Homeಕರ್ನಾಟಕJNU ದಾಳಿ ಖಂಡಿಸಿ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ: ಹರಿದು ಬಂದ ಯುವಜನತೆ...

JNU ದಾಳಿ ಖಂಡಿಸಿ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ: ಹರಿದು ಬಂದ ಯುವಜನತೆ…

- Advertisement -
- Advertisement -

JNU ದಾಳಿ ಖಂಡಿಸಿ, ಗೂಂಡಾಗಳನ್ನು ಬಂಧಿಸುವಂತೆ ಆಗ್ರಹಿಸಿದ ದೇಶಾದ್ಯಂತ ಸಾವಿರಾರು ಕಡೆ ಹೋರಾಟಗಳು ನಡೆದಿವೆ. ಮುಂಬೈನಲ್ಲಿ 40 ಗಂಟೆಗಳಿಗೂ ಅಧಿಕ ನಿರಂತರ ಧರಣಿ ನಡೆದಿದೆ. ಇದೇ ಮಾದರಿಯಲ್ಲಿ ಬೆಂಗಳೂರಿನಲ್ಲಿಯೂ ಸಹ ಮಂಗಳವಾರ ಸಂಜೆಯಿಂದ ಆಹೋರಾತ್ರಿ ಧರಣಿ ಆರಂಭವಾಗಿದ್ದು ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಲಾಗಿದೆ.

ಮಂಗಳವಾರ ಮಧ್ಯಾಹ್ನ 3 ಗಂಟೆಗ ವೇಳೆಗೆ ಧರಣಿ ಮಾಡಲು ನಿರ್ಧರಿಸಿ ಕರೆ ಕೊಟ್ಟಿದ್ದೆ ತಡೆ ಸಂಜೆ 6ಗಂಟೆಯ ವೇಳೆಗೆ ನೂರಾರು ಯುವಜನರು ಒಟ್ಟುಗೂಡಿದ್ದಾರೆ. ಸುಮಾರು 300ಕ್ಕೂ ಹೆಚ್ಚು ಜನರು ರಾತ್ರಿಯೆಲ್ಲಾ ಘೋಷಣೆ, ಹಾಡು, ಕವನ ವಾಚನ ಸೇರಿದಂತೆ ವಿನೂತನವಾಗಿ ಪ್ರತಿಭಟಿಸುವ ಮೂಲಕ ಜೆಎನ್‌ಯು ಹಿಂಸೆಯನ್ನು ಜೊತೆಗೆ ಕೇಂದ್ರ ಸರ್ಕಾರದ ಸಿಎಎ, ಎನ್‌ಆರ್‌ಸಿಯನ್ನು ವಿರೋಧಿಸಿದ್ದಾರೆ.

 

ಸಂಘಟಕರಲ್ಲಿ ಒಬ್ಬರಾದ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸರೋವರ್‌ ಬೆಂಕಿಕೇರೆ ಮಾತನಾಡಿ, “ಈಗ ಸಮಯ ಬೆಳಗಿನ ಜಾವ 3 ಗಂಟೆ. ಇಷ್ಟೊಂದು ಜನ ಎಲ್ಲೆಲ್ಲಿಂದ ಬಂದಿದ್ದಾರೆ ಗೊತ್ತಿಲ್ಲ. ಯಾವುದೇ ತಯಾರಿ ಇಲ್ಲದೆ ಮಧ್ಯಾಹ್ನ 3 ಗಂಟೆಯ ನಂತರ ಸಾಮಾಜಿಕ ಜಾಲತಾಣದಲ್ಲಿ ನಾವು ಕರೆ ಕೊಟ್ಟಿದ್ದು ಅಷ್ಟೇ. ಸಂಜೆ 6 ಗಂಟೆಗೆ ಸಾವಿರಾರು ವಿದ್ಯಾರ್ಥಿ-ಯುವಜನರಿಂದ ಶುರುವಾದ ಪ್ರತಿಭಟನೆಯು ಬೆಳಗಿನ ಜಾವ 3 ಗಂಟೆ ದಾಟಿದರು ಒಂದೇ ಒಂದು ನಿಮಿಷವು ಹಾಡು, ಕವನ, ಭಾಷಣ, ಘೋಷಣೆಗಳು ನಿಂತೆಯಿಲ್ಲ! ಈ ಯುವಜನರ ಸ್ಥಳದಲ್ಲೆ ಅದೆಷ್ಟೋ ಕವನಗಳನ್ನು ಬರೆದಿದ್ದಾರೆ. ಒಂದೊಂದು ಕವನವೂ ಮೈ ಜುಮ್ ಅನಿಸುವಂಥದ್ದಾಗಿದೆ.. ವಿದ್ಯಾರ್ಥಿ ಹೋರಾಟವು ಈ ದೇಶವನ್ನು ಖಂಡಿತವಾಗಿಯೂ ಸಂವಿಧಾನ ಆಶಯದ ಕಡೆ ತಗೆದುಕೊಂಡು ಹೋಗಲಿದೆ. ಇಂದು ನಡೆಯಲಿರುವ ರೈತ, ಕಾರ್ಮಿಕರ ಮುಷ್ಕರಕ್ಕೆ ವಿದ್ಯಾರ್ಥಿ ಹೋರಾಟವೂ ಬೆಂಬಲಿಸುತ್ತದೆ.” ಎಂದಿದ್ದಾರೆ.

