Homeಕರ್ನಾಟಕJNU ದಾಳಿ ಖಂಡಿಸಿ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ: ಹರಿದು ಬಂದ ಯುವಜನತೆ...

JNU ದಾಳಿ ಖಂಡಿಸಿ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ: ಹರಿದು ಬಂದ ಯುವಜನತೆ…

- Advertisement -
- Advertisement -

JNU ದಾಳಿ ಖಂಡಿಸಿ, ಗೂಂಡಾಗಳನ್ನು ಬಂಧಿಸುವಂತೆ ಆಗ್ರಹಿಸಿದ ದೇಶಾದ್ಯಂತ ಸಾವಿರಾರು ಕಡೆ ಹೋರಾಟಗಳು ನಡೆದಿವೆ. ಮುಂಬೈನಲ್ಲಿ 40 ಗಂಟೆಗಳಿಗೂ ಅಧಿಕ ನಿರಂತರ ಧರಣಿ ನಡೆದಿದೆ. ಇದೇ ಮಾದರಿಯಲ್ಲಿ ಬೆಂಗಳೂರಿನಲ್ಲಿಯೂ ಸಹ ಮಂಗಳವಾರ ಸಂಜೆಯಿಂದ ಆಹೋರಾತ್ರಿ ಧರಣಿ ಆರಂಭವಾಗಿದ್ದು ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಲಾಗಿದೆ.

ಮಂಗಳವಾರ ಮಧ್ಯಾಹ್ನ 3 ಗಂಟೆಗ ವೇಳೆಗೆ ಧರಣಿ ಮಾಡಲು ನಿರ್ಧರಿಸಿ ಕರೆ ಕೊಟ್ಟಿದ್ದೆ ತಡೆ ಸಂಜೆ 6ಗಂಟೆಯ ವೇಳೆಗೆ ನೂರಾರು ಯುವಜನರು ಒಟ್ಟುಗೂಡಿದ್ದಾರೆ. ಸುಮಾರು 300ಕ್ಕೂ ಹೆಚ್ಚು ಜನರು ರಾತ್ರಿಯೆಲ್ಲಾ ಘೋಷಣೆ, ಹಾಡು, ಕವನ ವಾಚನ ಸೇರಿದಂತೆ ವಿನೂತನವಾಗಿ ಪ್ರತಿಭಟಿಸುವ ಮೂಲಕ ಜೆಎನ್‌ಯು ಹಿಂಸೆಯನ್ನು ಜೊತೆಗೆ ಕೇಂದ್ರ ಸರ್ಕಾರದ ಸಿಎಎ, ಎನ್‌ಆರ್‌ಸಿಯನ್ನು ವಿರೋಧಿಸಿದ್ದಾರೆ.

 

ಸಂಘಟಕರಲ್ಲಿ ಒಬ್ಬರಾದ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸರೋವರ್‌ ಬೆಂಕಿಕೇರೆ ಮಾತನಾಡಿ, “ಈಗ ಸಮಯ ಬೆಳಗಿನ ಜಾವ 3 ಗಂಟೆ. ಇಷ್ಟೊಂದು ಜನ ಎಲ್ಲೆಲ್ಲಿಂದ ಬಂದಿದ್ದಾರೆ ಗೊತ್ತಿಲ್ಲ. ಯಾವುದೇ ತಯಾರಿ ಇಲ್ಲದೆ ಮಧ್ಯಾಹ್ನ 3 ಗಂಟೆಯ ನಂತರ ಸಾಮಾಜಿಕ ಜಾಲತಾಣದಲ್ಲಿ ನಾವು ಕರೆ ಕೊಟ್ಟಿದ್ದು ಅಷ್ಟೇ. ಸಂಜೆ 6 ಗಂಟೆಗೆ ಸಾವಿರಾರು ವಿದ್ಯಾರ್ಥಿ-ಯುವಜನರಿಂದ ಶುರುವಾದ ಪ್ರತಿಭಟನೆಯು ಬೆಳಗಿನ ಜಾವ 3 ಗಂಟೆ ದಾಟಿದರು ಒಂದೇ ಒಂದು ನಿಮಿಷವು ಹಾಡು, ಕವನ, ಭಾಷಣ, ಘೋಷಣೆಗಳು ನಿಂತೆಯಿಲ್ಲ! ಈ ಯುವಜನರ ಸ್ಥಳದಲ್ಲೆ ಅದೆಷ್ಟೋ ಕವನಗಳನ್ನು ಬರೆದಿದ್ದಾರೆ. ಒಂದೊಂದು ಕವನವೂ ಮೈ ಜುಮ್ ಅನಿಸುವಂಥದ್ದಾಗಿದೆ.. ವಿದ್ಯಾರ್ಥಿ ಹೋರಾಟವು ಈ ದೇಶವನ್ನು ಖಂಡಿತವಾಗಿಯೂ ಸಂವಿಧಾನ ಆಶಯದ ಕಡೆ ತಗೆದುಕೊಂಡು ಹೋಗಲಿದೆ. ಇಂದು ನಡೆಯಲಿರುವ ರೈತ, ಕಾರ್ಮಿಕರ ಮುಷ್ಕರಕ್ಕೆ ವಿದ್ಯಾರ್ಥಿ ಹೋರಾಟವೂ ಬೆಂಬಲಿಸುತ್ತದೆ.” ಎಂದಿದ್ದಾರೆ.

