ದಿದ್ದಾನೆ. ಇದನ್ನ ನೋಡಿ ಗಾಬರಿಗೊಂಡ ಪೊಲೀಸರು ಭೀಮಣ್ಣ ಲಾಕಪ್ಪಿನಲ್ಲೇ ಸತ್ತರೆ ತಾವು ತೊಂದರೆಗೆ ಸಿಲುಕಿಕೊಳ್ಳುತ್ತೇವೆಂದು ಸ್ಟೇಷನ್ನಿನಿಂದ ದೂರ ಕಳಿಸಿದ್ದ ಭೀಮಣ್ಣನ ನಾಲ್ವರು ಸಂಬಂಧಿಗಳ ಕೈಗೆ ಭೀಮಣ್ಣನನ್ನು ಒಪ್ಪಿಸಿ, “ಇವನನ್ನು ಸೀದಾ ಊರಿಗೆ ಕರೆದುಕೊಂಡು ಹೋಗಿ. ಅಲ್ಲಿ-ಇಲ್ಲಿ ಹೋಗಿ ನಮ್ಮ ವಿರುದ್ಧ ಏನಾದರೂ ಮಾತಾಡಿದರೆ ಮತ್ತೆ ಅವನನ್ನು ಎತ್ತಾಕಿಕೊಂಡು ಬಂದು ಇವತ್ತು ಮಾಡಿದ್ದರ ಹತ್ತು ಪಟ್ಟು ಮಾಡಿ, ಅವನನ್ನು ಕೊಂದು ಹೆಣ ಕೂಡ ಸಿಗದಂತೆ ಬಿಸಾಕುತ್ತೇವೆ,” ಎಂದು ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಡಾಕೇಶ ಹೆದರಿಸಿದ್ದಾನೆ.

ಚಿಂತಾಜನಕಸ್ಥಿತಿಯಲ್ಲಿದ್ದ ಭೀಮಣ್ಣನನ್ನು ರಾಯಚೂರಿನ ಸುರಕ್ಷಾ ಎಂಬ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಅಲ್ಲಿಗೆ ಬಂದ ಇಡಪನೂರು ಪೊಲೀಸರು ಮೇಲಧಿಕಾರಿಗಳಿಗೆ, ಸರ್ಕಾರಕ್ಕೆ ಈ ಕುರಿತು ಕಂಪ್ಲೇಂಟ್ ಕೊಡಬಾರದೆಂದು ಭೀಮಣ್ಣ ಮತ್ತು ಆತನ ಕುಟುಂಬದವರಿಗೆ ಖಾಸಗಿ ಆಸ್ಪತ್ರೆಗೆ ಸೇರಿದ್ದೀರಾ, ಆಸ್ಪತ್ರೆಯ ಖರ್ಚನ್ನೆಲ್ಲಾ ನಾವು ನೋಡಿಕೊಳ್ಳುತ್ತೇವೆಂದು ಆಮಿಷವನ್ನೂ, ಇದನ್ನು ದೊಡ್ಡ ಇಶ್ಯೂ ಮಾಡಿದರೆ ಮುಂದೆಯೂ ಇಂತಹ ಹಿಂಸೆಗಳನ್ನು ಅನುಭವಿಸಬೇಕಾಗುತ್ತದೆಂದು ಬೆದರಿಕೆಯನ್ನೂ ಒಡ್ಡಿದ್ದಾರೆ.

“ಸಾರ್, ನಾವು ಬಡವರು. ದುಡಿದು ತಿನ್ನುವ ಮಂದಿ. ಏನೂ ತಪ್ಪು ಮಾಡದಿದ್ದರೂ ಈ ಪೊಲೀಸರು ನನಗೆ ಕಳ್ಳತನದ ಹಣೆಪಟ್ಟಿ ಕಟ್ಟಿ ಚಿತ್ರಹಿಂಸೆ ಕೊಟ್ಟರು. ಸತ್ತೇ ಹೋಗುತ್ತೇನೆ ಎಂದುಕೊಂಡಿದ್ದೆ. ಹೇಗೋ ಬದುಕಿಬಿಟ್ಟೆ. ತಪ್ಪು ಮಾಡದಿದ್ದ ನನಗೆ ಚಿತ್ರಹಿಂಸೆ ಕೊಟ್ಟ ಪೊಲೀಸರನ್ನು ಸುಮ್ಮನೇ ಬಿಡಬಾರದು ಅನ್ನಿಸುತ್ತೆ. ಆದರೆ, ನಾವು ಬಡವರು. ಪೊಲೀಸರನ್ನು ಎದುರುಹಾಕಿಕೊಂಡರೆ ಮತ್ತೆ ನಾಳೆ ಯಾವ್ಯಾವುದೋ ಕೇಸು ಹಾಕಿ ಠಾಣೆಗೆ ಕರೆತಂದು ಚಿತ್ರಹಿಂಸೆ ಕೊಡಬಹುದು ಅಂತ ಹೆದರಿಕೆಯಾಗುತ್ತದೆ. ಅದಕ್ಕೆ ಸುಮ್ಮನಾಗಿದ್ದೇವೆ” ಎಂದು ತನ್ನ ಅಸಹಾಯಕತೆಗೆ ಬೇಸರ ವ್ಯಕ್ತಪಡಿಸಿದ ಭೀಮಣ್ಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...