Homeಕರ್ನಾಟಕಅಂಬೇಡ್ಕರ್‌ಗೆ ಅವಮಾನ ಘಟನೆ: ಶೋಷಿತರ ಬಗ್ಗೆ ಹೆಪ್ಪುಗೊಂಡಿರುವ ಅಸಹನೆಯ ಚಿಕ್ಕ ಪ್ರತಿನಿಧಿ ಈ ನ್ಯಾಯಾಧೀಶರು!

ಅಂಬೇಡ್ಕರ್‌ಗೆ ಅವಮಾನ ಘಟನೆ: ಶೋಷಿತರ ಬಗ್ಗೆ ಹೆಪ್ಪುಗೊಂಡಿರುವ ಅಸಹನೆಯ ಚಿಕ್ಕ ಪ್ರತಿನಿಧಿ ಈ ನ್ಯಾಯಾಧೀಶರು!

ಸಾಮಾಜಿಕ ಜಾಲತಾಣದಲ್ಲಿ ನ್ಯಾಯಧೀಶ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ

- Advertisement -
- Advertisement -

ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜಿನ ಗೌಡ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌‌ ಫೋಟೋ ತೆಗೆಸಿ ಧ್ವಜಾರೋಹಣ ಮಾಡಿರುವ ಘಟನೆ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಘಟನೆಯು ಬುಧವಾರ ನಡೆದಿದ್ದು, ದೇಶದ 73ನೇ ಗಣರಾಜ್ಯೋತ್ಸವದ ವೇಳೆ ರಾಷ್ಟ್ರಪಿತ ಗಾಂಧೀಜಿ ಭಾವಚಿತ್ರದ ಜೊತೆಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋವನ್ನು ಇರಿಸಲಾಗಿತ್ತು. ಆದರೆ ಕಾರ್ಯಕ್ರಮದ ವೇಳೆ ಪುಷ್ಪಾರ್ಚನೆ ಮಾಡಲು ಒಪ್ಪದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ  ಅಂಬೇಡ್ಕರ್‌ ಫೋಟೋ ತೆಗೆಯಲು ಪಟ್ಟು ಹಿಡಿದರು. ಹೀಗಾಗಿ ಕಾರ್ಯಕ್ರಮ ಆಯೋಜಕರು ಅಂಬೇಡ್ಕರ್‌‌ ಫೋಟೋ ತೆಗೆಯಬೇಕಾಯಿತು.

ಇದನ್ನೂ ಓದಿ: ಅಂಬೇಡ್ಕರ್ ಫೋಟೋ ಇದ್ದರೆ ಧ್ವಜಾರೋಹಣ ಮಾಡಲ್ಲ: ರಾಯಚೂರು ಜಿಲ್ಲಾ ನ್ಯಾಯಾಧೀಶರ ನಡೆಗೆ ತೀವ್ರ ಆಕ್ರೋಶ

