Homeಮುಖಪುಟಉತ್ತರ ಪ್ರದೇಶ: ಪೊಲೀಸ್ ದಾಳಿಯಲ್ಲಿ ಉದ್ಯಮಿ ಸಾವು- 6 ಪೊಲೀಸರ ಅಮಾನತು

ಉತ್ತರ ಪ್ರದೇಶ: ಪೊಲೀಸ್ ದಾಳಿಯಲ್ಲಿ ಉದ್ಯಮಿ ಸಾವು- 6 ಪೊಲೀಸರ ಅಮಾನತು

- Advertisement -
- Advertisement -

ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಕಾನ್ಪುರದ 38 ವರ್ಷದ ಪ್ರಾಪರ್ಟಿ ಡೀಲರ್ ಮಂಗಳವಾರ ಮುಂಜಾನೆ ಗೋರಖ್‌ಪುರದ ಹೋಟೆಲ್ ಕೋಣೆಯಲ್ಲಿ ಮೃತಪಟ್ಟಿದ್ದಾರೆ. ಹೋಟೆಲ್‌ನಲ್ಲಿ ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ ಉದ್ಯಮಿ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಇಂದು ಬೆಳಿಗ್ಗೆ ಟ್ವೀಟ್ ಮಾಡಿದ ಗೋರಖ್‌ಪುರ ಪೊಲೀಸರು, ಉದ್ಯಮಿ ಸಾವು ಪ್ರಕರಣದಲ್ಲಿ ಆರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಅಮಾನತುಗೊಂಡ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ರಾಮಘಡಲ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಸೇರಿದಂತೆ ಅಮಾನತುಗೊಂಡ ಆರು ಪೊಲೀಸರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿರುವುದನ್ನು ಪೊಲೀಸರು ದೃಢಪಡಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿರ್ದೇಶನದಂತೆ ಉದ್ಯಮಿ ಕುಟುಂಬಕ್ಕೆ 10 ರೂಪಾಯಿ ಲಕ್ಷ ಪರಿಹಾರ ನೀಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ

 

 

ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶದ ಕಾನ್ಪುರದ ನಿವಾಸಿ ಮನೀಶ್ ಕುಮಾರ್ ಗುಪ್ತಾ ಎಂದು ಗುರುತಿಸಲಾಗಿದೆ. ಸೋಮವಾರ ಮಧ್ಯರಾತ್ರಿ ನಡೆದ ದಾಳಿಯ ಸಮಯದಲ್ಲಿ ಆತ ಮತ್ತು ಬೇರೆ ನಗರಗಳ ಇಬ್ಬರು ವ್ಯಕ್ತಿಗಳು ಹೋಟೆಲ್ ಕೊಠಡಿಯಲ್ಲಿದ್ದರು. ವ್ಯಾಪಾರ, ವ್ಯವಹಾರದ ಸಂಬಂಧ ತಮ್ಮ ಸ್ನೇಹಿತರನ್ನು ಭೇಟಿಯಾಗಲು ಗೋರಖ್‌ಪುರಕ್ಕೆ ಬಂದಿದ್ದರು ಎಂದು ಮೃತ ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಘಟನೆಯನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಅಖಿಲೇಶ್ ಯಾದವ್ ಇದನ್ನು “ಎನ್ಕೌಂಟರ್ ಸಂಸ್ಕೃತಿ”,  ರಾಜ್ಯದಲ್ಲಿ ಬಿಜೆಪಿ ಆರಂಭಿಸಿದ ಅಭ್ಯಾಸ ಎಂದು ಆರೋಪಿಸಿದ್ದಾರೆ.

