Homeಮುಖಪುಟಪಾಸ್ ಪರ್ಮಿಷನ್ ಐಲಾಟ - ವಲಸೆ ಕಾರ್ಮಿಕರ ಗೋಳಾಟ: ತನ್ನ ಜನರನ್ನು ತನ್ನ ನೆಲದಲ್ಲೇ...

ಪಾಸ್ ಪರ್ಮಿಷನ್ ಐಲಾಟ – ವಲಸೆ ಕಾರ್ಮಿಕರ ಗೋಳಾಟ: ತನ್ನ ಜನರನ್ನು ತನ್ನ ನೆಲದಲ್ಲೇ ಪರದೇಶಿಗಳನ್ನಾಗಿಸಿದ ಸರ್ಕಾರ

- Advertisement -
- Advertisement -

ಕೊರೊನಾ ಸಂಕಷ್ಟ ನಿಭಾಯಿಸಲು ಹೆಣಗಾಡುತ್ತಿರುವ ಸರ್ಕಾರ ಪ್ರಜ್ಞಾಪೂರ್ವಕವಾಗಿ ಈ ದೇಶದ ಸಾಮಾನ್ಯ ಜನರನ್ನು ಮರೆತು ಉಳ್ಳವರ ಹಿತ ಕಾಯಲು ಟೊಂಕ ಕಟ್ಟಿನಿಂತಿರುವುದು ಜಗಜ್ಜಾಹೀರಾಗಿದೆ. ಈ ದೇಶದ ಕಾನೂನು -ಕಟ್ಟುಪಾಡುಗಳು ಎಂತಹುದ್ದದೇ ಸಂಕಷ್ಟದ ಕಾಲದಲ್ಲೂ ಬಡವರ, ಕೂಲಿ ಕಾರ್ಮಿಕರ, ದುಡಿಯುವ ವರ್ಗಗಳ ವಿರುದ್ಧವೇ ಚಲಾವಣೆಯಾಗುತ್ತಿರುವುದಕ್ಕೆ ಪ್ರತಿದಿನವೂ ಉದಾಹರಣೆಗಳು ಕಾಣ ಸಿಗುತ್ತಿವೆ.

ವಿದೇಶಿದಲ್ಲಿನ ಸುಮಾರು ನಾಲ್ಕು ಲಕ್ಷ ಭಾರತೀಯರನ್ನು ಭಾರತಕ್ಕೆ ಕರೆತರಲು ರೆಡ್ ಕಾರ್ಪೇಟ್ ಹಾಸಿರುವ ಕೇಂದ್ರ ಸರ್ಕಾರ ದೇಶದೊಳಗೆ ತಮ್ಮ ತಮ್ಮ ಊರುಗಳಿಗೆ ತಲುಪಲಾಗದೆ ಅನ್ನ, ನೀರು, ನೆಲೆ ಕಳೆದುಕೊಂಡು ಪರಿತಪಿಸುತ್ತಿರುವ ಲಕ್ಷಾಂತರ ಜನರ ಗೋಳಿಗೆ ಕಿವುಡಾಗಿ ವರ್ತಿಸುತ್ತಿದೆ. ವಿದೇಶದಲ್ಲಿನ ಭಾರತೀಯರನ್ನು ಸ್ವದೇಶಕ್ಕೆ ಕರೆತರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ‘ಐತಿಹಾಸಿಕ ಏರ್ ಲಿಪ್ಟ್,’ ‘ಆಪರೇಶನ್ ಏರ್ ಲಿಪ್ಟ್,’, ವಿದೇಶಿದಲ್ಲಿನ ಭಾರತೀಯರಿಗೆ ಮೋದಿ ಆಪತ್ಭಾಂಧವ ಎಂದು ಬಣ್ಣಿಸುತ್ತಿರುವ ಮಾಧ್ಯಮಗಳು ಭಾರತದಲ್ಲಿಯೇ ಹೊಟ್ಟೆ ಪಾಡಿಗಾಗಿ ಬೇರೆ ಬೇರೆ ಜಿಲ್ಲೆಗಳಿಗೆ, ರಾಜ್ಯಗಳಿಗೆ ಹೋಗಿ ಸಿಲುಕಿರುವ ದುಡಿಯವು ವರ್ಗಗಳನ್ನು ಕನಿಷ್ಟ ‘ರೋಡ್ ಲಿಪ್ಟ್ ‘ ಮೂಲಕ ತಮ್ಮ ತಮ್ಮ ಊರು, ಹಳ್ಳಿ, ಪಟ್ಟಣಗಳಿಗೆ ತಲುಪಿಸಲಾಗದ ಸರ್ಕಾರದ ಹೊಣೆಗೇಡಿತನವನ್ನು ಮರೆಮಾಚುತ್ತಿವೆ.

