Homeಮುಖಪುಟದೆಹಲಿ ಕಾಲ್ತುಳಿತಕ್ಕೆ ಸಂಬಂಧಿಸಿದ ವಿಡಿಯೋಗಳನ್ನು ತೆಗೆದುಹಾಕುವಂತೆ ಎಕ್ಸ್‌ಗೆ ಸೂಚಿಸಿದ ರೈಲ್ವೆ ಸಚಿವಾಲಯ!

ದೆಹಲಿ ಕಾಲ್ತುಳಿತಕ್ಕೆ ಸಂಬಂಧಿಸಿದ ವಿಡಿಯೋಗಳನ್ನು ತೆಗೆದುಹಾಕುವಂತೆ ಎಕ್ಸ್‌ಗೆ ಸೂಚಿಸಿದ ರೈಲ್ವೆ ಸಚಿವಾಲಯ!

- Advertisement -
- Advertisement -

ಫೆಬ್ರವರಿ 15ರಂದು ನವದೆಹಲಿ ರೈಲು ನಿಲ್ದಾಣದಲ್ಲಿ ನಡೆದ ಕಾಲ್ತುಳಿತದ ಸಾವು-ನೋವುಗಳ ವಿಡಿಯೊಗಳನ್ನು ಹೊಂದಿರುವ 285 ಸಾಮಾಜಿಕ ಮಾಧ್ಯಮ ಲಿಂಕ್‌ಗಳನ್ನು ತೆಗೆದು ಹಾಕುವಂತೆ ರೈಲ್ವೆ ಸಚಿವಾಲಯ ಎಕ್ಸ್‌ಗೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ.

ವರದಿಗಳ ಪ್ರಕಾರ, ಸಾವು-ನೋವುಗಳ ವಿಡಿಯೋಗಳನ್ನು ಹಂಚಿಕೊಳ್ಳುವುದು ನೈತಿಕ ಮಾನದಂಡಗಳಿಗೆ ಮಾತ್ರ ವಿರುದ್ಧವಾಗಿಲ್ಲ, ಅದು ಎಕ್ಸ್‌ನ ನೀತಿಗೆ ವಿರುದ್ಧವಾಗಿದೆ. ಏಕೆಂದರೆ ಇಂತಹ ವಿಡಿಯೊಗಳನ್ನು ಹಂಚಿಕೊಳ್ಳುವುದರಿಂದ ಅನಗತ್ಯವಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆ. ಇಂತಹ ವಿಷಯಗಳು ಭಾರತೀಯ ರೈಲ್ವೆಯ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಬಹುದು ಎಂದು ಫೆಬ್ರವರಿ 17 ರಂದು ಕಳುಹಿಸಿರುವ ನೋಟಿಸ್‌ನಲ್ಲಿ ರೈಲ್ವೆ ಸಚಿವಾಲಯ ಹೇಳಿದ್ದು, 36 ಗಂಟೆಗಳಲ್ಲಿ ವಿಡಿಯೋ ಲಿಂಕ್‌ಗಳನ್ನು ತೆಗೆದು ಹಾಕುವಂತೆ ಸೂಚಿಸಿದೆ.

ಮೃತ ವ್ಯಕ್ತಿಗಳನ್ನು ತೋರಿಸಿದ, ಕಾಲ್ತುಳಿತ ಸಂಭವಿಸಿದ ನಂತರದ ರೈಲ್ವೆ ನಿಲ್ದಾಣದ ದೃಶ್ಯ ಹೊಂದಿರುವ ಮಾಧ್ಯಮಗಳಲ್ಲಿ ಪ್ರಕಟಗೊಂಡಿರುವುದೂ ಸೇರಿದಂತೆ ಹಲವು ವಿಡಿಯೋಗಳನ್ನು ತೆಗೆದು ಹಾಕುವಂತೆ ರೈಲ್ವೆ ಸಚಿವಾಲಯ ನೋಟಿಸ್‌ನಲ್ಲಿ ಸೂಚಿಸಿದೆ ಎಂದು ವರದಿಯಾಗಿದೆ.

ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ನೋಟಿಸ್ ಕಳುಹಿಸಿ ಪೋಸ್ಟ್‌ಗಳನ್ನು ತೆಗೆದು ಹಾಕುವಂತೆ ಸೂಚಿಸಿರುವುದು ಇದು ಎರಡನೇ ಬಾರಿಯಾಗಿದೆ. ಕಳೆದ ಜನವರಿಯಲ್ಲಿ ಯೂಟ್ಯೂಬ್ ಮತ್ತು ಇನ್‌ಸ್ಟಾಗ್ರಾಮ್‌ಗೆ ನೋಟಿಸ್ ನೀಡಿದ್ದ ಸರ್ಕಾರ, ಅನಗತ್ಯವಾಗಿ ಕಾನೂನು ಮತ್ತು ಸುವ್ಯವಸ್ಥೆ ಹದೆಗಡೆಸುವ, ದಾರಿತಪ್ಪಿಸುವ ಮತ್ತು ಸೂಕ್ಷ್ಮ/ಪ್ರಚೋದನಕಾರಿ ಮಾಹಿತಿಯನ್ನು ಒಳಗೊಂಡಿರುವ ಪೋಸ್ಟ್‌ಗಳನ್ನು ತೆಗೆದು ಹಾಕುವಂತೆ ಸೂಚಿಸಿತ್ತು.

ನೋಟಿಸ್‌ನಲ್ಲಿ ಒಂದು ಯೂಟ್ಯೂಬ್ ವಿಡಿಯೊ, ಒಂದು ಇನ್‌ಸ್ಟಾಗ್ರಾಮ್ ಪೋಸ್ಟ್ ಮತ್ತು ಎರಡು ಇನ್‌ಸ್ಟಾಗ್ರಾಮ್ ರೀಲ್‌ಗಳನ್ನು ಪಟ್ಟಿ ಮಾಡಲಾಗಿತ್ತು. ಈ ನೋಟಿಸ್ ನಿರ್ದಿಷ್ಟ ಘಟನೆಗೆ ಸಂಬಂಧಿಸಿದೆಯೇ ಎಂಬುದು ಸ್ಪಷ್ಟವಾಗಿಲ್ಲ ಎಂದು ವರದಿಗಳು ಹೇಳಿವೆ.

ಡಿಸೆಂಬರ್‌ನಲ್ಲಿ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ನೇರ ತೆಗೆದು ಹಾಕುವ ಅಧಿಕಾರವನ್ನು ಪಡೆದ ನಂತರ ಮೊದಲ ಬಾರಿಗೆ ಪ್ರಮುಖ ವಿಷಯವೊಂದಕ್ಕೆ ಸಂಬಂಧಿಸಿದಂತೆ ನೋಟಿಸ್ ನಿಡಲಾಗಿದೆ.

ದ್ವೇಷ ಭಾಷಣದ ವೀಡಿಯೊ ಹಂಚಿಕೆ: ಬಿಜೆಪಿಯ ಶಾಸಕ ರಾಜಾ ಸಿಂಗ್‌ ನ ಫೇಸ್‌ಬುಕ್, ಇನ್‌ಸ್ಟಾಗ್ರಾಂ ಖಾತೆ ತಗೆದುಹಾಕಿದ ಮೆಟಾ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...