Homeಮುಖಪುಟಶಿವಮೊಗ್ಗದ ರೈತ ಮಹಾಪಂಚಾಯತ್‌ಗೆ ಹರಿದು ಬಂದ ರೈತಸಾಗರ: ಮೋದಿ ಸರ್ಕಾರದ ವಿರುದ್ದ ಜನಾಕ್ರೋಶ

ಶಿವಮೊಗ್ಗದ ರೈತ ಮಹಾಪಂಚಾಯತ್‌ಗೆ ಹರಿದು ಬಂದ ರೈತಸಾಗರ: ಮೋದಿ ಸರ್ಕಾರದ ವಿರುದ್ದ ಜನಾಕ್ರೋಶ

- Advertisement -
- Advertisement -

ದಕ್ಷಿಣ ಭಾರತದ ಮತ್ತು ಕರ್ನಾಟಕದ ಮೊದಲ ರೈತ ಮಹಾಪಂಚಾಯತ್‌ಗೆ ಇಂದು ಶಿವಮೊಗ್ಗ ಸಾಕ್ಷಿಯಾಯಿತು. ಐತಿಹಾಸಿಕ ಮಹಾಪಂಚಾಯತ್‌ನಲ್ಲಿ ಹತ್ತಾರು ಸಾವಿರ ರೈತರು ನೆರೆದು ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಬಿಜೆಪಿ ಮತ್ತು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ನಗರದ ಸೈನ್ಸ್ ಕಾಲೇಜು ಮೈದಾನದಲ್ಲಿ ನಡೆದ ಮಹಾಪಂಚಾಯತ್‌ನಲ್ಲಿ ದೆಹಲಿಯ ರೈತ ಹೋರಾಟವನ್ನು ಮುನ್ನಡೆಸುತ್ತಿರುವ ಡಾ.ದರ್ಶನ್ ಪಾಲ್, ರಾಕೇಶ್ ಟಿಕಾಯತ್ ಮತ್ತು ಯುದುವೀರ್‌ ಸಿಂಗ್‌ರವರು ಭಾಗವಹಿಸಿ ಹೋರಾಟಕ್ಕೆ ಚಾಲನೆ ನೀಡಿದರು.

ಡಾ.ದರ್ಶನ್ ಪಾಲ್ ಮಾತನಾಡಿ, “ಈ ಮಣ್ಣಿಗೆ ನಾನು ನಮನ ಸಲ್ಲಿಸಲು ಬಯಸುತ್ತೇನೆ. ಏಕೆಂದರೆ ಬಸವಣ್ಣ ಮತ್ತು ಟಿಪ್ಪುಗೆ ಜನ್ಮಕೊಟ್ಟ ಭೂಮಿ ಇದು, ಇಲ್ಲಿನ ಜನರಿಗೆ ನಮನ ಸಲ್ಲಿಸಲು ಬಯಸುತ್ತೇನೆ. ಏಕೆಂದರೆ ತುಂಗಾ ಮೂಲ ಉಳಿಸಿ ಹೋರಾಟದ ಮೂಲಕ ದಿಟ್ಟ ಹೋರಾಟ ಮಾಡಿದವರು, ನಿಮಗೆ ನಮನ” ಎಂದರು.

ದೆಹಲಿಯ ಗಡಿಗಳಲ್ಲಿ ಕೂತಿರುವ ರೈತರು ದೇಶದ ಎಲ್ಲಾ ಭಾಗದಲ್ಲಿರುವ ರೈತರು ಈ ಆಂದೋಲನದ ಬಗ್ಗೆ ಏನು ಭಾವಿಸುತ್ತಾರೆ ಎಂದು ಯೋಚಿಸುತ್ತಿದ್ದಾರೆ. ನೀವು ಇಲ್ಲಿ ಸಹಸ್ರಾರು ಜನ ಒಟ್ಟು ಸೇರಿ ಆ ರೈತ ಬಂಧುಗಳಿಗೆ ಗಟ್ಟಿ ಸಂದೇಶ ನೀಡಿದ್ದೀರಿ.. ನಾವು ಜೊತೆಗಿದ್ದೇವೆ ಎಂದು ನೀವು ಹೇಳಿದ್ಧೀರಿ ನಿಮಗೆ ಧನ್ಯವಾದ ಎಂದರು.

