Homeಚಳವಳಿರೈತ ಹೋರಾಟ: ದೇಶಾದ್ಯಂತ ಯಶಸ್ಸು ಕಂಡ ರೈಲ್ ರೋಕೋ ಚಳವಳಿ

ರೈತ ಹೋರಾಟ: ದೇಶಾದ್ಯಂತ ಯಶಸ್ಸು ಕಂಡ ರೈಲ್ ರೋಕೋ ಚಳವಳಿ

ದೇಶಾದ್ಯಂತ ನಡೆದ ರೈಲ್ ರೋಕೋ ಚಳವಳಿಯ ಚಿತ್ರಗಳು ಇಲ್ಲಿವೆ.

- Advertisement -
- Advertisement -

ಕೃಷಿ ಕಾನೂನುಗಳ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದ್ದ ರಾಷ್ಟ್ರವ್ಯಾಪಿ ರೈಲ್ ರೋಕೋ ಪ್ರತಿಭಟನೆ ಯಶಸ್ಸು ಕಂಡಿದೆ. ದೇಶಾದ್ಯಂತ ಎಲ್ಲಾ ಕಡೆಗಳಲ್ಲೂ ಬೆಳಗ್ಗೆಯಿಂದಲೇ ರೈಲು ನಿಲ್ದಾಣಗಳ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ರೈತ ಹೋರಾಟದ ಮುಂದಾಳತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚ್ ಫೆಬ್ರವರಿ 10 ರಂದು ಪತ್ರಿಕಾ ಹೇಳಿಕೆಯಲ್ಲಿ ಫೆ.18ರ ಮಧ್ಯಾಹ್ನ 12  ಗಂಟೆಯಿಂದ ಸಂಜೆ 4 ರವರೆಗೆ ರೈಲ್ ರೋಕೋಗೆ ಕರೆ ನೀಡಿತ್ತು. ಆದರೆ ದೇಶದ ಹಲವು ಕಡೆಗಳಲ್ಲಿ ಬೆಳಗ್ಗೆ 10 ಗಂಟೆಗೆ ಚಳವಳಿ ಆರಂಭವಾಗಿತ್ತು.

ಕೇಂದ್ರದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸುವ ಪಂಜಾಬ್, ಹರಿಯಾಣ ಉತ್ತರ ಪ್ರದೇಶ, ಮಧ್ಯಪ್ರದೇಶ, ಒರಿಸ್ಸಾ, ಮಹಾರಾಷ್ಟ್ರ, ಮತ್ತು ಕರ್ನಾಟಕದ ಕೆಲವು ಭಾಗಗಳಲ್ಲಿ ರೈತರು ರೈಲು ಹಳಿಗಳ ಬಳಿ “ರೈಲು ರೋಕೋ” ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ಪಂಜಾಬ್ ಚುನಾವಣೆ: ನನ್ನ ಕುಟುಂಬದವರ ಮತವೇ ನನಗೆ ಬಿದ್ದಿಲ್ಲ ಎಂದ ಬಿಜೆಪಿ ಅಭ್ಯರ್ಥಿ!

ಕೇಂದ್ರ ಸರ್ಕಾರ ಮತ್ತು ಕೃಷಿ ಕಾನೂನುಗಳ ವಿರುದ್ಧ ಘೋಷಣೆ ಮತ್ತು ಧರಣಿ ಮಧ್ಯಾಹ್ನದಿಂದ ಪ್ರಾರಂಭವಾಗಿ ಸಂಜೆ 4 ರವರೆಗೆ ನಡೆಯಿತು. ಮುನ್ನೆಚ್ಚರಿಕೆ ಕ್ರಮಗಳ ಭಾಗವಾಗಿ ಹಲವಾರು ಪ್ರದೇಶಗಳಲ್ಲಿ ರೈಲು ಸೇವೆಗಳನ್ನು ನಿಲ್ಲಿಸಲಾಗಿತ್ತು.

ದೇಶಾದ್ಯಂತ ನಡೆದ ರೈಲ್ ರೋಕೋ ಚಳವಳಿಯ ಚಿತ್ರಗಳು ಇಲ್ಲಿವೆ.

ಇಂದೋರ್‌, ಮಧ್ಯಪ್ರದೇಶ
ಉತ್ತರ ಪ್ರದೇಶದ ಹಾಪುರ್‌
ಹರಿಯಾಣದ ಇಸ್ಮಾಯಿಲಾ ರೈಲು ನಿಲ್ದಾಣ
ಪಂಜಾಬ್‌ನ ಮಾನ್ಸಾ ರೈಲು ನಿಲ್ದಾಣ
ಒಡಿಸ್ಸಾದ ಬ್ರಹ್ಮಪುರ್‌
ರಾಜಸ್ಥಾನದ ಅಜರ್‍ಕಾ ರೈಲು ನಿಲ್ದಾಣ
ಹರಿಯಾಣದ ಯಮುನಾನಗರ್ ರೈಲು ನಿಲ್ದಾಣ
ಜಾರ್ಖಂಡ್ ರಾಜ್ಯದ ನಾಮ್‌ಕೋಮ್‌
ಒರಿಸ್ಸಾದ ಕಟಕ್‌ ರೈಲು ನಿಲ್ದಾಣ
ಪಂಜಾಬ್‌ನ ಬರ್ನಾಲಾ ಜಿಲ್ಲಾ ರೈಲು ನಿಲ್ದಾಣ
ಪಶ್ಚಿಮ ಬಂಗಾಳದ ಬೆಲ್ದಾ ರೈಲು ನಿಲ್ದಾಣ

ಆದರೆ, “ರೈಲು ರೋಕೊ” ಇಲಾಖೆ ಮೇಲೆ ಭಾರಿ ಪರಿಣಾಮ ಬೀರಿಲ್ಲ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಕೆಲವು ವಲಯಗಳಲ್ಲಿ ಯಾವುದೇ ರೈಲು ನಿಲ್ಲಿಸಲಾಗಿಲ್ಲ, ಆದರೆ, ಉತ್ತರ ವಲಯದಲ್ಲಿ ಸುಮಾರು 25 ರೈಲುಗಳನ್ನು ನಿಯಂತ್ರಿಸಲಾಗಿದೆ ಎಂದು ವಲಯ ರೈಲ್ವೆ ವಕ್ತಾರರು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...