Homeಮುಖಪುಟ'ರೈಲ್ವೇ ಖಾಸಗೀಕರಣದ ಪ್ರಶ್ನೆಯೆ ಇಲ್ಲ!' - ಸಚಿವ ಅಶ್ವಿನಿ ವೈಷ್ಣವ್

‘ರೈಲ್ವೇ ಖಾಸಗೀಕರಣದ ಪ್ರಶ್ನೆಯೆ ಇಲ್ಲ!’ – ಸಚಿವ ಅಶ್ವಿನಿ ವೈಷ್ಣವ್

- Advertisement -
- Advertisement -

ರೈಲ್ವೇಯನ್ನು ಖಾಸಗೀಕರಣಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಶುಕ್ರವಾರ ಹೇಳಿದ್ದು, ರೈಲು ಸಾರಿಗೆಯು ಎಲ್ಲರಿಗೂ ಕೈಗೆಟಕುವ ದರದಲ್ಲಿ ಸೇವೆಯನ್ನು ಒದಗಿಸುತ್ತದೆ ಎಂದು ಪ್ರತಿಪಾದಿಸಿದ್ದಾರೆ. “400 ರೂ.ಗಿಂತ ಕಡಿಮೆ ವೆಚ್ಚದಲ್ಲಿ 1,000 ಕಿಲೋಮೀಟರ್‌ಗಳವರೆಗೆ ಜನರು ಆರಾಮವಾಗಿ ಪ್ರಯಾಣಿಸಬಹುದೆಂದು ಖಚಿತಪಡಿಸಿಕೊಳ್ಳಲು ರೈಲ್ವೆ ಕಾರ್ಯನಿರ್ವಹಿಸುತ್ತಿದೆ. ಜನರ ಅನುಕೂಲಕ್ಕಾಗಿ 12,500 ಸಾಮಾನ್ಯ ದರ್ಜೆಯ ಕೋಚ್‌ಗಳನ್ನು ರೈಲ್ವೆ ತಯಾರಿಸಲಾಗುತ್ತಿದೆ” ಎಂದು ಅಶ್ವಿನಿ ಹೇಳಿದ್ದಾರೆ.ರೈಲ್ವೇ ಖಾಸಗೀಕರಣದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಮುಂದಿನ ಐದು ವರ್ಷಗಳಲ್ಲಿ ರೈಲ್ವೇ ಸಂಪೂರ್ಣ ಬದಲಾವಣೆಗೆ ಒಳಗಾಗಲಿದೆ ಮತ್ತು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾದ ‘ಕವಚ’ ಎಂಬ ಘರ್ಷಣೆ-ನಿರೋಧಕ ಸಾಧನವನ್ನು ಹೊಂದಿದ ವಂದೇ ಭಾರತ್ ಮತ್ತು ನಮೋ ಭಾರತ್‌ನಂತಹ ರೈಲುಗಳು ಈ ಬದಲಾವಣೆಗೆ ಕಾರಣವಾಗುತ್ತವೆ. ಇದು ಈಗ ಪ್ರಾರಂಭವಾಗಿದೆ” ಎಂದು ಅವರು ಮಹಾರಾಷ್ಟ್ರದ ನಾಸಿಕ್‌ನಲ್ಲಿ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ ರೈಸಿಂಗ್ ಡೇ ಕಾರ್ಯಕ್ರಮವನ್ನು ಉದ್ದೇಶಿಸಿ ಹೇಳಿದರು.

”ರೈಲ್ವೆಯ ಖಾಸಗೀಕರಣದ ಪ್ರಶ್ನೆಯೇ ಇಲ್ಲ. ಇಂತಹ ವದಂತಿಗಳನ್ನು ಹಬ್ಬಿಸುವವರು ರೈಲ್ವೇ ಮತ್ತು ರಕ್ಷಣೆ ಭಾರತದ ಎರಡು ಬೆನ್ನೆಲುಬುಗಳು ಎಂಬುದನ್ನು ನೆನಪಿಟ್ಟುಕೊಳ್ಳಬೇಕೆಂದು ನಾನು ಒತ್ತಾಯಿಸುತ್ತೇನೆ. ಮತ್ತು ಈ ರೀತಿಯ ಎಲ್ಲಾ ರಾಜಕೀಯದಿಂದ ದೂರವಿರಬೇಕು”  ಎಂದು ವೈಷ್ಣವ್ ಹೇಳಿದ್ದಾರೆ.

