Homeಮುಖಪುಟಮಹಾರಾಷ್ಟ್ರದಲ್ಲಿ ಭಾರಿ ಮಳೆ: ಕೊಂಕಣ ರೈಲ್ವೆಯಲ್ಲಿ ಸಿಲುಕಿಕೊಂಡ 6,000 ಪ್ರಯಾಣಿಕರು

ಮಹಾರಾಷ್ಟ್ರದಲ್ಲಿ ಭಾರಿ ಮಳೆ: ಕೊಂಕಣ ರೈಲ್ವೆಯಲ್ಲಿ ಸಿಲುಕಿಕೊಂಡ 6,000 ಪ್ರಯಾಣಿಕರು

- Advertisement -
- Advertisement -

ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಭಾರಿ ಮಳೆಯಿಂದಾಗಿ ರತ್ನಾಗಿರಿ ಜಿಲ್ಲೆಯ ಕೊಂಕಣ ರೈಲ್ವೆ ಮಾರ್ಗದಲ್ಲಿ ಸುಮಾರು 6,000 ಪ್ರಯಾಣಿಕರು ರೈಲುಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರಿ ಮಳೆಯಿಂದಾಗಿ ರೈಲು ಹಳಿಗಳ ಮೇಲೆ ಗುಡ್ಡಕುಸಿತ ಸೇರಿದಂತೆ ವಿವಿಧ ರೀತಿಯಲ್ಲಿ ರೈಲು ಪ್ರಯಾಣಕ್ಕೆ ತೊಡಕುಂಟಾಗಿದ್ದು, ಕೊಂಕಣ ರೈಲು ಮಾರ್ಗದಲ್ಲಿ ಒಂಬತ್ತು ರೈಲುಗಳನ್ನು ವಿವಿಧ ಸುರಕ್ಷಿತ ನಿಲ್ದಾಣಗಳಲ್ಲಿ ನಿಲ್ಲಿಸಲಾಗಿದೆ. ಕೆಲವು ರೈಲುಗಳ ಮಾರ್ಗ ಬದಲಿಸಲಾಗಿದೆ.

ಈ ರೈಲುಗಳಲ್ಲಿರುವ ಪ್ರಯಾಣಿಕರು ಸಹ ಸುರಕ್ಷಿತರಾಗಿದ್ದಾರೆ. ಅವರೆಲ್ಲರಿಗೂ ಆಹಾರ ಮತ್ತು ನೀರು ನೀಡಲಾಗುತ್ತಿದೆ ಎಂದು ಕೊಂಕಣ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಭಾರಿ ಮಳೆಯಿಂದಾಗಿ ರತ್ನಾಗಿರಿಯ ಚಿಪ್ಲುನ್ ಮತ್ತು ಕಾಮಥೆ ನಿಲ್ದಾಣಗಳ ನಡುವಿನ ನದಿ ಸೇತುವೆಯಲ್ಲಿ ನೀರಿನ ಮಟ್ಟವು  ಅಪಾಯದ ಗುರುತುಗಿಂತ ಹೆಚ್ಚಾಗಿದೆ. ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ, ಈ ವಿಭಾಗದಲ್ಲಿ ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೊಂಕಣ ರೈಲ್ವೆ ಮಾರ್ಗದ ವಿವಿಧ ನಿಲ್ದಾಣಗಳಲ್ಲಿ 5,500 ದಿಂದ 6,000 ಪ್ರಯಾಣಿಕರು ರೈಲುಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು ರೈಲು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಚಿಪ್ಲುನ್‌ನಲ್ಲಿನ ಪ್ರವಾಹ ಪರಿಸ್ಥಿತಿಯಿಂದಾಗಿ, ಇದುವರೆಗೆ ಒಂಬತ್ತು ರೈಲುಗಳನ್ನು ಮಾರ್ಗ ಮಧ್ಯೆಯೇ ರೈಲು ನಿಲ್ದಾಣದಲ್ಲಿ ನಿಲ್ಲಿಸಲಾಗಿದೆ ಎಂದು ಕೊಂಕಣ ರೈಲ್ವೆ ಮಾಹಿತಿ ನೀಡಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಭಾರಿ ಮಳೆ, ಸಿಡಿಲಿಗೆ ಮಕ್ಕಳು , ಮಹಿಳೆಯರು ಸೇರಿ 40 ಮಂದಿ ಬಲಿ

ದಾದರ್-ಸಾವಂತ್ವಾಡಿ ವಿಶೇಷ ರೈಲು ಚಿಪ್ಲುನ್ ನಿಲ್ದಾಣದಲ್ಲಿ ಮತ್ತು ಸಿಎಸ್ಎಂಟಿ-ಮಡ್ಗಾಂವ್ ಜನತಾಬ್ಡಿ ವಿಶೇಷ ರೈಲನ್ನು ಖೇಡ್ ನಿಲ್ದಾಣದಲ್ಲಿ ನಿಲ್ಲಿಸಲಾಗಿದೆ. ಈ ರೈಲುಗಳಲ್ಲಿ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಕೊಂಕಣ ರೈಲ್ವೆ ವಕ್ತಾರ ಗಿರೀಶ್ ಕರಂಡಿಕರ್ ಹೇಳಿದ್ದಾರೆ.

ಕೆಲವು ಸವಾಲುಗಳ ಹೊರತಾಗಿಯೂ, ರೈಲುಗಳಲ್ಲಿ ಸಿಲುಕಿರುವ ಪ್ರಯಾಣಿಕರಿಗೆ ಆಹಾರ ಮತ್ತು ನೀರನ್ನು ಒದಗಿಸಲಾಗುತ್ತಿದೆ ಎಂದು ಅವರು ಹೇಳಿದರು. ರೈಲುಗಳಲ್ಲಿ ಸಿಕ್ಕಿಬಿದ್ದ ಎಲ್ಲ ಪ್ರಯಾಣಿಕರಿಗೆ ಚಹಾ, ತಿಂಡಿ ಮತ್ತು ನೀರು ಒದಗಿಸಲು ನಾವು ವ್ಯವಸ್ಥೆ ಮಾಡಿದ್ದೇವೆ ಎಂದು ಕರಂಡಿಕರ್ ಹೇಳಿದರು.

ಮಹಾರಾಷ್ಟ್ರ, ಗೋವಾ ಮತ್ತು ಕರ್ನಾಟಕ ಈ ಮೂರು ರಾಜ್ಯಗಳಲ್ಲಿ ಹರಡಿರುವ ಈ ಮಾರ್ಗವು ಸವಾಲಿನ ರೈಲು ಮಾರ್ಗವಾಗಿದೆ. ಏಕೆಂದರೆ ಇದು ಅನೇಕ ನದಿಗಳು, ಕಮರಿಗಳು ಮತ್ತು ಬೆಟ್ಟ-ಗುಡ್ಡಗಳ ನಡುವೆ ಹಾದುಹೋಗಿದೆ. ಕೊಂಕಣ ರೈಲ್ವೆ 756 ಕಿ.ಮೀ ಉದ್ದದ ಟ್ರ್ಯಾಕ್ ಹೊಂದಿದೆ.


ಇದನ್ನೂ ಓದಿ: ಮುಂಬೈ ಭಾರಿ ಮಳೆ: ಭೂಕುಸಿತದಿಂದ 23 ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...