Homeಕರ್ನಾಟಕJNU ದಾಳಿ ಖಂಡಿಸಿ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ: ಹರಿದು ಬಂದ ಯುವಜನತೆ...

JNU ದಾಳಿ ಖಂಡಿಸಿ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ: ಹರಿದು ಬಂದ ಯುವಜನತೆ…

- Advertisement -
- Advertisement -

JNU ದಾಳಿ ಖಂಡಿಸಿ, ಗೂಂಡಾಗಳನ್ನು ಬಂಧಿಸುವಂತೆ ಆಗ್ರಹಿಸಿದ ದೇಶಾದ್ಯಂತ ಸಾವಿರಾರು ಕಡೆ ಹೋರಾಟಗಳು ನಡೆದಿವೆ. ಮುಂಬೈನಲ್ಲಿ 40 ಗಂಟೆಗಳಿಗೂ ಅಧಿಕ ನಿರಂತರ ಧರಣಿ ನಡೆದಿದೆ. ಇದೇ ಮಾದರಿಯಲ್ಲಿ ಬೆಂಗಳೂರಿನಲ್ಲಿಯೂ ಸಹ ಮಂಗಳವಾರ ಸಂಜೆಯಿಂದ ಆಹೋರಾತ್ರಿ ಧರಣಿ ಆರಂಭವಾಗಿದ್ದು ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಲಾಗಿದೆ.

ಮಂಗಳವಾರ ಮಧ್ಯಾಹ್ನ 3 ಗಂಟೆಗ ವೇಳೆಗೆ ಧರಣಿ ಮಾಡಲು ನಿರ್ಧರಿಸಿ ಕರೆ ಕೊಟ್ಟಿದ್ದೆ ತಡೆ ಸಂಜೆ 6ಗಂಟೆಯ ವೇಳೆಗೆ ನೂರಾರು ಯುವಜನರು ಒಟ್ಟುಗೂಡಿದ್ದಾರೆ. ಸುಮಾರು 300ಕ್ಕೂ ಹೆಚ್ಚು ಜನರು ರಾತ್ರಿಯೆಲ್ಲಾ ಘೋಷಣೆ, ಹಾಡು, ಕವನ ವಾಚನ ಸೇರಿದಂತೆ ವಿನೂತನವಾಗಿ ಪ್ರತಿಭಟಿಸುವ ಮೂಲಕ ಜೆಎನ್‌ಯು ಹಿಂಸೆಯನ್ನು ಜೊತೆಗೆ ಕೇಂದ್ರ ಸರ್ಕಾರದ ಸಿಎಎ, ಎನ್‌ಆರ್‌ಸಿಯನ್ನು ವಿರೋಧಿಸಿದ್ದಾರೆ.

 

ಸಂಘಟಕರಲ್ಲಿ ಒಬ್ಬರಾದ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸರೋವರ್‌ ಬೆಂಕಿಕೇರೆ ಮಾತನಾಡಿ, “ಈಗ ಸಮಯ ಬೆಳಗಿನ ಜಾವ 3 ಗಂಟೆ. ಇಷ್ಟೊಂದು ಜನ ಎಲ್ಲೆಲ್ಲಿಂದ ಬಂದಿದ್ದಾರೆ ಗೊತ್ತಿಲ್ಲ. ಯಾವುದೇ ತಯಾರಿ ಇಲ್ಲದೆ ಮಧ್ಯಾಹ್ನ 3 ಗಂಟೆಯ ನಂತರ ಸಾಮಾಜಿಕ ಜಾಲತಾಣದಲ್ಲಿ ನಾವು ಕರೆ ಕೊಟ್ಟಿದ್ದು ಅಷ್ಟೇ. ಸಂಜೆ 6 ಗಂಟೆಗೆ ಸಾವಿರಾರು ವಿದ್ಯಾರ್ಥಿ-ಯುವಜನರಿಂದ ಶುರುವಾದ ಪ್ರತಿಭಟನೆಯು ಬೆಳಗಿನ ಜಾವ 3 ಗಂಟೆ ದಾಟಿದರು ಒಂದೇ ಒಂದು ನಿಮಿಷವು ಹಾಡು, ಕವನ, ಭಾಷಣ, ಘೋಷಣೆಗಳು ನಿಂತೆಯಿಲ್ಲ! ಈ ಯುವಜನರ ಸ್ಥಳದಲ್ಲೆ ಅದೆಷ್ಟೋ ಕವನಗಳನ್ನು ಬರೆದಿದ್ದಾರೆ. ಒಂದೊಂದು ಕವನವೂ ಮೈ ಜುಮ್ ಅನಿಸುವಂಥದ್ದಾಗಿದೆ.. ವಿದ್ಯಾರ್ಥಿ ಹೋರಾಟವು ಈ ದೇಶವನ್ನು ಖಂಡಿತವಾಗಿಯೂ ಸಂವಿಧಾನ ಆಶಯದ ಕಡೆ ತಗೆದುಕೊಂಡು ಹೋಗಲಿದೆ. ಇಂದು ನಡೆಯಲಿರುವ ರೈತ, ಕಾರ್ಮಿಕರ ಮುಷ್ಕರಕ್ಕೆ ವಿದ್ಯಾರ್ಥಿ ಹೋರಾಟವೂ ಬೆಂಬಲಿಸುತ್ತದೆ.” ಎಂದಿದ್ದಾರೆ.

