Homeಮುಖಪುಟವಂದೇ ಭಾರತ್‌ ರೈಲಿನಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ಮಕ್ಕಳು, ವಿಡಿಯೋ ಹಂಚಿಕೊಂಡ ರೈಲ್ವೆ : ತೀವ್ರ...

ವಂದೇ ಭಾರತ್‌ ರೈಲಿನಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ಮಕ್ಕಳು, ವಿಡಿಯೋ ಹಂಚಿಕೊಂಡ ರೈಲ್ವೆ : ತೀವ್ರ ವಿರೋಧ

- Advertisement -
- Advertisement -

ಶನಿವಾರ (ನ.8) ಎರ್ನಾಕುಲಂ-ಬೆಂಗಳೂರು ನಡುವಿನ ನೂತನ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು ಆರ್‌ಎಸ್‌ಎಸ್‌ ಗೀತೆ ಹಾಡಿರುವ ವಿಡಿಯೋವನ್ನು ದಕ್ಷಿಣ ರೈಲ್ವೆ ಹಂಚಿಕೊಂಡಿದ್ದು, ಕೇರಳದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

“ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕೋಮು ಸಿದ್ಧಾಂತ ತುರುಕಿಸಲು ರೈಲ್ವೆಯನ್ನು ಬಳಸಲಾಗುತ್ತಿದೆ” ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

“ಸರ್ಕಾರಿ ಕಾರ್ಯಕ್ರಮ ಕೂಡ ‘ಕೇಸರೀಕರಣ’ದಿಂದ ಹೊರತಾಗಿಲ್ಲ, ಇದು ಒಪ್ಪುವಂತದಲ್ಲ” ಎಂದು ವಿಪಕ್ಷ ನಾಯಕ ವಿ.ಡಿ. ಸತೀಶನ್ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ನಡುವೆ, ಮುಖ್ಯಮಂತ್ರಿ ‘ಮಕ್ಕಳ ವಾಕ್ ಮತ್ತು ಅಭಿವ್ಯಕ್ತಿಯ ಸ್ವಾತಂತ್ರ್ಯದ ಹಕ್ಕನ್ನು’ ಅಗೌರವಿಸಿದ್ದಾರೆ ಎಂದು ಬಿಜೆಪಿ ಹೇಳಿದೆ.

ಶನಿವಾರ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೂಲಕ ಚಾಲನೆ ನೀಡಿದ ರೈಲಿನ ಮೊದಲ ಸಂಚಾರದ ವೇಳೆ ಕೊಚ್ಚಿಯ ಸರಸ್ವತಿ ವಿದ್ಯಾನಿಕೇತನ ಪಬ್ಲಿಕ್ ಶಾಲೆಯ ಇಪ್ಪತ್ತು ವಿದ್ಯಾರ್ಥಿಗಳು ಮತ್ತು ಇಬ್ಬರು ಶಿಕ್ಷಕರು ‘ಪರಮಪವಿತ್ರಮಥಮೀ ಮನ್ನಿಲ್ ಭಾರತಾಂಬಾಯೆ ಪೂಜಿಕ್ಕಾನ್’ ಗೀತೆ ಹಾಡಿದ್ದಾರೆ. ಇದರ ವಿಡಿಯೋವನ್ನು ದಕ್ಷಿಣ ರೈಲ್ವೆ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಂಡಿದೆ ಎಂದು ವರದಿಗಳು ಹೇಳಿವೆ.

ನಾವು ದಕ್ಷಿಣ ರೈಲ್ವೆಯ ಎಕ್ಸ್‌ ಖಾತೆಯನ್ನು ಪರಿಶೀಲಿಸಿದಾಗ ಅದರಲ್ಲಿ ಮಕ್ಕಳು ಆರ್‌ಎಸ್‌ಎಸ್‌ ಗೀತೆ ಹಾಡಿರುವ ವಿಡಿಯೋ ಕಂಡು ಬಂದಿದೆ. “ಎರ್ನಾಕುಲಂ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಉದ್ಘಾಟನಾ ಸಂಚಾರದ ಸಂದರ್ಭದಲ್ಲಿ ಸರಸ್ವತಿ ವಿದ್ಯಾಲಯದ ವಿದ್ಯಾರ್ಥಿಗಳು ತಮ್ಮ ಶಾಲಾ ಗೀತೆಯನ್ನು ಸುಂದರವಾಗಿ ಹಾಡಿದರು” ಎಂದು ವಿಡಿಯೋ ಜೊತೆಗೆ ರೈಲ್ವೆ ಬರೆದುಕೊಂಡಿದೆ.

