Homeಮುಖಪುಟಪಾಸ್ ಪರ್ಮಿಷನ್ ಐಲಾಟ - ವಲಸೆ ಕಾರ್ಮಿಕರ ಗೋಳಾಟ: ತನ್ನ ಜನರನ್ನು ತನ್ನ ನೆಲದಲ್ಲೇ...

ಪಾಸ್ ಪರ್ಮಿಷನ್ ಐಲಾಟ – ವಲಸೆ ಕಾರ್ಮಿಕರ ಗೋಳಾಟ: ತನ್ನ ಜನರನ್ನು ತನ್ನ ನೆಲದಲ್ಲೇ ಪರದೇಶಿಗಳನ್ನಾಗಿಸಿದ ಸರ್ಕಾರ

- Advertisement -
- Advertisement -

ಕೊರೊನಾ ಸಂಕಷ್ಟ ನಿಭಾಯಿಸಲು ಹೆಣಗಾಡುತ್ತಿರುವ ಸರ್ಕಾರ ಪ್ರಜ್ಞಾಪೂರ್ವಕವಾಗಿ ಈ ದೇಶದ ಸಾಮಾನ್ಯ ಜನರನ್ನು ಮರೆತು ಉಳ್ಳವರ ಹಿತ ಕಾಯಲು ಟೊಂಕ ಕಟ್ಟಿನಿಂತಿರುವುದು ಜಗಜ್ಜಾಹೀರಾಗಿದೆ. ಈ ದೇಶದ ಕಾನೂನು -ಕಟ್ಟುಪಾಡುಗಳು ಎಂತಹುದ್ದದೇ ಸಂಕಷ್ಟದ ಕಾಲದಲ್ಲೂ ಬಡವರ, ಕೂಲಿ ಕಾರ್ಮಿಕರ, ದುಡಿಯುವ ವರ್ಗಗಳ ವಿರುದ್ಧವೇ ಚಲಾವಣೆಯಾಗುತ್ತಿರುವುದಕ್ಕೆ ಪ್ರತಿದಿನವೂ ಉದಾಹರಣೆಗಳು ಕಾಣ ಸಿಗುತ್ತಿವೆ.

ವಿದೇಶಿದಲ್ಲಿನ ಸುಮಾರು ನಾಲ್ಕು ಲಕ್ಷ ಭಾರತೀಯರನ್ನು ಭಾರತಕ್ಕೆ ಕರೆತರಲು ರೆಡ್ ಕಾರ್ಪೇಟ್ ಹಾಸಿರುವ ಕೇಂದ್ರ ಸರ್ಕಾರ ದೇಶದೊಳಗೆ ತಮ್ಮ ತಮ್ಮ ಊರುಗಳಿಗೆ ತಲುಪಲಾಗದೆ ಅನ್ನ, ನೀರು, ನೆಲೆ ಕಳೆದುಕೊಂಡು ಪರಿತಪಿಸುತ್ತಿರುವ ಲಕ್ಷಾಂತರ ಜನರ ಗೋಳಿಗೆ ಕಿವುಡಾಗಿ ವರ್ತಿಸುತ್ತಿದೆ. ವಿದೇಶದಲ್ಲಿನ ಭಾರತೀಯರನ್ನು ಸ್ವದೇಶಕ್ಕೆ ಕರೆತರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ‘ಐತಿಹಾಸಿಕ ಏರ್ ಲಿಪ್ಟ್,’ ‘ಆಪರೇಶನ್ ಏರ್ ಲಿಪ್ಟ್,’, ವಿದೇಶಿದಲ್ಲಿನ ಭಾರತೀಯರಿಗೆ ಮೋದಿ ಆಪತ್ಭಾಂಧವ ಎಂದು ಬಣ್ಣಿಸುತ್ತಿರುವ ಮಾಧ್ಯಮಗಳು ಭಾರತದಲ್ಲಿಯೇ ಹೊಟ್ಟೆ ಪಾಡಿಗಾಗಿ ಬೇರೆ ಬೇರೆ ಜಿಲ್ಲೆಗಳಿಗೆ, ರಾಜ್ಯಗಳಿಗೆ ಹೋಗಿ ಸಿಲುಕಿರುವ ದುಡಿಯವು ವರ್ಗಗಳನ್ನು ಕನಿಷ್ಟ ‘ರೋಡ್ ಲಿಪ್ಟ್ ‘ ಮೂಲಕ ತಮ್ಮ ತಮ್ಮ ಊರು, ಹಳ್ಳಿ, ಪಟ್ಟಣಗಳಿಗೆ ತಲುಪಿಸಲಾಗದ ಸರ್ಕಾರದ ಹೊಣೆಗೇಡಿತನವನ್ನು ಮರೆಮಾಚುತ್ತಿವೆ.

