Homeಮುಖಪುಟಉತ್ತರ ಪ್ರದೇಶ: ಪೊಲೀಸ್ ದಾಳಿಯಲ್ಲಿ ಉದ್ಯಮಿ ಸಾವು- 6 ಪೊಲೀಸರ ಅಮಾನತು

ಉತ್ತರ ಪ್ರದೇಶ: ಪೊಲೀಸ್ ದಾಳಿಯಲ್ಲಿ ಉದ್ಯಮಿ ಸಾವು- 6 ಪೊಲೀಸರ ಅಮಾನತು

- Advertisement -
- Advertisement -

ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಕಾನ್ಪುರದ 38 ವರ್ಷದ ಪ್ರಾಪರ್ಟಿ ಡೀಲರ್ ಮಂಗಳವಾರ ಮುಂಜಾನೆ ಗೋರಖ್‌ಪುರದ ಹೋಟೆಲ್ ಕೋಣೆಯಲ್ಲಿ ಮೃತಪಟ್ಟಿದ್ದಾರೆ. ಹೋಟೆಲ್‌ನಲ್ಲಿ ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ ಉದ್ಯಮಿ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಇಂದು ಬೆಳಿಗ್ಗೆ ಟ್ವೀಟ್ ಮಾಡಿದ ಗೋರಖ್‌ಪುರ ಪೊಲೀಸರು, ಉದ್ಯಮಿ ಸಾವು ಪ್ರಕರಣದಲ್ಲಿ ಆರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಅಮಾನತುಗೊಂಡ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ರಾಮಘಡಲ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಸೇರಿದಂತೆ ಅಮಾನತುಗೊಂಡ ಆರು ಪೊಲೀಸರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿರುವುದನ್ನು ಪೊಲೀಸರು ದೃಢಪಡಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿರ್ದೇಶನದಂತೆ ಉದ್ಯಮಿ ಕುಟುಂಬಕ್ಕೆ 10 ರೂಪಾಯಿ ಲಕ್ಷ ಪರಿಹಾರ ನೀಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ

 

 

ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶದ ಕಾನ್ಪುರದ ನಿವಾಸಿ ಮನೀಶ್ ಕುಮಾರ್ ಗುಪ್ತಾ ಎಂದು ಗುರುತಿಸಲಾಗಿದೆ. ಸೋಮವಾರ ಮಧ್ಯರಾತ್ರಿ ನಡೆದ ದಾಳಿಯ ಸಮಯದಲ್ಲಿ ಆತ ಮತ್ತು ಬೇರೆ ನಗರಗಳ ಇಬ್ಬರು ವ್ಯಕ್ತಿಗಳು ಹೋಟೆಲ್ ಕೊಠಡಿಯಲ್ಲಿದ್ದರು. ವ್ಯಾಪಾರ, ವ್ಯವಹಾರದ ಸಂಬಂಧ ತಮ್ಮ ಸ್ನೇಹಿತರನ್ನು ಭೇಟಿಯಾಗಲು ಗೋರಖ್‌ಪುರಕ್ಕೆ ಬಂದಿದ್ದರು ಎಂದು ಮೃತ ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಘಟನೆಯನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಅಖಿಲೇಶ್ ಯಾದವ್ ಇದನ್ನು “ಎನ್ಕೌಂಟರ್ ಸಂಸ್ಕೃತಿ”,  ರಾಜ್ಯದಲ್ಲಿ ಬಿಜೆಪಿ ಆರಂಭಿಸಿದ ಅಭ್ಯಾಸ ಎಂದು ಆರೋಪಿಸಿದ್ದಾರೆ.

