HomeUncategorizedಬಡ ಭೀಮಣ್ಣನ ಮೇಲೆ ರಾಯಚೂರು ಪೊಲೀಸರ ಸವಾರಿ...

ಬಡ ಭೀಮಣ್ಣನ ಮೇಲೆ ರಾಯಚೂರು ಪೊಲೀಸರ ಸವಾರಿ…

- Advertisement -
- Advertisement -

| ಸೋಮಶೇಖರ್ ಚಲ್ಯ |

ರಾಯಚೂರಿನ ಸುರಕ್ಷಾ ಆಸ್ಪತ್ರೆಯ ಹಾಸಿಗೆಯ ಮೇಲೆ ಮಲಗಿರುವ ಈ ಯುವಕನ ಹೆಸರು ಭೀಮಣ್ಣ. ಇಪ್ಪತ್ನಾಲ್ಕನೇ ವಯಸ್ಸಿನ ಈತನೇ ಇವನ ಕುಟುಂಬದ ಆಧಾರ ಸ್ತಂಭ. ಇರೋ ನಾಲ್ಕು ಎಕರೆ ಒಣಭೂಮಿಯಲ್ಲಿ ಒಂದಷ್ಟು ದವಸ ಧಾನ್ಯ ಬೆಳೆದುಕೊಂಡು, ಕೆಲಸ ಇಲ್ಲದ ಸಮಯದಲ್ಲಿ ಕೂಲಿನಾಲಿ ಮಾಡುತ್ತಾ ಜೀವನ ಸಾಗಿಸುತ್ತಿರುವ ಕುಟುಂಬ ಈತನದು.

ಐದು ತಿಂಗಳ ಹಿಂದೆ ಹುಟ್ಟಿದ ಎರಡನೇ ಮಗು ಸಮಸ್ಯೆಯೊಂದಿಗೇ ಹುಟ್ಟಿತು. ಖಾಸಗಿ ಆಸ್ಪತ್ರೆಯಲ್ಲಿ ಎಷ್ಟೇ ಖರ್ಚು ಮಾಡಿದರೂ ಮಗು ಉಳಿಯಲಿಲ್ಲ. ಇದಾದ ಕೆಲವೇ ದಿನಗಳಲ್ಲಿ ಆತನ ತಂದೆಯೂ ತೀರಿಕೊಂಡರು. ಆಸ್ಪತ್ರೆ, ಮಗು ಮತ್ತು ತಂದೆಯ ಸಂಸ್ಕಾರಕ್ಕಾಗಿ ಹೆಚ್ಚು ಸಾಲದ ಹೊರೆ ಹೆಚ್ಚಾಗಿತ್ತು. ಶವಸಂಸ್ಕಾರದ ನಂತರದ ಕಾರ್ಯಗಳಿಗಾಗಿ ಭೀಮಣ್ಣ ಹುಲಿಗೆಮ್ಮ ಮತ್ತು ಆಕೆಯ ಗಂಡ ಬಾರ್ ಆಂಜನೇಯನಿಂದ ಮೂರು ಸಾವಿರ ರೂಪಾಯಿಗಳನ್ನು ಸಾಲ ಪಡೆದಿದ್ದ.

