Homeಕರ್ನಾಟಕಅಂಬೇಡ್ಕರ್‌ಗೆ ಅವಮಾನ ಘಟನೆ: ಶೋಷಿತರ ಬಗ್ಗೆ ಹೆಪ್ಪುಗೊಂಡಿರುವ ಅಸಹನೆಯ ಚಿಕ್ಕ ಪ್ರತಿನಿಧಿ ಈ ನ್ಯಾಯಾಧೀಶರು!

ಅಂಬೇಡ್ಕರ್‌ಗೆ ಅವಮಾನ ಘಟನೆ: ಶೋಷಿತರ ಬಗ್ಗೆ ಹೆಪ್ಪುಗೊಂಡಿರುವ ಅಸಹನೆಯ ಚಿಕ್ಕ ಪ್ರತಿನಿಧಿ ಈ ನ್ಯಾಯಾಧೀಶರು!

ಸಾಮಾಜಿಕ ಜಾಲತಾಣದಲ್ಲಿ ನ್ಯಾಯಧೀಶ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ

- Advertisement -
- Advertisement -

ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜಿನ ಗೌಡ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌‌ ಫೋಟೋ ತೆಗೆಸಿ ಧ್ವಜಾರೋಹಣ ಮಾಡಿರುವ ಘಟನೆ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಘಟನೆಯು ಬುಧವಾರ ನಡೆದಿದ್ದು, ದೇಶದ 73ನೇ ಗಣರಾಜ್ಯೋತ್ಸವದ ವೇಳೆ ರಾಷ್ಟ್ರಪಿತ ಗಾಂಧೀಜಿ ಭಾವಚಿತ್ರದ ಜೊತೆಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋವನ್ನು ಇರಿಸಲಾಗಿತ್ತು. ಆದರೆ ಕಾರ್ಯಕ್ರಮದ ವೇಳೆ ಪುಷ್ಪಾರ್ಚನೆ ಮಾಡಲು ಒಪ್ಪದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ  ಅಂಬೇಡ್ಕರ್‌ ಫೋಟೋ ತೆಗೆಯಲು ಪಟ್ಟು ಹಿಡಿದರು. ಹೀಗಾಗಿ ಕಾರ್ಯಕ್ರಮ ಆಯೋಜಕರು ಅಂಬೇಡ್ಕರ್‌‌ ಫೋಟೋ ತೆಗೆಯಬೇಕಾಯಿತು.

ಇದನ್ನೂ ಓದಿ: ಅಂಬೇಡ್ಕರ್ ಫೋಟೋ ಇದ್ದರೆ ಧ್ವಜಾರೋಹಣ ಮಾಡಲ್ಲ: ರಾಯಚೂರು ಜಿಲ್ಲಾ ನ್ಯಾಯಾಧೀಶರ ನಡೆಗೆ ತೀವ್ರ ಆಕ್ರೋಶ

ಈ ಘಟನೆಯನ್ನು ಸ್ಥಳದಲ್ಲೇ ವಿರೋಧಿಸಿದ ಪರಿಶಿಷ್ಟ ಜಾತಿ ಮತ್ತು ಇತರ ವರ್ಗಗಳ ವಕೀಲರು ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ ಧ್ವಜಾರೋಹಣ ಕಾರ್ಯಕ್ರಮವನ್ನು ವಿರೋಧಿಸಿ ಹೊರನಡೆದಿದ್ದಾರೆ. ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಹಿರಿಯ ಚಿಂತಕ, ಸಾಹಿತಿ ರಹಮತ್‌ ತರಿಕೆರೆ, “ನ್ಯಾಯನೀಡುವ ಮತ್ತು ಅಧಿಕಾರ ನಡೆಸುವ ಜಾಗಗಳಲ್ಲಿ ದಲಿತರನ್ನು‌, ಮಹಿಳೆಯರನ್ನು, ಮುಸ್ಲಿಮರನ್ನು, ಬುಡಕಟ್ಟು ಜನರ ಕುರಿತು, ಆಳದಲ್ಲಿ ಹೆಪ್ಪುಗೊಂಡಿರುವ ಅಸಹನೆಯ ಒಂದು ಚಿಕ್ಕ ಪ್ರತಿನಿಧಿ ರಾಯಚೂರಿನ ಈ ಮಾನ್ಯ ನ್ಯಾಯಾಧೀಶರು. ನ್ಯಾಯಾಲಯ ಕ್ಷೇತ್ರದಲ್ಲಿ ಢಾಳಾಗಿ ನೆಲೆಗೊಂಡಿರುವ ಸಾಮಾಜಿಕ, ಧಾರ್ಮಿಕ ದ್ವೇಷದ ಬಗ್ಗೆ ನನ್ನ ವಕೀಲ ಮಿತ್ರರ ಅನುಭವ ಕೇಳಿರುವೆ. ಕೋಚೆಯವರೂ ಇಂತಹ ಅನುಭವ ಹೇಳುತ್ತಿದ್ದರು. ಭಯವಾಗುತ್ತದೆ. ದುಃಖವಾಗುತ್ತದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಈ ದೇಶದಲ್ಲಿ ಅಂಬೇಡ್ಕರ್‌ರವರ ಸಂವಿಧಾನ ಪ್ರತಿನಿತ್ಯ ಕೊಲೆಯಾಗುತ್ತಿದೆ: ಶಿವಸುಂದರ್

