Homeಕರ್ನಾಟಕJNU ದಾಳಿ ಖಂಡಿಸಿ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ: ಹರಿದು ಬಂದ ಯುವಜನತೆ...

JNU ದಾಳಿ ಖಂಡಿಸಿ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ: ಹರಿದು ಬಂದ ಯುವಜನತೆ…

- Advertisement -
- Advertisement -

JNU ದಾಳಿ ಖಂಡಿಸಿ, ಗೂಂಡಾಗಳನ್ನು ಬಂಧಿಸುವಂತೆ ಆಗ್ರಹಿಸಿದ ದೇಶಾದ್ಯಂತ ಸಾವಿರಾರು ಕಡೆ ಹೋರಾಟಗಳು ನಡೆದಿವೆ. ಮುಂಬೈನಲ್ಲಿ 40 ಗಂಟೆಗಳಿಗೂ ಅಧಿಕ ನಿರಂತರ ಧರಣಿ ನಡೆದಿದೆ. ಇದೇ ಮಾದರಿಯಲ್ಲಿ ಬೆಂಗಳೂರಿನಲ್ಲಿಯೂ ಸಹ ಮಂಗಳವಾರ ಸಂಜೆಯಿಂದ ಆಹೋರಾತ್ರಿ ಧರಣಿ ಆರಂಭವಾಗಿದ್ದು ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಲಾಗಿದೆ.

ಮಂಗಳವಾರ ಮಧ್ಯಾಹ್ನ 3 ಗಂಟೆಗ ವೇಳೆಗೆ ಧರಣಿ ಮಾಡಲು ನಿರ್ಧರಿಸಿ ಕರೆ ಕೊಟ್ಟಿದ್ದೆ ತಡೆ ಸಂಜೆ 6ಗಂಟೆಯ ವೇಳೆಗೆ ನೂರಾರು ಯುವಜನರು ಒಟ್ಟುಗೂಡಿದ್ದಾರೆ. ಸುಮಾರು 300ಕ್ಕೂ ಹೆಚ್ಚು ಜನರು ರಾತ್ರಿಯೆಲ್ಲಾ ಘೋಷಣೆ, ಹಾಡು, ಕವನ ವಾಚನ ಸೇರಿದಂತೆ ವಿನೂತನವಾಗಿ ಪ್ರತಿಭಟಿಸುವ ಮೂಲಕ ಜೆಎನ್‌ಯು ಹಿಂಸೆಯನ್ನು ಜೊತೆಗೆ ಕೇಂದ್ರ ಸರ್ಕಾರದ ಸಿಎಎ, ಎನ್‌ಆರ್‌ಸಿಯನ್ನು ವಿರೋಧಿಸಿದ್ದಾರೆ.

 

ಸಂಘಟಕರಲ್ಲಿ ಒಬ್ಬರಾದ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸರೋವರ್‌ ಬೆಂಕಿಕೇರೆ ಮಾತನಾಡಿ, “ಈಗ ಸಮಯ ಬೆಳಗಿನ ಜಾವ 3 ಗಂಟೆ. ಇಷ್ಟೊಂದು ಜನ ಎಲ್ಲೆಲ್ಲಿಂದ ಬಂದಿದ್ದಾರೆ ಗೊತ್ತಿಲ್ಲ. ಯಾವುದೇ ತಯಾರಿ ಇಲ್ಲದೆ ಮಧ್ಯಾಹ್ನ 3 ಗಂಟೆಯ ನಂತರ ಸಾಮಾಜಿಕ ಜಾಲತಾಣದಲ್ಲಿ ನಾವು ಕರೆ ಕೊಟ್ಟಿದ್ದು ಅಷ್ಟೇ. ಸಂಜೆ 6 ಗಂಟೆಗೆ ಸಾವಿರಾರು ವಿದ್ಯಾರ್ಥಿ-ಯುವಜನರಿಂದ ಶುರುವಾದ ಪ್ರತಿಭಟನೆಯು ಬೆಳಗಿನ ಜಾವ 3 ಗಂಟೆ ದಾಟಿದರು ಒಂದೇ ಒಂದು ನಿಮಿಷವು ಹಾಡು, ಕವನ, ಭಾಷಣ, ಘೋಷಣೆಗಳು ನಿಂತೆಯಿಲ್ಲ! ಈ ಯುವಜನರ ಸ್ಥಳದಲ್ಲೆ ಅದೆಷ್ಟೋ ಕವನಗಳನ್ನು ಬರೆದಿದ್ದಾರೆ. ಒಂದೊಂದು ಕವನವೂ ಮೈ ಜುಮ್ ಅನಿಸುವಂಥದ್ದಾಗಿದೆ.. ವಿದ್ಯಾರ್ಥಿ ಹೋರಾಟವು ಈ ದೇಶವನ್ನು ಖಂಡಿತವಾಗಿಯೂ ಸಂವಿಧಾನ ಆಶಯದ ಕಡೆ ತಗೆದುಕೊಂಡು ಹೋಗಲಿದೆ. ಇಂದು ನಡೆಯಲಿರುವ ರೈತ, ಕಾರ್ಮಿಕರ ಮುಷ್ಕರಕ್ಕೆ ವಿದ್ಯಾರ್ಥಿ ಹೋರಾಟವೂ ಬೆಂಬಲಿಸುತ್ತದೆ.” ಎಂದಿದ್ದಾರೆ.

