Homeಮುಖಪುಟಶಿವಮೊಗ್ಗದ ರೈತ ಮಹಾಪಂಚಾಯತ್‌ಗೆ ಹರಿದು ಬಂದ ರೈತಸಾಗರ: ಮೋದಿ ಸರ್ಕಾರದ ವಿರುದ್ದ ಜನಾಕ್ರೋಶ

ಶಿವಮೊಗ್ಗದ ರೈತ ಮಹಾಪಂಚಾಯತ್‌ಗೆ ಹರಿದು ಬಂದ ರೈತಸಾಗರ: ಮೋದಿ ಸರ್ಕಾರದ ವಿರುದ್ದ ಜನಾಕ್ರೋಶ

- Advertisement -
- Advertisement -

ದಕ್ಷಿಣ ಭಾರತದ ಮತ್ತು ಕರ್ನಾಟಕದ ಮೊದಲ ರೈತ ಮಹಾಪಂಚಾಯತ್‌ಗೆ ಇಂದು ಶಿವಮೊಗ್ಗ ಸಾಕ್ಷಿಯಾಯಿತು. ಐತಿಹಾಸಿಕ ಮಹಾಪಂಚಾಯತ್‌ನಲ್ಲಿ ಹತ್ತಾರು ಸಾವಿರ ರೈತರು ನೆರೆದು ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಬಿಜೆಪಿ ಮತ್ತು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ನಗರದ ಸೈನ್ಸ್ ಕಾಲೇಜು ಮೈದಾನದಲ್ಲಿ ನಡೆದ ಮಹಾಪಂಚಾಯತ್‌ನಲ್ಲಿ ದೆಹಲಿಯ ರೈತ ಹೋರಾಟವನ್ನು ಮುನ್ನಡೆಸುತ್ತಿರುವ ಡಾ.ದರ್ಶನ್ ಪಾಲ್, ರಾಕೇಶ್ ಟಿಕಾಯತ್ ಮತ್ತು ಯುದುವೀರ್‌ ಸಿಂಗ್‌ರವರು ಭಾಗವಹಿಸಿ ಹೋರಾಟಕ್ಕೆ ಚಾಲನೆ ನೀಡಿದರು.

ಡಾ.ದರ್ಶನ್ ಪಾಲ್ ಮಾತನಾಡಿ, “ಈ ಮಣ್ಣಿಗೆ ನಾನು ನಮನ ಸಲ್ಲಿಸಲು ಬಯಸುತ್ತೇನೆ. ಏಕೆಂದರೆ ಬಸವಣ್ಣ ಮತ್ತು ಟಿಪ್ಪುಗೆ ಜನ್ಮಕೊಟ್ಟ ಭೂಮಿ ಇದು, ಇಲ್ಲಿನ ಜನರಿಗೆ ನಮನ ಸಲ್ಲಿಸಲು ಬಯಸುತ್ತೇನೆ. ಏಕೆಂದರೆ ತುಂಗಾ ಮೂಲ ಉಳಿಸಿ ಹೋರಾಟದ ಮೂಲಕ ದಿಟ್ಟ ಹೋರಾಟ ಮಾಡಿದವರು, ನಿಮಗೆ ನಮನ” ಎಂದರು.

ದೆಹಲಿಯ ಗಡಿಗಳಲ್ಲಿ ಕೂತಿರುವ ರೈತರು ದೇಶದ ಎಲ್ಲಾ ಭಾಗದಲ್ಲಿರುವ ರೈತರು ಈ ಆಂದೋಲನದ ಬಗ್ಗೆ ಏನು ಭಾವಿಸುತ್ತಾರೆ ಎಂದು ಯೋಚಿಸುತ್ತಿದ್ದಾರೆ. ನೀವು ಇಲ್ಲಿ ಸಹಸ್ರಾರು ಜನ ಒಟ್ಟು ಸೇರಿ ಆ ರೈತ ಬಂಧುಗಳಿಗೆ ಗಟ್ಟಿ ಸಂದೇಶ ನೀಡಿದ್ದೀರಿ.. ನಾವು ಜೊತೆಗಿದ್ದೇವೆ ಎಂದು ನೀವು ಹೇಳಿದ್ಧೀರಿ ನಿಮಗೆ ಧನ್ಯವಾದ ಎಂದರು.

32 ವರ್ಷಗಳಿಂದ ಎಂಎಸ್‌ಪಿಗಾಗಿ ಹೋರಾಡುತ್ತಿದ್ದೇವೆ. ರೈತರ ಆತ್ಮಹತ್ಯೆಗಳ ವಿರುದ್ಧ ನಾವು ಹೋರಾಡುತ್ತಿರುವಾಗ ಕೋವಿಡ್ ಕಾಲದಲ್ಲಿ ಕೇಂದ್ರ ಸರ್ಕಾರ ಈ ಕರಾಳ ಕಾನೂನುಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿದೆ. ಇದರ ವಿರುದ್ಧ ಕಳೆದ 8 ತಿಂಗಳುಗಳಿಂದ ಹೋರಾಟ ನಡೆಸುತ್ತಿದ್ದೇವೆ. ನಾವು ಇಡೀ ಪಂಜಾಬ್‌ ಬಂದ್ ಮಾಡಿದ್ದೇವೆ. ರೈಲು ಸೇವೆ ಸ್ಥಗಿತಗೊಳಿಸಿದ್ದೇವೆ. ರಿಲಾಯನ್ಸ್ ಮತ್ತು ಎಸ್ಸಾರ್ ಪೆಟ್ರೋಲ್ ಬಂಕ್‌ಗಳನ್ನು ಬಂದ್ ಮಾಡಿ ಹೋರಾಟ ಮಾಡಿದ್ದೇವೆ ಎಂದು ದರ್ಶನ್ ಪಾಲ್ ಪಂಜಾಬ್‌ ಹೋರಾಟದ ಕುರಿತು ಮಾಹಿತಿ ನೀಡಿದರು.

