Homeಮುಖಪುಟ"ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವುದು ನಾಟಕವಲ್ಲ" : ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

“ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವುದು ನಾಟಕವಲ್ಲ” : ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

- Advertisement -
- Advertisement -

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ದೆಹಲಿಯ ವಾಯು ಮಾಲಿನ್ಯದಂತಹ ನಿರ್ಣಾಯಕ ವಿಷಯಗಳನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸುವುದು ನಾಟಕವಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಧಾನಿ ನರೇಂದ್ರ ಮೋದಿಗೆ ತಿರುಗೇಟು ಕೊಟ್ಟಿದ್ದಾರೆ.

ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನ ಮಾಧ್ಯಮಗಳ ಮುಂದೆ ಮಾತನಾಡಿದ್ದ ಪ್ರಧಾನಿ ಮೋದಿ, ಪ್ರತಿಪಕ್ಷಗಳನ್ನು ಟೀಕಿಸಿ “ವಿಷಯಗಳು ಸ್ಪಷ್ಟವಾಗಿರಬೇಕು, ಸಂಸತ್ತು ನಾಟಕದ ವೇದಿಕೆಯಲ್ಲ” ಎಂದಿದ್ದರು.

ಪ್ರಧಾನಿಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕಾ ಗಾಂಧಿ, “ಚುನಾವಣಾ ಪರಿಸ್ಥಿತಿ, ಎಸ್‌ಐಆರ್ ಮತ್ತು ಮಾಲಿನ್ಯ ದೊಡ್ಡ ಸಮಸ್ಯೆಗಳು, ನಾವು ಅವುಗಳ ಬಗ್ಗೆ ಚರ್ಚಿಸೋಣ. ಸಂಸತ್ತು ಇರುವುದು ಏತಕ್ಕೆ? ಈ ವಿಷಯಗಳೆಲ್ಲ ನಾಟಕವಲ್ಲ. ಸಮಸ್ಯೆಗಳನ್ನು ಪ್ರಸ್ತಾಪಿಸಿ ಅವುಗಳ ಬಗ್ಗೆ ಧ್ವನಿ ಎತ್ತುವುದು ನಾಟಕವಲ್ಲ. ಜನರಿಗೆ ಸಂಬಂಧಿಸಿದ ಮುಖ್ಯವಾದ ವಿಷಯಗಳ ಬಗ್ಗೆ ಪ್ರಜಾಸತ್ತಾತ್ಮಕ ಚರ್ಚೆಗಳಿಗೆ ಅವಕಾಶ ನೀಡದಿರುವುದು ನಾಟಕ” ಎಂದು ಹೇಳಿದ್ದಾರೆ.

ಅಧಿವೇಶನಕ್ಕೂ ಮುನ್ನ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಚಳಿಗಾಲದ ಅಧಿವೇಶನವನ್ನು ನಾಟಕೀಯ ವೇದಿಕೆಯನ್ನಾಗಿ ಪರಿವರ್ತಿಸಬೇಡಿ. ತಮ್ಮ ಅಧಿಕೃತ ಜವಾಬ್ದಾರಿಗಳನ್ನು ಹೇಗೆ ನಿರ್ವಹಿಸಬೇಕು ಎಂಬುದರ ಕುರಿತು ಸಲಹೆಗಳನ್ನು ನೀಡಬಹುದು ಎಂದು ಹೇಳುವ ಮೂಲಕ ಪ್ರತಿಪಕ್ಷಗಳನ್ನು ಕೆಣಕಿದ್ದರು.

ಈ ಹಿಂದೆ ಕಲಾಪಗಳಿಗೆ ಅಡ್ಡಿಪಡಿಸಲು ಪ್ರತಿಪಕ್ಷಗಳು ಮಾಡಿದ್ದ ತಂತ್ರಗಳನ್ನು ಟೀಕಿಸಿದ್ದ ಮೋದಿ, ಸಂಸದರು ಈಗ ತಮ್ಮ ತಂತ್ರವನ್ನು ಬದಲಾಯಿಸಿಕೊಳ್ಳಬೇಕು ಎಂದು ವ್ಯಂಗ್ಯವಾಡಿದ್ದರು.

