Homeಕರ್ನಾಟಕಅಂಬೇಡ್ಕರ್‌ರವರಿಗೆ ಅಗೌರವ ತೋರಿದ ಜಡ್ಜ್ ವಜಾಕ್ಕೆ ಬಿಜೆಪಿ ಶಾಸಕ ಶಿವನಗೌಡ ನಾಯಕ ಆಗ್ರಹ

ಅಂಬೇಡ್ಕರ್‌ರವರಿಗೆ ಅಗೌರವ ತೋರಿದ ಜಡ್ಜ್ ವಜಾಕ್ಕೆ ಬಿಜೆಪಿ ಶಾಸಕ ಶಿವನಗೌಡ ನಾಯಕ ಆಗ್ರಹ

'ಸಾವಿರಾರು ಜನರಿಗೆ ನ್ಯಾಯವನ್ನು ನೀಡುವವರು ಇಂತಹ ವಿಕೃತ ಮನಸ್ಥಿತಿಯನ್ನು ಇಷ್ಟು ದಿನ ಒಳಗಿಟ್ಟುಕೊಂಡು, ನಿನ್ನೆ ಹೊರ ಹಾಕಿದ್ದಾರೆ'

- Advertisement -
- Advertisement -

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಇಡಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋವನ್ನು ತೆಗೆಯದಿದ್ದರೇ ಧ್ವಜಾರೋಹಣ ಮಾಡುವುದಿಲ್ಲ ಎಂದು ಹೇಳಿ ಭಾವಚಿತ್ರ ತೆರವುಗೊಳಿಸಿದ್ದ ರಾಯಚೂರಿನ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅವರನ್ನು ವಜಾ ಮಾಡಬೇಕು ಎಂದು ಬಿಜೆಪಿ ಶಾಸಕ ಶಿವನಗೌಡ ನಾಯಕ ಆಗ್ರಹಿಸಿದ್ದಾರೆ.

ರಾಯಚೂರು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಸಂವಿಧಾನ ರಚನೆಕಾರನ ಚಿತ್ರವನ್ನು ಇಡಬಾರದೆ, ಸರ್ಕಾರಿ ಆದೇಶಕ್ಕೆ ಬೆಲೆಯಿಲ್ಲವೇ ಎಂದು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ದೇವದುರ್ಗದ ಬಿಜೆಪಿ ಶಾಸಕ ಕೆ. ಶಿವನಗೌಡ ನಾಯಕ ನ್ಯಾಯಾಧೀಶರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ನ್ಯಾಯಾಂಗ ಹುದ್ದೆಯಲ್ಲಿರುವವರು ಸಂವಿಧಾನ ಶಿಲ್ಪಿ ಅವರ ಭಾವಚಿತ್ರಕ್ಕೆ ಅವಮಾನಿಸುವ ಮೂಲಕ ವಿಕೃತಿ ಮನಸ್ಥಿತಿ ಮೆರೆದಿದ್ದಾರೆ. ಅಂಬೇಡ್ಕರ್ ಅವರ ಭಾವಚಿತ್ರವಿದ್ದರೆ ಧ್ವಜಾರೋಹಣ ಮಾಡುವುದಿಲ್ಲ ಎಂದು ಉಡಾಫೆಯಾಗಿ ಮಾತನಾಡಿರುವುದು ನಾಗರಿಕ ಸಮಾಜ ತಲೆತಗ್ಗಿಸಬೇಕಾದ ಸಂಗತಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌ಗೆ ಅವಮಾನ ಘಟನೆ: ಶೋಷಿತರ ಬಗ್ಗೆ ಹೆಪ್ಪುಗೊಂಡಿರುವ ಅಸಹನೆಯ ಚಿಕ್ಕ ಪ್ರತಿನಿಧಿ ಈ ನ್ಯಾಯಾಧೀಶರು!