ಇನ್ನೂ ಕರ್ನಾಟಕ ರಾಜ್ಯದಲ್ಲಿ ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ಹೊರಟ ಶ್ರಮಿಕರಿಂದ ಬಸ್‌ಚಾರ್ಜ್ ವಸೂಲಿಗಿಳಿದ ರಾಜ್ಯ ಸರ್ಕಾರ ತನ್ನ ವಿಕೃತ ನಿರ್ಧಾರವನ್ನು ಪ್ರತಿಪಕ್ಷಗಳ ಹೋರಾಟ, ಸಾಮಾಜಿಕ ಜಾಲತಾಣಗಳಲ್ಲಿನ ತೀವ್ರ ಟೀಕೆಗಳ ಕಾರಣ ಹಿಂಪಡೆಯುತ್ತದೆ. ಹಲವಾರು ದಿನಗಳಿಂದ ಅನ್ನ, ನೀರು, ನಿದ್ದೆಗಳಿಲ್ಲದೆ ಬಳಲಿದ್ದ ದುಡಿಯುವ ವರ್ಗಗಳಿಂದಲೂ ಟಿಕೆಟ್ ದರ ವಸೂಲಿಗಿಳಿದ ಸರ್ಕಾರದ ನಿರ್ಲಜ್ಜಗೇಡಿಗತನವನ್ನು ಖಂಡಿಸದ ಮಾಧ್ಯಮಗಳು ನಾಗರೀಕರ, ವಿಪಕ್ಷಗಳು ಮಾಡಿದ ಮಂಗಳಾರತಿಯಿಂದ ಸರ್ಕಾರ ಟಿಕೆಟ್ ದರ ವಸೂಲಿಯ ನಿರ್ಧಾರ ಹಿಂಪಡೆದದ್ದನ್ನು ‘ಕಷ್ಟಕ್ಕೆ ಕರಗಿದ ಸರ್ಕಾರ’ ಎಂದು ತುತ್ತೂರಿ ಊದುತ್ತವೆ ಎಂದರೆ ಇಂತಹ ಮಾಧ್ಯಮಗಳ ಸಂವೇದನೆ ಸತ್ತು ಹೋಗಿರುವುದು ನಿಚ್ಚಳವಾಗಿ ಗೋಚರಿಸುತ್ತದೆ.

