Homeಕರ್ನಾಟಕಅಂಬೇಡ್ಕರ್‌ರವರಿಗೆ ಅಗೌರವ ತೋರಿದ ಜಡ್ಜ್ ವಜಾಕ್ಕೆ ಬಿಜೆಪಿ ಶಾಸಕ ಶಿವನಗೌಡ ನಾಯಕ ಆಗ್ರಹ

ಅಂಬೇಡ್ಕರ್‌ರವರಿಗೆ ಅಗೌರವ ತೋರಿದ ಜಡ್ಜ್ ವಜಾಕ್ಕೆ ಬಿಜೆಪಿ ಶಾಸಕ ಶಿವನಗೌಡ ನಾಯಕ ಆಗ್ರಹ

'ಸಾವಿರಾರು ಜನರಿಗೆ ನ್ಯಾಯವನ್ನು ನೀಡುವವರು ಇಂತಹ ವಿಕೃತ ಮನಸ್ಥಿತಿಯನ್ನು ಇಷ್ಟು ದಿನ ಒಳಗಿಟ್ಟುಕೊಂಡು, ನಿನ್ನೆ ಹೊರ ಹಾಕಿದ್ದಾರೆ'

- Advertisement -
- Advertisement -

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಇಡಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋವನ್ನು ತೆಗೆಯದಿದ್ದರೇ ಧ್ವಜಾರೋಹಣ ಮಾಡುವುದಿಲ್ಲ ಎಂದು ಹೇಳಿ ಭಾವಚಿತ್ರ ತೆರವುಗೊಳಿಸಿದ್ದ ರಾಯಚೂರಿನ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅವರನ್ನು ವಜಾ ಮಾಡಬೇಕು ಎಂದು ಬಿಜೆಪಿ ಶಾಸಕ ಶಿವನಗೌಡ ನಾಯಕ ಆಗ್ರಹಿಸಿದ್ದಾರೆ.

ರಾಯಚೂರು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಸಂವಿಧಾನ ರಚನೆಕಾರನ ಚಿತ್ರವನ್ನು ಇಡಬಾರದೆ, ಸರ್ಕಾರಿ ಆದೇಶಕ್ಕೆ ಬೆಲೆಯಿಲ್ಲವೇ ಎಂದು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ದೇವದುರ್ಗದ ಬಿಜೆಪಿ ಶಾಸಕ ಕೆ. ಶಿವನಗೌಡ ನಾಯಕ ನ್ಯಾಯಾಧೀಶರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ನ್ಯಾಯಾಂಗ ಹುದ್ದೆಯಲ್ಲಿರುವವರು ಸಂವಿಧಾನ ಶಿಲ್ಪಿ ಅವರ ಭಾವಚಿತ್ರಕ್ಕೆ ಅವಮಾನಿಸುವ ಮೂಲಕ ವಿಕೃತಿ ಮನಸ್ಥಿತಿ ಮೆರೆದಿದ್ದಾರೆ. ಅಂಬೇಡ್ಕರ್ ಅವರ ಭಾವಚಿತ್ರವಿದ್ದರೆ ಧ್ವಜಾರೋಹಣ ಮಾಡುವುದಿಲ್ಲ ಎಂದು ಉಡಾಫೆಯಾಗಿ ಮಾತನಾಡಿರುವುದು ನಾಗರಿಕ ಸಮಾಜ ತಲೆತಗ್ಗಿಸಬೇಕಾದ ಸಂಗತಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌ಗೆ ಅವಮಾನ ಘಟನೆ: ಶೋಷಿತರ ಬಗ್ಗೆ ಹೆಪ್ಪುಗೊಂಡಿರುವ ಅಸಹನೆಯ ಚಿಕ್ಕ ಪ್ರತಿನಿಧಿ ಈ ನ್ಯಾಯಾಧೀಶರು!

