Homeಕರ್ನಾಟಕಮಳೆ: ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳು ತತ್ತರ

ಮಳೆ: ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳು ತತ್ತರ

- Advertisement -
- Advertisement -

ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ವಿವಿಧ ಜಿಲ್ಲೆಗಳಿಗೆ ಎಚ್ಚರಿಕೆ ರವಾನಿಸಿದೆ.

ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ರಾಯಚೂರು, ಹಾವೇರಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ಉತ್ತರ ಒಳನಾಡಿನ ಇತರ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಭಾನುವಾರ ಮತ್ತು ಸೋಮವಾರ ಎಲ್ಲೋ ಅಲರ್ಟ್ ಜಾರಿ ಮಾಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ದಾವಣಗೆರೆಗೆ ಎಲ್ಲೋ ಅಲರ್ಟ್ ನೀಡಲಾಗಿದ್ದು, ಉಳಿದ ಜಿಲ್ಲೆಗಳಿಗೆ ಆಗಸ್ಟ್ 10 ರವರೆಗೆ ಯಾವುದೇ ಎಚ್ಚರಿಕೆ ನೀಡಲಾಗಿಲ್ಲ.

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಶನಿವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ನಾಲ್ಕು ದಿನಗಳವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿರಿ: ತಮಿಳುನಾಡು: ಮೂವರು ದಲಿತರ ಹತ್ಯೆ ಪ್ರಕರಣ; 27 ಮಂದಿಗೆ ಜೀವಾವಧಿ ಶಿಕ್ಷೆ

ಭಾರೀ ಮಳೆಯಿಂದಾಗಿ ರಾಜ್ಯಾದ್ಯಂತ ಕೃಷಿ ಭೂಮಿ, ರಸ್ತೆಗಳು, ಇತರ ಮೂಲಸೌಕರ್ಯಗಳಿಗೆ ಆಗಿರುವ ವ್ಯಾಪಕ ಹಾನಿ ಮತ್ತು ಈ ಸಮಸ್ಯೆಗಳನ್ನು ಪರಿಹರಿಸಲು ಅಗತ್ಯವಿರುವ ಕ್ರಮಗಳ ಕುರಿತು ಚರ್ಚಿಸಲು ಆಗಸ್ಟ್ 10 ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ.

ರಾಜ್ಯಾದ್ಯಂತ ಆಗಿರುವ ಹಾನಿಯ ಸಮೀಕ್ಷೆ ನಡೆಸಿದ ಅಧಿಕಾರಿಗಳ ತಂಡಗಳು, ಜೂನ್ ಮೊದಲ ವಾರ ಮತ್ತು ಜುಲೈ 16ರ ನಡುವೆ 5,771 ಹೆಕ್ಟೇರ್ ಕೃಷಿ ಭೂಮಿ, ಜುಲೈ 16 ಮತ್ತು ಆಗಸ್ಟ್ ಎರಡನೇ ವಾರದ ನಡುವೆ 10,984 ಹೆಕ್ಟೇರ್ ಕೃಷಿ ಭೂಮಿ ಹಾನಿಗೊಳಗಾಗಿವೆ ಎಂದು ಅಂದಾಜಿಸಿವೆ.

370ರಷ್ಟು ಭೂ ಕುಸಿತಗಳಾಗಿವೆ. 3,600 ಕಿಮೀ ರಸ್ತೆಗಳು, 650 ಸೇತುವೆಗಳು ಹಾನಿಗೊಳಗಾಗಿವೆ ಎಂದು ಪಿಡಬ್ಲ್ಯೂಡಿ ಮತ್ತು ಜಿಲ್ಲಾ ಮೂಲಸೌಕರ್ಯ ತಂಡಗಳು ಅಂದಾಜಿಸಿವೆ. ಅಲ್ಲದೆ, 16,000 ಮನೆಗಳು ಹಾನಿಗೊಳಗಾಗಿವೆ, 400 ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿವೆ ಎಂದು ವರದಿಯಾಗಿದೆ.

ಜಲಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ ಮಾತನಾಡಿ, “ಪ್ರವಾಹ ಪೀಡಿತ ಜನರನ್ನು ಶಾಲಾ-ಕಾಲೇಜುಗಳಂತಹ ಸರಕಾರಿ ಸಂಸ್ಥೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾ ಮತ್ತು ತಾಲೂಕು ಆಡಳಿತ ಅಧಿಕಾರಿಗಳು ವರದಿ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ತಮಿಳುನಾಡು: ಮೂವರು ದಲಿತರ ಹತ್ಯೆ ಪ್ರಕರಣ; 27 ಮಂದಿಗೆ ಜೀವಾವಧಿ ಶಿಕ್ಷೆ

“ವಿಪತ್ತು ನಿರ್ವಹಣಾ ಆಯುಕ್ತ ಮನೋಜ್ ರಾಜನ್ ಅವರು ಬೆಳವಣಿಗೆಗಳ ಬಗ್ಗೆ ನಿಗಾ ಇರಿಸಿದ್ದಾರೆ” ಎಂದು ಇಲಾಖೆಯ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಹೇಳಿದ್ದಾರೆ.

ಹಲವು ಸರ್ಕಾರಿ ಕಚೇರಿಗಳು, ಶಾಲೆಗಳು ಮತ್ತು ಅಂಗನವಾಡಿಗಳು ಹಾನಿಗೊಳಗಾಗಿವೆ ಎಂದು ವರದಿ ತಿಳಿಸಿದೆ.

ತಮಿಳುನಾಡಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ

ಕಳೆದ ಕೆಲವು ವಾರಗಳಿಂದ ತಮಿಳುನಾಡಿನ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (ಡಿಐಪಿಆರ್) ಗುರುವಾರ (ಆಗಸ್ಟ್ 4) ಹೊರಡಿಸಿದ ಹೇಳಿಕೆಯಲ್ಲಿ, “ನೀಲಗಿರಿ ಜಿಲ್ಲೆಯಲ್ಲಿ ಜೂನ್ 1 ರಿಂದ ಆಗಸ್ಟ್ 4 ರ ನಡುವೆ 67.50 ಮಿಮೀ ಮಳೆಯಾಗಿದೆ. ರಾಜ್ಯದಲ್ಲಿ ಅತಿಹೆಚ್ಚು ಮಳೆಯಾಗಿರುವ ಜಿಲ್ಲೆ ಇದಾಗಿದೆ” ಎಂದು ತಿಳಿಸಲಾಗಿದೆ.

ರಾಜ್ಯದಲ್ಲಿ ವಾಡಿಕೆಗಿಂತ (256.3 ಮಿಮೀ) 99% ಹೆಚ್ಚು ಮಳೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಸುಮಾರು 100 ಮಿಮೀ ಮಳೆ ದಾಖಲಾಗಿದೆ. ಕೊಯಮತ್ತೂರಿನಲ್ಲಿ ಎರಡನೇ ಅತಿ ಹೆಚ್ಚು ಮಳೆಯಾಗಿದೆ (53.46), ನಂತರದ ಸ್ಥಾನದಲ್ಲಿ ಧರ್ಮಪುರಿ (38.63) ಮತ್ತು ತಿರುವಣ್ಣಾಮಲೈ (23.27) ಪ್ರದೇಶಗಳಿವೆ.

ಮಳೆಯಿಂದ ಸಂತ್ರಸ್ತರಾಗಿರುವ ಜನರಿಗೆ ಆಶ್ರಯ ನೀಡಲು ಸರ್ಕಾರ ರಾಜ್ಯಾದ್ಯಂತ ಪರಿಹಾರ ಶಿಬಿರಗಳನ್ನು ತೆರೆದಿದೆ. ಒಟ್ಟು 49 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಯಿತು. ಅದರಲ್ಲಿ ಸುಮಾರು 1,500 ಜನರು ವಾಸಿಸುತ್ತಿದ್ದಾರೆ. ಈರೋಡ್ ಮತ್ತು ನಾಮಕ್ಕಲ್ ಜಿಲ್ಲೆಗಳು ಅತಿ ಹೆಚ್ಚು ಶಿಬಿರಗಳನ್ನು ಹೊಂದಿದ್ದು, ಪ್ರತಿ ಜಿಲ್ಲೆಯಲ್ಲಿ 14 ಶಿಬಿರಗಳನ್ನು ನಡೆಸಲಾಗುತ್ತಿದೆ. ಪರಿಹಾರ ಶಿಬಿರಗಳಲ್ಲಿ ನೆಲೆಸಿರುವ ಜನರಿಗೆ ಆಹಾರ ಮತ್ತು ಬಟ್ಟೆಗಳನ್ನು ಒದಗಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಆಗಸ್ಟ್ 6ರಂದು ನೀಲಗಿರಿ ಮತ್ತು ಕೊಯಮತ್ತೂರಿನಲ್ಲಿ ಭಾರೀ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಆಗಸ್ಟ್ 6 ಮತ್ತು 7 ರಂದು ವಿವಿಧ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ರಾಜ್ಯದ ಕರಾವಳಿ ಭಾಗಗಳ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. 45-60 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದೆ.

