Homeಮುಖಪುಟರಾಯಚೂರು: ಜಾತಿ ಕಾರಣಕ್ಕೆ ಗಲಾಟೆ - ದಲಿತ ಕೇರಿಗೆ ನುಗ್ಗಿ ಮಾರಣಾಂತಿಕ ಹಲ್ಲೆ

ರಾಯಚೂರು: ಜಾತಿ ಕಾರಣಕ್ಕೆ ಗಲಾಟೆ – ದಲಿತ ಕೇರಿಗೆ ನುಗ್ಗಿ ಮಾರಣಾಂತಿಕ ಹಲ್ಲೆ

- Advertisement -
- Advertisement -

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಧುಮುತಿ ಗ್ರಾಮದಲ್ಲಿ ಜಾತಿ ಕಾರಣಕ್ಕೆ ಜಗಳವುಂಟಾಗಿದ್ದು, ದಲಿತ ಕೇರಿಗೆ ನುಗ್ಗಿ ಹಲವರ ಮೇಲೆ ಮಾರಣಾಂತಿಕವಾಗಿ ಗುಂಪುಹಲ್ಲೆ ಮಾಡಿದ ದುರ್ಘಟನೆ ನಿನ್ನೆ ಜರುಗಿದೆ.

ಘಟನೆಯ ಹಿನ್ನೆಲೆ

ಯುವಕರು ಕ್ರಿಕೆಟ್ ಆಡುವಾಗ ಸಣ್ಣ ವಿಷಯಕ್ಕೆ ಜಗಳ ಉಂಟಾಗಿದೆ. ಯುವಕರು ಮೈದಾನದಲ್ಲಿಯೇ ಹೊಡೆದಾಡಿಕೊಂಡಿದ್ದಾರೆ. ನಂತರ ಜಾತಿ ಜಗಳವಾಗಿ ಪರಿವರ್ತನೆಯಾಗಿದೆ. ನಾಯಕ ಸಮುದಾಯದ ಯುವಕರು ಮತ್ತು ಮಾದಿಗ ಸಮುದಾಯದ ಯುವಕರ ಗುಂಪುಗಳಾಗಿ ವಿಭಜನೆಯಾಗಿದೆ.

ಜಗಳ ನಿಂತು ಅವರವರ ಮನೆಗೆ ತಲುಪಿದ ನಂತರವೂ ಯುವಕರ ಒಂದು ಗುಂಪು ಮಾನ್ವಿ ಸೇರಿದಂತೆ ಹಲವು ಗ್ರಾಮಗಳಿಂದ ಹುಡಗರನ್ನು ಗುಂಪು ಕಟ್ಟಿಕೊಂಡು ಬಂದು ಮಾರಕಾಸ್ತ್ರ ಮತ್ತು ಖಾರದಪುಡಿಯನ್ನು ಬಳಸಿ ಧುಮುತಿ ಗ್ರಾಮದ ದಲಿತ ಕೇರಿಯ ಮೇಲೆ ದಾಳಿ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಹಲ್ಲೆಗೊಳಗಾದ ವ್ಯಕ್ತಿ

ಘಟನೆಯಲ್ಲಿ ಆರು ಜನ ಪುರುಷರು ಸೇರಿ ಇಬ್ಬರು ಮಹಿಳೆಯರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. 7 ಜನರು ಸಿಂಧನೂರು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಡೀ ಘಟನೆಯಿಂದ ಧುಮುತಿ ಗ್ರಾಮದ ಕೇರಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಜನರು ಭಯಭೀತಿಗೊಂಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು ಘಟನೆಗೆ ಕಾರಣವಾದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದ್ದು, ಉಳಿದವರು ತಲೆಮರೆಸಿಕೊಂಡಿದ್ದಾರೆ.