ಭಾರತದ ತ್ರಿವರ್ಣ ಧ್ವಜಗಳನ್ನು ಹಿಡಿದಿದ್ದ ಯುವಜನರು ಸಂವಿಧಾನದ ಪೀಠಿಕೆಯನ್ನು ಒಟ್ಟಾಗಿ ಓದುವ ಮೂಲಕ ಸಂವಿಧಾನ ಆಶಯಗಳನ್ನು ಎತ್ತಿ ಹಿಡಿಯುತ್ತೇವೆ ಎಂದು ಪ್ರತಿಜ್ಞೆ ಮಾಡಿದರು.

ಅಜಾದಿ ಘೋಷಣೆಗಳು ಮೊಳಗಿದ್ದಲ್ಲದೇ ಎಬಿವಿಪಿಯ ವಿರುದ್ಧವೂ ವಿದ್ಯಾರ್ಥಿಗಳು ಘೋಷಣೆ ಕೂಗಿದರು. ಪ್ರತಿಭಟನೆ ಇಂದು ಸಂಜೆ 6 ಗಂಟೆಯವರೆಗೂ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾನವರು ಬದುಕಲಿಕ್ಕೆ ಆಶ್ರಯದಾತ ವಾಗಿರುವ
    ಭಾರತದ ಐಕ್ಯತೆಯನ್ನು ಮತ್ತು ನಾಗರೀಕರ ಹಿತಕಾಯುವ ಸಲುವಾಗಿ
    ಬಾಬಾ ಸಾಹೇಬರನ್ನು ಅವಮಾನಿಸಿದ ಕ್ಕಾಗಿ ನನ್ನಂತಹ ಜ್ಞಾನ ತುಂಬಿಕೊಂಡಿರುವ ಈ ರೀತಿ ತೊಂದರೆ ಮಾಡಿದ್ದಾರೆ ಆರ್ಯರು ಎಂದಾದರೆ ಮನುವಾದಿಗಳ
    ಕೊಡುವ ನೋವಿಗೆ ಗೊತ್ತಾಗಬಾರದೆಂದು ನಿರಂತರವಾಗಿ ಗಾಂಧಿ ಗೋವಳ ಕಾರ್ ಇನ್ನೂ ಅನೇಕ ಅನೇಕ ಜನರ ಏಕಾಂಗಿ ಹೋರಾಟ ಮಾಡಿ ಪ್ರತಿಯೊಬ್ಬರ
    ಏಳಿಗೆಗಾಗಿ ನ್ಯಾಯ ಸಿಕ್ಕುತ್ತಿರುವ ಗ್ರಂಥ ಎಂದರೆ ಭಗವದ್ಗೀತೆ ಯಿಂದಲ್ಲ ತಿಳಿದುಕೊಳ್ಳಲೇ ಬೇಕಾದ ವಿಷಯ

    ಅಂಬೇಡ್ಕರರ ಸಂವಿಧಾನ ಭಾರತಕ್ಕೆ ಸರ್ವಶ್ರೇಷ್ಠ ಗ್ರಂಥವಾಗಿದೆ ಪ್ರತಿಯೊಬ್ಬರೂ ಸಹ ಸಂವಿಧಾನದ ಆಶ್ರಯ ಪಡೆದು ಅಂಬೇಡ್ಕರರನ್ನು ಮಾತ್ರ ಜಾತಿಗೆ ಹೊಂದಾಣಿಕೆ ಮಾಡಿ ನೋಡುವಂತ ಮನುವಾದಿಗಳ ಹಿಡಿತದಲ್ಲಿ ಭಾರತದ ಮೂಲನಿವಾಸಿಗಳು ಬದುಕಬೇಕಾದ ದುರ್ದೈವ ನಮ್ಮದಾಗಿದೆ
    ಜೈ ಭೀಮ್ ಜೈ ಸಂವಿಧಾನ ಎಂದರೆ ತಪ್ಪಾಗಲಾರದು

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...