Homeಕರ್ನಾಟಕರಾಯಚೂರು | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಹಿಳೆಯರಿಂದ ಅನಿರ್ದಿಷ್ಟಾವಧಿ ಧರಣಿ

ರಾಯಚೂರು | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಹಿಳೆಯರಿಂದ ಅನಿರ್ದಿಷ್ಟಾವಧಿ ಧರಣಿ

- Advertisement -
- Advertisement -

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಪೌಷ್ಠಿಕತೆ ಮತ್ತು ರಕ್ತಹೀನತೆ ಹೋಗಲಾಡಿಸಬೇಕು. ದೇವದಾಸಿಯರ ಮರು ಸಮೀಕ್ಷೆ ನಡೆಸಬೇಕು. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಗ್ರಾಮಗಳಲ್ಲಿ ಶುದ್ದ ಕುಡಿಯುವ ನೀರು ಪೂರೈಕೆಗೆ ಒತ್ತಾಯಿಸಿ ರಾಯಚೂರಿನ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರಗತಿಪರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ಮಹಿಳೆಯರು ಶನಿವಾರ (ಜ.25) ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.

ರಾಯಚೂರು, ಕಲಬುರಗಿ, ಯಾದಗಿರಿ, ಧಾರವಾಡ, ವಿಜಯನಗರ, ಬಳ್ಳಾರಿ, ಬಾಗಲಕೋಟೆ, ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಾರು ಸಂಖ್ಯೆಯ ಮಹಿಳೆಯರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶಿಕ್ಷಣ, ಸಮುದಾಯ ಆರೋಗ್ಯ ಹಾಗೂ ಗ್ರಾಮೀಣ ಮೂಲ ಸೌಕರ್ಯ ಕಡೆಗಣಿಸಿದೆ ಎಂದು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಂತರ ಜಿಲ್ಲಾ ಕ್ರೀಡಾಂಗಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರ ಕನಿಷ್ಠ ಮೂಲಸೌಕರ್ಯ ಒದಗಿಸಲು ಬಜೆಟ್‌ನಲ್ಲಿ 3 ಸಾವಿರ ಕೋಟಿ ರೂಪಾಯಿ ಮೀಸಲಿಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ನಿತಿಶ್ ಕೆ. ಹಾಗೂ ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ತುಕಾರಾಂ ಪಾಂಡ್ವೆಗೆ ಮನವಿ ಸಲ್ಲಿಸಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ 30 ಲಕ್ಷಕ್ಕಿಂತ ಹೆಚ್ಚು ಮಹಿಳೆಯರು ರಕ್ತ ಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ನಮಗೆ ಕೇವಲ ಗ್ಯಾರಂಟಿ ನೀಡಿದರೆ ಸಾಲದು, ನಮ್ಮ ಮಕ್ಕಳ ಭವಿಷ್ಯ ಹಾಗೂ ಮುಂದಿನ ಪೀಳಿಗೆಯ ಮಕ್ಕಳು ಇದಕ್ಕೆ ಗುರಿಯಾಗದಂತೆ ಶಾಶ್ವತ ಪರಿಹಾರ ಬೇಕು ಎಂದು ಪ್ರತಿಭಟನಾ ನಿರತ ಮಹಿಳೆಯರು ಸರ್ಕಾರವನ್ನು ಒತ್ತಾಯಿಸಿದರು.

ಸುಮಾರು 1/3 ಭಾಗದಷ್ಟು ಮಕ್ಕಳು, ಮುಖ್ಯವಾಗಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಹಿನ್ನೆಲೆಯುಳ್ಳವರು ತಮ್ಮ ತರಗತಿಯ ಸರಳ ಕನ್ನಡ, ಗಣಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗುತ್ತಿಲ್ಲ. ಇದಕ್ಕೆ ಸಂಬಂಧಿಸಿದಂತೆ ಕ್ರಿಯಾ ಯೋಜನೆ ರೂಪಿಸಬೇಕು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾವಿರಾರು ಶಿಕ್ಷಕರ ಹುದ್ದೆಗಳು ಖಾಲಿಯಿವೆ. ತರಗತಿವಾರು, ವಿಷಯವಾರು ಶಿಕ್ಷಕರನ್ನು ಕೂಡಲೇ ನೇಮಿಸಬೇಕು ಹಾಗೂ ಪ್ರತಿ ಶಾಲೆಗೆ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಗೃಹ ಪಾಠ ಮಾಡುವವರನ್ನು ನೇಮಿಸಬೇಕು ಎಂದು ಆಗ್ರಹಿಸಿದರು.

