Homeಮುಖಪುಟವಂದೇ ಭಾರತ್‌ ರೈಲಿನಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ಮಕ್ಕಳು, ವಿಡಿಯೋ ಹಂಚಿಕೊಂಡ ರೈಲ್ವೆ : ತೀವ್ರ...

ವಂದೇ ಭಾರತ್‌ ರೈಲಿನಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ಮಕ್ಕಳು, ವಿಡಿಯೋ ಹಂಚಿಕೊಂಡ ರೈಲ್ವೆ : ತೀವ್ರ ವಿರೋಧ

- Advertisement -
- Advertisement -

ಶನಿವಾರ (ನ.8) ಎರ್ನಾಕುಲಂ-ಬೆಂಗಳೂರು ನಡುವಿನ ನೂತನ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು ಆರ್‌ಎಸ್‌ಎಸ್‌ ಗೀತೆ ಹಾಡಿರುವ ವಿಡಿಯೋವನ್ನು ದಕ್ಷಿಣ ರೈಲ್ವೆ ಹಂಚಿಕೊಂಡಿದ್ದು, ಕೇರಳದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

“ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕೋಮು ಸಿದ್ಧಾಂತ ತುರುಕಿಸಲು ರೈಲ್ವೆಯನ್ನು ಬಳಸಲಾಗುತ್ತಿದೆ” ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

“ಸರ್ಕಾರಿ ಕಾರ್ಯಕ್ರಮ ಕೂಡ ‘ಕೇಸರೀಕರಣ’ದಿಂದ ಹೊರತಾಗಿಲ್ಲ, ಇದು ಒಪ್ಪುವಂತದಲ್ಲ” ಎಂದು ವಿಪಕ್ಷ ನಾಯಕ ವಿ.ಡಿ. ಸತೀಶನ್ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ನಡುವೆ, ಮುಖ್ಯಮಂತ್ರಿ ‘ಮಕ್ಕಳ ವಾಕ್ ಮತ್ತು ಅಭಿವ್ಯಕ್ತಿಯ ಸ್ವಾತಂತ್ರ್ಯದ ಹಕ್ಕನ್ನು’ ಅಗೌರವಿಸಿದ್ದಾರೆ ಎಂದು ಬಿಜೆಪಿ ಹೇಳಿದೆ.

ಶನಿವಾರ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೂಲಕ ಚಾಲನೆ ನೀಡಿದ ರೈಲಿನ ಮೊದಲ ಸಂಚಾರದ ವೇಳೆ ಕೊಚ್ಚಿಯ ಸರಸ್ವತಿ ವಿದ್ಯಾನಿಕೇತನ ಪಬ್ಲಿಕ್ ಶಾಲೆಯ ಇಪ್ಪತ್ತು ವಿದ್ಯಾರ್ಥಿಗಳು ಮತ್ತು ಇಬ್ಬರು ಶಿಕ್ಷಕರು ‘ಪರಮಪವಿತ್ರಮಥಮೀ ಮನ್ನಿಲ್ ಭಾರತಾಂಬಾಯೆ ಪೂಜಿಕ್ಕಾನ್’ ಗೀತೆ ಹಾಡಿದ್ದಾರೆ. ಇದರ ವಿಡಿಯೋವನ್ನು ದಕ್ಷಿಣ ರೈಲ್ವೆ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಂಡಿದೆ ಎಂದು ವರದಿಗಳು ಹೇಳಿವೆ.

ನಾವು ದಕ್ಷಿಣ ರೈಲ್ವೆಯ ಎಕ್ಸ್‌ ಖಾತೆಯನ್ನು ಪರಿಶೀಲಿಸಿದಾಗ ಅದರಲ್ಲಿ ಮಕ್ಕಳು ಆರ್‌ಎಸ್‌ಎಸ್‌ ಗೀತೆ ಹಾಡಿರುವ ವಿಡಿಯೋ ಕಂಡು ಬಂದಿದೆ. “ಎರ್ನಾಕುಲಂ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಉದ್ಘಾಟನಾ ಸಂಚಾರದ ಸಂದರ್ಭದಲ್ಲಿ ಸರಸ್ವತಿ ವಿದ್ಯಾಲಯದ ವಿದ್ಯಾರ್ಥಿಗಳು ತಮ್ಮ ಶಾಲಾ ಗೀತೆಯನ್ನು ಸುಂದರವಾಗಿ ಹಾಡಿದರು” ಎಂದು ವಿಡಿಯೋ ಜೊತೆಗೆ ರೈಲ್ವೆ ಬರೆದುಕೊಂಡಿದೆ.