ಇಂದಿಗೂ ವಲಸೆಯ ಪರ್ವ ಮುಗಿಯುತ್ತಿಲ್ಲ. ಕೂಲಿ, ನಾಲಿಗೆ ವಲಸೆ ಹೋಗಿರುವ ದುಡಿಯುವ ವರ್ಗಗಳು ತಮ್ಮ ತಮ್ಮ ಊರುಗಳಿಗೆ ತಲುಪಲಾಗದೆ ಪರಿತಪಿಸುತ್ತಿವೆ. ರಾಜ್ಯದಲ್ಲಿ ಕಳೆದರೆಡು ದಿನಗಳಿಂದ ಪಾಸ್ ವ್ಯವಸ್ಥೆ ಮೂಲಕ ಮತ್ತು ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ತಲುಪಲು ಅವಕಾಶ ಕೊಡಲಾಗಿದೆ ಸರಿಯಷ್ಟೆ. ಆದರೆ ಪಾಸ್ ಪಡೆದುಕೊಳ್ಳಲು ಸಾಧ್ಯವಾಗದ ಸ್ಥಿತಿಯಲ್ಲಿರುವ ಬೆಂಗಳೂರು ಸೇರಿದಂತೆ ಅನೇಕ ಇತರೆ ಜಿಲ್ಲೆಗಳಲ್ಲಿನ ವಲಸೆ ಕಾರ್ಮಿಕರು ತಮ್ಮ ಕುಟುಂಬಗಳೊಂದಿಗೆ ತಮ್ಮ ಊರು ಮನೆ ಸೇರಿಕೊಳ್ಳಲು ನಡೆದುಕೊಂಡು ಅಥವಾ ದ್ವಿಚಕ್ರವಾಹನಗಳಲ್ಲಿ ಹಳ್ಳಿ, ಹಳ್ಳ, ಕೊಳ್ಳ, ಕಾಡು ಮೇಡುಗಳ ಬಳಸು ದಾರಿಯಲ್ಲಿ ಬಂದರೂ ಅವರು ತಮ್ಮ ತಮ್ಮ ಜಿಲ್ಲೆಗಳ ಒಳ ಪ್ರವೇಶಿಸಲು ಚೆಕ್ ಪೋಸ್ಟ್ ಗಳಲ್ಲಿ ಪಾಸ್ ಇಲ್ಲದ ನೆಪದಿಂದ ಅವರನ್ನು ಒಳಬಿಟ್ಟುಕೊಳ್ಳಲಾಗುತ್ತಿಲ್ಲ. ಹಾಗೊಮ್ಮೆ ಒಳಬಂದರೂ ಅವರನ್ನು ನುಸುಳುಕೋರರಂತೆ ಬಂಧಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳು, ಪೊಲೀಸರು ಇಂತಹ ವಲಸಿಗ ರೊಂದಿಗೆ ಅತ್ಯಂತ ಅಮಾನವೀಯವಾಗಿ ವರ್ತಿಸುತ್ತಿದ್ದಾರೆ. ನೆಲೆ. ಅನ್ನ, ನೀರು ಇಲ್ಲದೆ ಮೊದಲೇ ಬಳಲಿ ಬೆಂಡಾಗಿರುವ ಈ ವಲಸಿಗ ಕುಟುಂಬಗಳು ಈಗ ತಮ್ಮದೇ ನೆಲದಲ್ಲಿ ಪರಕೀಯರಾಗಿ ತಿರಸ್ಕರಿಸಲ್ಪಡುತ್ತಿವೆ. ಅತ್ತ ಬಂದ ಜಿಲ್ಲೆಗೂ ಹೋಗಲಾರದೆ. ಇತ್ತ ತಮ್ಮ ಊರಿಗೂ ಪ್ರವೇಶ ಸಿಗದೆ ಸಾವಿರಾರು ದುಡಿಯುವ ಜನಸಮುದಾಯ ಮಕ್ಕಳು,ಮರಿಗಳನ್ನು ಕಟ್ಟಿಕೊಂಡು ಅಲೆದಾಡುವತ್ತಾ ನಿಷ್ಕಾರುಣ್ಯವಾಗಿ ವರ್ತಿಸುತ್ತಿರುವ ಆಡಳಿತ ವ್ಯವಸ್ಥೆಯ ಕಾಲು ಕಟ್ಟಿಕೊಟ್ಟು ರೋಧಿಸುತ್ತಿವೆ. ಹಳ್ಳಿಗಳಲ್ಲೂ ಕೂಡ ಅಪರಿಚಿತರನ್ನು ಒಳ ಬಿಟ್ಟುಕೊಳ್ಳದೆ ಅಮಾನವೀಯವಾಗಿ ನಡೆದುಕೊಳ್ಳುತ್ತಿರುವುದು ವಲಸಿಗರ ಪಾಡು ಹೇಳತೀರದಾಗಿದೆ.