’ಭಾರತದ ಸಾಂವಿಧಾನಿಕ ಹುದ್ದೆಯಲ್ಲಿದ್ದು, ದೇಶಕ್ಕೆ ಸಂವಿಧಾನ ಬರೆದವರ ಬಗ್ಗೆ ಈ ರೀತಿ ಮಾಡಿರುವುದು ನಾಡಿನೆಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ಸಾವಿರಾರು ಜನರಿಗೆ ನ್ಯಾಯವನ್ನು ನೀಡುವವರು ಇಂತಹ ವಿಕೃತ ಮನಸ್ಥಿತಿಯನ್ನು ಇಷ್ಟು ದಿನ ಒಳಗಿಟ್ಟುಕೊಂಡು, ನಿನ್ನೆ ಹೊರ ಹಾಕಿದ್ದಾರೆ. ಇದು ಅತ್ಯಂತ ನೋವಿನ ಸಂಗತಿಯಾಗಿದ್ದು, ಮಾನವ ಕುಲಕ್ಕೆ ಅವಮಾನದ ವಿಚಾರ. ಬುದ್ದ, ಬಸವ, ಅಂಬೇಡ್ಕರ್‌ ಅವರ ಆದರ್ಶಗಳನ್ನು ಪಾಲಿಸುವ ನಾಡಿನಲ್ಲಿ, ಈ ನ್ಯಾಯಾಧೀಶರು ಕೆಟ್ಟ ರೀತಿಯಲ್ಲಿ ವರ್ತಿಸಿದ್ದಾರೆ’ ಎಂದು ಶಾಸಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂದುವರಿದು, ಈ ಹಿನ್ನೆಲೆಯಲ್ಲಿ, ಹೈಕೋರ್ಟ್ ನ್ಯಾಯಮೂರ್ತಿಗಳು ಮಧ್ಯ ಪ್ರವೇಶಿಸಬೇಕು. ಬಾಬಾ ಸಾಹೇಬರ ಬಗ್ಗೆಯೇ ಇಂತಹ ವಿಕೃತ ಮನಸ್ಸು ಇರುವವರು ಉಳಿದ ಜನರಿಗೆ ಹೇಗೆ ನ್ಯಾಯ ನೀಡುತ್ತಾರೆ ಎಂಬುದು ಜನರಲ್ಲಿ ಚರ್ಚೆಗೆ ಗ್ರಾಸವಾಗಿದೆ. ಹೀಗಾಗಿ ಅವರನ್ನು ನ್ಯಾಯಾಂಗ ಇಲಾಖೆಯಿಂದ ವಜಾ ಮಾಡಬೇಕು. ಈ ವಿಷಯದ ಕುರಿತು ನಾನು ಸರ್ಕಾರ, ಸುಪ್ರೀಂಕೋರ್ಟ ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಪತ್ರ ಬರೆಯುತ್ತೇನೆ. ಕೂಡಲೇ ಇಂತಹ ಮನಸ್ಥಿತಿಯವರನ್ನು ಹೊರ ಹಾಕುವ ಕೆಲಸವಾಗಬೇಕು” ಎಂದು ಒತ್ತಾಯಿಸಿದ್ದಾರೆ.

ರಾಯಚೂರಿನ ಜಿಲ್ಲಾ ನ್ಯಾಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ 73ನೇ ಗಣರಾಜ್ಯೋತ್ಸವದ ವೇಳೆ ರಾಷ್ಟ್ರಪಿತ ಗಾಂಧೀಜಿ ಭಾವಚಿತ್ರದ ಜೊತೆಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋವನ್ನು ಇರಿಸಲಾಗಿತ್ತು. ಆದರೆ ಕಾರ್ಯಕ್ರಮದ ವೇಳೆ ಪುಷ್ಪಾರ್ಚನೆ ಮಾಡಲು ಒಪ್ಪದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅಂಬೇಡ್ಕರ್‌ ಫೋಟೋ ತೆಗೆಯಲು ಪಟ್ಟು ಹಿಡಿದರು. ಹೀಗಾಗಿ ಕಾರ್ಯಕ್ರಮ ಆಯೋಜಕರು ಅಂಬೇಡ್ಕರ್‌‌ ಫೋಟೋ ತೆಗೆಯಬೇಕಾಯಿತು. ಈ ಘಟನೆಯನ್ನು ಸ್ಥಳದಲ್ಲೇ ವಿರೋಧಿಸಿದ ಪರಿಶಿಷ್ಟ ಜಾತಿ ಮತ್ತು ಇತರ ವರ್ಗಗಳ ವಕೀಲರು ಪ್ರತಿಭಟನೆ ನಡೆಸಿದ್ದರು. ಜೊತೆಗೆ ಧ್ವಜಾರೋಹಣ ಕಾರ್ಯಕ್ರಮವನ್ನು ವಿರೋಧಿಸಿ ಹೊರ ನಡೆದಿದ್ದರು. ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.


ಇದನ್ನೂ ಓದಿ: ಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...