’ಭಾರತದ ಸಾಂವಿಧಾನಿಕ ಹುದ್ದೆಯಲ್ಲಿದ್ದು, ದೇಶಕ್ಕೆ ಸಂವಿಧಾನ ಬರೆದವರ ಬಗ್ಗೆ ಈ ರೀತಿ ಮಾಡಿರುವುದು ನಾಡಿನೆಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ಸಾವಿರಾರು ಜನರಿಗೆ ನ್ಯಾಯವನ್ನು ನೀಡುವವರು ಇಂತಹ ವಿಕೃತ ಮನಸ್ಥಿತಿಯನ್ನು ಇಷ್ಟು ದಿನ ಒಳಗಿಟ್ಟುಕೊಂಡು, ನಿನ್ನೆ ಹೊರ ಹಾಕಿದ್ದಾರೆ. ಇದು ಅತ್ಯಂತ ನೋವಿನ ಸಂಗತಿಯಾಗಿದ್ದು, ಮಾನವ ಕುಲಕ್ಕೆ ಅವಮಾನದ ವಿಚಾರ. ಬುದ್ದ, ಬಸವ, ಅಂಬೇಡ್ಕರ್‌ ಅವರ ಆದರ್ಶಗಳನ್ನು ಪಾಲಿಸುವ ನಾಡಿನಲ್ಲಿ, ಈ ನ್ಯಾಯಾಧೀಶರು ಕೆಟ್ಟ ರೀತಿಯಲ್ಲಿ ವರ್ತಿಸಿದ್ದಾರೆ’ ಎಂದು ಶಾಸಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂದುವರಿದು, ಈ ಹಿನ್ನೆಲೆಯಲ್ಲಿ, ಹೈಕೋರ್ಟ್ ನ್ಯಾಯಮೂರ್ತಿಗಳು ಮಧ್ಯ ಪ್ರವೇಶಿಸಬೇಕು. ಬಾಬಾ ಸಾಹೇಬರ ಬಗ್ಗೆಯೇ ಇಂತಹ ವಿಕೃತ ಮನಸ್ಸು ಇರುವವರು ಉಳಿದ ಜನರಿಗೆ ಹೇಗೆ ನ್ಯಾಯ ನೀಡುತ್ತಾರೆ ಎಂಬುದು ಜನರಲ್ಲಿ ಚರ್ಚೆಗೆ ಗ್ರಾಸವಾಗಿದೆ. ಹೀಗಾಗಿ ಅವರನ್ನು ನ್ಯಾಯಾಂಗ ಇಲಾಖೆಯಿಂದ ವಜಾ ಮಾಡಬೇಕು. ಈ ವಿಷಯದ ಕುರಿತು ನಾನು ಸರ್ಕಾರ, ಸುಪ್ರೀಂಕೋರ್ಟ ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಪತ್ರ ಬರೆಯುತ್ತೇನೆ. ಕೂಡಲೇ ಇಂತಹ ಮನಸ್ಥಿತಿಯವರನ್ನು ಹೊರ ಹಾಕುವ ಕೆಲಸವಾಗಬೇಕು” ಎಂದು ಒತ್ತಾಯಿಸಿದ್ದಾರೆ.

ರಾಯಚೂರಿನ ಜಿಲ್ಲಾ ನ್ಯಾಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ 73ನೇ ಗಣರಾಜ್ಯೋತ್ಸವದ ವೇಳೆ ರಾಷ್ಟ್ರಪಿತ ಗಾಂಧೀಜಿ ಭಾವಚಿತ್ರದ ಜೊತೆಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋವನ್ನು ಇರಿಸಲಾಗಿತ್ತು. ಆದರೆ ಕಾರ್ಯಕ್ರಮದ ವೇಳೆ ಪುಷ್ಪಾರ್ಚನೆ ಮಾಡಲು ಒಪ್ಪದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅಂಬೇಡ್ಕರ್‌ ಫೋಟೋ ತೆಗೆಯಲು ಪಟ್ಟು ಹಿಡಿದರು. ಹೀಗಾಗಿ ಕಾರ್ಯಕ್ರಮ ಆಯೋಜಕರು ಅಂಬೇಡ್ಕರ್‌‌ ಫೋಟೋ ತೆಗೆಯಬೇಕಾಯಿತು. ಈ ಘಟನೆಯನ್ನು ಸ್ಥಳದಲ್ಲೇ ವಿರೋಧಿಸಿದ ಪರಿಶಿಷ್ಟ ಜಾತಿ ಮತ್ತು ಇತರ ವರ್ಗಗಳ ವಕೀಲರು ಪ್ರತಿಭಟನೆ ನಡೆಸಿದ್ದರು. ಜೊತೆಗೆ ಧ್ವಜಾರೋಹಣ ಕಾರ್ಯಕ್ರಮವನ್ನು ವಿರೋಧಿಸಿ ಹೊರ ನಡೆದಿದ್ದರು. ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.


ಇದನ್ನೂ ಓದಿ: ಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...