ಇನ್ನೂ ಕರ್ನಾಟಕ ರಾಜ್ಯದಲ್ಲಿ ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ಹೊರಟ ಶ್ರಮಿಕರಿಂದ ಬಸ್‌ಚಾರ್ಜ್ ವಸೂಲಿಗಿಳಿದ ರಾಜ್ಯ ಸರ್ಕಾರ ತನ್ನ ವಿಕೃತ ನಿರ್ಧಾರವನ್ನು ಪ್ರತಿಪಕ್ಷಗಳ ಹೋರಾಟ, ಸಾಮಾಜಿಕ ಜಾಲತಾಣಗಳಲ್ಲಿನ ತೀವ್ರ ಟೀಕೆಗಳ ಕಾರಣ ಹಿಂಪಡೆಯುತ್ತದೆ. ಹಲವಾರು ದಿನಗಳಿಂದ ಅನ್ನ, ನೀರು, ನಿದ್ದೆಗಳಿಲ್ಲದೆ ಬಳಲಿದ್ದ ದುಡಿಯುವ ವರ್ಗಗಳಿಂದಲೂ ಟಿಕೆಟ್ ದರ ವಸೂಲಿಗಿಳಿದ ಸರ್ಕಾರದ ನಿರ್ಲಜ್ಜಗೇಡಿಗತನವನ್ನು ಖಂಡಿಸದ ಮಾಧ್ಯಮಗಳು ನಾಗರೀಕರ, ವಿಪಕ್ಷಗಳು ಮಾಡಿದ ಮಂಗಳಾರತಿಯಿಂದ ಸರ್ಕಾರ ಟಿಕೆಟ್ ದರ ವಸೂಲಿಯ ನಿರ್ಧಾರ ಹಿಂಪಡೆದದ್ದನ್ನು ‘ಕಷ್ಟಕ್ಕೆ ಕರಗಿದ ಸರ್ಕಾರ’ ಎಂದು ತುತ್ತೂರಿ ಊದುತ್ತವೆ ಎಂದರೆ ಇಂತಹ ಮಾಧ್ಯಮಗಳ ಸಂವೇದನೆ ಸತ್ತು ಹೋಗಿರುವುದು ನಿಚ್ಚಳವಾಗಿ ಗೋಚರಿಸುತ್ತದೆ.

