Homeಮುಖಪುಟಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ನೇಮಕಾತಿ ಪರೀಕ್ಷೆಗಳನ್ನು ರದ್ದುಗೊಳಿಸಿದ ರೈಲ್ವೇ

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ನೇಮಕಾತಿ ಪರೀಕ್ಷೆಗಳನ್ನು ರದ್ದುಗೊಳಿಸಿದ ರೈಲ್ವೇ

- Advertisement -
- Advertisement -

ಭಾರತೀಯ ರೈಲ್ವೇ ನೇಮಕಾತಿ ಪರೀಕ್ಷೆಗಳ ಆಯ್ಕೆ ಪ್ರಕ್ರಿಯೆಯ ಕುರಿತು ಉದ್ಯೋಗ ಆಕಾಂಕ್ಷಿಗಳು ಹಿಂಸಾತ್ಮಕ ಪ್ರತಿಭಟನೆ ನಡೆಸಿದ ನಂತರ ಎನ್‌ಟಿಪಿಸಿ (Non-Technical Popular Categories) ಪರೀಕ್ಷೆಗಳನ್ನು ಅಮಾನತುಗೊಳಿಸಲು ನಿರ್ಧರಿಸಿದೆ ಎಂದು ರಾಷ್ಟ್ರೀಯ ಸಾರಿಗೆ ವಕ್ತಾರರು ಬುಧವಾರ ತಿಳಿಸಿದ್ದಾರೆ.

ವಿವಿಧ ರೈಲ್ವೇ ನೇಮಕಾತಿ ಮಂಡಳಿಗಳ (ಆರ್‌ಆರ್‌ಬಿ) ಅಡಿಯಲ್ಲಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದವರು ಮತ್ತು ಅನುತ್ತೀರ್ಣರಾದವರ ಕುಂದುಕೊರತೆಗಳನ್ನು ಪರಿಶೀಲಿಸುವ ಸಮಿತಿಯನ್ನು ಸಹ ಇಲಾಖೆ ರಚಿಸಿದೆ. ಎರಡೂ ಕಡೆಯವರ ಮಾತುಗಳನ್ನು ಆಲಿಸಿದ ನಂತರ ಸಮಿತಿಯು ರೈಲ್ವೆ ಸಚಿವಾಲಯಕ್ಕೆ ವರದಿ ಸಲ್ಲಿಸಲಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ಎರಡು ಹಂತಗಳಲ್ಲಿ ಪರೀಕ್ಷೆಗಳನ್ನು ನಡೆಸುವ ರೈಲ್ವೇ ಇಲಾಖೆ ನಿರ್ಧಾರದ ವಿರುದ್ಧ ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. 2019 ರಲ್ಲಿ ಹೊರಡಿಸಲಾದ ರೈಲ್ವೆ ನೇಮಕಾತಿ ಮಂಡಳಿ ಅಧಿಸೂಚನೆಯಲ್ಲಿ ಒಂದೇ ಒಂದು ಪರೀಕ್ಷೆಯನ್ನು ಉಲ್ಲೇಖಿಸಲಾಗಿದೆ. ಅಧಿಕಾರಿಗಳು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಇದನ್ನೂ ಓದಿ: ಸಿಪಿಐ(ಎಂ) ನಾಯಕ, ಪ.ಬಂ. ಮಾಜಿ ಸಿಎಂ ಬುದ್ಧದೇಬ್‌‌ ಭಟ್ಟಾಚಾರ್ಯ ‘ಪದ್ಮಭೂಷಣ’ ನಿರಾಕರಣೆ

ರೈಲ್ವೆ ಸಚಿವಾಲಯವು ಜನವರಿ 25 ರಂದು ಉದ್ಯೋಗಾಕಾಂಕ್ಷಿಗಳಿಗೆ ಸಾಮಾನ್ಯ ಸೂಚನೆಯನ್ನು ನೀಡಿತ್ತು, ಪ್ರತಿಭಟನೆಯ ಸಮಯದಲ್ಲಿ ವಿಧ್ವಂಸಕ ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವವರು ರೈಲ್ವೇಯಲ್ಲಿ ಎಂದಿಗೂ ಉದ್ಯೋಗ ಪಡೆಯಲು ಸಾಧ್ಯಾವಾಗುವುದಿಲ್ಲ ಎಂದು ತಿಳಿಸಿತ್ತು.

ಬಿಹಾರದ ಹಲವಾರು ಸ್ಥಳಗಳಲ್ಲಿ ಪ್ರತಿಭಟನಾಕಾರರು ರೈಲು ಹಳಿಗಳ ಮೇಲೆ ಧರಣಿ ನಡೆಸಿದ್ದರು. ಪೂರ್ವ ಕೇಂದ್ರ ರೈಲ್ವೇ (ECR) ವಲಯದ ಕೋಲ್ಕತ್ತಾ-ದೆಹಲಿ ಮಾರ್ಗದಲ್ಲಿ ಸುಮಾರು 25 ರೈಲುಗಳ ಸಂಚಾರಕ್ಕೆ ತೊಂದರೆಯಾಯಿತು. ಪಾಟ್ನಾ, ನವಾಡ, ಮುಜಾಫರ್‌ಪುರ, ಸೀತಾಮರ್ಹಿ, ಬಕ್ಸರ್ ಮತ್ತು ಭೋಜ್‌ಪುರ ಜಿಲ್ಲೆಗಳಲ್ಲಿಯೂ ಪ್ರತಿಭಟನೆ ನಡೆದಿತ್ತು.

ಕೆಲವು ಸ್ಥಳಗಳಲ್ಲಿ ಪ್ರತಿಭಟನಾಕಾರರು ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆಸಿದ್ದಾರೆ. ಇದರಿಂದಾಗಿ ರೈಲ್ವೆ ಆಸ್ತಿಗೆ ಹಾನಿಯಾಗಿದೆ. ಸಿತಾಮರ್ಹಿಯರೈಲು ನಿಲ್ದಾಣದಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದರು. ಅರಾದಲ್ಲಿ ನಿಂತಿದ್ದ ರೈಲು ಕೋಚ್‌ಗೆ ಬೆಂಕಿ ಹಚ್ಚಲಾಗಿದೆ.

ಸುಮಾರು 1.25 ಕೋಟಿ ಅಭ್ಯರ್ಥಿಗಳು ಹಂತ 2 ರಿಂದ ಹಂತ 6 ರವರೆಗಿನ 35,000 ಕ್ಕೂ ಹೆಚ್ಚು ಹುದ್ದೆಗಳ ಪರೀಕ್ಷೆಗಳಿಗೆ ಹಾಜರಾಗಿದ್ದಾರೆ. ಈ ಹುದ್ದೆಗಳ ಆರಂಭಿಕ ವೇತನವು ತಿಂಗಳಿಗೆ 19,900 ರಿಂದ 35,400 ರೂಪಾಯಿಯಿದೆ.


ಇದನ್ನೂ ಓದಿ: ‘ಅಕ್ಕಿ ಕದ್ದನೆಂದು ಆದಿವಾಸಿ ಯುವಕನನ್ನು ಕೊಂದು 4 ವರ್ಷವಾಯಿತು, ವಿಚಾರಣೆ ಮಾತ್ರ ಆರಂಭವಾಗಲಿಲ್ಲ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...