Homeಮುಖಪುಟ'ರೈಲ್ವೇ ಖಾಸಗೀಕರಣದ ಪ್ರಶ್ನೆಯೆ ಇಲ್ಲ!' - ಸಚಿವ ಅಶ್ವಿನಿ ವೈಷ್ಣವ್

‘ರೈಲ್ವೇ ಖಾಸಗೀಕರಣದ ಪ್ರಶ್ನೆಯೆ ಇಲ್ಲ!’ – ಸಚಿವ ಅಶ್ವಿನಿ ವೈಷ್ಣವ್

- Advertisement -
- Advertisement -

ರೈಲ್ವೇಯನ್ನು ಖಾಸಗೀಕರಣಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಶುಕ್ರವಾರ ಹೇಳಿದ್ದು, ರೈಲು ಸಾರಿಗೆಯು ಎಲ್ಲರಿಗೂ ಕೈಗೆಟಕುವ ದರದಲ್ಲಿ ಸೇವೆಯನ್ನು ಒದಗಿಸುತ್ತದೆ ಎಂದು ಪ್ರತಿಪಾದಿಸಿದ್ದಾರೆ. “400 ರೂ.ಗಿಂತ ಕಡಿಮೆ ವೆಚ್ಚದಲ್ಲಿ 1,000 ಕಿಲೋಮೀಟರ್‌ಗಳವರೆಗೆ ಜನರು ಆರಾಮವಾಗಿ ಪ್ರಯಾಣಿಸಬಹುದೆಂದು ಖಚಿತಪಡಿಸಿಕೊಳ್ಳಲು ರೈಲ್ವೆ ಕಾರ್ಯನಿರ್ವಹಿಸುತ್ತಿದೆ. ಜನರ ಅನುಕೂಲಕ್ಕಾಗಿ 12,500 ಸಾಮಾನ್ಯ ದರ್ಜೆಯ ಕೋಚ್‌ಗಳನ್ನು ರೈಲ್ವೆ ತಯಾರಿಸಲಾಗುತ್ತಿದೆ” ಎಂದು ಅಶ್ವಿನಿ ಹೇಳಿದ್ದಾರೆ.ರೈಲ್ವೇ ಖಾಸಗೀಕರಣದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಮುಂದಿನ ಐದು ವರ್ಷಗಳಲ್ಲಿ ರೈಲ್ವೇ ಸಂಪೂರ್ಣ ಬದಲಾವಣೆಗೆ ಒಳಗಾಗಲಿದೆ ಮತ್ತು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾದ ‘ಕವಚ’ ಎಂಬ ಘರ್ಷಣೆ-ನಿರೋಧಕ ಸಾಧನವನ್ನು ಹೊಂದಿದ ವಂದೇ ಭಾರತ್ ಮತ್ತು ನಮೋ ಭಾರತ್‌ನಂತಹ ರೈಲುಗಳು ಈ ಬದಲಾವಣೆಗೆ ಕಾರಣವಾಗುತ್ತವೆ. ಇದು ಈಗ ಪ್ರಾರಂಭವಾಗಿದೆ” ಎಂದು ಅವರು ಮಹಾರಾಷ್ಟ್ರದ ನಾಸಿಕ್‌ನಲ್ಲಿ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ ರೈಸಿಂಗ್ ಡೇ ಕಾರ್ಯಕ್ರಮವನ್ನು ಉದ್ದೇಶಿಸಿ ಹೇಳಿದರು.

”ರೈಲ್ವೆಯ ಖಾಸಗೀಕರಣದ ಪ್ರಶ್ನೆಯೇ ಇಲ್ಲ. ಇಂತಹ ವದಂತಿಗಳನ್ನು ಹಬ್ಬಿಸುವವರು ರೈಲ್ವೇ ಮತ್ತು ರಕ್ಷಣೆ ಭಾರತದ ಎರಡು ಬೆನ್ನೆಲುಬುಗಳು ಎಂಬುದನ್ನು ನೆನಪಿಟ್ಟುಕೊಳ್ಳಬೇಕೆಂದು ನಾನು ಒತ್ತಾಯಿಸುತ್ತೇನೆ. ಮತ್ತು ಈ ರೀತಿಯ ಎಲ್ಲಾ ರಾಜಕೀಯದಿಂದ ದೂರವಿರಬೇಕು”  ಎಂದು ವೈಷ್ಣವ್ ಹೇಳಿದ್ದಾರೆ.