ಸರಸ್ವತಿ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿಗೆ ಸಂಯೋಜಿತವಾಗಿದೆ ಮತ್ತು ಆರ್‌ಎಸ್‌ಎಸ್‌ನ ಶಿಕ್ಷಣ ವಿಭಾಗವಾದ ವಿದ್ಯಾ ಭಾರತಿಯ ಕೇರಳ ಘಟಕ ಭಾರತೀಯ ವಿದ್ಯಾನಿಕೇತನ ಅಡಿಯಲ್ಲಿ ಬರುತ್ತದೆ.

ವಿವಾದದ ಕುರಿತು ಶಾಲೆಯ ಪ್ರಾಂಶುಪಾಲ ಕೆ.ಪಿ. ಡಿಂಟೊ ಪ್ರತಿಕ್ರಿಯಿಸಿದ್ದು, “ಹಾಡನ್ನು ಆಯ್ಕೆ ಮಾಡುವಲ್ಲಿ ರೈಲ್ವೆ ಯಾವುದೇ ಪಾತ್ರ ವಹಿಸಿಲ್ಲ ಎಂಬುವುದಾಗಿ ಹೇಳಿದ್ದಾರೆ” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಟಿವಿ ಚಾನೆಲ್ ತಂಡದವರು ವಿದ್ಯಾರ್ಥಿಗಳೊಂದಿಗೆ ಹಾಡು ಹಾಡಲು ವಿನಂತಿಸಿದರು. ವಿದ್ಯಾರ್ಥಿಗಳು ವಂದೇ ಮಾತರಂ ಹಾಡಲು ಪ್ರಾರಂಭಿಸಿದಾಗ, ಟಿವಿ ಚಾನೆಲ್‌ನವರು ಮಲಯಾಳಂ ಹಾಡು ಹಾಡುವಂತೆ ಹೇಳಿದರು. ಟಿವಿ ತಂಡದ ಕೋರಿಕೆಯ ಮೇರೆಗೆ ಮಕ್ಕಳು ವಿವಿಧತೆಯಲ್ಲಿ ಏಕತೆಯನ್ನು ಆಚರಿಸುವ ಹಾಡನ್ನು ಹಾಡಿದ್ದಾರೆ”
ಎಂದು ಡಿಂಟೊ ಹೇಳಿದ್ದಾಗಿ ಪತ್ರಿಕೆ ಉಲ್ಲೇಖಿಸಿದೆ.

“ವಿದ್ಯಾರ್ಥಿಗಳನ್ನು ಅವಮಾನಿಸಲು ಹಾಡಿನ ಕುರಿತು ವಿವಾದ ಸೃಷ್ಟಿಸಲಾಗಿದೆ. ಹಾಡು ರಾಷ್ಟ್ರೀಯತೆಯ ವಿರುದ್ಧವಾಗಿರಲಿಲ್ಲ ಮತ್ತು ರೈಲ್ವೆ ಹಾಡುವಂತೆ ವಿದ್ಯಾರ್ಥಿಗಳನ್ನು ಕೇಳಿರಲಿಲ್ಲ” ಎಂದು ಡಿಂಟೊ ತಿಳಿಸಿದ್ದಾರೆ.

“ವಂದೇ ಭಾರತ್ ರೈಲಿನ ಚಾಲನೆ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಆರ್‌ಎಸ್‌ಎಸ್ ಗೀತೆ ಹಾಡಿಸಿರುವುದು ಅತ್ಯಂತ ಖಂಡನೀಯ’. ಕೋಮು ಸಿದ್ಧಾಂತ ಮತ್ತು ದ್ವೇಷ ಹರಡುವಿಕೆಗೆ ಹೆಸರುವಾಸಿಯಾದ ಸಂಘಟನೆಯ ಗೀತೆಯನ್ನು ಅಧಿಕೃತ ಕಾರ್ಯಕ್ರಮದಲ್ಲಿ ಹಾಡಿಸಿರುವುದು ಸಾಂವಿಧಾನಿಕ ತತ್ವಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ದಕ್ಷಿಣ ರೈಲ್ವೆ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ವಿಡಿಯೋ ಹಂಚಿಕೊಂಡಿರುವುದು ಸಂಘ ಪರಿವಾರದ ರಾಜಕೀಯವು ಪ್ರಮುಖ ರಾಷ್ಟ್ರೀಯ ಸಂಸ್ಥೆಗಳನ್ನು ಹೇಗೆ ನಾಶಪಡಿಸುತ್ತಿದೆ ಎಂಬುದನ್ನು ಬಹಿರಂಗಪಡಿಸಿದೆ” ಎಂದು ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಘಟನೆಯ ಕುರಿತು ರೈಲ್ವೆ ಸಚಿವರಿಗೆ ಪತ್ರ ಬರೆದಿದ್ದೇನೆ ಎಂದು ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.

