Homeಕರ್ನಾಟಕರಾಯಚೂರು | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಹಿಳೆಯರಿಂದ ಅನಿರ್ದಿಷ್ಟಾವಧಿ ಧರಣಿ

ರಾಯಚೂರು | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಹಿಳೆಯರಿಂದ ಅನಿರ್ದಿಷ್ಟಾವಧಿ ಧರಣಿ

- Advertisement -
- Advertisement -

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಪೌಷ್ಠಿಕತೆ ಮತ್ತು ರಕ್ತಹೀನತೆ ಹೋಗಲಾಡಿಸಬೇಕು. ದೇವದಾಸಿಯರ ಮರು ಸಮೀಕ್ಷೆ ನಡೆಸಬೇಕು. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಗ್ರಾಮಗಳಲ್ಲಿ ಶುದ್ದ ಕುಡಿಯುವ ನೀರು ಪೂರೈಕೆಗೆ ಒತ್ತಾಯಿಸಿ ರಾಯಚೂರಿನ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರಗತಿಪರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ಮಹಿಳೆಯರು ಶನಿವಾರ (ಜ.25) ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.

ರಾಯಚೂರು, ಕಲಬುರಗಿ, ಯಾದಗಿರಿ, ಧಾರವಾಡ, ವಿಜಯನಗರ, ಬಳ್ಳಾರಿ, ಬಾಗಲಕೋಟೆ, ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಾರು ಸಂಖ್ಯೆಯ ಮಹಿಳೆಯರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶಿಕ್ಷಣ, ಸಮುದಾಯ ಆರೋಗ್ಯ ಹಾಗೂ ಗ್ರಾಮೀಣ ಮೂಲ ಸೌಕರ್ಯ ಕಡೆಗಣಿಸಿದೆ ಎಂದು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಂತರ ಜಿಲ್ಲಾ ಕ್ರೀಡಾಂಗಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರ ಕನಿಷ್ಠ ಮೂಲಸೌಕರ್ಯ ಒದಗಿಸಲು ಬಜೆಟ್‌ನಲ್ಲಿ 3 ಸಾವಿರ ಕೋಟಿ ರೂಪಾಯಿ ಮೀಸಲಿಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ನಿತಿಶ್ ಕೆ. ಹಾಗೂ ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ತುಕಾರಾಂ ಪಾಂಡ್ವೆಗೆ ಮನವಿ ಸಲ್ಲಿಸಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ 30 ಲಕ್ಷಕ್ಕಿಂತ ಹೆಚ್ಚು ಮಹಿಳೆಯರು ರಕ್ತ ಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ನಮಗೆ ಕೇವಲ ಗ್ಯಾರಂಟಿ ನೀಡಿದರೆ ಸಾಲದು, ನಮ್ಮ ಮಕ್ಕಳ ಭವಿಷ್ಯ ಹಾಗೂ ಮುಂದಿನ ಪೀಳಿಗೆಯ ಮಕ್ಕಳು ಇದಕ್ಕೆ ಗುರಿಯಾಗದಂತೆ ಶಾಶ್ವತ ಪರಿಹಾರ ಬೇಕು ಎಂದು ಪ್ರತಿಭಟನಾ ನಿರತ ಮಹಿಳೆಯರು ಸರ್ಕಾರವನ್ನು ಒತ್ತಾಯಿಸಿದರು.

ಸುಮಾರು 1/3 ಭಾಗದಷ್ಟು ಮಕ್ಕಳು, ಮುಖ್ಯವಾಗಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಹಿನ್ನೆಲೆಯುಳ್ಳವರು ತಮ್ಮ ತರಗತಿಯ ಸರಳ ಕನ್ನಡ, ಗಣಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗುತ್ತಿಲ್ಲ. ಇದಕ್ಕೆ ಸಂಬಂಧಿಸಿದಂತೆ ಕ್ರಿಯಾ ಯೋಜನೆ ರೂಪಿಸಬೇಕು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾವಿರಾರು ಶಿಕ್ಷಕರ ಹುದ್ದೆಗಳು ಖಾಲಿಯಿವೆ. ತರಗತಿವಾರು, ವಿಷಯವಾರು ಶಿಕ್ಷಕರನ್ನು ಕೂಡಲೇ ನೇಮಿಸಬೇಕು ಹಾಗೂ ಪ್ರತಿ ಶಾಲೆಗೆ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಗೃಹ ಪಾಠ ಮಾಡುವವರನ್ನು ನೇಮಿಸಬೇಕು ಎಂದು ಆಗ್ರಹಿಸಿದರು.