ಮಹಿಳೆಯರಿಗೆ ಪಿಂಚಣಿ ಮತ್ತು ಮಕ್ಕಳಿಗೆ ವಿದ್ಯಾರ್ಥಿವೇತನವನ್ನು ನಿಯಮಿತವಾಗಿ ನೀಡಬೇಕು. ರಾಜ್ಯ ಸರ್ಕಾರ ಈಗಾಗಲೇ ಬಜೆಟ್‌ನಲ್ಲಿ ಇದಕ್ಕಾಗಿ ಹಣ ಮೀಸಲಿಟ್ಟಿದೆ. ಆದರೆ, ಕೆಎಸ್‌ಡಬ್ಲ್ಯುಡಿಸಿ ಮತ್ತು ಮಹಿಳಾ-ಮಕ್ಕಳ ಅಭಿವೃದ್ಧಿ ಇಲಾಖೆ ಕಳೆದ 9 ತಿಂಗಳಿಂದ ಈ ಕೆಲಸವನ್ನು ಕೈಗೆತ್ತಿಕೊಂಡಿಲ್ಲ. ಒಂಟಿ ಮಹಿಳೆಯರ ಪಿಂಚಣಿ ವಯೋಮಿತಿಯನ್ನು 21 ವರ್ಷಕ್ಕೆ ಇಳಿಸಬೇಕು. ಇದರಿಂದ ಗಂಡನಿಂದ ಪರಿತ್ಯಕ್ತರಾಗಿರುವ ಎಲ್ಲಾ ಮಹಿಳೆಯರು ತಮ್ಮ ಜೀವನವನ್ನು ರೂಪಿಸಿಕೊಳ್ಳಲು ಮತ್ತು ತಮ್ಮ ಚಿಕ್ಕ ಮಕ್ಕಳನ್ನು ಬೆಳೆಸಲು ಸರ್ಕಾರ ಬೆಂಬಲಿಸಿದಂತಾಗುತ್ತದೆ ಎಂದರು.

ಜನರು ರಾಯಚೂರಿನಲ್ಲಿ ಸುಮಾರು 1000 ದಿನಗಳಿಂದ ಏಮ್ಸ್ ಬೇಕೆಂದು ಹೋರಾಟ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಕೇಂದ್ರ ಸರ್ಕಾರದ ಮೇಲೆ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗಾಗಿ ಕ್ರಮ ಜರುಗಿಸಲು ಒತ್ತಾಯಿಸಬೇಕು ಎಂದು ಹೇಳಿದರು.

ಕಲ್ಯಾಣ ಕರ್ನಾಟಕದಲ್ಲಿರುವ ಪ್ರತಿಯೊಂದು ಜನ ಪ್ರತಿನಿಧಿಗಳು ತಕ್ಷಣ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯನ್ನು ಭೇಟಿ ಮಾಡಿ ಈ ಮೇಲಿನ ಬೇಡಿಕೆಗಳ ಮೇಲೆ ಕ್ರಮ ಜರುಗಿಸಲು ಒತ್ತಡ ಹಾಕಬೇಕು. ಕೇವಲ ಆಶ್ವಾಸನೆ ಕೊಡದೆ ಕನಿಷ್ಠ 3,000 ಕೋಟಿ ರೂ. ಪ್ರತಿ ವರ್ಷ ಬಜೆಟ್‌ನಲ್ಲಿ ಕೊಡುವಂತೆ ಮಾಡಿದರೆ ಕಲ್ಯಾಣ ಕರ್ನಾಟಕ ಜಿಲ್ಲೆಗಳನ್ನು ಕರ್ನಾಟಕದ ಇತರ ಜಿಲ್ಲೆಗಳ ಮಟ್ಟಕ್ಕೆ ತರುವಂತೆ ಸಾಧ್ಯವಾಗುತ್ತದೆ ಎಂದು ಹೋರಾಟಗಾರರು ಅಭಿಪ್ರಾಯ ವ್ಯಕ್ತಪಡಿಸಿದರು.

ಸಾಲ ಪಡೆದವರ ರಕ್ಷಣೆಗಾಗಿ ಸುಗ್ರೀವಾಜ್ಞೆ ಮೂಲಕ ಶೀಘ್ರದಲ್ಲಿ ಹೊಸ ಕಾನೂನು ಜಾರಿ : ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...