ಅದಾದ ಕೆಲವು ದಿನಗಳ ನಂತರ ತಮ್ಮ ಮನೆಯಲ್ಲಿ 55,000 ರೂಪಾಯಿ ಕಳ್ಳತನವಾಗಿದೆ, ಕದ್ದಿರುವುದು ಭೀಮಣ್ಣನೇ ಇರಬೇಕೆಂಬ ಅನುಮಾನ ಆತನ ಮೇಲೆ ಇಡಪನೂರು ಪೊಲೀಸ್ ಸ್ಟೇಷನ್‍ನಲ್ಲಿ ದೂರು ನೀಡಿದರು. ಪೊಲೀಸರು ವಿಚಾರಣೆಗಾಗಿ ಕರೆದಾಗ ಬೀಮಣ್ಣನ ಜೊತೆ ಹೋದ ಊರಿನ ಜನರು ಆತ ಹಣ ಕದ್ದಿಲ್ಲ. ನಾವು ಈ ವಿಷಯವನ್ನು ಊರಿನಲ್ಲೇ ಬಗೆಹರಿಸಿಕೊಳ್ಳುತ್ತೇವೆಂದು ಹೇಳಿ ಬಂದಿದ್ದಾರೆ. ಇದನ್ನು ನಿರಾಕರಿಸಿದ ಬಾರ್ ಆಂಜನೇಯ ಮತ್ತೆ ಅದೇ ಪೊಲೀಸರಿಗೆ ದೂರು ನೀಡಿದ್ದಾನೆ.

ಭೀಮಣ್ಣನನ್ನು ವಿಚಾರಣೆ ನಡೆಸಿ ವಾಪಸ್ ಕಳಿಸುವುದಾಗಿ ಹೇಳಿ ಆತನನ್ನು ಎತ್ತಾಕಿಕೊಂಡು ಹೋದ ಪೊಲೀಸರು ಮನಸೋಯಿಚ್ಛೆ ಹೊಡೆದಿದ್ದಾರೆ. ಭೀಮಣ್ಣ ತಾನು ಯಾವ ತಪ್ಪನ್ನೂ ಮಾಡಿಲ್ಲ, ತಾನು ಹಣವನ್ನು ಕದ್ದಿಲ್ಲ. ನೀವು ಹೀಗೆ ಹೊಡೆದರೆ ಸತ್ತು ಹೋಗುತ್ತೇನೆ. ನನ್ನ ಹೆಂಡತಿ, ಮಗು, ಅಮ್ಮನನ್ನು ಯಾರು ಸಾಕ್ತಾರೆ?” ಅಂತೆಲ್ಲಾ ಗೋಗರೆದರೂ ಕರಗದ ಪೊಲೀಸರು ಆತನಿಗೆ ಮತ್ತಷ್ಟು ಚಿತ್ರಹಿಂಸೆ ನೀಡಿದ್ದಾರೆ. ಹಿಂಸೆ ತಾಳಲಾರದೆ ಭೀಮಣ್ಣ ಕಣ್ಣು ಮಂಜಾಗಿ ಕುಸಿದು ಬಿದ್ದಿದ್ದಾನೆ. ಇದನ್ನ ನೋಡಿ ಗಾಬರಿಗೊಂಡ ಪೊಲೀಸರು ಭೀಮಣ್ಣ ಲಾಕಪ್ಪಿನಲ್ಲೇ ಸತ್ತರೆ ತಾವು ತೊಂದರೆಗೆ ಸಿಲುಕಿಕೊಳ್ಳುತ್ತೇವೆಂದು ಸ್ಟೇಷನ್ನಿನಿಂದ ದೂರ ಕಳಿಸಿದ್ದ ಭೀಮಣ್ಣನ ನಾಲ್ವರು ಸಂಬಂಧಿಗಳ ಕೈಗೆ ಭೀಮಣ್ಣನನ್ನು ಒಪ್ಪಿಸಿ, “ಇವನನ್ನು ಸೀದಾ ಊರಿಗೆ ಕರೆದುಕೊಂಡು ಹೋಗಿ. ಅಲ್ಲಿ-ಇಲ್ಲಿ ಹೋಗಿ ನಮ್ಮ ವಿರುದ್ಧ ಏನಾದರೂ ಮಾತಾಡಿದರೆ ಮತ್ತೆ ಅವನನ್ನು ಎತ್ತಾಕಿಕೊಂಡು ಬಂದು ಇವತ್ತು ಮಾಡಿದ್ದರ ಹತ್ತು ಪಟ್ಟು ಮಾಡಿ, ಅವನನ್ನು ಕೊಂದು ಹೆಣ ಕೂಡ ಸಿಗದಂತೆ ಬಿಸಾಕುತ್ತೇವೆ,” ಎಂದು ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಡಾಕೇಶ ಹೆದರಿಸಿದ್ದಾನೆ.