“ಸಾರ್ವಜನಿಕ ಕಾರ್ಯಕ್ರಮವೊಂದನ್ನು ಆರ್‌ಎಸ್‌ಎಸ್ ಕಾರ್ಯಕ್ರಮವಾಗಿ ಪರಿವರ್ತಿಸಲಾಗಿದೆ. ದಕ್ಷಿಣ ರೈಲ್ವೆಯ ಅಧಿಕೃತ ಎಕ್ಸ್ ಹ್ಯಾಂಡಲ್ ಕೂಡ ಅದನ್ನು ಹೆಮ್ಮೆಯಿಂದ ಹಂಚಿಕೊಂಡಿದೆ. ಇದು ಯಾವುದೇ ವಿಭಜಕ ಸಿದ್ಧಾಂತವಲ್ಲ, ಪ್ರತಿಯೊಬ್ಬ ನಾಗರಿಕರಿಗೂ ಸೇರಿದ ರಾಷ್ಟ್ರೀಯ ಸಂಸ್ಥೆಯಾದ ಭಾರತೀಯ ರೈಲ್ವೆಯ ಸ್ಪಷ್ಟ ದುರುಪಯೋಗವಾಗಿದೆ” ಎಂದು ಕೆ.ಸಿ ವೇಣುಗೋಪಾಲ್ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಟೀಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್, “ನೀವು (ಪಿಣರಾಯಿ ವಿಜಯನ್‌) ಸ್ಪಷ್ಟವಾಗಿ ಖಂಡಿಸುತ್ತಿರುವುದು ಯಾವುದನ್ನು? ಮಕ್ಕಳು ತಾವು ಇಷ್ಟಪಟ್ಟ ಹಾಡು ಹಾಡಿರುವುದನ್ನಾ? ಅವರು ತಮ್ಮ ಮಾತೃಭೂಮಿಯ ಬಗ್ಗೆ ದೇಶಭಕ್ತಿ ಗೀತೆ ಹಾಡಿರುವುದನ್ನಾ?” ಎಂದು ಪ್ರಶ್ನಿಸಿದ್ದಾರೆ.

“ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿಯೊಬ್ಬರು ಮಕ್ಕಳ ವಾಕ್ ಸ್ವಾತಂತ್ರ್ಯದ ಹಕ್ಕನ್ನು ಇಷ್ಟೊಂದು ಅಗೌರವಿಸುವುದು ಹೇಗೆ?” ಎಂದು ಕೇಳಿದ್ದಾರೆ.

ಶಾಲಾ ಮಕ್ಕಳಿಗೆ ನ್ಯೂಸ್ ಪೇಪರ್‌ನಲ್ಲಿ ಬಿಸಿಯೂಟ ಬಡಿಸಿದ ವಿಡಿಯೋ ವೈರಲ್ : ಪ್ರಧಾನಿ, ಸಿಎಂಗೆ ನಾಚಿಕೆಯಾಗ್ಬೇಕು ಎಂದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...

‘ಮತಗಳ್ಳತನ ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ’: ‘ಬಿಜೆಪಿ-ಇಸಿ ಒಪ್ಪಂದ’ವನ್ನು ನೇರವಾಗಿ ಟೀಕಿಸಿದ ರಾಹುಲ್ ಗಾಂಧಿ

ನವದೆಹಲಿ: "ಮತಗಳ್ಳತನ"(ವೋಟ್ ಚೋರಿ) ಒಂದು "ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ”,  ಬಿಜೆಪಿ ಮತ್ತು ಚುನಾವಣಾ ಆಯೋಗವು ಭಾರತದ ಪ್ರಜಾಪ್ರಭುತ್ವವನ್ನು ನಾಶಮಾಡಲು ಮತ್ತು "ಜನರ ಧ್ವನಿಯನ್ನು ಕಸಿದುಕೊಳ್ಳಲು" ಪಿತೂರಿ ನಡೆಸುತ್ತಿವೆ ಎಂದು ಕಾಂಗ್ರೆಸ್ ನಾಯಕ...

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...