ಹಿರಿಯ ಪತ್ರಕರ್ತ ದಿನೇಶ್‌ ಅಮಿನ್ ಅವರು, “’ಬಾಬಾ ಸಾಹೇಬ್ ಅಂಬೇಡ್ಕರ್ ಪೋಟೊ ಬೇಡ ಎಂದವರು
ದೇಶದ್ರೋಹಿ ಎಂದು ಜನರು ತೀರ್ಪು ನೀಡಿದ್ದಾರೆ” ಎಂದು ಹೇಳಿದ್ದಾರೆ.

ಹಿರಿಯ ಪತ್ರಕರ್ತ ಸನತ್‌ ಕುಮಾರ್‌‌ ಬೆಳಗಲಿ, “ಪ್ರಜಾರಾಜ್ಯ ದಿನದಂದು ಸಂವಿಧಾನ ಶಿಲ್ಪಿ ಬಾಬಾಸಾಹೇಬ ಅಂಬೇಡ್ಕರ್ ಅವರ ಫೋಟೊ ಇದ್ದರೆ ಧ್ವಜಾರೋಹಣ ಮಾಡುವದಿಲ್ಲ ಎಂದು ಧಿಮಾಕು ತೋರಿಸಿದ ರಾಯಚೂರು ಜಿಲ್ಲಾ ಮನುವಾದಿ ನ್ಯಾಯಾಧೀಶನ ವರ್ತನೆ ಖಂಡನೀಯ. ಈ ಅವಿವೇಕಿಗೆ ದೇಶದ ಸಂವಿಧಾನದ ಮೇಲೆ ನಂಬಿಕೆ ಇಲ್ಲವೆಂದಾದರೆ ರಾಜೀನಾಮೆ ಕೊಟ್ಟು ತೊಲಗಲಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಇನ್ಸ್‌‌ಟಾಗ್ರಾಮ್‌‌‌ನಲ್ಲಿ ಅಂಬೇಡ್ಕರ್‌ ಮತ್ತು ಅವರ ಪತ್ನಿಗೆ ಅವಹೇಳನ: FIR ದಾಖಲು

 