ಸರಸ್ವತಿ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿಗೆ ಸಂಯೋಜಿತವಾಗಿದೆ ಮತ್ತು ಆರ್‌ಎಸ್‌ಎಸ್‌ನ ಶಿಕ್ಷಣ ವಿಭಾಗವಾದ ವಿದ್ಯಾ ಭಾರತಿಯ ಕೇರಳ ಘಟಕ ಭಾರತೀಯ ವಿದ್ಯಾನಿಕೇತನ ಅಡಿಯಲ್ಲಿ ಬರುತ್ತದೆ.

ವಿವಾದದ ಕುರಿತು ಶಾಲೆಯ ಪ್ರಾಂಶುಪಾಲ ಕೆ.ಪಿ. ಡಿಂಟೊ ಪ್ರತಿಕ್ರಿಯಿಸಿದ್ದು, “ಹಾಡನ್ನು ಆಯ್ಕೆ ಮಾಡುವಲ್ಲಿ ರೈಲ್ವೆ ಯಾವುದೇ ಪಾತ್ರ ವಹಿಸಿಲ್ಲ ಎಂಬುವುದಾಗಿ ಹೇಳಿದ್ದಾರೆ” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಟಿವಿ ಚಾನೆಲ್ ತಂಡದವರು ವಿದ್ಯಾರ್ಥಿಗಳೊಂದಿಗೆ ಹಾಡು ಹಾಡಲು ವಿನಂತಿಸಿದರು. ವಿದ್ಯಾರ್ಥಿಗಳು ವಂದೇ ಮಾತರಂ ಹಾಡಲು ಪ್ರಾರಂಭಿಸಿದಾಗ, ಟಿವಿ ಚಾನೆಲ್‌ನವರು ಮಲಯಾಳಂ ಹಾಡು ಹಾಡುವಂತೆ ಹೇಳಿದರು. ಟಿವಿ ತಂಡದ ಕೋರಿಕೆಯ ಮೇರೆಗೆ ಮಕ್ಕಳು ವಿವಿಧತೆಯಲ್ಲಿ ಏಕತೆಯನ್ನು ಆಚರಿಸುವ ಹಾಡನ್ನು ಹಾಡಿದ್ದಾರೆ”
ಎಂದು ಡಿಂಟೊ ಹೇಳಿದ್ದಾಗಿ ಪತ್ರಿಕೆ ಉಲ್ಲೇಖಿಸಿದೆ.

“ವಿದ್ಯಾರ್ಥಿಗಳನ್ನು ಅವಮಾನಿಸಲು ಹಾಡಿನ ಕುರಿತು ವಿವಾದ ಸೃಷ್ಟಿಸಲಾಗಿದೆ. ಹಾಡು ರಾಷ್ಟ್ರೀಯತೆಯ ವಿರುದ್ಧವಾಗಿರಲಿಲ್ಲ ಮತ್ತು ರೈಲ್ವೆ ಹಾಡುವಂತೆ ವಿದ್ಯಾರ್ಥಿಗಳನ್ನು ಕೇಳಿರಲಿಲ್ಲ” ಎಂದು ಡಿಂಟೊ ತಿಳಿಸಿದ್ದಾರೆ.

