Homeಕರ್ನಾಟಕJNU ದಾಳಿ ಖಂಡಿಸಿ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ: ಹರಿದು ಬಂದ ಯುವಜನತೆ...

JNU ದಾಳಿ ಖಂಡಿಸಿ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ: ಹರಿದು ಬಂದ ಯುವಜನತೆ…

- Advertisement -
- Advertisement -

JNU ದಾಳಿ ಖಂಡಿಸಿ, ಗೂಂಡಾಗಳನ್ನು ಬಂಧಿಸುವಂತೆ ಆಗ್ರಹಿಸಿದ ದೇಶಾದ್ಯಂತ ಸಾವಿರಾರು ಕಡೆ ಹೋರಾಟಗಳು ನಡೆದಿವೆ. ಮುಂಬೈನಲ್ಲಿ 40 ಗಂಟೆಗಳಿಗೂ ಅಧಿಕ ನಿರಂತರ ಧರಣಿ ನಡೆದಿದೆ. ಇದೇ ಮಾದರಿಯಲ್ಲಿ ಬೆಂಗಳೂರಿನಲ್ಲಿಯೂ ಸಹ ಮಂಗಳವಾರ ಸಂಜೆಯಿಂದ ಆಹೋರಾತ್ರಿ ಧರಣಿ ಆರಂಭವಾಗಿದ್ದು ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಲಾಗಿದೆ.

ಮಂಗಳವಾರ ಮಧ್ಯಾಹ್ನ 3 ಗಂಟೆಗ ವೇಳೆಗೆ ಧರಣಿ ಮಾಡಲು ನಿರ್ಧರಿಸಿ ಕರೆ ಕೊಟ್ಟಿದ್ದೆ ತಡೆ ಸಂಜೆ 6ಗಂಟೆಯ ವೇಳೆಗೆ ನೂರಾರು ಯುವಜನರು ಒಟ್ಟುಗೂಡಿದ್ದಾರೆ. ಸುಮಾರು 300ಕ್ಕೂ ಹೆಚ್ಚು ಜನರು ರಾತ್ರಿಯೆಲ್ಲಾ ಘೋಷಣೆ, ಹಾಡು, ಕವನ ವಾಚನ ಸೇರಿದಂತೆ ವಿನೂತನವಾಗಿ ಪ್ರತಿಭಟಿಸುವ ಮೂಲಕ ಜೆಎನ್‌ಯು ಹಿಂಸೆಯನ್ನು ಜೊತೆಗೆ ಕೇಂದ್ರ ಸರ್ಕಾರದ ಸಿಎಎ, ಎನ್‌ಆರ್‌ಸಿಯನ್ನು ವಿರೋಧಿಸಿದ್ದಾರೆ.

 

ಸಂಘಟಕರಲ್ಲಿ ಒಬ್ಬರಾದ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸರೋವರ್‌ ಬೆಂಕಿಕೇರೆ ಮಾತನಾಡಿ, “ಈಗ ಸಮಯ ಬೆಳಗಿನ ಜಾವ 3 ಗಂಟೆ. ಇಷ್ಟೊಂದು ಜನ ಎಲ್ಲೆಲ್ಲಿಂದ ಬಂದಿದ್ದಾರೆ ಗೊತ್ತಿಲ್ಲ. ಯಾವುದೇ ತಯಾರಿ ಇಲ್ಲದೆ ಮಧ್ಯಾಹ್ನ 3 ಗಂಟೆಯ ನಂತರ ಸಾಮಾಜಿಕ ಜಾಲತಾಣದಲ್ಲಿ ನಾವು ಕರೆ ಕೊಟ್ಟಿದ್ದು ಅಷ್ಟೇ. ಸಂಜೆ 6 ಗಂಟೆಗೆ ಸಾವಿರಾರು ವಿದ್ಯಾರ್ಥಿ-ಯುವಜನರಿಂದ ಶುರುವಾದ ಪ್ರತಿಭಟನೆಯು ಬೆಳಗಿನ ಜಾವ 3 ಗಂಟೆ ದಾಟಿದರು ಒಂದೇ ಒಂದು ನಿಮಿಷವು ಹಾಡು, ಕವನ, ಭಾಷಣ, ಘೋಷಣೆಗಳು ನಿಂತೆಯಿಲ್ಲ! ಈ ಯುವಜನರ ಸ್ಥಳದಲ್ಲೆ ಅದೆಷ್ಟೋ ಕವನಗಳನ್ನು ಬರೆದಿದ್ದಾರೆ. ಒಂದೊಂದು ಕವನವೂ ಮೈ ಜುಮ್ ಅನಿಸುವಂಥದ್ದಾಗಿದೆ.. ವಿದ್ಯಾರ್ಥಿ ಹೋರಾಟವು ಈ ದೇಶವನ್ನು ಖಂಡಿತವಾಗಿಯೂ ಸಂವಿಧಾನ ಆಶಯದ ಕಡೆ ತಗೆದುಕೊಂಡು ಹೋಗಲಿದೆ. ಇಂದು ನಡೆಯಲಿರುವ ರೈತ, ಕಾರ್ಮಿಕರ ಮುಷ್ಕರಕ್ಕೆ ವಿದ್ಯಾರ್ಥಿ ಹೋರಾಟವೂ ಬೆಂಬಲಿಸುತ್ತದೆ.” ಎಂದಿದ್ದಾರೆ.