ಕಳೆದ 10 ವರ್ಷಗಳಿಂದ ವಿರೋಧ ಪಕ್ಷಗಳು ಆಡುತ್ತಿರುವ ಆಟ ಇನ್ನು ಮುಂದೆ ಜನರ ಮುಂದೆ ನಡೆಯುವುದಿಲ್ಲ. ಅವರು ತಮ್ಮ ತಂತ್ರವನ್ನು ಬದಲಾಯಿಸಿಕೊಳ್ಳಬೇಕು. ನಾನು ಅವರಿಗೆ ಕೆಲವು ಸಲಹೆಗಳನ್ನು ನೀಡಲು ಸಿದ್ಧನಿದ್ದೇನೆ ಎಂದು ಹೇಳಿದ್ದರು.

ನಾಟಕ ಮಾಡಲು ಬಯಸುವವರು ಮಾಡಬಹುದು. ಆದರೆ, ಇಲ್ಲಿ ಸ್ಪಷ್ಟತೆ ಇರಬೇಕು, ನಾಟಕವಲ್ಲ. ನೀತಿ ನಿಯಮಗಳಿಗೆ ಒತ್ತು ನೀಡಬೇಕು, ಘೋಷಣೆಗಳಿಗಲ್ಲ. ಮೊದಲ ಬಾರಿಗೆ ಸಂಸದರಾದವರು ತಮ್ಮ ತಮ್ಮ ಕ್ಷೇತ್ರಗಳಲ್ಲಿನ ಸಮಸ್ಯೆಗಳ ಬಗ್ಗೆ ಮಾತನಾಡಲು ಅವಕಾಶ ಸಿಗದ ಕಾರಣ ನಿರಾಶೆಗೊಳ್ಳುತ್ತಿದ್ದಾರೆ ಎಂದಿದ್ದರು.

ಮೊದಲ ಬಾರಿಗೆ ಸಂಸದರಾದವರಿಗೆ, ಅವರ ಪಕ್ಷ ಯಾವುದೇ ಆಗಿರಲಿ ಅವಕಾಶ ನೀಡಬೇಕು. ನಾವು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ನಾಟಕ ಮಾಡಲು ಹಲವು ಸ್ಥಳಗಳಿವೆ, ಸಂಸತ್ತು ಅದಕ್ಕೆ ವೇದಿಕೆಯಲ್ಲ ಎಂದು ಹೇಳಿದ್ದರು.

ಈ ಬಾರಿ ಕಡಿಮೆ ಅವಧಿಯ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನಿ ಮೋದಿ ಹೇಳಿಕೆ ನೀಡಿದ್ದಾರೆ. ಸರ್ಕಾರ 14 ಮಸೂದೆಗಳ ಮಂಡನೆ ಸೇರಿದಂತೆ ದೊಡ್ಡ ಮಟ್ಟದ ಶಾಸಕಾಂಗ ಕಾರ್ಯಸೂಚಿಯನ್ನು ರೂಪಿಸಿದೆ.

ನವೆಂಬರ್ 10ರ ದೆಹಲಿ ಭಯೋತ್ಪಾದಕ ದಾಳಿಯ ನಂತರದ ರಾಷ್ಟ್ರೀಯ ಭದ್ರತಾ ಕಾಳಜಿಗಳು, ವಿಶೇಷವಾಗಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಹಲವಾರು ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಆತ್ಮಹತ್ಯೆಗಳು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆಗೆ ವಿರೋಧ ಪಕ್ಷಗಳು ಒತ್ತಾಯಿಸಿವೆ.

ಈ ಬಾರಿ ಚಳಿಗಾಲದ ಅಧಿವೇಶನದಲ್ಲಿ 15 ಕಲಾಪಗಳು ನಡೆಯಲಿವೆ. ಸಾಮಾನ್ಯ 20 ಕಲಾಪಗಳು ನಡೆಯಬೇಕು. ಆದರೆ, ಈ ಬಾರಿ ಅಧಿವೇಶನದ ಸಮಯ ಕಡಿತಗೊಳಿಸಲಾಗಿದೆ.

ಸರ್ಕಾರ ಸಂಸತ್ತಿನ ಹಳಿತಪ್ಪಿಸುತ್ತದೆ ಮತ್ತು ಅಧಿವೇಶನದ ಅವಧಿಯನ್ನು ಕಡಿಮೆ ಮಾಡುವ ಮೂಲಕ ಶಾಸಕಾಂಗವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...