Homeಮುಖಪುಟದೆಹಲಿ ಕಾಲ್ತುಳಿತಕ್ಕೆ ಸಂಬಂಧಿಸಿದ ವಿಡಿಯೋಗಳನ್ನು ತೆಗೆದುಹಾಕುವಂತೆ ಎಕ್ಸ್‌ಗೆ ಸೂಚಿಸಿದ ರೈಲ್ವೆ ಸಚಿವಾಲಯ!

ದೆಹಲಿ ಕಾಲ್ತುಳಿತಕ್ಕೆ ಸಂಬಂಧಿಸಿದ ವಿಡಿಯೋಗಳನ್ನು ತೆಗೆದುಹಾಕುವಂತೆ ಎಕ್ಸ್‌ಗೆ ಸೂಚಿಸಿದ ರೈಲ್ವೆ ಸಚಿವಾಲಯ!

- Advertisement -
- Advertisement -

ಫೆಬ್ರವರಿ 15ರಂದು ನವದೆಹಲಿ ರೈಲು ನಿಲ್ದಾಣದಲ್ಲಿ ನಡೆದ ಕಾಲ್ತುಳಿತದ ಸಾವು-ನೋವುಗಳ ವಿಡಿಯೊಗಳನ್ನು ಹೊಂದಿರುವ 285 ಸಾಮಾಜಿಕ ಮಾಧ್ಯಮ ಲಿಂಕ್‌ಗಳನ್ನು ತೆಗೆದು ಹಾಕುವಂತೆ ರೈಲ್ವೆ ಸಚಿವಾಲಯ ಎಕ್ಸ್‌ಗೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ.

ವರದಿಗಳ ಪ್ರಕಾರ, ಸಾವು-ನೋವುಗಳ ವಿಡಿಯೋಗಳನ್ನು ಹಂಚಿಕೊಳ್ಳುವುದು ನೈತಿಕ ಮಾನದಂಡಗಳಿಗೆ ಮಾತ್ರ ವಿರುದ್ಧವಾಗಿಲ್ಲ, ಅದು ಎಕ್ಸ್‌ನ ನೀತಿಗೆ ವಿರುದ್ಧವಾಗಿದೆ. ಏಕೆಂದರೆ ಇಂತಹ ವಿಡಿಯೊಗಳನ್ನು ಹಂಚಿಕೊಳ್ಳುವುದರಿಂದ ಅನಗತ್ಯವಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆ. ಇಂತಹ ವಿಷಯಗಳು ಭಾರತೀಯ ರೈಲ್ವೆಯ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಬಹುದು ಎಂದು ಫೆಬ್ರವರಿ 17 ರಂದು ಕಳುಹಿಸಿರುವ ನೋಟಿಸ್‌ನಲ್ಲಿ ರೈಲ್ವೆ ಸಚಿವಾಲಯ ಹೇಳಿದ್ದು, 36 ಗಂಟೆಗಳಲ್ಲಿ ವಿಡಿಯೋ ಲಿಂಕ್‌ಗಳನ್ನು ತೆಗೆದು ಹಾಕುವಂತೆ ಸೂಚಿಸಿದೆ.

ಮೃತ ವ್ಯಕ್ತಿಗಳನ್ನು ತೋರಿಸಿದ, ಕಾಲ್ತುಳಿತ ಸಂಭವಿಸಿದ ನಂತರದ ರೈಲ್ವೆ ನಿಲ್ದಾಣದ ದೃಶ್ಯ ಹೊಂದಿರುವ ಮಾಧ್ಯಮಗಳಲ್ಲಿ ಪ್ರಕಟಗೊಂಡಿರುವುದೂ ಸೇರಿದಂತೆ ಹಲವು ವಿಡಿಯೋಗಳನ್ನು ತೆಗೆದು ಹಾಕುವಂತೆ ರೈಲ್ವೆ ಸಚಿವಾಲಯ ನೋಟಿಸ್‌ನಲ್ಲಿ ಸೂಚಿಸಿದೆ ಎಂದು ವರದಿಯಾಗಿದೆ.

ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ನೋಟಿಸ್ ಕಳುಹಿಸಿ ಪೋಸ್ಟ್‌ಗಳನ್ನು ತೆಗೆದು ಹಾಕುವಂತೆ ಸೂಚಿಸಿರುವುದು ಇದು ಎರಡನೇ ಬಾರಿಯಾಗಿದೆ. ಕಳೆದ ಜನವರಿಯಲ್ಲಿ ಯೂಟ್ಯೂಬ್ ಮತ್ತು ಇನ್‌ಸ್ಟಾಗ್ರಾಮ್‌ಗೆ ನೋಟಿಸ್ ನೀಡಿದ್ದ ಸರ್ಕಾರ, ಅನಗತ್ಯವಾಗಿ ಕಾನೂನು ಮತ್ತು ಸುವ್ಯವಸ್ಥೆ ಹದೆಗಡೆಸುವ, ದಾರಿತಪ್ಪಿಸುವ ಮತ್ತು ಸೂಕ್ಷ್ಮ/ಪ್ರಚೋದನಕಾರಿ ಮಾಹಿತಿಯನ್ನು ಒಳಗೊಂಡಿರುವ ಪೋಸ್ಟ್‌ಗಳನ್ನು ತೆಗೆದು ಹಾಕುವಂತೆ ಸೂಚಿಸಿತ್ತು.

ನೋಟಿಸ್‌ನಲ್ಲಿ ಒಂದು ಯೂಟ್ಯೂಬ್ ವಿಡಿಯೊ, ಒಂದು ಇನ್‌ಸ್ಟಾಗ್ರಾಮ್ ಪೋಸ್ಟ್ ಮತ್ತು ಎರಡು ಇನ್‌ಸ್ಟಾಗ್ರಾಮ್ ರೀಲ್‌ಗಳನ್ನು ಪಟ್ಟಿ ಮಾಡಲಾಗಿತ್ತು. ಈ ನೋಟಿಸ್ ನಿರ್ದಿಷ್ಟ ಘಟನೆಗೆ ಸಂಬಂಧಿಸಿದೆಯೇ ಎಂಬುದು ಸ್ಪಷ್ಟವಾಗಿಲ್ಲ ಎಂದು ವರದಿಗಳು ಹೇಳಿವೆ.

ಡಿಸೆಂಬರ್‌ನಲ್ಲಿ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ನೇರ ತೆಗೆದು ಹಾಕುವ ಅಧಿಕಾರವನ್ನು ಪಡೆದ ನಂತರ ಮೊದಲ ಬಾರಿಗೆ ಪ್ರಮುಖ ವಿಷಯವೊಂದಕ್ಕೆ ಸಂಬಂಧಿಸಿದಂತೆ ನೋಟಿಸ್ ನಿಡಲಾಗಿದೆ.

ದ್ವೇಷ ಭಾಷಣದ ವೀಡಿಯೊ ಹಂಚಿಕೆ: ಬಿಜೆಪಿಯ ಶಾಸಕ ರಾಜಾ ಸಿಂಗ್‌ ನ ಫೇಸ್‌ಬುಕ್, ಇನ್‌ಸ್ಟಾಗ್ರಾಂ ಖಾತೆ ತಗೆದುಹಾಕಿದ ಮೆಟಾ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...