“ನಾವು ಮೂವರು ನಮ್ಮ ಕೋಣೆಯಲ್ಲಿ ಮಲಗಿದ್ದೆವು. ಸುಮಾರು 12: 30 ರ ಸುಮಾರಿಗೆ ಡೋರ್‌ಬೆಲ್ ಬಾರಿಸಿತು. ನಾನು ಬಾಗಿಲು ತೆರೆದೆ ಅಲ್ಲಿ 5 ರಿಂದ 7 ಪೊಲೀಸರು ಮತ್ತು ರಿಸೆಪ್ಶನ್‌ ಹುಡುಗ ನಿಂತಿದ್ದರು. ಅವರು ಕೋಣೆಯ ಒಳಗೆ ಬಂದು ನಮ್ಮ ಐಡಿಗಳನ್ನು ಕೇಳಲು ಪ್ರಾರಂಭಿಸಿದರು. ನಾನು ನನ್ನ ಐಡಿಯನ್ನು ತೋರಿಸಿ ನಂತರ ಮನೀಶ್‌ನನ್ನು ಎಬ್ಬಿಸಿದೆ. ಈ ಸಮಯದಲ್ಲಿ ಯಾಕೆ ತೊಂದರೆ ನೀಡುತ್ತಿದ್ದೀರಿ ಎಂದು ಪೊಲೀಸರನ್ನು ಕೇಳಿದರು. ನಂತರ ಪೊಲೀಸರು ನಮ್ಮನ್ನು ಬೆದರಿಸಲು ಆರಂಭಿಸಿದರು”ಎಂದು ಹೋಟೆಲ್ ಕೊಠಡಿಯೊಳಗೆ ಇದ್ದ ಹರ್ವೀರ್ ಸಿಂಗ್ ಹೇಳಿದ್ದಾರೆ.

“ಪೊಲೀಸರು ಕುಡಿದಂತೆ ಕಾಣಿಸುತ್ತಿದ್ದರು. ನನಗೆ ಒಬ್ಬ ಪೊಲೀಸ್ ಹೊಡೆದರು. ಕೆಲವು ಪೊಲೀಸರ ಬಳಿ ಬಂದೂಕು ಇತ್ತು. ನಂತರ ಪೊಲೀಸರು ನನ್ನನ್ನು ಹೊರಗೆ ಕರೆದೊಯ್ದರು. ಸ್ವಲ್ಪ ಸಮಯದ ನಂತರ, ಮನೀಶ್‌ನನ್ನು ಕೋಣೆಯಿಂದ ಹೊರಗೆ ಎಳೆದುಕೊಂಡು ಹೋಗುವುದನ್ನು ನಾನು ನೋಡಿದೆ. ಆಗ ಆತನ ಮುಖದ ತುಂಬಾ ರಕ್ತವಿತ್ತು” ಎಂದು ಹೇಳಿದ್ದಾರೆ.

ಘಟನೆ ಬಗ್ಗೆ ಹೇಳಿಕೆ ನೀಡಿರುವ ಗೋರಖ್‌ಪುರ್ ಎಸ್‌ಪಿ ವಿಪಿನ್ ತಡಾ, “ವಿಧ ನಗರಗಳಿಂದ ಬಂದಿದ್ದ ಮೂವರು ಶಂಕಿತ ಯುವಕರ ತಪಾಸಣೆಯ ಸಮಯದಲ್ಲಿ, ರಾಮಗಡ್ತಾಲ್ ಪೊಲೀಸ್ ಠಾಣೆಯ ಪೊಲೀಸರು ಹೋಟೆಲ್‌ಗೆ ತೆರಳಿದ್ದಾರೆ. ಈ ವೇಳೆ ಪೊಲೀಸರನ್ನು ನೋಡಿ ಗಾಬರಿಯಿಂದ, ಕೊಠಡಿಯಲ್ಲಿದ್ದ ಒಬ್ಬ ವ್ಯಕ್ತಿ ಬಿದ್ದು ಗಾಯಗೊಂಡಿದ್ದಾರೆ. ನಮ್ಮ ಪೊಲೀಸರು ಅವರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಬಿಆರ್‌ಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಅವರು ಮೃತಪಟ್ಟಿದ್ದಾರೆ” ಎಂದಿದ್ದಾರೆ.


ಇದನ್ನೂ ಓದಿ: ಗಾಂಧಿ ಕುಟುಂಬ ಸಿಂಗ್‌ ಅವರಿಗೆ ಅಗೌರವ ತೋರಿಸಿತ್ತೆ? ಹಳೆಯ ಪೋಟೋಗಳ ಅಸಲಿ ಕಥೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...