ಶಿವಮೊಗ್ಗದ ರೈತ ಮಹಾಪಂಚಾಯತ್ ಲೈವ್ ನೋಡಲು ಇಲ್ಲಿ ಕ್ಲಿಕ್ ಮಾಡಿ

ಇಂದಿಗೆ ದೆಹಲಿಯ ರೈತ ಹೋರಾಟಕ್ಕೆ 115 ದಿನಗಳಾಗಿವೆ. ಸರ್ಕಾರ ಈ ಆಂದೋಲನ ಮುರಿಯಲು ಪ್ರಯತ್ನಿಸಿತು. ಆದರೆ ಮೀನಾ ಮುತ್ತು ಗುಜ್ಜರ್‌ ರೈತರು ಒಂದೂಗೂಡಿ ರಾಜಸ್ಥಾನದಲ್ಲಿ ಹೋರಾಡುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಹಿಂದೂ ಮುಸ್ಲಿಮರು ಒಂದುಗೂಡಿ ಹೋರಾಡುತ್ತಿದ್ದಾರೆ. ಅಂದರೆ ಈ ರೈತ ಹೋರಾಟ ದಿನೇ ದಿನೇ ಗಟ್ಟಿಗೊಳ್ಳುತ್ತಿದೆ ಮತ್ತು ದೇಶಕ್ಕೆ ವಿಸ್ತರಿಸುತ್ತಿದೆ ಎಂದರು.

ಕರ್ನಾಟಕದಲ್ಲಿ ನೀವು ಐಕ್ಯ ಹೋರಾಟ ಮಾಡುತ್ತಿದ್ದೀರಿ. ಸಂಯುಕ್ತ ಹೋರಾಟ ನಡೆಸುತ್ತಿದ್ದಾರೆ. ನಾವು ಪಂಜಾಬ್‌ನಲ್ಲಿ 31 ಸಂಘಟನೆಗಳು ಒಂದುಗೂಡಿದ್ದಕ್ಕೆ ದೆಹಲಿಯ ಗಡಿಗಳಲ್ಲಿ ಗಟ್ಟಿ ಹೋರಾಟ ನಡೆಸಲು ಸಾಧ್ಯವಾಯಿತು. ಅದೇ ರೀತಿ ನೀವು ಸಹ ಒಂದುಗೂಡಿ ಹೋರಾಡುತ್ತೀರಿ ಎಂದು ನಂಬಿದ್ದೇವೆ. ಈ ಕಾರ್ಪೋರೇಟ್‌ಗಳ ವಿರುದ್ದದ ಹೋರಾಟದಲ್ಲಿ ನೀವು ಕೈ ಜೋಡಿಸುತ್ತೀರಿ ಅಲ್ಲವೇ ಎಂದು ಪಾಲ್ ಪ್ರಶ್ನಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಮುಖಂಡರಾದ ಕೆ.ಟಿ ಗಂಗಾಧರ್‌ರವರು ಮಾತನಾಡಿ “ಶಿವಮೊಗ್ಗ ಸಮಾಜವಾದಿ ಚಳವಳಿಯ ತವರೂರು. ರೈತ ಚಳವಳಿಯ ನೆಲೆ. ಕೇಂದ್ರದ ಈ ಕರಾಳ ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಮೊದಲ ರೈತ ಮಹಾಪಂಚಾಯತ್‌ಗು ಇದು ಸಾಕ್ಷಿಯಾಗಿದೆ. ಮೋದಿ ಸರ್ಕಾರ ಹಿಂದೆ ಸರಿಯುವವರೆಗೂ, ಎಂಎಸ್‌ಪಿಗಾಗಿ ಕಾನೂನು ಜಾರಿಗೊಳಿಸುವವರೆಗೂ ನಾವು ವಿರಮಿಸುವುದಿಲ್ಲ ಎಂದರು.

ಎಂಎಸ್‌ಪಿ ಇದೆ ಎಂದು ಪಿಎಂ ನರೇಂದ್ರ ಮೋದಿ ಮತ್ತು ಸಿಎಂ ಯಡಿಯೂರಪ್ಪನವರು ರೈತರಿಗೆ ಸುಳ್ಳು ಹೇಳುತ್ತಿದ್ದಾರೆ. ರೈತರ ಭೂಮಿ ಕಿತ್ತುಕೊಳ್ಳುವ ಕಾನೂನು ಮಾಡುತ್ತಿದ್ದಾರೆ. ಹಾಗಾಗಿ ಈ ಮಹಾಪಂಚಾಯತ್‌ ಮೂಲಕ ರೈತರ ಶಕ್ತಿ ಪ್ರದರ್ಶನ ಮಾಡುತ್ತಿದ್ದು, ಈ ಕಾನೂನುಗಳನ್ನು ವಾಪಸ್ ಪಡೆಯದಿದ್ದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುತ್ತೇವೆ ಎಂದು ಸವಾಲು ಹಾಕಿದರು.


ಇದನ್ನೂ ಓದಿ: ಶಿವಮೊಗ್ಗ- ದಕ್ಷಿಣ ಭಾರತದ ಮೊದಲ ಐತಿಹಾಸಿಕ ರೈತ ಮಹಾಪಂಚಾಯತ್ ಲೈವ್ ನೋಡಿ‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...