ಚಿಂತಾಜನಕಸ್ಥಿತಿಯಲ್ಲಿದ್ದ ಭೀಮಣ್ಣನನ್ನು ರಾಯಚೂರಿನ ಸುರಕ್ಷಾ ಎಂಬ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಅಲ್ಲಿಗೆ ಬಂದ ಇಡಪನೂರು ಪೊಲೀಸರು ಮೇಲಧಿಕಾರಿಗಳಿಗೆ, ಸರ್ಕಾರಕ್ಕೆ ಈ ಕುರಿತು ಕಂಪ್ಲೇಂಟ್ ಕೊಡಬಾರದೆಂದು ಭೀಮಣ್ಣ ಮತ್ತು ಆತನ ಕುಟುಂಬದವರಿಗೆ ಖಾಸಗಿ ಆಸ್ಪತ್ರೆಗೆ ಸೇರಿದ್ದೀರಾ, ಆಸ್ಪತ್ರೆಯ ಖರ್ಚನ್ನೆಲ್ಲಾ ನಾವು ನೋಡಿಕೊಳ್ಳುತ್ತೇವೆಂದು ಆಮಿಷವನ್ನೂ, ಇದನ್ನು ದೊಡ್ಡ ಇಶ್ಯೂ ಮಾಡಿದರೆ ಮುಂದೆಯೂ ಇಂತಹ ಹಿಂಸೆಗಳನ್ನು ಅನುಭವಿಸಬೇಕಾಗುತ್ತದೆಂದು ಬೆದರಿಕೆಯನ್ನೂ ಒಡ್ಡಿದ್ದಾರೆ.

“ಸಾರ್, ನಾವು ಬಡವರು. ದುಡಿದು ತಿನ್ನುವ ಮಂದಿ. ಏನೂ ತಪ್ಪು ಮಾಡದಿದ್ದರೂ ಈ ಪೊಲೀಸರು ನನಗೆ ಕಳ್ಳತನದ ಹಣೆಪಟ್ಟಿ ಕಟ್ಟಿ ಚಿತ್ರಹಿಂಸೆ ಕೊಟ್ಟರು. ಸತ್ತೇ ಹೋಗುತ್ತೇನೆ ಎಂದುಕೊಂಡಿದ್ದೆ. ಹೇಗೋ ಬದುಕಿಬಿಟ್ಟೆ. ತಪ್ಪು ಮಾಡದಿದ್ದ ನನಗೆ ಚಿತ್ರಹಿಂಸೆ ಕೊಟ್ಟ ಪೊಲೀಸರನ್ನು ಸುಮ್ಮನೇ ಬಿಡಬಾರದು ಅನ್ನಿಸುತ್ತೆ. ಆದರೆ, ನಾವು ಬಡವರು. ಪೊಲೀಸರನ್ನು ಎದುರುಹಾಕಿಕೊಂಡರೆ ಮತ್ತೆ ನಾಳೆ ಯಾವ್ಯಾವುದೋ ಕೇಸು ಹಾಕಿ ಠಾಣೆಗೆ ಕರೆತಂದು ಚಿತ್ರಹಿಂಸೆ ಕೊಡಬಹುದು ಅಂತ ಹೆದರಿಕೆಯಾಗುತ್ತದೆ. ಅದಕ್ಕೆ ಸುಮ್ಮನಾಗಿದ್ದೇವೆ” ಎಂದು ತನ್ನ ಅಸಹಾಯಕತೆಗೆ ಬೇಸರ ವ್ಯಕ್ತಪಡಿಸಿದ ಭೀಮಣ್ಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...