ಕೇವಲ ಪಾಸ್ ಮುಖ್ಯವಾಗಿಟ್ಟುಕೊಂಡು ವಲಸಿಗರನ್ನು ಅವರ ಊರುಗಳ ಒಳಬಿಟ್ಟುಕೊಳ್ಳದ ಕೆಲಸವನ್ನು ಜಿಲ್ಲಾಡಳಿತಗಳೇ ಮಾಡುತ್ತಿದ್ದು, ಬಹಳಷ್ಟು ಕಡೆ ಇಂತಹ ವಲಸಿಗರ ಮೇಲೆ ಪೊಲೀಸರು ಹಲ್ಲೆ ನಡೆಸಿ ಹೊರ ತಳ್ಳುವ ಘಟನೆಗಳು ನಡೆದಿವೆ. ಹೀಗೆ ವಲಸೆ ಬರುವವರನ್ನು ಆರೋಗ್ಯ ತಪಾಸಣೆ ಮಾಡಿ ಅಗತ್ಯ ಬಿದ್ದಲ್ಲಿ ಕ್ವಾರಂಟೈನ್ ಗೆ ಒಳಪಡಿಸುವ ಮೂಲಕ ಅಂತಹ ಈ ವಲಸಿಗ ಕುಟುಂಬಗಳಿಗೆ ಕನಿಷ್ಟ ಅನ್ನ, ಆಹಾರ, ನೆಲೆಯನ್ನು ಒದಗಿಸಬಹುದಾಗಿದ್ದರೂ ಆಡಳಿತ ವ್ಯವಸ್ಥೆಗಳು ಇದಾವುದನ್ನು ಮಾಡದೆ ವಲಸಿಗರನ್ನು ನಗರದ ಒಳಬಿಟ್ಟುಕೊಳ್ಳದೆ ಓಡಿಸುತ್ತಿವೆ. ಕೂಲಿ ಕುಟುಂಬಗಳ ಬದುಕು ಈಗ ‘ಅತ್ತ ದರಿ ಇತ್ತ ಪುಲಿ’ ಎಂಬಂತಾಗಿದೆ. ಕಾಯ್ದೆ-ಕಾನೂನುಗಳ ಉದ್ದೇಶ ಅಂತಿಮವಾಗಿ ಆ ನೆಲದ ಜನರ ಕಲ್ಯಾಣವೇ ಆಗಿರುತ್ತದೆ. ಆದರೆ ಜನರ ಹಿತ ಕಾಯದ ಕಾನೂನು ಕಟ್ಟಳೆಗಳು ಇರುವುದಾದರೂ ಏತಕ್ಕೆ ?, ಅನೇಕ ಸಂದರ್ಭಗಳಲ್ಲಿ ಕಾಯ್ದೆ-ಕಾನೂನುಗಳು ಜನರಿಗೆ ಮಾರಕವಾದಾಗಲೇ ದಂಗೆ, ಕ್ರಾಂತಿಗಳು ಭುಗಿಲೇಳುತ್ತವೆ. ಅಂತಹ ಕಾನೂನುಗಳನ್ನು ಮುರಿದು ಮುನ್ನುಗ್ಗುವ ಸಂದರ್ಭಗಳು ಸೃಷ್ಟಿಯಾಗುತ್ತವೆ. ಇದನ್ನು ಆಳುವವರು ಅರ್ಥಮಾಡಿಕೊಳ್ಳಬೇಕು.

ಮೊನ್ನೆ ಬೆಂಗಳೂರಿನಲ್ಲಿ ಬಿಹಾರಿ ಕಾರ್ಮಿಕರ ಸಿಟ್ಟು ಸ್ಪೋಟಗೊಂಡು ಪೊಲೀಸ್ ಅಧಿಕಾರಿಯೊಬ್ಬನ ತಲೆ ಒಡೆಯುವಂತಾಗಿದೆ. ದುಡಿಯುವ ವರ್ಗದ ಸಿಟ್ಟು ರಟ್ಟೆಗೆ ಬಂದಾಗ ಇಂತಹ ಘಟನೆಗಳು ನಡೆಯುತ್ತವೆ. ಇದು ಕಾನೂನು ಭಂಗವಲ್ಲ. ಆಡಳಿತ ವ್ಯವಸ್ಥೆಯ ವೈಫಲ್ಯಕ್ಕೆ ತೋರಿದ ಪ್ರತಿರೋಧವಾಗುತ್ತದೆ. ಗುಜರಾತ್ ನ ಸೂರತ್ ನಲ್ಲಿ ವಲಸೆ ಕಾರ್ಮಿಕರ ಗುಂಪಿನ ದಂಗೆ ಕೂಡ ಇದೆ ಆಗಿದೆ. ಇದನ್ನು ಆಳುವವರು ಅರ್ಥಮಾಡಿಕೊಳ್ಳಬೇಕು. ವಿದೇಶದಲ್ಲಿನ ಭಾರತೀಯರನ್ನು ಕರೆತರಲು ಹಾತೊರೆವ ಕೇಂದ್ರ ಸರ್ಕಾರ ಭಾರತದೊಳಗೆ ಇರುವ ವಲಸೆ ಕಾರ್ಮಿಕರನ್ನು ಅವರವರ ನೆಲೆಗೆ ತಲುಪಿಸಲು ಅಕ್ಷಮ್ಯ ನಿರ್ಲಕ್ಷ್ಯವನ್ನು ತೋರುತ್ತಿದೆ.

