Homeಮುಖಪುಟರಾಯಚೂರು: ಜಾತಿ ಕಾರಣಕ್ಕೆ ಗಲಾಟೆ - ದಲಿತ ಕೇರಿಗೆ ನುಗ್ಗಿ ಮಾರಣಾಂತಿಕ ಹಲ್ಲೆ

ರಾಯಚೂರು: ಜಾತಿ ಕಾರಣಕ್ಕೆ ಗಲಾಟೆ – ದಲಿತ ಕೇರಿಗೆ ನುಗ್ಗಿ ಮಾರಣಾಂತಿಕ ಹಲ್ಲೆ

- Advertisement -
- Advertisement -

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಧುಮುತಿ ಗ್ರಾಮದಲ್ಲಿ ಜಾತಿ ಕಾರಣಕ್ಕೆ ಜಗಳವುಂಟಾಗಿದ್ದು, ದಲಿತ ಕೇರಿಗೆ ನುಗ್ಗಿ ಹಲವರ ಮೇಲೆ ಮಾರಣಾಂತಿಕವಾಗಿ ಗುಂಪುಹಲ್ಲೆ ಮಾಡಿದ ದುರ್ಘಟನೆ ನಿನ್ನೆ ಜರುಗಿದೆ.

ಘಟನೆಯ ಹಿನ್ನೆಲೆ

ಯುವಕರು ಕ್ರಿಕೆಟ್ ಆಡುವಾಗ ಸಣ್ಣ ವಿಷಯಕ್ಕೆ ಜಗಳ ಉಂಟಾಗಿದೆ. ಯುವಕರು ಮೈದಾನದಲ್ಲಿಯೇ ಹೊಡೆದಾಡಿಕೊಂಡಿದ್ದಾರೆ. ನಂತರ ಜಾತಿ ಜಗಳವಾಗಿ ಪರಿವರ್ತನೆಯಾಗಿದೆ. ನಾಯಕ ಸಮುದಾಯದ ಯುವಕರು ಮತ್ತು ಮಾದಿಗ ಸಮುದಾಯದ ಯುವಕರ ಗುಂಪುಗಳಾಗಿ ವಿಭಜನೆಯಾಗಿದೆ.

ಜಗಳ ನಿಂತು ಅವರವರ ಮನೆಗೆ ತಲುಪಿದ ನಂತರವೂ ಯುವಕರ ಒಂದು ಗುಂಪು ಮಾನ್ವಿ ಸೇರಿದಂತೆ ಹಲವು ಗ್ರಾಮಗಳಿಂದ ಹುಡಗರನ್ನು ಗುಂಪು ಕಟ್ಟಿಕೊಂಡು ಬಂದು ಮಾರಕಾಸ್ತ್ರ ಮತ್ತು ಖಾರದಪುಡಿಯನ್ನು ಬಳಸಿ ಧುಮುತಿ ಗ್ರಾಮದ ದಲಿತ ಕೇರಿಯ ಮೇಲೆ ದಾಳಿ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಹಲ್ಲೆಗೊಳಗಾದ ವ್ಯಕ್ತಿ

ಘಟನೆಯಲ್ಲಿ ಆರು ಜನ ಪುರುಷರು ಸೇರಿ ಇಬ್ಬರು ಮಹಿಳೆಯರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. 7 ಜನರು ಸಿಂಧನೂರು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಡೀ ಘಟನೆಯಿಂದ ಧುಮುತಿ ಗ್ರಾಮದ ಕೇರಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಜನರು ಭಯಭೀತಿಗೊಂಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು ಘಟನೆಗೆ ಕಾರಣವಾದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದ್ದು, ಉಳಿದವರು ತಲೆಮರೆಸಿಕೊಂಡಿದ್ದಾರೆ.

