Homeಮುಖಪುಟ"ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವುದು ನಾಟಕವಲ್ಲ" : ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

“ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವುದು ನಾಟಕವಲ್ಲ” : ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

- Advertisement -
- Advertisement -

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ದೆಹಲಿಯ ವಾಯು ಮಾಲಿನ್ಯದಂತಹ ನಿರ್ಣಾಯಕ ವಿಷಯಗಳನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸುವುದು ನಾಟಕವಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಧಾನಿ ನರೇಂದ್ರ ಮೋದಿಗೆ ತಿರುಗೇಟು ಕೊಟ್ಟಿದ್ದಾರೆ.

ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನ ಮಾಧ್ಯಮಗಳ ಮುಂದೆ ಮಾತನಾಡಿದ್ದ ಪ್ರಧಾನಿ ಮೋದಿ, ಪ್ರತಿಪಕ್ಷಗಳನ್ನು ಟೀಕಿಸಿ “ವಿಷಯಗಳು ಸ್ಪಷ್ಟವಾಗಿರಬೇಕು, ಸಂಸತ್ತು ನಾಟಕದ ವೇದಿಕೆಯಲ್ಲ” ಎಂದಿದ್ದರು.

ಪ್ರಧಾನಿಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕಾ ಗಾಂಧಿ, “ಚುನಾವಣಾ ಪರಿಸ್ಥಿತಿ, ಎಸ್‌ಐಆರ್ ಮತ್ತು ಮಾಲಿನ್ಯ ದೊಡ್ಡ ಸಮಸ್ಯೆಗಳು, ನಾವು ಅವುಗಳ ಬಗ್ಗೆ ಚರ್ಚಿಸೋಣ. ಸಂಸತ್ತು ಇರುವುದು ಏತಕ್ಕೆ? ಈ ವಿಷಯಗಳೆಲ್ಲ ನಾಟಕವಲ್ಲ. ಸಮಸ್ಯೆಗಳನ್ನು ಪ್ರಸ್ತಾಪಿಸಿ ಅವುಗಳ ಬಗ್ಗೆ ಧ್ವನಿ ಎತ್ತುವುದು ನಾಟಕವಲ್ಲ. ಜನರಿಗೆ ಸಂಬಂಧಿಸಿದ ಮುಖ್ಯವಾದ ವಿಷಯಗಳ ಬಗ್ಗೆ ಪ್ರಜಾಸತ್ತಾತ್ಮಕ ಚರ್ಚೆಗಳಿಗೆ ಅವಕಾಶ ನೀಡದಿರುವುದು ನಾಟಕ” ಎಂದು ಹೇಳಿದ್ದಾರೆ.

ಅಧಿವೇಶನಕ್ಕೂ ಮುನ್ನ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಚಳಿಗಾಲದ ಅಧಿವೇಶನವನ್ನು ನಾಟಕೀಯ ವೇದಿಕೆಯನ್ನಾಗಿ ಪರಿವರ್ತಿಸಬೇಡಿ. ತಮ್ಮ ಅಧಿಕೃತ ಜವಾಬ್ದಾರಿಗಳನ್ನು ಹೇಗೆ ನಿರ್ವಹಿಸಬೇಕು ಎಂಬುದರ ಕುರಿತು ಸಲಹೆಗಳನ್ನು ನೀಡಬಹುದು ಎಂದು ಹೇಳುವ ಮೂಲಕ ಪ್ರತಿಪಕ್ಷಗಳನ್ನು ಕೆಣಕಿದ್ದರು.

ಈ ಹಿಂದೆ ಕಲಾಪಗಳಿಗೆ ಅಡ್ಡಿಪಡಿಸಲು ಪ್ರತಿಪಕ್ಷಗಳು ಮಾಡಿದ್ದ ತಂತ್ರಗಳನ್ನು ಟೀಕಿಸಿದ್ದ ಮೋದಿ, ಸಂಸದರು ಈಗ ತಮ್ಮ ತಂತ್ರವನ್ನು ಬದಲಾಯಿಸಿಕೊಳ್ಳಬೇಕು ಎಂದು ವ್ಯಂಗ್ಯವಾಡಿದ್ದರು.