ಭಾರತದ ತ್ರಿವರ್ಣ ಧ್ವಜಗಳನ್ನು ಹಿಡಿದಿದ್ದ ಯುವಜನರು ಸಂವಿಧಾನದ ಪೀಠಿಕೆಯನ್ನು ಒಟ್ಟಾಗಿ ಓದುವ ಮೂಲಕ ಸಂವಿಧಾನ ಆಶಯಗಳನ್ನು ಎತ್ತಿ ಹಿಡಿಯುತ್ತೇವೆ ಎಂದು ಪ್ರತಿಜ್ಞೆ ಮಾಡಿದರು.

ಅಜಾದಿ ಘೋಷಣೆಗಳು ಮೊಳಗಿದ್ದಲ್ಲದೇ ಎಬಿವಿಪಿಯ ವಿರುದ್ಧವೂ ವಿದ್ಯಾರ್ಥಿಗಳು ಘೋಷಣೆ ಕೂಗಿದರು. ಪ್ರತಿಭಟನೆ ಇಂದು ಸಂಜೆ 6 ಗಂಟೆಯವರೆಗೂ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾನವರು ಬದುಕಲಿಕ್ಕೆ ಆಶ್ರಯದಾತ ವಾಗಿರುವ
    ಭಾರತದ ಐಕ್ಯತೆಯನ್ನು ಮತ್ತು ನಾಗರೀಕರ ಹಿತಕಾಯುವ ಸಲುವಾಗಿ
    ಬಾಬಾ ಸಾಹೇಬರನ್ನು ಅವಮಾನಿಸಿದ ಕ್ಕಾಗಿ ನನ್ನಂತಹ ಜ್ಞಾನ ತುಂಬಿಕೊಂಡಿರುವ ಈ ರೀತಿ ತೊಂದರೆ ಮಾಡಿದ್ದಾರೆ ಆರ್ಯರು ಎಂದಾದರೆ ಮನುವಾದಿಗಳ
    ಕೊಡುವ ನೋವಿಗೆ ಗೊತ್ತಾಗಬಾರದೆಂದು ನಿರಂತರವಾಗಿ ಗಾಂಧಿ ಗೋವಳ ಕಾರ್ ಇನ್ನೂ ಅನೇಕ ಅನೇಕ ಜನರ ಏಕಾಂಗಿ ಹೋರಾಟ ಮಾಡಿ ಪ್ರತಿಯೊಬ್ಬರ
    ಏಳಿಗೆಗಾಗಿ ನ್ಯಾಯ ಸಿಕ್ಕುತ್ತಿರುವ ಗ್ರಂಥ ಎಂದರೆ ಭಗವದ್ಗೀತೆ ಯಿಂದಲ್ಲ ತಿಳಿದುಕೊಳ್ಳಲೇ ಬೇಕಾದ ವಿಷಯ

    ಅಂಬೇಡ್ಕರರ ಸಂವಿಧಾನ ಭಾರತಕ್ಕೆ ಸರ್ವಶ್ರೇಷ್ಠ ಗ್ರಂಥವಾಗಿದೆ ಪ್ರತಿಯೊಬ್ಬರೂ ಸಹ ಸಂವಿಧಾನದ ಆಶ್ರಯ ಪಡೆದು ಅಂಬೇಡ್ಕರರನ್ನು ಮಾತ್ರ ಜಾತಿಗೆ ಹೊಂದಾಣಿಕೆ ಮಾಡಿ ನೋಡುವಂತ ಮನುವಾದಿಗಳ ಹಿಡಿತದಲ್ಲಿ ಭಾರತದ ಮೂಲನಿವಾಸಿಗಳು ಬದುಕಬೇಕಾದ ದುರ್ದೈವ ನಮ್ಮದಾಗಿದೆ
    ಜೈ ಭೀಮ್ ಜೈ ಸಂವಿಧಾನ ಎಂದರೆ ತಪ್ಪಾಗಲಾರದು

LEAVE A REPLY

Please enter your comment!
Please enter your name here

- Advertisment -

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...