ಇಂದಿಗೂ ವಲಸೆಯ ಪರ್ವ ಮುಗಿಯುತ್ತಿಲ್ಲ. ಕೂಲಿ, ನಾಲಿಗೆ ವಲಸೆ ಹೋಗಿರುವ ದುಡಿಯುವ ವರ್ಗಗಳು ತಮ್ಮ ತಮ್ಮ ಊರುಗಳಿಗೆ ತಲುಪಲಾಗದೆ ಪರಿತಪಿಸುತ್ತಿವೆ. ರಾಜ್ಯದಲ್ಲಿ ಕಳೆದರೆಡು ದಿನಗಳಿಂದ ಪಾಸ್ ವ್ಯವಸ್ಥೆ ಮೂಲಕ ಮತ್ತು ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ತಲುಪಲು ಅವಕಾಶ ಕೊಡಲಾಗಿದೆ ಸರಿಯಷ್ಟೆ. ಆದರೆ ಪಾಸ್ ಪಡೆದುಕೊಳ್ಳಲು ಸಾಧ್ಯವಾಗದ ಸ್ಥಿತಿಯಲ್ಲಿರುವ ಬೆಂಗಳೂರು ಸೇರಿದಂತೆ ಅನೇಕ ಇತರೆ ಜಿಲ್ಲೆಗಳಲ್ಲಿನ ವಲಸೆ ಕಾರ್ಮಿಕರು ತಮ್ಮ ಕುಟುಂಬಗಳೊಂದಿಗೆ ತಮ್ಮ ಊರು ಮನೆ ಸೇರಿಕೊಳ್ಳಲು ನಡೆದುಕೊಂಡು ಅಥವಾ ದ್ವಿಚಕ್ರವಾಹನಗಳಲ್ಲಿ ಹಳ್ಳಿ, ಹಳ್ಳ, ಕೊಳ್ಳ, ಕಾಡು ಮೇಡುಗಳ ಬಳಸು ದಾರಿಯಲ್ಲಿ ಬಂದರೂ ಅವರು ತಮ್ಮ ತಮ್ಮ ಜಿಲ್ಲೆಗಳ ಒಳ ಪ್ರವೇಶಿಸಲು ಚೆಕ್ ಪೋಸ್ಟ್ ಗಳಲ್ಲಿ ಪಾಸ್ ಇಲ್ಲದ ನೆಪದಿಂದ ಅವರನ್ನು ಒಳಬಿಟ್ಟುಕೊಳ್ಳಲಾಗುತ್ತಿಲ್ಲ. ಹಾಗೊಮ್ಮೆ ಒಳಬಂದರೂ ಅವರನ್ನು ನುಸುಳುಕೋರರಂತೆ ಬಂಧಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳು, ಪೊಲೀಸರು ಇಂತಹ ವಲಸಿಗ ರೊಂದಿಗೆ ಅತ್ಯಂತ ಅಮಾನವೀಯವಾಗಿ ವರ್ತಿಸುತ್ತಿದ್ದಾರೆ. ನೆಲೆ. ಅನ್ನ, ನೀರು ಇಲ್ಲದೆ ಮೊದಲೇ ಬಳಲಿ ಬೆಂಡಾಗಿರುವ ಈ ವಲಸಿಗ ಕುಟುಂಬಗಳು ಈಗ ತಮ್ಮದೇ ನೆಲದಲ್ಲಿ ಪರಕೀಯರಾಗಿ ತಿರಸ್ಕರಿಸಲ್ಪಡುತ್ತಿವೆ. ಅತ್ತ ಬಂದ ಜಿಲ್ಲೆಗೂ ಹೋಗಲಾರದೆ. ಇತ್ತ ತಮ್ಮ ಊರಿಗೂ ಪ್ರವೇಶ ಸಿಗದೆ ಸಾವಿರಾರು ದುಡಿಯುವ ಜನಸಮುದಾಯ ಮಕ್ಕಳು,ಮರಿಗಳನ್ನು ಕಟ್ಟಿಕೊಂಡು ಅಲೆದಾಡುವತ್ತಾ ನಿಷ್ಕಾರುಣ್ಯವಾಗಿ ವರ್ತಿಸುತ್ತಿರುವ ಆಡಳಿತ ವ್ಯವಸ್ಥೆಯ ಕಾಲು ಕಟ್ಟಿಕೊಟ್ಟು ರೋಧಿಸುತ್ತಿವೆ. ಹಳ್ಳಿಗಳಲ್ಲೂ ಕೂಡ ಅಪರಿಚಿತರನ್ನು ಒಳ ಬಿಟ್ಟುಕೊಳ್ಳದೆ ಅಮಾನವೀಯವಾಗಿ ನಡೆದುಕೊಳ್ಳುತ್ತಿರುವುದು ವಲಸಿಗರ ಪಾಡು ಹೇಳತೀರದಾಗಿದೆ.