ಭಾರತದ ತ್ರಿವರ್ಣ ಧ್ವಜಗಳನ್ನು ಹಿಡಿದಿದ್ದ ಯುವಜನರು ಸಂವಿಧಾನದ ಪೀಠಿಕೆಯನ್ನು ಒಟ್ಟಾಗಿ ಓದುವ ಮೂಲಕ ಸಂವಿಧಾನ ಆಶಯಗಳನ್ನು ಎತ್ತಿ ಹಿಡಿಯುತ್ತೇವೆ ಎಂದು ಪ್ರತಿಜ್ಞೆ ಮಾಡಿದರು.

ಅಜಾದಿ ಘೋಷಣೆಗಳು ಮೊಳಗಿದ್ದಲ್ಲದೇ ಎಬಿವಿಪಿಯ ವಿರುದ್ಧವೂ ವಿದ್ಯಾರ್ಥಿಗಳು ಘೋಷಣೆ ಕೂಗಿದರು. ಪ್ರತಿಭಟನೆ ಇಂದು ಸಂಜೆ 6 ಗಂಟೆಯವರೆಗೂ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾನವರು ಬದುಕಲಿಕ್ಕೆ ಆಶ್ರಯದಾತ ವಾಗಿರುವ
    ಭಾರತದ ಐಕ್ಯತೆಯನ್ನು ಮತ್ತು ನಾಗರೀಕರ ಹಿತಕಾಯುವ ಸಲುವಾಗಿ
    ಬಾಬಾ ಸಾಹೇಬರನ್ನು ಅವಮಾನಿಸಿದ ಕ್ಕಾಗಿ ನನ್ನಂತಹ ಜ್ಞಾನ ತುಂಬಿಕೊಂಡಿರುವ ಈ ರೀತಿ ತೊಂದರೆ ಮಾಡಿದ್ದಾರೆ ಆರ್ಯರು ಎಂದಾದರೆ ಮನುವಾದಿಗಳ
    ಕೊಡುವ ನೋವಿಗೆ ಗೊತ್ತಾಗಬಾರದೆಂದು ನಿರಂತರವಾಗಿ ಗಾಂಧಿ ಗೋವಳ ಕಾರ್ ಇನ್ನೂ ಅನೇಕ ಅನೇಕ ಜನರ ಏಕಾಂಗಿ ಹೋರಾಟ ಮಾಡಿ ಪ್ರತಿಯೊಬ್ಬರ
    ಏಳಿಗೆಗಾಗಿ ನ್ಯಾಯ ಸಿಕ್ಕುತ್ತಿರುವ ಗ್ರಂಥ ಎಂದರೆ ಭಗವದ್ಗೀತೆ ಯಿಂದಲ್ಲ ತಿಳಿದುಕೊಳ್ಳಲೇ ಬೇಕಾದ ವಿಷಯ

    ಅಂಬೇಡ್ಕರರ ಸಂವಿಧಾನ ಭಾರತಕ್ಕೆ ಸರ್ವಶ್ರೇಷ್ಠ ಗ್ರಂಥವಾಗಿದೆ ಪ್ರತಿಯೊಬ್ಬರೂ ಸಹ ಸಂವಿಧಾನದ ಆಶ್ರಯ ಪಡೆದು ಅಂಬೇಡ್ಕರರನ್ನು ಮಾತ್ರ ಜಾತಿಗೆ ಹೊಂದಾಣಿಕೆ ಮಾಡಿ ನೋಡುವಂತ ಮನುವಾದಿಗಳ ಹಿಡಿತದಲ್ಲಿ ಭಾರತದ ಮೂಲನಿವಾಸಿಗಳು ಬದುಕಬೇಕಾದ ದುರ್ದೈವ ನಮ್ಮದಾಗಿದೆ
    ಜೈ ಭೀಮ್ ಜೈ ಸಂವಿಧಾನ ಎಂದರೆ ತಪ್ಪಾಗಲಾರದು

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...