ಎಫ್‌ಐಆರ್‌

ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಖಂಡನೆ

ಧುಮುತಿ ಗ್ರಾಮದ ದಲಿತ ಕೇರಿಯ ಮೇಲೆ ದಾಳಿಯನ್ನು ಸಿಂಧನೂರಿನ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟ ತೀವ್ರವಾಗಿ ಖಂಡಿಸಿದೆ. ಕೆಲವರು ದುರುದ್ದೇಶಪೂರ್ವಕವಾಗಿ ಇಡೀ ದಲಿತ ಕೇರಿಯನ್ನು ಟಾರ್ಗೆಟ್ ಮಾಡುವ ಮೂಲಕ ಸಿಕ್ಕ ಸಿಕ್ಕವರನ್ನು ಮನಬಂದಂತೆ ಥಳಿಸಿದ್ದಾರೆ. ಈ ಘಟನೆಗೆ ನಾರಾಯಣ ರೆಡ್ಡಿ ಮತ್ತು ಅಣ್ಣಾಜಿಗೌಡ ಮೂಲ ಸೂತ್ರದಾರರಾಗಿದ್ದು, ದೌರ್ಜನ್ಯಕ್ಕೆ ಕುಮ್ಮಕ್ಕು ನೀಡಿದ್ದಾರೆ ಎಂದು ಒಕ್ಕೂಟ ಆರೋಪಿಸಿದೆ.

ಇಷ್ಟು ವರ್ಷಗಳಾದರೂ ದಲಿತರ ಮೇಲೆ ದೌರ್ಜನ್ಯ, ಗೂಂಡಾಗಿರಿ ಹಾಗೂ ಗುಂಪುದಾಳಿ ನಡೆಯುತ್ತಿರುವುದು ಮಾನವ ಸಮಾಜವೇ ತಲೆತಗ್ಗಿಸುವ ನಾಚಿಕಗೇಡಿನ ಸಂಗತಿಯಾಗಿದೆ. ಹಾಗಾಗಿ ಘಟನೆಗೆ ಕಾರಣರಾದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸುವ ಮೂಲಕ ಶಿಕ್ಷೆಗೆ ಗುರಿಪಡಿಸಬೇಕು. ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವವರಿಗೆ ಚಿಕಿತ್ಸೆ ಒದಗಿಸಬೇಕು ಎಂದು ಒಕ್ಕೂಟ ಒತ್ತಾಯಿಸಿದೆ.

ಧುಮುತಿ ಗ್ರಾಮಕ್ಕೆ ತಹಸೀಲ್ದಾರ್ ಸೇರಿ ಅಧಿಕಾರಿಗಳ ತಂಡ ಖುದ್ದು ಭೇಟಿ ನೀಡಿ ಶಾಂತಿ ಸಭೆ ನಡೆಸಬೇಕು. ಘಟನೆಯಲ್ಲಿ ಹಲ್ಲೆಗೊಳಗಾದ ಸಂತ್ರಸ್ತರಿಗೆ ಸರಕಾರದಿಂದ 5 ಲಕ್ಷ ರೂ ಪರಿಹಾರ ನೀಡಬೇಕು. ತಾಲೂಕಿನಲ್ಲಿ, ಪ್ರತಿ ತಿಂಗಳು ತಹಸೀಲ್ದಾರ್ ನೇತೃತ್ವದಲ್ಲಿ ಪೊಲೀಸ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ಹಾಗೂ ದಲಿತ-ಪ್ರಗತಿಪರ ಸಂಘಟನೆಗಳ ಸಭೆಯನ್ನು ಕಡ್ಡಾಯವಾಗಿ ನಡೆಸಬೇಕು ಎಂದು ಹೇಳಿಕೆಯಲ್ಲಿ ಸಿಂಧನೂರಿನ ಯುವ ಹೋರಾಟಗಾರ ನಾಗರಾಜ್‌ ಪೂಜಾರ್‌ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಯುಪಿ ಸಾಧುಗಳ ಹತ್ಯೆಯನ್ನು ಕೋಮುವಾದೀಕರಿಸಬೇಡಿ: ಯೋಗಿಗೆ ಉದ್ಧವ್‌ ಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...