ಕೇವಲ ಪಾಸ್ ಮುಖ್ಯವಾಗಿಟ್ಟುಕೊಂಡು ವಲಸಿಗರನ್ನು ಅವರ ಊರುಗಳ ಒಳಬಿಟ್ಟುಕೊಳ್ಳದ ಕೆಲಸವನ್ನು ಜಿಲ್ಲಾಡಳಿತಗಳೇ ಮಾಡುತ್ತಿದ್ದು, ಬಹಳಷ್ಟು ಕಡೆ ಇಂತಹ ವಲಸಿಗರ ಮೇಲೆ ಪೊಲೀಸರು ಹಲ್ಲೆ ನಡೆಸಿ ಹೊರ ತಳ್ಳುವ ಘಟನೆಗಳು ನಡೆದಿವೆ. ಹೀಗೆ ವಲಸೆ ಬರುವವರನ್ನು ಆರೋಗ್ಯ ತಪಾಸಣೆ ಮಾಡಿ ಅಗತ್ಯ ಬಿದ್ದಲ್ಲಿ ಕ್ವಾರಂಟೈನ್ ಗೆ ಒಳಪಡಿಸುವ ಮೂಲಕ ಅಂತಹ ಈ ವಲಸಿಗ ಕುಟುಂಬಗಳಿಗೆ ಕನಿಷ್ಟ ಅನ್ನ, ಆಹಾರ, ನೆಲೆಯನ್ನು ಒದಗಿಸಬಹುದಾಗಿದ್ದರೂ ಆಡಳಿತ ವ್ಯವಸ್ಥೆಗಳು ಇದಾವುದನ್ನು ಮಾಡದೆ ವಲಸಿಗರನ್ನು ನಗರದ ಒಳಬಿಟ್ಟುಕೊಳ್ಳದೆ ಓಡಿಸುತ್ತಿವೆ. ಕೂಲಿ ಕುಟುಂಬಗಳ ಬದುಕು ಈಗ ‘ಅತ್ತ ದರಿ ಇತ್ತ ಪುಲಿ’ ಎಂಬಂತಾಗಿದೆ. ಕಾಯ್ದೆ-ಕಾನೂನುಗಳ ಉದ್ದೇಶ ಅಂತಿಮವಾಗಿ ಆ ನೆಲದ ಜನರ ಕಲ್ಯಾಣವೇ ಆಗಿರುತ್ತದೆ. ಆದರೆ ಜನರ ಹಿತ ಕಾಯದ ಕಾನೂನು ಕಟ್ಟಳೆಗಳು ಇರುವುದಾದರೂ ಏತಕ್ಕೆ ?, ಅನೇಕ ಸಂದರ್ಭಗಳಲ್ಲಿ ಕಾಯ್ದೆ-ಕಾನೂನುಗಳು ಜನರಿಗೆ ಮಾರಕವಾದಾಗಲೇ ದಂಗೆ, ಕ್ರಾಂತಿಗಳು ಭುಗಿಲೇಳುತ್ತವೆ. ಅಂತಹ ಕಾನೂನುಗಳನ್ನು ಮುರಿದು ಮುನ್ನುಗ್ಗುವ ಸಂದರ್ಭಗಳು ಸೃಷ್ಟಿಯಾಗುತ್ತವೆ. ಇದನ್ನು ಆಳುವವರು ಅರ್ಥಮಾಡಿಕೊಳ್ಳಬೇಕು.

ಮೊನ್ನೆ ಬೆಂಗಳೂರಿನಲ್ಲಿ ಬಿಹಾರಿ ಕಾರ್ಮಿಕರ ಸಿಟ್ಟು ಸ್ಪೋಟಗೊಂಡು ಪೊಲೀಸ್ ಅಧಿಕಾರಿಯೊಬ್ಬನ ತಲೆ ಒಡೆಯುವಂತಾಗಿದೆ. ದುಡಿಯುವ ವರ್ಗದ ಸಿಟ್ಟು ರಟ್ಟೆಗೆ ಬಂದಾಗ ಇಂತಹ ಘಟನೆಗಳು ನಡೆಯುತ್ತವೆ. ಇದು ಕಾನೂನು ಭಂಗವಲ್ಲ. ಆಡಳಿತ ವ್ಯವಸ್ಥೆಯ ವೈಫಲ್ಯಕ್ಕೆ ತೋರಿದ ಪ್ರತಿರೋಧವಾಗುತ್ತದೆ. ಗುಜರಾತ್ ನ ಸೂರತ್ ನಲ್ಲಿ ವಲಸೆ ಕಾರ್ಮಿಕರ ಗುಂಪಿನ ದಂಗೆ ಕೂಡ ಇದೆ ಆಗಿದೆ. ಇದನ್ನು ಆಳುವವರು ಅರ್ಥಮಾಡಿಕೊಳ್ಳಬೇಕು. ವಿದೇಶದಲ್ಲಿನ ಭಾರತೀಯರನ್ನು ಕರೆತರಲು ಹಾತೊರೆವ ಕೇಂದ್ರ ಸರ್ಕಾರ ಭಾರತದೊಳಗೆ ಇರುವ ವಲಸೆ ಕಾರ್ಮಿಕರನ್ನು ಅವರವರ ನೆಲೆಗೆ ತಲುಪಿಸಲು ಅಕ್ಷಮ್ಯ ನಿರ್ಲಕ್ಷ್ಯವನ್ನು ತೋರುತ್ತಿದೆ.