ಭಾರತೀಯ ರೈಲ್ವೆಯಾದ್ಯಂತ ಪರಿವರ್ತನೆಯ ಯುಗ ಪ್ರಾರಂಭವಾಗಿದೆ ಎಂದು ಅವರು ಹೇಳಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ರೈಲ್ವೇ ರಾಜಕೀಯದ ಯುಗವನ್ನು ಕೊನೆಗೊಳಿಸಿದ್ದಾರೆ ಎಂದು ಪ್ರತಿಪಾದಿಸಿದ್ದಾರೆ. “ನಾವು ಕಾರ್ಯಕ್ಷಮತೆ, ಸುರಕ್ಷತೆ, ತಂತ್ರಜ್ಞಾನ ಮತ್ತು ಎಲ್ಲರಿಗೂ ಕೈಗೆಟುಕುವ ಸೇವೆಯನ್ನು ಒದಗಿಸುವತ್ತ ಗಮನ ಹರಿಸಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರವನ್ನು ಟೀಕಿಸುವ ಪತ್ರಕರ್ತರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತಿಲ್ಲ: ಸುಪ್ರೀಂ ಕೋರ್ಟ್

ಇವೆಲ್ಲವನ್ನೂ ಪೂರೈಸಲು ಮೋದಿ ಸರ್ಕಾರ ರೈಲ್ವೇ ಬಜೆಟ್‌ಗೆ ದೊಡ್ಡ ಒತ್ತು ನೀಡಿದ್ದು, ಪ್ರಸ್ತುತ ರೈಲ್ವೆ ಬಜೆಟ್ 2.5 ಲಕ್ಷ ಕೋಟಿ ರೂ. ಆಗಿದೆ. ಕಳೆದ 10 ವರ್ಷಗಳಲ್ಲಿ 31,000 ಕಿಲೋಮೀಟರ್‌ಗಳಷ್ಟು ಹೊಸ ಟ್ರ್ಯಾಕ್‌ಗಳನ್ನು ಹಾಕಿದ ದಾಖಲೆಯನ್ನು ನಾವು ನಿರ್ಮಿಸಿದ್ದೇವೆ, ಇದು ಫ್ರಾನ್ಸ್‌ನ ನೆಟ್‌ವರ್ಕ್‌ಗಿಂತ ಹೆಚ್ಚಾಗಿದೆ ಎಂದು ವೈಷ್ಣವ್ ಹೇಳಿದ್ದಾರೆ.

ಕಳೆದ 10 ವರ್ಷಗಳ ಎನ್‌ಡಿಎ ಸರ್ಕಾರದ ಅವಧಿಯಲ್ಲಿ 40,000 ಕಿಮೀ ರೈಲು ಮಾರ್ಗವನ್ನು ವಿದ್ಯುದ್ದೀಕರಿಸಲಾಗಿದೆ. ಇದು ಕಳೆದ 60 ವರ್ಷಗಳಲ್ಲಿ ಮಾಡಿದ್ದಕ್ಕಿಂತ ದುಪ್ಪಟ್ಟು ಎಂದು ಅವರು ಹೇಳಿದ್ದಾರೆ. ಮುಂದಿನ ಆರು ವರ್ಷಗಳಲ್ಲಿ 3,000 ರೈಲು ಸೇವೆಗಳನ್ನು ಪ್ರಾರಂಭಿಸಲು ನಾವು ಯೋಜಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

ರೈಲ್ವೇ ಸಂರಕ್ಷಣಾ ಪಡೆ (ಆರ್‌ಪಿಎಫ್) ಕುರಿತು ಮಾತನಾಡಿದ ಅವರು, ಫೋರ್ಸ್‌ನ ವಲಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು 35 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ, ಆದರೆ ಸೇವಾ ನಿಯಮಗಳು ಮತ್ತು ಬಡ್ತಿಗಳಿಗೆ ಸಂಬಂಧಿಸಿದ ಬೇಡಿಕೆಗಳು ಪರಿಗಣನೆಯಲ್ಲಿವೆ. ತಮಿಳುನಾಡಿನ ಆರ್‌ಪಿಎಫ್ ಶ್ವಾನದಳದ ವಲಯ ತರಬೇತಿ ಕೇಂದ್ರಕ್ಕೆ ಹೆಚ್ಚುವರಿಯಾಗಿ 5.5 ಕೋಟಿ ಅನುದಾನ ಮಂಜೂರಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ವಿಡಿಯೊ ನೋಡಿ: ‘ಅಂಬೇಡ್ಕರ್ ರಚಿಸಲಿದ್ದ ಸಂವಿಧಾನವನ್ನು ಗುರಿಯಾಗಿಸಿಕೊಂಡಿದ್ದವರ ಮೊದಲ ಗುಂಡು ಬಿದ್ದಿದ್ದು ಗಾಂಧಿ ಎದೆಗೆ’: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಟಿಎಂಸಿ ಬೆಂಬಲ

ಮಾರ್ಚ್ 9 ರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾದಾಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಮಂಡಿಸಲಾಗುವ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲ ನೀಡಲಿದೆ ಎಂದು ಪಕ್ಷದ ನಾಯಕರು...

ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

ನೂತನ ರಾಜ್ಯಪಾಲ ಆರ್.ಎನ್ ರವಿ ಅವರನ್ನು 'ಬಿಜೆಪಿ ಕೇಡರ್' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಲೇವಡಿ ಮಾಡಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸಚಿವಾಲಯ 'ನಬನ್ನಾ' ಮತ್ತು ರಾಜ್ಯಪಾಲರ ನಿವಾಸ...

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...

ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...

ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ. ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ...

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...