ಕೊರೊನಾ ಸೋಂಕು ವಿದೇಶದಿಂದಲೆ ಭಾರತಕ್ಕೆ ನುಸುಳಿದ್ದು, ಶ್ರೀಮಂತರು ತಂದ ಕಾಯಿಲೆಗೆ ಭಾರತದ ಬಡಜನಸಮುದಾಯ ಬರ್ಬರವಾಗಿ ನರಳುತ್ತಿದೆ. ಲಾಕ್ ಡೌನ್ ಘೋಷಣೆಯಾದ ಬೆನ್ನಲ್ಲೇ ರಸ್ತೆ ಹಿಡಿದು ಹೊರಟ ಈ ದೇಶದ ಆರ್ಥಿಕ ಅಭಿವೃದ್ದಿಗೆ ಬೆನ್ನೆಲುಬಾದ ದುಡಿಯುವ ವರ್ಗಗಳ ಧಾರುಣವಾದ ಮಹಾವಲಸೆ ಸರ್ಕಾರಕ್ಕಾಗಲಿ , ಮಾಧ್ಯಮಗಳಿಗಾಗಲಿ ಅದೊಂದು ಈ ದೇಶದ, ಈ ನಾಡಿನ ಜನಸಮುದಾಯದ ಗೋಳು ಎಂದು ಅನಿಸಲೇ ಇಲ್ಲ. ಇಂತಹ ಹೊತ್ತಿನಲ್ಲಿ ಈ ಬಡಸಮುದಾಯವನ್ನು , ದುಡಿಯವ ವರ್ಗದ ಹಿತ ಕಾಯಬೇಕಾದ ಸರ್ಕಾರ ಭಾರತದ ಬಡಜನರ ನಿರ್ನಾಮಕ್ಕೆ ವಿದೇಶದಿಂದ ಸೋಂಕು ಆಮದು ಮಾಡಿಕೊಳ್ಳಲು ಸಡಗರದಲ್ಲಿದೆ.

ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪನವರು ಬೆಂಗಳೂರು ವಿಮಾನನಿಲ್ದಾಣದಲ್ಲಿ ವಿದೇಶಿಗಳಿಂದ ಬರುವ ಭಾರತೀಯರನ್ನು ಸ್ವಾಗತಿಸಿ ಐಷಾರಾಮಿ ಹೊಟೇಲ್ , ಬಂಗ್ಲೆಗಳಿಗೆ ಬೀಳ್ಕೊಡುವ ಮುಂಚೆ ಪಾಸ್, ಪರ‍್ಮಿಷನ್, ಲೊಟ್ಟೆ-ಲೊಸಗು ಎಂಬ ನಿರ್ಬಂಧಗಳನ್ನು ತೆಗೆದು ತಮ್ಮದೇ ನೆಲದ ವಲಸೆ ಕಾರ್ಮಿಕ ಸಮುದಾಯವನ್ನು ಅವರವರ ಊರುಮನೆಗಳಿಗೆ ತಲುಪಿಸಿ ಅನ್ನ,ನೀರು ಕೊಡಬೇಕಾಗಿದೆ. ಇದು ಒಂದು ನಾಗರೀಕ ಸರ್ಕಾರವೆನಿಸಿಕೊಳ್ಳಲು ಘನತೆಯ ಮಾರ್ಗವಾಗಿರುತ್ತದೆ.

(ಲೇಖಕರು ಪತ್ರಕರ್ತರು ಮತ್ತು ಬರಹಗಾರರು. ಅಭಿಪ್ರಾಯಗಳು ವಯಕ್ತಿಕವಾದವು)


ಇದನ್ನೂ ಓದಿ: ಬಿಲ್ಡರ್‌ ಲಾಬಿಗೆ ಮಣಿದು ರೈಲುಸೇವೆ ರದ್ದುಗೊಳಿಸಿದ ರಾಜ್ಯಸರ್ಕಾರ: ಸಂಕಷ್ಟದಲ್ಲಿ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...