“ವಂದೇ ಭಾರತ್ ರೈಲಿನ ಚಾಲನೆ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಆರ್‌ಎಸ್‌ಎಸ್ ಗೀತೆ ಹಾಡಿಸಿರುವುದು ಅತ್ಯಂತ ಖಂಡನೀಯ’. ಕೋಮು ಸಿದ್ಧಾಂತ ಮತ್ತು ದ್ವೇಷ ಹರಡುವಿಕೆಗೆ ಹೆಸರುವಾಸಿಯಾದ ಸಂಘಟನೆಯ ಗೀತೆಯನ್ನು ಅಧಿಕೃತ ಕಾರ್ಯಕ್ರಮದಲ್ಲಿ ಹಾಡಿಸಿರುವುದು ಸಾಂವಿಧಾನಿಕ ತತ್ವಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ದಕ್ಷಿಣ ರೈಲ್ವೆ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ವಿಡಿಯೋ ಹಂಚಿಕೊಂಡಿರುವುದು ಸಂಘ ಪರಿವಾರದ ರಾಜಕೀಯವು ಪ್ರಮುಖ ರಾಷ್ಟ್ರೀಯ ಸಂಸ್ಥೆಗಳನ್ನು ಹೇಗೆ ನಾಶಪಡಿಸುತ್ತಿದೆ ಎಂಬುದನ್ನು ಬಹಿರಂಗಪಡಿಸಿದೆ” ಎಂದು ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಘಟನೆಯ ಕುರಿತು ರೈಲ್ವೆ ಸಚಿವರಿಗೆ ಪತ್ರ ಬರೆದಿದ್ದೇನೆ ಎಂದು ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.

“ಸಾರ್ವಜನಿಕ ಕಾರ್ಯಕ್ರಮವೊಂದನ್ನು ಆರ್‌ಎಸ್‌ಎಸ್ ಕಾರ್ಯಕ್ರಮವಾಗಿ ಪರಿವರ್ತಿಸಲಾಗಿದೆ. ದಕ್ಷಿಣ ರೈಲ್ವೆಯ ಅಧಿಕೃತ ಎಕ್ಸ್ ಹ್ಯಾಂಡಲ್ ಕೂಡ ಅದನ್ನು ಹೆಮ್ಮೆಯಿಂದ ಹಂಚಿಕೊಂಡಿದೆ. ಇದು ಯಾವುದೇ ವಿಭಜಕ ಸಿದ್ಧಾಂತವಲ್ಲ, ಪ್ರತಿಯೊಬ್ಬ ನಾಗರಿಕರಿಗೂ ಸೇರಿದ ರಾಷ್ಟ್ರೀಯ ಸಂಸ್ಥೆಯಾದ ಭಾರತೀಯ ರೈಲ್ವೆಯ ಸ್ಪಷ್ಟ ದುರುಪಯೋಗವಾಗಿದೆ” ಎಂದು ಕೆ.ಸಿ ವೇಣುಗೋಪಾಲ್ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಟೀಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್, “ನೀವು (ಪಿಣರಾಯಿ ವಿಜಯನ್‌) ಸ್ಪಷ್ಟವಾಗಿ ಖಂಡಿಸುತ್ತಿರುವುದು ಯಾವುದನ್ನು? ಮಕ್ಕಳು ತಾವು ಇಷ್ಟಪಟ್ಟ ಹಾಡು ಹಾಡಿರುವುದನ್ನಾ? ಅವರು ತಮ್ಮ ಮಾತೃಭೂಮಿಯ ಬಗ್ಗೆ ದೇಶಭಕ್ತಿ ಗೀತೆ ಹಾಡಿರುವುದನ್ನಾ?” ಎಂದು ಪ್ರಶ್ನಿಸಿದ್ದಾರೆ.

“ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿಯೊಬ್ಬರು ಮಕ್ಕಳ ವಾಕ್ ಸ್ವಾತಂತ್ರ್ಯದ ಹಕ್ಕನ್ನು ಇಷ್ಟೊಂದು ಅಗೌರವಿಸುವುದು ಹೇಗೆ?” ಎಂದು ಕೇಳಿದ್ದಾರೆ.

ಶಾಲಾ ಮಕ್ಕಳಿಗೆ ನ್ಯೂಸ್ ಪೇಪರ್‌ನಲ್ಲಿ ಬಿಸಿಯೂಟ ಬಡಿಸಿದ ವಿಡಿಯೋ ವೈರಲ್ : ಪ್ರಧಾನಿ, ಸಿಎಂಗೆ ನಾಚಿಕೆಯಾಗ್ಬೇಕು ಎಂದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...