ಈ ಘಟನೆಯನ್ನು ಸ್ಥಳದಲ್ಲೇ ವಿರೋಧಿಸಿದ ಪರಿಶಿಷ್ಟ ಜಾತಿ ಮತ್ತು ಇತರ ವರ್ಗಗಳ ವಕೀಲರು ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ ಧ್ವಜಾರೋಹಣ ಕಾರ್ಯಕ್ರಮವನ್ನು ವಿರೋಧಿಸಿ ಹೊರನಡೆದಿದ್ದಾರೆ. ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಹಿರಿಯ ಚಿಂತಕ, ಸಾಹಿತಿ ರಹಮತ್‌ ತರಿಕೆರೆ, “ನ್ಯಾಯನೀಡುವ ಮತ್ತು ಅಧಿಕಾರ ನಡೆಸುವ ಜಾಗಗಳಲ್ಲಿ ದಲಿತರನ್ನು‌, ಮಹಿಳೆಯರನ್ನು, ಮುಸ್ಲಿಮರನ್ನು, ಬುಡಕಟ್ಟು ಜನರ ಕುರಿತು, ಆಳದಲ್ಲಿ ಹೆಪ್ಪುಗೊಂಡಿರುವ ಅಸಹನೆಯ ಒಂದು ಚಿಕ್ಕ ಪ್ರತಿನಿಧಿ ರಾಯಚೂರಿನ ಈ ಮಾನ್ಯ ನ್ಯಾಯಾಧೀಶರು. ನ್ಯಾಯಾಲಯ ಕ್ಷೇತ್ರದಲ್ಲಿ ಢಾಳಾಗಿ ನೆಲೆಗೊಂಡಿರುವ ಸಾಮಾಜಿಕ, ಧಾರ್ಮಿಕ ದ್ವೇಷದ ಬಗ್ಗೆ ನನ್ನ ವಕೀಲ ಮಿತ್ರರ ಅನುಭವ ಕೇಳಿರುವೆ. ಕೋಚೆಯವರೂ ಇಂತಹ ಅನುಭವ ಹೇಳುತ್ತಿದ್ದರು. ಭಯವಾಗುತ್ತದೆ. ದುಃಖವಾಗುತ್ತದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಈ ದೇಶದಲ್ಲಿ ಅಂಬೇಡ್ಕರ್‌ರವರ ಸಂವಿಧಾನ ಪ್ರತಿನಿತ್ಯ ಕೊಲೆಯಾಗುತ್ತಿದೆ: ಶಿವಸುಂದರ್

ಹಿರಿಯ ಪತ್ರಕರ್ತ ದಿನೇಶ್‌ ಅಮಿನ್ ಅವರು, “’ಬಾಬಾ ಸಾಹೇಬ್ ಅಂಬೇಡ್ಕರ್ ಪೋಟೊ ಬೇಡ ಎಂದವರು
ದೇಶದ್ರೋಹಿ ಎಂದು ಜನರು ತೀರ್ಪು ನೀಡಿದ್ದಾರೆ” ಎಂದು ಹೇಳಿದ್ದಾರೆ.

ಹಿರಿಯ ಪತ್ರಕರ್ತ ಸನತ್‌ ಕುಮಾರ್‌‌ ಬೆಳಗಲಿ, “ಪ್ರಜಾರಾಜ್ಯ ದಿನದಂದು ಸಂವಿಧಾನ ಶಿಲ್ಪಿ ಬಾಬಾಸಾಹೇಬ ಅಂಬೇಡ್ಕರ್ ಅವರ ಫೋಟೊ ಇದ್ದರೆ ಧ್ವಜಾರೋಹಣ ಮಾಡುವದಿಲ್ಲ ಎಂದು ಧಿಮಾಕು ತೋರಿಸಿದ ರಾಯಚೂರು ಜಿಲ್ಲಾ ಮನುವಾದಿ ನ್ಯಾಯಾಧೀಶನ ವರ್ತನೆ ಖಂಡನೀಯ. ಈ ಅವಿವೇಕಿಗೆ ದೇಶದ ಸಂವಿಧಾನದ ಮೇಲೆ ನಂಬಿಕೆ ಇಲ್ಲವೆಂದಾದರೆ ರಾಜೀನಾಮೆ ಕೊಟ್ಟು ತೊಲಗಲಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಇನ್ಸ್‌‌ಟಾಗ್ರಾಮ್‌‌‌ನಲ್ಲಿ ಅಂಬೇಡ್ಕರ್‌ ಮತ್ತು ಅವರ ಪತ್ನಿಗೆ ಅವಹೇಳನ: FIR ದಾಖಲು

 