ಕಳೆದ 10 ವರ್ಷಗಳಿಂದ ವಿರೋಧ ಪಕ್ಷಗಳು ಆಡುತ್ತಿರುವ ಆಟ ಇನ್ನು ಮುಂದೆ ಜನರ ಮುಂದೆ ನಡೆಯುವುದಿಲ್ಲ. ಅವರು ತಮ್ಮ ತಂತ್ರವನ್ನು ಬದಲಾಯಿಸಿಕೊಳ್ಳಬೇಕು. ನಾನು ಅವರಿಗೆ ಕೆಲವು ಸಲಹೆಗಳನ್ನು ನೀಡಲು ಸಿದ್ಧನಿದ್ದೇನೆ ಎಂದು ಹೇಳಿದ್ದರು.

ನಾಟಕ ಮಾಡಲು ಬಯಸುವವರು ಮಾಡಬಹುದು. ಆದರೆ, ಇಲ್ಲಿ ಸ್ಪಷ್ಟತೆ ಇರಬೇಕು, ನಾಟಕವಲ್ಲ. ನೀತಿ ನಿಯಮಗಳಿಗೆ ಒತ್ತು ನೀಡಬೇಕು, ಘೋಷಣೆಗಳಿಗಲ್ಲ. ಮೊದಲ ಬಾರಿಗೆ ಸಂಸದರಾದವರು ತಮ್ಮ ತಮ್ಮ ಕ್ಷೇತ್ರಗಳಲ್ಲಿನ ಸಮಸ್ಯೆಗಳ ಬಗ್ಗೆ ಮಾತನಾಡಲು ಅವಕಾಶ ಸಿಗದ ಕಾರಣ ನಿರಾಶೆಗೊಳ್ಳುತ್ತಿದ್ದಾರೆ ಎಂದಿದ್ದರು.

ಮೊದಲ ಬಾರಿಗೆ ಸಂಸದರಾದವರಿಗೆ, ಅವರ ಪಕ್ಷ ಯಾವುದೇ ಆಗಿರಲಿ ಅವಕಾಶ ನೀಡಬೇಕು. ನಾವು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ನಾಟಕ ಮಾಡಲು ಹಲವು ಸ್ಥಳಗಳಿವೆ, ಸಂಸತ್ತು ಅದಕ್ಕೆ ವೇದಿಕೆಯಲ್ಲ ಎಂದು ಹೇಳಿದ್ದರು.

ಈ ಬಾರಿ ಕಡಿಮೆ ಅವಧಿಯ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನಿ ಮೋದಿ ಹೇಳಿಕೆ ನೀಡಿದ್ದಾರೆ. ಸರ್ಕಾರ 14 ಮಸೂದೆಗಳ ಮಂಡನೆ ಸೇರಿದಂತೆ ದೊಡ್ಡ ಮಟ್ಟದ ಶಾಸಕಾಂಗ ಕಾರ್ಯಸೂಚಿಯನ್ನು ರೂಪಿಸಿದೆ.

ನವೆಂಬರ್ 10ರ ದೆಹಲಿ ಭಯೋತ್ಪಾದಕ ದಾಳಿಯ ನಂತರದ ರಾಷ್ಟ್ರೀಯ ಭದ್ರತಾ ಕಾಳಜಿಗಳು, ವಿಶೇಷವಾಗಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಹಲವಾರು ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಆತ್ಮಹತ್ಯೆಗಳು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆಗೆ ವಿರೋಧ ಪಕ್ಷಗಳು ಒತ್ತಾಯಿಸಿವೆ.

ಈ ಬಾರಿ ಚಳಿಗಾಲದ ಅಧಿವೇಶನದಲ್ಲಿ 15 ಕಲಾಪಗಳು ನಡೆಯಲಿವೆ. ಸಾಮಾನ್ಯ 20 ಕಲಾಪಗಳು ನಡೆಯಬೇಕು. ಆದರೆ, ಈ ಬಾರಿ ಅಧಿವೇಶನದ ಸಮಯ ಕಡಿತಗೊಳಿಸಲಾಗಿದೆ.

ಸರ್ಕಾರ ಸಂಸತ್ತಿನ ಹಳಿತಪ್ಪಿಸುತ್ತದೆ ಮತ್ತು ಅಧಿವೇಶನದ ಅವಧಿಯನ್ನು ಕಡಿಮೆ ಮಾಡುವ ಮೂಲಕ ಶಾಸಕಾಂಗವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...