ಭಾರತೀಯ ರೈಲ್ವೆಯಾದ್ಯಂತ ಪರಿವರ್ತನೆಯ ಯುಗ ಪ್ರಾರಂಭವಾಗಿದೆ ಎಂದು ಅವರು ಹೇಳಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ರೈಲ್ವೇ ರಾಜಕೀಯದ ಯುಗವನ್ನು ಕೊನೆಗೊಳಿಸಿದ್ದಾರೆ ಎಂದು ಪ್ರತಿಪಾದಿಸಿದ್ದಾರೆ. “ನಾವು ಕಾರ್ಯಕ್ಷಮತೆ, ಸುರಕ್ಷತೆ, ತಂತ್ರಜ್ಞಾನ ಮತ್ತು ಎಲ್ಲರಿಗೂ ಕೈಗೆಟುಕುವ ಸೇವೆಯನ್ನು ಒದಗಿಸುವತ್ತ ಗಮನ ಹರಿಸಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರವನ್ನು ಟೀಕಿಸುವ ಪತ್ರಕರ್ತರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತಿಲ್ಲ: ಸುಪ್ರೀಂ ಕೋರ್ಟ್

ಇವೆಲ್ಲವನ್ನೂ ಪೂರೈಸಲು ಮೋದಿ ಸರ್ಕಾರ ರೈಲ್ವೇ ಬಜೆಟ್‌ಗೆ ದೊಡ್ಡ ಒತ್ತು ನೀಡಿದ್ದು, ಪ್ರಸ್ತುತ ರೈಲ್ವೆ ಬಜೆಟ್ 2.5 ಲಕ್ಷ ಕೋಟಿ ರೂ. ಆಗಿದೆ. ಕಳೆದ 10 ವರ್ಷಗಳಲ್ಲಿ 31,000 ಕಿಲೋಮೀಟರ್‌ಗಳಷ್ಟು ಹೊಸ ಟ್ರ್ಯಾಕ್‌ಗಳನ್ನು ಹಾಕಿದ ದಾಖಲೆಯನ್ನು ನಾವು ನಿರ್ಮಿಸಿದ್ದೇವೆ, ಇದು ಫ್ರಾನ್ಸ್‌ನ ನೆಟ್‌ವರ್ಕ್‌ಗಿಂತ ಹೆಚ್ಚಾಗಿದೆ ಎಂದು ವೈಷ್ಣವ್ ಹೇಳಿದ್ದಾರೆ.

ಕಳೆದ 10 ವರ್ಷಗಳ ಎನ್‌ಡಿಎ ಸರ್ಕಾರದ ಅವಧಿಯಲ್ಲಿ 40,000 ಕಿಮೀ ರೈಲು ಮಾರ್ಗವನ್ನು ವಿದ್ಯುದ್ದೀಕರಿಸಲಾಗಿದೆ. ಇದು ಕಳೆದ 60 ವರ್ಷಗಳಲ್ಲಿ ಮಾಡಿದ್ದಕ್ಕಿಂತ ದುಪ್ಪಟ್ಟು ಎಂದು ಅವರು ಹೇಳಿದ್ದಾರೆ. ಮುಂದಿನ ಆರು ವರ್ಷಗಳಲ್ಲಿ 3,000 ರೈಲು ಸೇವೆಗಳನ್ನು ಪ್ರಾರಂಭಿಸಲು ನಾವು ಯೋಜಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

ರೈಲ್ವೇ ಸಂರಕ್ಷಣಾ ಪಡೆ (ಆರ್‌ಪಿಎಫ್) ಕುರಿತು ಮಾತನಾಡಿದ ಅವರು, ಫೋರ್ಸ್‌ನ ವಲಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು 35 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ, ಆದರೆ ಸೇವಾ ನಿಯಮಗಳು ಮತ್ತು ಬಡ್ತಿಗಳಿಗೆ ಸಂಬಂಧಿಸಿದ ಬೇಡಿಕೆಗಳು ಪರಿಗಣನೆಯಲ್ಲಿವೆ. ತಮಿಳುನಾಡಿನ ಆರ್‌ಪಿಎಫ್ ಶ್ವಾನದಳದ ವಲಯ ತರಬೇತಿ ಕೇಂದ್ರಕ್ಕೆ ಹೆಚ್ಚುವರಿಯಾಗಿ 5.5 ಕೋಟಿ ಅನುದಾನ ಮಂಜೂರಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ವಿಡಿಯೊ ನೋಡಿ: ‘ಅಂಬೇಡ್ಕರ್ ರಚಿಸಲಿದ್ದ ಸಂವಿಧಾನವನ್ನು ಗುರಿಯಾಗಿಸಿಕೊಂಡಿದ್ದವರ ಮೊದಲ ಗುಂಡು ಬಿದ್ದಿದ್ದು ಗಾಂಧಿ ಎದೆಗೆ’: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...