ಭಾರತದ ತ್ರಿವರ್ಣ ಧ್ವಜಗಳನ್ನು ಹಿಡಿದಿದ್ದ ಯುವಜನರು ಸಂವಿಧಾನದ ಪೀಠಿಕೆಯನ್ನು ಒಟ್ಟಾಗಿ ಓದುವ ಮೂಲಕ ಸಂವಿಧಾನ ಆಶಯಗಳನ್ನು ಎತ್ತಿ ಹಿಡಿಯುತ್ತೇವೆ ಎಂದು ಪ್ರತಿಜ್ಞೆ ಮಾಡಿದರು.

ಅಜಾದಿ ಘೋಷಣೆಗಳು ಮೊಳಗಿದ್ದಲ್ಲದೇ ಎಬಿವಿಪಿಯ ವಿರುದ್ಧವೂ ವಿದ್ಯಾರ್ಥಿಗಳು ಘೋಷಣೆ ಕೂಗಿದರು. ಪ್ರತಿಭಟನೆ ಇಂದು ಸಂಜೆ 6 ಗಂಟೆಯವರೆಗೂ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾನವರು ಬದುಕಲಿಕ್ಕೆ ಆಶ್ರಯದಾತ ವಾಗಿರುವ
    ಭಾರತದ ಐಕ್ಯತೆಯನ್ನು ಮತ್ತು ನಾಗರೀಕರ ಹಿತಕಾಯುವ ಸಲುವಾಗಿ
    ಬಾಬಾ ಸಾಹೇಬರನ್ನು ಅವಮಾನಿಸಿದ ಕ್ಕಾಗಿ ನನ್ನಂತಹ ಜ್ಞಾನ ತುಂಬಿಕೊಂಡಿರುವ ಈ ರೀತಿ ತೊಂದರೆ ಮಾಡಿದ್ದಾರೆ ಆರ್ಯರು ಎಂದಾದರೆ ಮನುವಾದಿಗಳ
    ಕೊಡುವ ನೋವಿಗೆ ಗೊತ್ತಾಗಬಾರದೆಂದು ನಿರಂತರವಾಗಿ ಗಾಂಧಿ ಗೋವಳ ಕಾರ್ ಇನ್ನೂ ಅನೇಕ ಅನೇಕ ಜನರ ಏಕಾಂಗಿ ಹೋರಾಟ ಮಾಡಿ ಪ್ರತಿಯೊಬ್ಬರ
    ಏಳಿಗೆಗಾಗಿ ನ್ಯಾಯ ಸಿಕ್ಕುತ್ತಿರುವ ಗ್ರಂಥ ಎಂದರೆ ಭಗವದ್ಗೀತೆ ಯಿಂದಲ್ಲ ತಿಳಿದುಕೊಳ್ಳಲೇ ಬೇಕಾದ ವಿಷಯ

    ಅಂಬೇಡ್ಕರರ ಸಂವಿಧಾನ ಭಾರತಕ್ಕೆ ಸರ್ವಶ್ರೇಷ್ಠ ಗ್ರಂಥವಾಗಿದೆ ಪ್ರತಿಯೊಬ್ಬರೂ ಸಹ ಸಂವಿಧಾನದ ಆಶ್ರಯ ಪಡೆದು ಅಂಬೇಡ್ಕರರನ್ನು ಮಾತ್ರ ಜಾತಿಗೆ ಹೊಂದಾಣಿಕೆ ಮಾಡಿ ನೋಡುವಂತ ಮನುವಾದಿಗಳ ಹಿಡಿತದಲ್ಲಿ ಭಾರತದ ಮೂಲನಿವಾಸಿಗಳು ಬದುಕಬೇಕಾದ ದುರ್ದೈವ ನಮ್ಮದಾಗಿದೆ
    ಜೈ ಭೀಮ್ ಜೈ ಸಂವಿಧಾನ ಎಂದರೆ ತಪ್ಪಾಗಲಾರದು

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...