ಲೇಖಕ, ಪತ್ರಕರ್ತ ಬಿಎಂ ಬಶೀರ್‌ ಅವರು, ‘‘ಯಾವಾಗ ಈ ದೇಶದ ಹೈಕೋರ್ಟ್ ಮುಂದೆ ಮನುವಿನ ಪ್ರತಿಮೆ ಸ್ಥಾಪನೆಯಾಗಲು ಜನರು ಮೌನ ಸಮ್ಮತಿಯನ್ನು ಕೊಟ್ಟರೋ ಆಗಲೇ ಅಂಬೇಡ್ಕರ್ ಬದಿಗೆ ಸರಿದರು. ರಾಜಸ್ತಾನದ ಹೈಕೋರ್ಟ್ ಮುಂದೆ ಮನುವಿನ ಪ್ರತಿಮೆ ಬಟಾ ಬಯಲಲ್ಲಿ ನಿಂತು ಈ ದೇಶದ ಸಂವಿಧಾನಕ್ಕೆ ಪ್ರತಿ ದಿನ ಸವಾಲು ಹಾಕುತ್ತಿರುವಾಗ, ನಮಗೇನೂ ಅನ್ನಿಸುವುದಿಲ್ಲ. ನೆನಪಿಡಿ ಈ ಪ್ರತಿಮೆ ನಿಲ್ಲಿಸಲು ಅನುಮತಿ ನೀಡಿದವರು ನ್ಯಾಯಾಧೀಶರೇ. ಹೀಗಿರುವಾಗ ನ್ಯಾಯಾಧೀಶನೊಬ್ಬ ಅಂಬೇಡ್ಕರ್ ಫೋಟೋ ಇದ್ದರೆ ಧ್ವಜಾರೋಹಣ ಮಾಡುವುದಿಲ್ಲ ಎನ್ನುವುದರಲ್ಲಿ ಅಚ್ಚರಿ ಏನೂ ಇಲ್ಲ.

ಅಂಬೇಡ್ಕರ್ ಸಂವಿಧಾನದ ಕೃಪೆಯಿಂದ ನ್ಯಾಯಾಧೀಶನಾದ ಶೂದ್ರನೊಬ್ಬ, ಅಂಬೇಡ್ಕರ್ ಫೋಟೋ ಇದ್ಧರೆ ಧ್ವಜಾರೋಹಣ ಮಾಡುವುದಿಲ್ಲ ಅಂತಾನಲ್ಲ… ತಿಂದ ಬಟ್ಟಲಿಗೆ ಹೇಲುವುದು ಎಂದರೆ ಇದೇ ಅಲ್ಲವೇ ? ಮುಂದೊಂದು ದಿನ ಬರಲಿದೆ, ಗಾಂಧಿಯ ಜೊತೆಗೆ ಮನು ಮಹರ್ಷಿಯ ಫೋಟೋ ಇಟ್ಟು ಗಣರಾಜ್ಯೋತ್ಸವ ಆಚರಿಸುವ ದಿನ. ಆ ಪುಣ್ಯ ದಿನಕ್ಕಾಗಿ ನಾವೆಲ್ಲರೂ ಕಾಯೋಣ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌ ಅವರನ್ನು ಅರ್ಥಮಾಡಿಕೊಳ್ಳಲು ಮಾರ್ಕ್ಸ್ ವಾದದ ಹಿನ್ನೆಲೆ ನೆರವಾಗಿದೆ: ಜಸ್ಟಿಸ್ ಚಂದ್ರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

3 COMMENTS

  1. This is utter stupidity by that idoit, though he took oath before swearing in the name of constitution of India. Then how he can do these insult act. Useless and hopeless .

  2. ನ್ಯಾಯಾದೀಶ ಮಲ್ಲಿಕಾರ್ಜುನ ಗೌಡ, ನಮ್ಮ ಸಂವಿಧಾನ ಶಿಲ್ಪಿಗೆ ಅವಮಾನ ಮಾಡಿರುವುದು ಕಂಡನಾರ್ಹ. ಈ ನ್ಯಾಯಾದೀಶರ ವಿರುದ್ಧ ಕರ್ನಾಟಕ ಹೈಕೋರ್ಟ್ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಇವತ್ತು ಫೋಟೋ ತೆಗೆದಿರುವುದನ್ನು ನಾವು ಒಕ್ಕೊರಲಿನಿಂದ ಪ್ರತಿಭಟನೆ ಮಾಡದಿದ್ದರೆ, ನಾಳೆ ನಮ್ಮ ಸಂವಿಧಾನವನ್ನು ಪಕ್ಕಕ್ಕೆ ಸರಿಸಿ, ಆ ಜಾಗದಲ್ಲಿ ಮನುಸ್ಮೃತಿಯನ್ನು ಪ್ರತಿಷ್ಟಾಪನೆ ಮಾಡುತ್ತಾರೆ.

LEAVE A REPLY

Please enter your comment!
Please enter your name here

- Advertisment -

Must Read

FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

0
ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಭಾಷಣದ ಕ್ಲಿಪ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ಬಾರಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಬಲ ಪಂಥೀಯ ಎಕ್ಸ್...