Homeಮುಖಪುಟಮಹಾರಾಷ್ಟ್ರದಲ್ಲಿ ಭಾರಿ ಮಳೆ: ಕೊಂಕಣ ರೈಲ್ವೆಯಲ್ಲಿ ಸಿಲುಕಿಕೊಂಡ 6,000 ಪ್ರಯಾಣಿಕರು

ಮಹಾರಾಷ್ಟ್ರದಲ್ಲಿ ಭಾರಿ ಮಳೆ: ಕೊಂಕಣ ರೈಲ್ವೆಯಲ್ಲಿ ಸಿಲುಕಿಕೊಂಡ 6,000 ಪ್ರಯಾಣಿಕರು

- Advertisement -
- Advertisement -

ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಭಾರಿ ಮಳೆಯಿಂದಾಗಿ ರತ್ನಾಗಿರಿ ಜಿಲ್ಲೆಯ ಕೊಂಕಣ ರೈಲ್ವೆ ಮಾರ್ಗದಲ್ಲಿ ಸುಮಾರು 6,000 ಪ್ರಯಾಣಿಕರು ರೈಲುಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರಿ ಮಳೆಯಿಂದಾಗಿ ರೈಲು ಹಳಿಗಳ ಮೇಲೆ ಗುಡ್ಡಕುಸಿತ ಸೇರಿದಂತೆ ವಿವಿಧ ರೀತಿಯಲ್ಲಿ ರೈಲು ಪ್ರಯಾಣಕ್ಕೆ ತೊಡಕುಂಟಾಗಿದ್ದು, ಕೊಂಕಣ ರೈಲು ಮಾರ್ಗದಲ್ಲಿ ಒಂಬತ್ತು ರೈಲುಗಳನ್ನು ವಿವಿಧ ಸುರಕ್ಷಿತ ನಿಲ್ದಾಣಗಳಲ್ಲಿ ನಿಲ್ಲಿಸಲಾಗಿದೆ. ಕೆಲವು ರೈಲುಗಳ ಮಾರ್ಗ ಬದಲಿಸಲಾಗಿದೆ.

ಈ ರೈಲುಗಳಲ್ಲಿರುವ ಪ್ರಯಾಣಿಕರು ಸಹ ಸುರಕ್ಷಿತರಾಗಿದ್ದಾರೆ. ಅವರೆಲ್ಲರಿಗೂ ಆಹಾರ ಮತ್ತು ನೀರು ನೀಡಲಾಗುತ್ತಿದೆ ಎಂದು ಕೊಂಕಣ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಭಾರಿ ಮಳೆಯಿಂದಾಗಿ ರತ್ನಾಗಿರಿಯ ಚಿಪ್ಲುನ್ ಮತ್ತು ಕಾಮಥೆ ನಿಲ್ದಾಣಗಳ ನಡುವಿನ ನದಿ ಸೇತುವೆಯಲ್ಲಿ ನೀರಿನ ಮಟ್ಟವು  ಅಪಾಯದ ಗುರುತುಗಿಂತ ಹೆಚ್ಚಾಗಿದೆ. ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ, ಈ ವಿಭಾಗದಲ್ಲಿ ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೊಂಕಣ ರೈಲ್ವೆ ಮಾರ್ಗದ ವಿವಿಧ ನಿಲ್ದಾಣಗಳಲ್ಲಿ 5,500 ದಿಂದ 6,000 ಪ್ರಯಾಣಿಕರು ರೈಲುಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು ರೈಲು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಚಿಪ್ಲುನ್‌ನಲ್ಲಿನ ಪ್ರವಾಹ ಪರಿಸ್ಥಿತಿಯಿಂದಾಗಿ, ಇದುವರೆಗೆ ಒಂಬತ್ತು ರೈಲುಗಳನ್ನು ಮಾರ್ಗ ಮಧ್ಯೆಯೇ ರೈಲು ನಿಲ್ದಾಣದಲ್ಲಿ ನಿಲ್ಲಿಸಲಾಗಿದೆ ಎಂದು ಕೊಂಕಣ ರೈಲ್ವೆ ಮಾಹಿತಿ ನೀಡಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಭಾರಿ ಮಳೆ, ಸಿಡಿಲಿಗೆ ಮಕ್ಕಳು , ಮಹಿಳೆಯರು ಸೇರಿ 40 ಮಂದಿ ಬಲಿ

ದಾದರ್-ಸಾವಂತ್ವಾಡಿ ವಿಶೇಷ ರೈಲು ಚಿಪ್ಲುನ್ ನಿಲ್ದಾಣದಲ್ಲಿ ಮತ್ತು ಸಿಎಸ್ಎಂಟಿ-ಮಡ್ಗಾಂವ್ ಜನತಾಬ್ಡಿ ವಿಶೇಷ ರೈಲನ್ನು ಖೇಡ್ ನಿಲ್ದಾಣದಲ್ಲಿ ನಿಲ್ಲಿಸಲಾಗಿದೆ. ಈ ರೈಲುಗಳಲ್ಲಿ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಕೊಂಕಣ ರೈಲ್ವೆ ವಕ್ತಾರ ಗಿರೀಶ್ ಕರಂಡಿಕರ್ ಹೇಳಿದ್ದಾರೆ.

ಕೆಲವು ಸವಾಲುಗಳ ಹೊರತಾಗಿಯೂ, ರೈಲುಗಳಲ್ಲಿ ಸಿಲುಕಿರುವ ಪ್ರಯಾಣಿಕರಿಗೆ ಆಹಾರ ಮತ್ತು ನೀರನ್ನು ಒದಗಿಸಲಾಗುತ್ತಿದೆ ಎಂದು ಅವರು ಹೇಳಿದರು. ರೈಲುಗಳಲ್ಲಿ ಸಿಕ್ಕಿಬಿದ್ದ ಎಲ್ಲ ಪ್ರಯಾಣಿಕರಿಗೆ ಚಹಾ, ತಿಂಡಿ ಮತ್ತು ನೀರು ಒದಗಿಸಲು ನಾವು ವ್ಯವಸ್ಥೆ ಮಾಡಿದ್ದೇವೆ ಎಂದು ಕರಂಡಿಕರ್ ಹೇಳಿದರು.

ಮಹಾರಾಷ್ಟ್ರ, ಗೋವಾ ಮತ್ತು ಕರ್ನಾಟಕ ಈ ಮೂರು ರಾಜ್ಯಗಳಲ್ಲಿ ಹರಡಿರುವ ಈ ಮಾರ್ಗವು ಸವಾಲಿನ ರೈಲು ಮಾರ್ಗವಾಗಿದೆ. ಏಕೆಂದರೆ ಇದು ಅನೇಕ ನದಿಗಳು, ಕಮರಿಗಳು ಮತ್ತು ಬೆಟ್ಟ-ಗುಡ್ಡಗಳ ನಡುವೆ ಹಾದುಹೋಗಿದೆ. ಕೊಂಕಣ ರೈಲ್ವೆ 756 ಕಿ.ಮೀ ಉದ್ದದ ಟ್ರ್ಯಾಕ್ ಹೊಂದಿದೆ.


ಇದನ್ನೂ ಓದಿ: ಮುಂಬೈ ಭಾರಿ ಮಳೆ: ಭೂಕುಸಿತದಿಂದ 23 ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...