“ನಾವು ಮೂವರು ನಮ್ಮ ಕೋಣೆಯಲ್ಲಿ ಮಲಗಿದ್ದೆವು. ಸುಮಾರು 12: 30 ರ ಸುಮಾರಿಗೆ ಡೋರ್‌ಬೆಲ್ ಬಾರಿಸಿತು. ನಾನು ಬಾಗಿಲು ತೆರೆದೆ ಅಲ್ಲಿ 5 ರಿಂದ 7 ಪೊಲೀಸರು ಮತ್ತು ರಿಸೆಪ್ಶನ್‌ ಹುಡುಗ ನಿಂತಿದ್ದರು. ಅವರು ಕೋಣೆಯ ಒಳಗೆ ಬಂದು ನಮ್ಮ ಐಡಿಗಳನ್ನು ಕೇಳಲು ಪ್ರಾರಂಭಿಸಿದರು. ನಾನು ನನ್ನ ಐಡಿಯನ್ನು ತೋರಿಸಿ ನಂತರ ಮನೀಶ್‌ನನ್ನು ಎಬ್ಬಿಸಿದೆ. ಈ ಸಮಯದಲ್ಲಿ ಯಾಕೆ ತೊಂದರೆ ನೀಡುತ್ತಿದ್ದೀರಿ ಎಂದು ಪೊಲೀಸರನ್ನು ಕೇಳಿದರು. ನಂತರ ಪೊಲೀಸರು ನಮ್ಮನ್ನು ಬೆದರಿಸಲು ಆರಂಭಿಸಿದರು”ಎಂದು ಹೋಟೆಲ್ ಕೊಠಡಿಯೊಳಗೆ ಇದ್ದ ಹರ್ವೀರ್ ಸಿಂಗ್ ಹೇಳಿದ್ದಾರೆ.

“ಪೊಲೀಸರು ಕುಡಿದಂತೆ ಕಾಣಿಸುತ್ತಿದ್ದರು. ನನಗೆ ಒಬ್ಬ ಪೊಲೀಸ್ ಹೊಡೆದರು. ಕೆಲವು ಪೊಲೀಸರ ಬಳಿ ಬಂದೂಕು ಇತ್ತು. ನಂತರ ಪೊಲೀಸರು ನನ್ನನ್ನು ಹೊರಗೆ ಕರೆದೊಯ್ದರು. ಸ್ವಲ್ಪ ಸಮಯದ ನಂತರ, ಮನೀಶ್‌ನನ್ನು ಕೋಣೆಯಿಂದ ಹೊರಗೆ ಎಳೆದುಕೊಂಡು ಹೋಗುವುದನ್ನು ನಾನು ನೋಡಿದೆ. ಆಗ ಆತನ ಮುಖದ ತುಂಬಾ ರಕ್ತವಿತ್ತು” ಎಂದು ಹೇಳಿದ್ದಾರೆ.

ಘಟನೆ ಬಗ್ಗೆ ಹೇಳಿಕೆ ನೀಡಿರುವ ಗೋರಖ್‌ಪುರ್ ಎಸ್‌ಪಿ ವಿಪಿನ್ ತಡಾ, “ವಿಧ ನಗರಗಳಿಂದ ಬಂದಿದ್ದ ಮೂವರು ಶಂಕಿತ ಯುವಕರ ತಪಾಸಣೆಯ ಸಮಯದಲ್ಲಿ, ರಾಮಗಡ್ತಾಲ್ ಪೊಲೀಸ್ ಠಾಣೆಯ ಪೊಲೀಸರು ಹೋಟೆಲ್‌ಗೆ ತೆರಳಿದ್ದಾರೆ. ಈ ವೇಳೆ ಪೊಲೀಸರನ್ನು ನೋಡಿ ಗಾಬರಿಯಿಂದ, ಕೊಠಡಿಯಲ್ಲಿದ್ದ ಒಬ್ಬ ವ್ಯಕ್ತಿ ಬಿದ್ದು ಗಾಯಗೊಂಡಿದ್ದಾರೆ. ನಮ್ಮ ಪೊಲೀಸರು ಅವರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಬಿಆರ್‌ಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಅವರು ಮೃತಪಟ್ಟಿದ್ದಾರೆ” ಎಂದಿದ್ದಾರೆ.


ಇದನ್ನೂ ಓದಿ: ಗಾಂಧಿ ಕುಟುಂಬ ಸಿಂಗ್‌ ಅವರಿಗೆ ಅಗೌರವ ತೋರಿಸಿತ್ತೆ? ಹಳೆಯ ಪೋಟೋಗಳ ಅಸಲಿ ಕಥೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...