Homeಚಳವಳಿರೈಲ್ ರೋಕೋ: ಇಲಾಖೆ ಮೇಲೆ ಭಾರಿ ಪರಿಣಾಮ ಬೀರಿಲ್ಲ- ರೈಲ್ವೆ ಇಲಾಖೆ

ರೈಲ್ ರೋಕೋ: ಇಲಾಖೆ ಮೇಲೆ ಭಾರಿ ಪರಿಣಾಮ ಬೀರಿಲ್ಲ- ರೈಲ್ವೆ ಇಲಾಖೆ

ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳಗಳಲ್ಲಿ 20 ಹೆಚ್ಚುವರಿ ರೈಲ್ವೆ ಸಂರಕ್ಷಣಾ ವಿಶೇಷ ಪಡೆಗಳನ್ನು ರೈಲು ಇಲಾಖೆ ನಿಯೋಜಿಸಿತ್ತು

- Advertisement -
- Advertisement -

ವಿವಾದಿತ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ದೇಶದ ರೈತರು ಗುರುವಾರ (ಫೆ.18) ರಂದು ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ನಡೆಸಿದ “ರೈಲು ರೋಕೊ” ಇಲಾಖೆ ಮೇಲೆ ಭಾರಿ ಪರಿಣಾಮ ಬೀರಿಲ್ಲ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಕೆಲವು ವಲಯಗಳಲ್ಲಿ ಯಾವುದೇ ರೈಲು ನಿಲ್ಲಿಸಲಾಗಿಲ್ಲ, ಆದರೆ, ಉತ್ತರ ವಲಯದಲ್ಲಿ ಸುಮಾರು 25 ರೈಲುಗಳನ್ನು ನಿಯಂತ್ರಿಸಲಾಗಿದೆ ಎಂದು ವಲಯ ರೈಲ್ವೆ ವಕ್ತಾರರು ಮಾಹಿತಿ ನೀಡಿದ್ದಾರೆ.

“ಇಲ್ಲಿಯವರೆಗೆ ಸುಮಾರು 25 ರೈಲುಗಳನ್ನು ನಿಯಂತ್ರಿಸಲಾಗಿದೆ. ಆಂದೋಲನದಿಂದಾಗಿ ರೈಲು ಸೇವೆಗಳ ಮೇಲೆ ಕನಿಷ್ಠ ಪರಿಣಾಮ ಬೀರಿದೆ” ಎಂದು ಉತ್ತರ ರೈಲ್ವೆ ವಕ್ತಾರ ದೀಪಕ್ ಕುಮಾರ್ ಹೇಳಿದ್ದಾರೆ.

25 ರೈಲುಗಳಲ್ಲಿ ಕೆಲವನ್ನು ರದ್ದುಗೊಳಿಸಲಾಗಿದೆ. ಮತ್ತೆ ಕೆಲವನ್ನು ಬೇರೆ ಮಾರ್ಗಕ್ಕೆ ಮರು ಹೊಂದಿಸಿಲಾಗಿದೆ. ಆದರೂ ಕೂಡ ಇಂದಿನ ರೈಲ್ ರೋಕೋ ಚಳವಳಿ ರೈಲ್ವೆ ಇಲಾಖೆ ಮೇಲೆ ಭಾರಿ ಪರಿಣಾಮ ಬೀರಿಲ್ಲ ಎಂದು ಎನ್‌ಡಿಟಿವಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ‘ಕಳಂಕಿತ ಕೈಗಳನ್ನು ಹಿಡಿದು ಮೋದಿ ಭ್ರಷ್ಟಾಚಾರ ಬೆಂಬಲಿಸುತ್ತಿದ್ದಾರೆಯೆ?’: ಸ್ಟಾಲಿನ್ ಪ್ರಶ್ನೆ

ರೈತ ಹೋರಾಟದ ಮುಂದಾಳತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚ್ ಫೆಬ್ರವರಿ 10 ರಂದು ಪತ್ರಿಕಾ ಹೇಳಿಕೆಯಲ್ಲಿ ಫೆಬ್ರವರಿ 18 ರಂದು ದೇಶಾದ್ಯಂತ ರೈಲ್ ರೋಕೋ ಚಳವಳಿ ನಡೆಸಲು ಕರೆ ನೀಡಿತ್ತು. ಮಧ್ಯಾಹ್ನ 12 ರಿಂದ ಸಂಜೆ 4 ರವರೆಗೆ ರೈಲು ತಡೆ ನಡೆಸಲು ತಿಳಿಸಲಾಗಿತ್ತು.