ಲೇಖಕ, ಪತ್ರಕರ್ತ ಬಿಎಂ ಬಶೀರ್‌ ಅವರು, ‘‘ಯಾವಾಗ ಈ ದೇಶದ ಹೈಕೋರ್ಟ್ ಮುಂದೆ ಮನುವಿನ ಪ್ರತಿಮೆ ಸ್ಥಾಪನೆಯಾಗಲು ಜನರು ಮೌನ ಸಮ್ಮತಿಯನ್ನು ಕೊಟ್ಟರೋ ಆಗಲೇ ಅಂಬೇಡ್ಕರ್ ಬದಿಗೆ ಸರಿದರು. ರಾಜಸ್ತಾನದ ಹೈಕೋರ್ಟ್ ಮುಂದೆ ಮನುವಿನ ಪ್ರತಿಮೆ ಬಟಾ ಬಯಲಲ್ಲಿ ನಿಂತು ಈ ದೇಶದ ಸಂವಿಧಾನಕ್ಕೆ ಪ್ರತಿ ದಿನ ಸವಾಲು ಹಾಕುತ್ತಿರುವಾಗ, ನಮಗೇನೂ ಅನ್ನಿಸುವುದಿಲ್ಲ. ನೆನಪಿಡಿ ಈ ಪ್ರತಿಮೆ ನಿಲ್ಲಿಸಲು ಅನುಮತಿ ನೀಡಿದವರು ನ್ಯಾಯಾಧೀಶರೇ. ಹೀಗಿರುವಾಗ ನ್ಯಾಯಾಧೀಶನೊಬ್ಬ ಅಂಬೇಡ್ಕರ್ ಫೋಟೋ ಇದ್ದರೆ ಧ್ವಜಾರೋಹಣ ಮಾಡುವುದಿಲ್ಲ ಎನ್ನುವುದರಲ್ಲಿ ಅಚ್ಚರಿ ಏನೂ ಇಲ್ಲ.

ಅಂಬೇಡ್ಕರ್ ಸಂವಿಧಾನದ ಕೃಪೆಯಿಂದ ನ್ಯಾಯಾಧೀಶನಾದ ಶೂದ್ರನೊಬ್ಬ, ಅಂಬೇಡ್ಕರ್ ಫೋಟೋ ಇದ್ಧರೆ ಧ್ವಜಾರೋಹಣ ಮಾಡುವುದಿಲ್ಲ ಅಂತಾನಲ್ಲ… ತಿಂದ ಬಟ್ಟಲಿಗೆ ಹೇಲುವುದು ಎಂದರೆ ಇದೇ ಅಲ್ಲವೇ ? ಮುಂದೊಂದು ದಿನ ಬರಲಿದೆ, ಗಾಂಧಿಯ ಜೊತೆಗೆ ಮನು ಮಹರ್ಷಿಯ ಫೋಟೋ ಇಟ್ಟು ಗಣರಾಜ್ಯೋತ್ಸವ ಆಚರಿಸುವ ದಿನ. ಆ ಪುಣ್ಯ ದಿನಕ್ಕಾಗಿ ನಾವೆಲ್ಲರೂ ಕಾಯೋಣ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌ ಅವರನ್ನು ಅರ್ಥಮಾಡಿಕೊಳ್ಳಲು ಮಾರ್ಕ್ಸ್ ವಾದದ ಹಿನ್ನೆಲೆ ನೆರವಾಗಿದೆ: ಜಸ್ಟಿಸ್ ಚಂದ್ರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. This is utter stupidity by that idoit, though he took oath before swearing in the name of constitution of India. Then how he can do these insult act. Useless and hopeless .

  2. ನ್ಯಾಯಾದೀಶ ಮಲ್ಲಿಕಾರ್ಜುನ ಗೌಡ, ನಮ್ಮ ಸಂವಿಧಾನ ಶಿಲ್ಪಿಗೆ ಅವಮಾನ ಮಾಡಿರುವುದು ಕಂಡನಾರ್ಹ. ಈ ನ್ಯಾಯಾದೀಶರ ವಿರುದ್ಧ ಕರ್ನಾಟಕ ಹೈಕೋರ್ಟ್ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಇವತ್ತು ಫೋಟೋ ತೆಗೆದಿರುವುದನ್ನು ನಾವು ಒಕ್ಕೊರಲಿನಿಂದ ಪ್ರತಿಭಟನೆ ಮಾಡದಿದ್ದರೆ, ನಾಳೆ ನಮ್ಮ ಸಂವಿಧಾನವನ್ನು ಪಕ್ಕಕ್ಕೆ ಸರಿಸಿ, ಆ ಜಾಗದಲ್ಲಿ ಮನುಸ್ಮೃತಿಯನ್ನು ಪ್ರತಿಷ್ಟಾಪನೆ ಮಾಡುತ್ತಾರೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...