ಕೊರೊನಾ ಸೋಂಕು ವಿದೇಶದಿಂದಲೆ ಭಾರತಕ್ಕೆ ನುಸುಳಿದ್ದು, ಶ್ರೀಮಂತರು ತಂದ ಕಾಯಿಲೆಗೆ ಭಾರತದ ಬಡಜನಸಮುದಾಯ ಬರ್ಬರವಾಗಿ ನರಳುತ್ತಿದೆ. ಲಾಕ್ ಡೌನ್ ಘೋಷಣೆಯಾದ ಬೆನ್ನಲ್ಲೇ ರಸ್ತೆ ಹಿಡಿದು ಹೊರಟ ಈ ದೇಶದ ಆರ್ಥಿಕ ಅಭಿವೃದ್ದಿಗೆ ಬೆನ್ನೆಲುಬಾದ ದುಡಿಯುವ ವರ್ಗಗಳ ಧಾರುಣವಾದ ಮಹಾವಲಸೆ ಸರ್ಕಾರಕ್ಕಾಗಲಿ , ಮಾಧ್ಯಮಗಳಿಗಾಗಲಿ ಅದೊಂದು ಈ ದೇಶದ, ಈ ನಾಡಿನ ಜನಸಮುದಾಯದ ಗೋಳು ಎಂದು ಅನಿಸಲೇ ಇಲ್ಲ. ಇಂತಹ ಹೊತ್ತಿನಲ್ಲಿ ಈ ಬಡಸಮುದಾಯವನ್ನು , ದುಡಿಯವ ವರ್ಗದ ಹಿತ ಕಾಯಬೇಕಾದ ಸರ್ಕಾರ ಭಾರತದ ಬಡಜನರ ನಿರ್ನಾಮಕ್ಕೆ ವಿದೇಶದಿಂದ ಸೋಂಕು ಆಮದು ಮಾಡಿಕೊಳ್ಳಲು ಸಡಗರದಲ್ಲಿದೆ.

ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪನವರು ಬೆಂಗಳೂರು ವಿಮಾನನಿಲ್ದಾಣದಲ್ಲಿ ವಿದೇಶಿಗಳಿಂದ ಬರುವ ಭಾರತೀಯರನ್ನು ಸ್ವಾಗತಿಸಿ ಐಷಾರಾಮಿ ಹೊಟೇಲ್ , ಬಂಗ್ಲೆಗಳಿಗೆ ಬೀಳ್ಕೊಡುವ ಮುಂಚೆ ಪಾಸ್, ಪರ‍್ಮಿಷನ್, ಲೊಟ್ಟೆ-ಲೊಸಗು ಎಂಬ ನಿರ್ಬಂಧಗಳನ್ನು ತೆಗೆದು ತಮ್ಮದೇ ನೆಲದ ವಲಸೆ ಕಾರ್ಮಿಕ ಸಮುದಾಯವನ್ನು ಅವರವರ ಊರುಮನೆಗಳಿಗೆ ತಲುಪಿಸಿ ಅನ್ನ,ನೀರು ಕೊಡಬೇಕಾಗಿದೆ. ಇದು ಒಂದು ನಾಗರೀಕ ಸರ್ಕಾರವೆನಿಸಿಕೊಳ್ಳಲು ಘನತೆಯ ಮಾರ್ಗವಾಗಿರುತ್ತದೆ.

(ಲೇಖಕರು ಪತ್ರಕರ್ತರು ಮತ್ತು ಬರಹಗಾರರು. ಅಭಿಪ್ರಾಯಗಳು ವಯಕ್ತಿಕವಾದವು)


ಇದನ್ನೂ ಓದಿ: ಬಿಲ್ಡರ್‌ ಲಾಬಿಗೆ ಮಣಿದು ರೈಲುಸೇವೆ ರದ್ದುಗೊಳಿಸಿದ ರಾಜ್ಯಸರ್ಕಾರ: ಸಂಕಷ್ಟದಲ್ಲಿ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...