ಎಫ್‌ಐಆರ್‌

ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಖಂಡನೆ

ಧುಮುತಿ ಗ್ರಾಮದ ದಲಿತ ಕೇರಿಯ ಮೇಲೆ ದಾಳಿಯನ್ನು ಸಿಂಧನೂರಿನ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟ ತೀವ್ರವಾಗಿ ಖಂಡಿಸಿದೆ. ಕೆಲವರು ದುರುದ್ದೇಶಪೂರ್ವಕವಾಗಿ ಇಡೀ ದಲಿತ ಕೇರಿಯನ್ನು ಟಾರ್ಗೆಟ್ ಮಾಡುವ ಮೂಲಕ ಸಿಕ್ಕ ಸಿಕ್ಕವರನ್ನು ಮನಬಂದಂತೆ ಥಳಿಸಿದ್ದಾರೆ. ಈ ಘಟನೆಗೆ ನಾರಾಯಣ ರೆಡ್ಡಿ ಮತ್ತು ಅಣ್ಣಾಜಿಗೌಡ ಮೂಲ ಸೂತ್ರದಾರರಾಗಿದ್ದು, ದೌರ್ಜನ್ಯಕ್ಕೆ ಕುಮ್ಮಕ್ಕು ನೀಡಿದ್ದಾರೆ ಎಂದು ಒಕ್ಕೂಟ ಆರೋಪಿಸಿದೆ.

ಇಷ್ಟು ವರ್ಷಗಳಾದರೂ ದಲಿತರ ಮೇಲೆ ದೌರ್ಜನ್ಯ, ಗೂಂಡಾಗಿರಿ ಹಾಗೂ ಗುಂಪುದಾಳಿ ನಡೆಯುತ್ತಿರುವುದು ಮಾನವ ಸಮಾಜವೇ ತಲೆತಗ್ಗಿಸುವ ನಾಚಿಕಗೇಡಿನ ಸಂಗತಿಯಾಗಿದೆ. ಹಾಗಾಗಿ ಘಟನೆಗೆ ಕಾರಣರಾದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸುವ ಮೂಲಕ ಶಿಕ್ಷೆಗೆ ಗುರಿಪಡಿಸಬೇಕು. ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವವರಿಗೆ ಚಿಕಿತ್ಸೆ ಒದಗಿಸಬೇಕು ಎಂದು ಒಕ್ಕೂಟ ಒತ್ತಾಯಿಸಿದೆ.

ಧುಮುತಿ ಗ್ರಾಮಕ್ಕೆ ತಹಸೀಲ್ದಾರ್ ಸೇರಿ ಅಧಿಕಾರಿಗಳ ತಂಡ ಖುದ್ದು ಭೇಟಿ ನೀಡಿ ಶಾಂತಿ ಸಭೆ ನಡೆಸಬೇಕು. ಘಟನೆಯಲ್ಲಿ ಹಲ್ಲೆಗೊಳಗಾದ ಸಂತ್ರಸ್ತರಿಗೆ ಸರಕಾರದಿಂದ 5 ಲಕ್ಷ ರೂ ಪರಿಹಾರ ನೀಡಬೇಕು. ತಾಲೂಕಿನಲ್ಲಿ, ಪ್ರತಿ ತಿಂಗಳು ತಹಸೀಲ್ದಾರ್ ನೇತೃತ್ವದಲ್ಲಿ ಪೊಲೀಸ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ಹಾಗೂ ದಲಿತ-ಪ್ರಗತಿಪರ ಸಂಘಟನೆಗಳ ಸಭೆಯನ್ನು ಕಡ್ಡಾಯವಾಗಿ ನಡೆಸಬೇಕು ಎಂದು ಹೇಳಿಕೆಯಲ್ಲಿ ಸಿಂಧನೂರಿನ ಯುವ ಹೋರಾಟಗಾರ ನಾಗರಾಜ್‌ ಪೂಜಾರ್‌ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಯುಪಿ ಸಾಧುಗಳ ಹತ್ಯೆಯನ್ನು ಕೋಮುವಾದೀಕರಿಸಬೇಡಿ: ಯೋಗಿಗೆ ಉದ್ಧವ್‌ ಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...