Homeಮುಖಪುಟಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ನೇಮಕಾತಿ ಪರೀಕ್ಷೆಗಳನ್ನು ರದ್ದುಗೊಳಿಸಿದ ರೈಲ್ವೇ

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ನೇಮಕಾತಿ ಪರೀಕ್ಷೆಗಳನ್ನು ರದ್ದುಗೊಳಿಸಿದ ರೈಲ್ವೇ

- Advertisement -
- Advertisement -

ಭಾರತೀಯ ರೈಲ್ವೇ ನೇಮಕಾತಿ ಪರೀಕ್ಷೆಗಳ ಆಯ್ಕೆ ಪ್ರಕ್ರಿಯೆಯ ಕುರಿತು ಉದ್ಯೋಗ ಆಕಾಂಕ್ಷಿಗಳು ಹಿಂಸಾತ್ಮಕ ಪ್ರತಿಭಟನೆ ನಡೆಸಿದ ನಂತರ ಎನ್‌ಟಿಪಿಸಿ (Non-Technical Popular Categories) ಪರೀಕ್ಷೆಗಳನ್ನು ಅಮಾನತುಗೊಳಿಸಲು ನಿರ್ಧರಿಸಿದೆ ಎಂದು ರಾಷ್ಟ್ರೀಯ ಸಾರಿಗೆ ವಕ್ತಾರರು ಬುಧವಾರ ತಿಳಿಸಿದ್ದಾರೆ.

ವಿವಿಧ ರೈಲ್ವೇ ನೇಮಕಾತಿ ಮಂಡಳಿಗಳ (ಆರ್‌ಆರ್‌ಬಿ) ಅಡಿಯಲ್ಲಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದವರು ಮತ್ತು ಅನುತ್ತೀರ್ಣರಾದವರ ಕುಂದುಕೊರತೆಗಳನ್ನು ಪರಿಶೀಲಿಸುವ ಸಮಿತಿಯನ್ನು ಸಹ ಇಲಾಖೆ ರಚಿಸಿದೆ. ಎರಡೂ ಕಡೆಯವರ ಮಾತುಗಳನ್ನು ಆಲಿಸಿದ ನಂತರ ಸಮಿತಿಯು ರೈಲ್ವೆ ಸಚಿವಾಲಯಕ್ಕೆ ವರದಿ ಸಲ್ಲಿಸಲಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ಎರಡು ಹಂತಗಳಲ್ಲಿ ಪರೀಕ್ಷೆಗಳನ್ನು ನಡೆಸುವ ರೈಲ್ವೇ ಇಲಾಖೆ ನಿರ್ಧಾರದ ವಿರುದ್ಧ ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. 2019 ರಲ್ಲಿ ಹೊರಡಿಸಲಾದ ರೈಲ್ವೆ ನೇಮಕಾತಿ ಮಂಡಳಿ ಅಧಿಸೂಚನೆಯಲ್ಲಿ ಒಂದೇ ಒಂದು ಪರೀಕ್ಷೆಯನ್ನು ಉಲ್ಲೇಖಿಸಲಾಗಿದೆ. ಅಧಿಕಾರಿಗಳು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಇದನ್ನೂ ಓದಿ: ಸಿಪಿಐ(ಎಂ) ನಾಯಕ, ಪ.ಬಂ. ಮಾಜಿ ಸಿಎಂ ಬುದ್ಧದೇಬ್‌‌ ಭಟ್ಟಾಚಾರ್ಯ ‘ಪದ್ಮಭೂಷಣ’ ನಿರಾಕರಣೆ

ರೈಲ್ವೆ ಸಚಿವಾಲಯವು ಜನವರಿ 25 ರಂದು ಉದ್ಯೋಗಾಕಾಂಕ್ಷಿಗಳಿಗೆ ಸಾಮಾನ್ಯ ಸೂಚನೆಯನ್ನು ನೀಡಿತ್ತು, ಪ್ರತಿಭಟನೆಯ ಸಮಯದಲ್ಲಿ ವಿಧ್ವಂಸಕ ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವವರು ರೈಲ್ವೇಯಲ್ಲಿ ಎಂದಿಗೂ ಉದ್ಯೋಗ ಪಡೆಯಲು ಸಾಧ್ಯಾವಾಗುವುದಿಲ್ಲ ಎಂದು ತಿಳಿಸಿತ್ತು.

ಬಿಹಾರದ ಹಲವಾರು ಸ್ಥಳಗಳಲ್ಲಿ ಪ್ರತಿಭಟನಾಕಾರರು ರೈಲು ಹಳಿಗಳ ಮೇಲೆ ಧರಣಿ ನಡೆಸಿದ್ದರು. ಪೂರ್ವ ಕೇಂದ್ರ ರೈಲ್ವೇ (ECR) ವಲಯದ ಕೋಲ್ಕತ್ತಾ-ದೆಹಲಿ ಮಾರ್ಗದಲ್ಲಿ ಸುಮಾರು 25 ರೈಲುಗಳ ಸಂಚಾರಕ್ಕೆ ತೊಂದರೆಯಾಯಿತು. ಪಾಟ್ನಾ, ನವಾಡ, ಮುಜಾಫರ್‌ಪುರ, ಸೀತಾಮರ್ಹಿ, ಬಕ್ಸರ್ ಮತ್ತು ಭೋಜ್‌ಪುರ ಜಿಲ್ಲೆಗಳಲ್ಲಿಯೂ ಪ್ರತಿಭಟನೆ ನಡೆದಿತ್ತು.

ಕೆಲವು ಸ್ಥಳಗಳಲ್ಲಿ ಪ್ರತಿಭಟನಾಕಾರರು ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆಸಿದ್ದಾರೆ. ಇದರಿಂದಾಗಿ ರೈಲ್ವೆ ಆಸ್ತಿಗೆ ಹಾನಿಯಾಗಿದೆ. ಸಿತಾಮರ್ಹಿಯರೈಲು ನಿಲ್ದಾಣದಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದರು. ಅರಾದಲ್ಲಿ ನಿಂತಿದ್ದ ರೈಲು ಕೋಚ್‌ಗೆ ಬೆಂಕಿ ಹಚ್ಚಲಾಗಿದೆ.

ಸುಮಾರು 1.25 ಕೋಟಿ ಅಭ್ಯರ್ಥಿಗಳು ಹಂತ 2 ರಿಂದ ಹಂತ 6 ರವರೆಗಿನ 35,000 ಕ್ಕೂ ಹೆಚ್ಚು ಹುದ್ದೆಗಳ ಪರೀಕ್ಷೆಗಳಿಗೆ ಹಾಜರಾಗಿದ್ದಾರೆ. ಈ ಹುದ್ದೆಗಳ ಆರಂಭಿಕ ವೇತನವು ತಿಂಗಳಿಗೆ 19,900 ರಿಂದ 35,400 ರೂಪಾಯಿಯಿದೆ.


ಇದನ್ನೂ ಓದಿ: ‘ಅಕ್ಕಿ ಕದ್ದನೆಂದು ಆದಿವಾಸಿ ಯುವಕನನ್ನು ಕೊಂದು 4 ವರ್ಷವಾಯಿತು, ವಿಚಾರಣೆ ಮಾತ್ರ ಆರಂಭವಾಗಲಿಲ್ಲ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....