ಕೇರಳ: ಮಲ್ಲಪೆರಿಯಾರ್‌ ಅಣೆಕಟ್ಟೆಯ ಎಲ್ಲ ಗೇಟ್‌ ಓಪನ್‌

ಭಾರೀ ಮಳೆಯಿಂದಾಗಿ ಕೇರಳದ ಮುಲ್ಲಪೆರಿಯಾರ್ ಅಣೆಕಟ್ಟಿನಲ್ಲಿ ಹೆಚ್ಚುತ್ತಿರುವ ನೀರಿನ ಮಟ್ಟವನ್ನು ಗಮನದಲ್ಲಿಟ್ಟುಕೊಂಡು, ಆಗಸ್ಟ್ 5ರ ಶುಕ್ರವಾರ ಸಂಜೆ 5 ಗಂಟೆಗೆ ಅದರ ಹತ್ತು ಗೇಟ್‌ಗಳನ್ನು ತೆರೆಯಲಾಯಿತು. ಒಟ್ಟು 1,876 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ. ಅಕ್ಟೋಬರ್ 2021ರಲ್ಲಿ ಕೊನೆಯ ಬಾರಿಗೆ ಅಣೆಕಟ್ಟಿನ ಗೇಟ್‌ಗಳನ್ನು ತೆರೆಯಲಾಗಿತ್ತು. ಪೆರಿಯಾರ್ ನದಿಯ ಎರಡೂ ದಡಗಳಲ್ಲಿ ವಾಸಿಸುವ ಜನರು ಜಾಗರೂಕರಾಗಿರುವಂತೆ ಇಡುಕ್ಕಿ ಜಿಲ್ಲಾಧಿಕಾರಿ ಶೀಬಾ ಜಾರ್ಜ್ ಮನವಿ ಮಾಡಿದ್ದಾರೆ.

ಇದನ್ನೂ ಓದಿರಿ: ಮಲೆನಾಡಿನಲ್ಲಿ ಮಹಾಮಳೆ: ಭೂಕುಸಿತದ ಭಯದಲ್ಲಿ ಬಡಜನರು – ಮರೀಚಿಕೆಯಾದ ಶಾಶ್ವತ ಪರಿಹಾರ

ಕೇರಳದಲ್ಲಿ ಆಗುತ್ತಿರುವ ಭಾರೀ ಮಳೆಯ ಅವಘಡಲ್ಲಿ ಒಟ್ಟು ಮೂರು ಜನರು ನಾಪತ್ತೆಯಾಗಿದ್ದಾರೆ. ನಾಲ್ವರು ಗಾಯಗೊಂಡಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಸ್‌ಡಿಎಂಎ) ತಿಳಿಸಿದೆ. ರಾಜ್ಯದಲ್ಲಿ 11 ಎನ್‌ಡಿಆರ್‌ಎಫ್ ತಂಡಗಳು ಸಕ್ರಿಯವಾಗಿವೆ.

ರಾಜ್ಯಾದ್ಯಂತ 342 ನಿರಾಶ್ರಿತ ಶಿಬಿರಗಳಿದ್ದು, ತ್ರಿಶೂರ್ ಮತ್ತು ಪತ್ತನಂತಿಟ್ಟದಲ್ಲಿ ಕ್ರಮವಾಗಿ 88 ಮತ್ತು 69 ನಿರಾಶ್ರಿತ ಶಿಬಿರಗಳನ್ನು ತೆರೆಯಲಾಗಿದೆ. ಈ ಶಿಬಿರಗಳಲ್ಲಿ ಒಟ್ಟು 12,195 ಜನರಿಗೆ ವಸತಿ ಕಲ್ಪಿಸಲಾಗಿದೆ ಎಂದು ಎಸ್‌ಡಿಎಂಎ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...