ಮಹಿಳೆಯರಿಗೆ ಪಿಂಚಣಿ ಮತ್ತು ಮಕ್ಕಳಿಗೆ ವಿದ್ಯಾರ್ಥಿವೇತನವನ್ನು ನಿಯಮಿತವಾಗಿ ನೀಡಬೇಕು. ರಾಜ್ಯ ಸರ್ಕಾರ ಈಗಾಗಲೇ ಬಜೆಟ್‌ನಲ್ಲಿ ಇದಕ್ಕಾಗಿ ಹಣ ಮೀಸಲಿಟ್ಟಿದೆ. ಆದರೆ, ಕೆಎಸ್‌ಡಬ್ಲ್ಯುಡಿಸಿ ಮತ್ತು ಮಹಿಳಾ-ಮಕ್ಕಳ ಅಭಿವೃದ್ಧಿ ಇಲಾಖೆ ಕಳೆದ 9 ತಿಂಗಳಿಂದ ಈ ಕೆಲಸವನ್ನು ಕೈಗೆತ್ತಿಕೊಂಡಿಲ್ಲ. ಒಂಟಿ ಮಹಿಳೆಯರ ಪಿಂಚಣಿ ವಯೋಮಿತಿಯನ್ನು 21 ವರ್ಷಕ್ಕೆ ಇಳಿಸಬೇಕು. ಇದರಿಂದ ಗಂಡನಿಂದ ಪರಿತ್ಯಕ್ತರಾಗಿರುವ ಎಲ್ಲಾ ಮಹಿಳೆಯರು ತಮ್ಮ ಜೀವನವನ್ನು ರೂಪಿಸಿಕೊಳ್ಳಲು ಮತ್ತು ತಮ್ಮ ಚಿಕ್ಕ ಮಕ್ಕಳನ್ನು ಬೆಳೆಸಲು ಸರ್ಕಾರ ಬೆಂಬಲಿಸಿದಂತಾಗುತ್ತದೆ ಎಂದರು.

ಜನರು ರಾಯಚೂರಿನಲ್ಲಿ ಸುಮಾರು 1000 ದಿನಗಳಿಂದ ಏಮ್ಸ್ ಬೇಕೆಂದು ಹೋರಾಟ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಕೇಂದ್ರ ಸರ್ಕಾರದ ಮೇಲೆ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗಾಗಿ ಕ್ರಮ ಜರುಗಿಸಲು ಒತ್ತಾಯಿಸಬೇಕು ಎಂದು ಹೇಳಿದರು.

ಕಲ್ಯಾಣ ಕರ್ನಾಟಕದಲ್ಲಿರುವ ಪ್ರತಿಯೊಂದು ಜನ ಪ್ರತಿನಿಧಿಗಳು ತಕ್ಷಣ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯನ್ನು ಭೇಟಿ ಮಾಡಿ ಈ ಮೇಲಿನ ಬೇಡಿಕೆಗಳ ಮೇಲೆ ಕ್ರಮ ಜರುಗಿಸಲು ಒತ್ತಡ ಹಾಕಬೇಕು. ಕೇವಲ ಆಶ್ವಾಸನೆ ಕೊಡದೆ ಕನಿಷ್ಠ 3,000 ಕೋಟಿ ರೂ. ಪ್ರತಿ ವರ್ಷ ಬಜೆಟ್‌ನಲ್ಲಿ ಕೊಡುವಂತೆ ಮಾಡಿದರೆ ಕಲ್ಯಾಣ ಕರ್ನಾಟಕ ಜಿಲ್ಲೆಗಳನ್ನು ಕರ್ನಾಟಕದ ಇತರ ಜಿಲ್ಲೆಗಳ ಮಟ್ಟಕ್ಕೆ ತರುವಂತೆ ಸಾಧ್ಯವಾಗುತ್ತದೆ ಎಂದು ಹೋರಾಟಗಾರರು ಅಭಿಪ್ರಾಯ ವ್ಯಕ್ತಪಡಿಸಿದರು.

ಸಾಲ ಪಡೆದವರ ರಕ್ಷಣೆಗಾಗಿ ಸುಗ್ರೀವಾಜ್ಞೆ ಮೂಲಕ ಶೀಘ್ರದಲ್ಲಿ ಹೊಸ ಕಾನೂನು ಜಾರಿ : ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...