ದೆಹಲಿಯ ಸಮೀಪವಿರುವ ನಿಲ್ದಾಣಗಳಲ್ಲಿಯೂ ಪ್ರತಿಭಟನಾಕಾರರು ರೈಲು ಹಳಿಗಳ ಮೇಲೆ ಪ್ರತಿಭಟನೆ ನಡೆಸಿದರು. ಗಾಜಿಪುರ ಗಡಿ ಬಳಿಯ ಮೋದಿ ನಗರ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲಾಗಿದೆ.

ಹರಿಯಾಣದ ಕುರುಕ್ಷೇತ್ರದಲ್ಲಿ “ರೈಲು ರೋಕೊ” ಚಳವಳಿ ನಡೆಯುತ್ತಿದ್ದರೂ ಚಲಿಸಲು ಮುಂದಾಗಿದ್ದ ಗೀತಾ ಜಯಂತಿ ಎಕ್ಸ್‌ಪ್ರೆಸ್ ರೈಲಿನ ಮೇಲೆ ಹತ್ತಿ ರೈತರು ಪ್ರತಿಭಟನೆ ನಡೆಸಿದರು. ಇನ್ನೂ ಚಾರ್ಖಿ ದಾದ್ರಿ ರೈಲ್ವೆ ನಿಲ್ದಾಣದಲ್ಲಿ ರೈಲು ಹಳಿಗಳನ್ನು ಬಂದ್ ಮಾಡಿ, ಪೊಲೀಸರು ಮತ್ತು ರೈಲ್ವೆ ಅಧಿಕಾರಿಗಳಿಗೆ ರೈತರು ಜಿಲೇಬಿ, ಚಹಾ ಮತ್ತು ತಿಂಡಿಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ಪಂಜಾಬ್‌ನಲ್ಲಿ ದೆಹಲಿ-ಲೂಧಿಯಾನ-ಅಮೃತಸರ ರೈಲ್ವೆ ಮಾರ್ಗದಲ್ಲಿ ಪ್ರತಿಭಟನಾಕಾರರು ಅನೇಕ ಸ್ಥಳಗಳಲ್ಲಿ ಹಳಿಗಳ ಮೇಲೆ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಜಲಂಧರ್‌ನ ಜಲಂಧರ್ ಕ್ಯಾಂಟ್-ಜಮ್ಮು ರೈಲು ಹಳಿಗಳನ್ನು ನಿರ್ಬಂಧಿಸಿದಲಾಗಿತ್ತು. ಮೊಹಾಲಿ ಜಿಲ್ಲೆಯಲ್ಲಿಯೂ ರೈಲ್ ರೋಕೋ ಪ್ರತಿಭಟನೆ ನಡೆಸಲಾಗಿತ್ತು.

ಹರಿಯಾಣ ಮತ್ತು ಪಂಜಾಬ್ ಎರಡು ರಾಜ್ಯಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿತ್ತು. ರೈಲ್ವೆ ಪೊಲೀಸ್ ಮತ್ತು ರಾಜ್ಯ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳಗಳಲ್ಲಿ 20 ಹೆಚ್ಚುವರಿ ರೈಲ್ವೆ ಸಂರಕ್ಷಣಾ ವಿಶೇಷ ಪಡೆ (ಆರ್‌ಪಿಎಸ್‌ಎಫ್) ಪಡೆಗಳನ್ನು ರೈಲು ಇಲಾಖೆ ನಿಯೋಜಿಸಿತ್ತು.

ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದ್ದ ರೈಲ್ ರೋಕೋಗೆ ರಾಜ್ಯದಲ್ಲಿಯೂ ಭಾರಿ ಬೆಂಬಲ ವ್ಯಕ್ತವಾಗಿದೆ. ಕೆಲವು ಜಿಲ್ಲೆಗಳಲ್ಲಿ ಬೆಳಗ್ಗೆ 10 ಗಂಟೆಗೆ ಪ್ರತಿಭಟನೆ ಆರಂಭವಾದರೆ, ಮತ್ತೆ ಕೆಲವು ಕಡೆ 12 ಗಂಟೆಗೆ ಚಳವಳಿ ಆರಂಭವಾಗಿತ್ತು.


ಇದನ್ನೂ ಓದಿ: ರೈತ ಹೋರಾಟ: ರೈಲ್ ರೋಕೋ ಚಳವಳಿಗೆ ರಾಜ್ಯದಲ್ಲಿ ಭಾರಿ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...