Homeಕರ್ನಾಟಕJNU ದಾಳಿ ಖಂಡಿಸಿ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ: ಹರಿದು ಬಂದ ಯುವಜನತೆ...

JNU ದಾಳಿ ಖಂಡಿಸಿ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ: ಹರಿದು ಬಂದ ಯುವಜನತೆ…

- Advertisement -
- Advertisement -

JNU ದಾಳಿ ಖಂಡಿಸಿ, ಗೂಂಡಾಗಳನ್ನು ಬಂಧಿಸುವಂತೆ ಆಗ್ರಹಿಸಿದ ದೇಶಾದ್ಯಂತ ಸಾವಿರಾರು ಕಡೆ ಹೋರಾಟಗಳು ನಡೆದಿವೆ. ಮುಂಬೈನಲ್ಲಿ 40 ಗಂಟೆಗಳಿಗೂ ಅಧಿಕ ನಿರಂತರ ಧರಣಿ ನಡೆದಿದೆ. ಇದೇ ಮಾದರಿಯಲ್ಲಿ ಬೆಂಗಳೂರಿನಲ್ಲಿಯೂ ಸಹ ಮಂಗಳವಾರ ಸಂಜೆಯಿಂದ ಆಹೋರಾತ್ರಿ ಧರಣಿ ಆರಂಭವಾಗಿದ್ದು ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಲಾಗಿದೆ.

ಮಂಗಳವಾರ ಮಧ್ಯಾಹ್ನ 3 ಗಂಟೆಗ ವೇಳೆಗೆ ಧರಣಿ ಮಾಡಲು ನಿರ್ಧರಿಸಿ ಕರೆ ಕೊಟ್ಟಿದ್ದೆ ತಡೆ ಸಂಜೆ 6ಗಂಟೆಯ ವೇಳೆಗೆ ನೂರಾರು ಯುವಜನರು ಒಟ್ಟುಗೂಡಿದ್ದಾರೆ. ಸುಮಾರು 300ಕ್ಕೂ ಹೆಚ್ಚು ಜನರು ರಾತ್ರಿಯೆಲ್ಲಾ ಘೋಷಣೆ, ಹಾಡು, ಕವನ ವಾಚನ ಸೇರಿದಂತೆ ವಿನೂತನವಾಗಿ ಪ್ರತಿಭಟಿಸುವ ಮೂಲಕ ಜೆಎನ್‌ಯು ಹಿಂಸೆಯನ್ನು ಜೊತೆಗೆ ಕೇಂದ್ರ ಸರ್ಕಾರದ ಸಿಎಎ, ಎನ್‌ಆರ್‌ಸಿಯನ್ನು ವಿರೋಧಿಸಿದ್ದಾರೆ.

 

ಸಂಘಟಕರಲ್ಲಿ ಒಬ್ಬರಾದ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸರೋವರ್‌ ಬೆಂಕಿಕೇರೆ ಮಾತನಾಡಿ, “ಈಗ ಸಮಯ ಬೆಳಗಿನ ಜಾವ 3 ಗಂಟೆ. ಇಷ್ಟೊಂದು ಜನ ಎಲ್ಲೆಲ್ಲಿಂದ ಬಂದಿದ್ದಾರೆ ಗೊತ್ತಿಲ್ಲ. ಯಾವುದೇ ತಯಾರಿ ಇಲ್ಲದೆ ಮಧ್ಯಾಹ್ನ 3 ಗಂಟೆಯ ನಂತರ ಸಾಮಾಜಿಕ ಜಾಲತಾಣದಲ್ಲಿ ನಾವು ಕರೆ ಕೊಟ್ಟಿದ್ದು ಅಷ್ಟೇ. ಸಂಜೆ 6 ಗಂಟೆಗೆ ಸಾವಿರಾರು ವಿದ್ಯಾರ್ಥಿ-ಯುವಜನರಿಂದ ಶುರುವಾದ ಪ್ರತಿಭಟನೆಯು ಬೆಳಗಿನ ಜಾವ 3 ಗಂಟೆ ದಾಟಿದರು ಒಂದೇ ಒಂದು ನಿಮಿಷವು ಹಾಡು, ಕವನ, ಭಾಷಣ, ಘೋಷಣೆಗಳು ನಿಂತೆಯಿಲ್ಲ! ಈ ಯುವಜನರ ಸ್ಥಳದಲ್ಲೆ ಅದೆಷ್ಟೋ ಕವನಗಳನ್ನು ಬರೆದಿದ್ದಾರೆ. ಒಂದೊಂದು ಕವನವೂ ಮೈ ಜುಮ್ ಅನಿಸುವಂಥದ್ದಾಗಿದೆ.. ವಿದ್ಯಾರ್ಥಿ ಹೋರಾಟವು ಈ ದೇಶವನ್ನು ಖಂಡಿತವಾಗಿಯೂ ಸಂವಿಧಾನ ಆಶಯದ ಕಡೆ ತಗೆದುಕೊಂಡು ಹೋಗಲಿದೆ. ಇಂದು ನಡೆಯಲಿರುವ ರೈತ, ಕಾರ್ಮಿಕರ ಮುಷ್ಕರಕ್ಕೆ ವಿದ್ಯಾರ್ಥಿ ಹೋರಾಟವೂ ಬೆಂಬಲಿಸುತ್ತದೆ.” ಎಂದಿದ್ದಾರೆ.

