Homeಮುಖಪುಟ'ವಂದೇ ಭಾರತ್' ಲಾಭದ ಪ್ರತ್ಯೇಕ ದಾಖಲೆಗಳನ್ನು ರೈಲ್ವೆ ಇಲಾಖೆ ನಿರ್ವಹಿಸುವುದಿಲ್ಲ: ಆರ್‌ಟಿಐ ಮಾಹಿತಿ

‘ವಂದೇ ಭಾರತ್’ ಲಾಭದ ಪ್ರತ್ಯೇಕ ದಾಖಲೆಗಳನ್ನು ರೈಲ್ವೆ ಇಲಾಖೆ ನಿರ್ವಹಿಸುವುದಿಲ್ಲ: ಆರ್‌ಟಿಐ ಮಾಹಿತಿ

- Advertisement -
- Advertisement -

ವಂದೇ ಭಾರತ್ ರೈಲುಗಳ ಯಾವುದೇ ಪ್ರತ್ಯೇಕ ಆದಾಯದ ದಾಖಲೆಗಳನ್ನು ರೈಲ್ವೇ ಸಚಿವಾಲಯವು ನಿರ್ವಹಿಸುವುದಿಲ್ಲ ಎಂದು ಆರ್‌ಟಿಐ ಕಾಯ್ದೆಯಡಿಯಲ್ಲಿ ಸಲ್ಲಿಸಲಾದ ಅರ್ಜಿಗೆ ಸಚಿವಾಲಯದ ಪ್ರತಿಕ್ರಿಯೆ ನೀಡಿದೆ.

ಮಧ್ಯಪ್ರದೇಶ ಮೂಲದ ಚಂದ್ರ ಶೇಖರ್ ಗೌರ್ ಅವರು ಕಳೆದ ಎರಡು ವರ್ಷಗಳಲ್ಲಿ ವಂದೇ ಭಾರತ್ ರೈಲುಗಳಿಂದ ರೈಲ್ವೆ ಸಚಿವಾಲಯವು ಎಷ್ಟು ಆದಾಯವನ್ನು ಗಳಿಸಿದೆ ಮತ್ತು ಅವುಗಳ ಕಾರ್ಯಾಚರಣೆಯಲ್ಲಿ ಯಾವುದೇ ಲಾಭ ಅಥವಾ ನಷ್ಟವನ್ನು ಮಾಡಿದೆಯೆ ಎಂಬ ಬಗ್ಗೆ ತಿಳಿಯಲು ಪ್ರಯತ್ನಿಸಿದ್ದರು.

ಫೆಬ್ರವರಿ 15, 2019 ರಂದು ನವದೆಹಲಿ ಮತ್ತು ವಾರಣಾಸಿ ನಡುವೆ ಫ್ಲ್ಯಾಗ್ ಆಫ್ ಆಗಿರುವ ವಂದೇ ಭಾರತ್ ದೇಶದ ಮೊದಲ ಸೆಮಿ-ಹೈ ಸ್ಪೀಡ್ ರೈಲುಗಳು ಮತ್ತು ಇಂದು 102 ವಂದೇ ಭಾರತ್ ರೈಲುಗಳು 24 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 284 ಜಿಲ್ಲೆಗಳನ್ನು ಒಳಗೊಂಡ 100 ಮಾರ್ಗಗಳಲ್ಲಿ ಚಲಿಸುತ್ತವೆ.

ವಂದೇ ಭಾರತ್ ರೈಲು ಮೊದಲ ಉಡಾವಣೆಯಾದಾಗಿನಿಂದ 2 ಕೋಟಿಗೂ ಹೆಚ್ಚು ಜನರು ಪ್ರಯಾಣಿಸಿದ್ದಾರೆ ಎಂದು ಸೋಮವಾರ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. 2023-24ರ ಹಣಕಾಸು ವರ್ಷದಲ್ಲಿ ವಂದೇ ಭಾರತ್ ರೈಲುಗಳು ಕ್ರಮಿಸಿದ ದೂರವು ಭೂಮಿಯ 310 ಸುತ್ತುಗಳನ್ನು ತೆಗೆದುಕೊಂಡಿದ್ದಕ್ಕೆ ಸಮಾನವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಲಾಖೆ ಉತ್ತರದ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿರುವ ಗೌರ್, ರೈಲ್ವೇಯು ವಂದೇ ಭಾರತ್ ರೈಲುಗಳು ಪ್ರಯಾಣಿಸಿದ ಜನರ ಸಂಖ್ಯೆ ಮತ್ತು ದೂರವನ್ನು ದಾಖಲಿಸುತ್ತದೆ, ಆದರೆ, ಆದಾಯದ ಉತ್ಪಾದನೆಗೆ ಸಂಬಂಧಿಸಿದಂತೆ ಇದು ಅತ್ಯಂತ ನಿರ್ಣಾಯಕ ಮಾಹಿತಿಯನ್ನು ನಿರ್ವಹಿಸುವುದಿಲ್ಲ ಎಂದು ಹೇಳಿದ್ದಾರೆ.

“ರೈಲ್ವೆ ಅಧಿಕಾರಿಗಳು ವಂದೇ ಭಾರತ್ ರೈಲುಗಳು ಒಂದು ವರ್ಷದಲ್ಲಿ ಪ್ರಯಾಣಿಸಿದ ದೂರವನ್ನು ಭೂಮಿಯ ಸುತ್ತಲಿನ ಒಟ್ಟು ಸುತ್ತುಗಳಿಗೆ ಸಮಾನತೆಗೆ ಲೆಕ್ಕ ಹಾಕಬಹುದು. ಆದರೆ, ಈ ರೈಲುಗಳಿಂದ ಒಟ್ಟು ಆದಾಯವನ್ನು ಹೊಂದಿಲ್ಲ” ಎಂದು ಗೌರ್ ಹೇಳಿದರು.

“ವಂದೇ ಭಾರತ್ ರೈಲುಗಳಿಂದ ಆದಾಯ ಉತ್ಪಾದನೆಯ ಸ್ಥಾನಮಾನದ ಪ್ರತ್ಯೇಕ ದಾಖಲೆಯನ್ನು ರೈಲ್ವೇಸ್ ನಿರ್ವಹಿಸುವುದು ಬಹಳ ಮುಖ್ಯ. ಏಕೆಂದರೆ, ಇವುಗಳು ಭಾರತದ ಮೊದಲ ಅರೆ-ಹೈ ಸ್ಪೀಡ್ ಹೊಸ ಪೀಳಿಗೆಯ ರೈಲುಗಳಾಗಿವೆ. ಅದರ ಲಾಭದಾಯಕತೆಯು ಅದರ ನಿಜವಾದ ಜನಪ್ರಿಯತೆಯನ್ನು ಸ್ಥಾಪಿಸುತ್ತದೆ” ಎಂದಿದ್ದಾರೆ.

ಇದನ್ನೂ ಓದಿ; ಟಿಎಂಸಿಯನ್ನು ಭಷ್ಟ ಎನ್ನುವ ಮೋದಿ ಕನ್ನಡಿ ನೋಡಿಕೊಳ್ಳಬೇಕು; ಅವರ ಪಕ್ಷ ಡಕಾಯಿತರಿಂದ ತುಂಬಿದೆ: ಮಮತಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...