ಭಾರತದ ತ್ರಿವರ್ಣ ಧ್ವಜಗಳನ್ನು ಹಿಡಿದಿದ್ದ ಯುವಜನರು ಸಂವಿಧಾನದ ಪೀಠಿಕೆಯನ್ನು ಒಟ್ಟಾಗಿ ಓದುವ ಮೂಲಕ ಸಂವಿಧಾನ ಆಶಯಗಳನ್ನು ಎತ್ತಿ ಹಿಡಿಯುತ್ತೇವೆ ಎಂದು ಪ್ರತಿಜ್ಞೆ ಮಾಡಿದರು.

ಅಜಾದಿ ಘೋಷಣೆಗಳು ಮೊಳಗಿದ್ದಲ್ಲದೇ ಎಬಿವಿಪಿಯ ವಿರುದ್ಧವೂ ವಿದ್ಯಾರ್ಥಿಗಳು ಘೋಷಣೆ ಕೂಗಿದರು. ಪ್ರತಿಭಟನೆ ಇಂದು ಸಂಜೆ 6 ಗಂಟೆಯವರೆಗೂ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾನವರು ಬದುಕಲಿಕ್ಕೆ ಆಶ್ರಯದಾತ ವಾಗಿರುವ
    ಭಾರತದ ಐಕ್ಯತೆಯನ್ನು ಮತ್ತು ನಾಗರೀಕರ ಹಿತಕಾಯುವ ಸಲುವಾಗಿ
    ಬಾಬಾ ಸಾಹೇಬರನ್ನು ಅವಮಾನಿಸಿದ ಕ್ಕಾಗಿ ನನ್ನಂತಹ ಜ್ಞಾನ ತುಂಬಿಕೊಂಡಿರುವ ಈ ರೀತಿ ತೊಂದರೆ ಮಾಡಿದ್ದಾರೆ ಆರ್ಯರು ಎಂದಾದರೆ ಮನುವಾದಿಗಳ
    ಕೊಡುವ ನೋವಿಗೆ ಗೊತ್ತಾಗಬಾರದೆಂದು ನಿರಂತರವಾಗಿ ಗಾಂಧಿ ಗೋವಳ ಕಾರ್ ಇನ್ನೂ ಅನೇಕ ಅನೇಕ ಜನರ ಏಕಾಂಗಿ ಹೋರಾಟ ಮಾಡಿ ಪ್ರತಿಯೊಬ್ಬರ
    ಏಳಿಗೆಗಾಗಿ ನ್ಯಾಯ ಸಿಕ್ಕುತ್ತಿರುವ ಗ್ರಂಥ ಎಂದರೆ ಭಗವದ್ಗೀತೆ ಯಿಂದಲ್ಲ ತಿಳಿದುಕೊಳ್ಳಲೇ ಬೇಕಾದ ವಿಷಯ

    ಅಂಬೇಡ್ಕರರ ಸಂವಿಧಾನ ಭಾರತಕ್ಕೆ ಸರ್ವಶ್ರೇಷ್ಠ ಗ್ರಂಥವಾಗಿದೆ ಪ್ರತಿಯೊಬ್ಬರೂ ಸಹ ಸಂವಿಧಾನದ ಆಶ್ರಯ ಪಡೆದು ಅಂಬೇಡ್ಕರರನ್ನು ಮಾತ್ರ ಜಾತಿಗೆ ಹೊಂದಾಣಿಕೆ ಮಾಡಿ ನೋಡುವಂತ ಮನುವಾದಿಗಳ ಹಿಡಿತದಲ್ಲಿ ಭಾರತದ ಮೂಲನಿವಾಸಿಗಳು ಬದುಕಬೇಕಾದ ದುರ್ದೈವ ನಮ್ಮದಾಗಿದೆ
    ಜೈ ಭೀಮ್ ಜೈ ಸಂವಿಧಾನ ಎಂದರೆ ತಪ್ಪಾಗಲಾರದು

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...