ಭಾರತದ ತ್ರಿವರ್ಣ ಧ್ವಜಗಳನ್ನು ಹಿಡಿದಿದ್ದ ಯುವಜನರು ಸಂವಿಧಾನದ ಪೀಠಿಕೆಯನ್ನು ಒಟ್ಟಾಗಿ ಓದುವ ಮೂಲಕ ಸಂವಿಧಾನ ಆಶಯಗಳನ್ನು ಎತ್ತಿ ಹಿಡಿಯುತ್ತೇವೆ ಎಂದು ಪ್ರತಿಜ್ಞೆ ಮಾಡಿದರು.

ಅಜಾದಿ ಘೋಷಣೆಗಳು ಮೊಳಗಿದ್ದಲ್ಲದೇ ಎಬಿವಿಪಿಯ ವಿರುದ್ಧವೂ ವಿದ್ಯಾರ್ಥಿಗಳು ಘೋಷಣೆ ಕೂಗಿದರು. ಪ್ರತಿಭಟನೆ ಇಂದು ಸಂಜೆ 6 ಗಂಟೆಯವರೆಗೂ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾನವರು ಬದುಕಲಿಕ್ಕೆ ಆಶ್ರಯದಾತ ವಾಗಿರುವ
    ಭಾರತದ ಐಕ್ಯತೆಯನ್ನು ಮತ್ತು ನಾಗರೀಕರ ಹಿತಕಾಯುವ ಸಲುವಾಗಿ
    ಬಾಬಾ ಸಾಹೇಬರನ್ನು ಅವಮಾನಿಸಿದ ಕ್ಕಾಗಿ ನನ್ನಂತಹ ಜ್ಞಾನ ತುಂಬಿಕೊಂಡಿರುವ ಈ ರೀತಿ ತೊಂದರೆ ಮಾಡಿದ್ದಾರೆ ಆರ್ಯರು ಎಂದಾದರೆ ಮನುವಾದಿಗಳ
    ಕೊಡುವ ನೋವಿಗೆ ಗೊತ್ತಾಗಬಾರದೆಂದು ನಿರಂತರವಾಗಿ ಗಾಂಧಿ ಗೋವಳ ಕಾರ್ ಇನ್ನೂ ಅನೇಕ ಅನೇಕ ಜನರ ಏಕಾಂಗಿ ಹೋರಾಟ ಮಾಡಿ ಪ್ರತಿಯೊಬ್ಬರ
    ಏಳಿಗೆಗಾಗಿ ನ್ಯಾಯ ಸಿಕ್ಕುತ್ತಿರುವ ಗ್ರಂಥ ಎಂದರೆ ಭಗವದ್ಗೀತೆ ಯಿಂದಲ್ಲ ತಿಳಿದುಕೊಳ್ಳಲೇ ಬೇಕಾದ ವಿಷಯ

    ಅಂಬೇಡ್ಕರರ ಸಂವಿಧಾನ ಭಾರತಕ್ಕೆ ಸರ್ವಶ್ರೇಷ್ಠ ಗ್ರಂಥವಾಗಿದೆ ಪ್ರತಿಯೊಬ್ಬರೂ ಸಹ ಸಂವಿಧಾನದ ಆಶ್ರಯ ಪಡೆದು ಅಂಬೇಡ್ಕರರನ್ನು ಮಾತ್ರ ಜಾತಿಗೆ ಹೊಂದಾಣಿಕೆ ಮಾಡಿ ನೋಡುವಂತ ಮನುವಾದಿಗಳ ಹಿಡಿತದಲ್ಲಿ ಭಾರತದ ಮೂಲನಿವಾಸಿಗಳು ಬದುಕಬೇಕಾದ ದುರ್ದೈವ ನಮ್ಮದಾಗಿದೆ
    ಜೈ ಭೀಮ್ ಜೈ ಸಂವಿಧಾನ ಎಂದರೆ ತಪ್ಪಾಗಲಾರದು

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...