32 ವರ್ಷಗಳಿಂದ ಎಂಎಸ್‌ಪಿಗಾಗಿ ಹೋರಾಡುತ್ತಿದ್ದೇವೆ. ರೈತರ ಆತ್ಮಹತ್ಯೆಗಳ ವಿರುದ್ಧ ನಾವು ಹೋರಾಡುತ್ತಿರುವಾಗ ಕೋವಿಡ್ ಕಾಲದಲ್ಲಿ ಕೇಂದ್ರ ಸರ್ಕಾರ ಈ ಕರಾಳ ಕಾನೂನುಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿದೆ. ಇದರ ವಿರುದ್ಧ ಕಳೆದ 8 ತಿಂಗಳುಗಳಿಂದ ಹೋರಾಟ ನಡೆಸುತ್ತಿದ್ದೇವೆ. ನಾವು ಇಡೀ ಪಂಜಾಬ್‌ ಬಂದ್ ಮಾಡಿದ್ದೇವೆ. ರೈಲು ಸೇವೆ ಸ್ಥಗಿತಗೊಳಿಸಿದ್ದೇವೆ. ರಿಲಾಯನ್ಸ್ ಮತ್ತು ಎಸ್ಸಾರ್ ಪೆಟ್ರೋಲ್ ಬಂಕ್‌ಗಳನ್ನು ಬಂದ್ ಮಾಡಿ ಹೋರಾಟ ಮಾಡಿದ್ದೇವೆ ಎಂದು ದರ್ಶನ್ ಪಾಲ್ ಪಂಜಾಬ್‌ ಹೋರಾಟದ ಕುರಿತು ಮಾಹಿತಿ ನೀಡಿದರು.

ಶಿವಮೊಗ್ಗದ ರೈತ ಮಹಾಪಂಚಾಯತ್ ಲೈವ್ ನೋಡಲು ಇಲ್ಲಿ ಕ್ಲಿಕ್ ಮಾಡಿ

ಇಂದಿಗೆ ದೆಹಲಿಯ ರೈತ ಹೋರಾಟಕ್ಕೆ 115 ದಿನಗಳಾಗಿವೆ. ಸರ್ಕಾರ ಈ ಆಂದೋಲನ ಮುರಿಯಲು ಪ್ರಯತ್ನಿಸಿತು. ಆದರೆ ಮೀನಾ ಮುತ್ತು ಗುಜ್ಜರ್‌ ರೈತರು ಒಂದೂಗೂಡಿ ರಾಜಸ್ಥಾನದಲ್ಲಿ ಹೋರಾಡುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಹಿಂದೂ ಮುಸ್ಲಿಮರು ಒಂದುಗೂಡಿ ಹೋರಾಡುತ್ತಿದ್ದಾರೆ. ಅಂದರೆ ಈ ರೈತ ಹೋರಾಟ ದಿನೇ ದಿನೇ ಗಟ್ಟಿಗೊಳ್ಳುತ್ತಿದೆ ಮತ್ತು ದೇಶಕ್ಕೆ ವಿಸ್ತರಿಸುತ್ತಿದೆ ಎಂದರು.

ಕರ್ನಾಟಕದಲ್ಲಿ ನೀವು ಐಕ್ಯ ಹೋರಾಟ ಮಾಡುತ್ತಿದ್ದೀರಿ. ಸಂಯುಕ್ತ ಹೋರಾಟ ನಡೆಸುತ್ತಿದ್ದಾರೆ. ನಾವು ಪಂಜಾಬ್‌ನಲ್ಲಿ 31 ಸಂಘಟನೆಗಳು ಒಂದುಗೂಡಿದ್ದಕ್ಕೆ ದೆಹಲಿಯ ಗಡಿಗಳಲ್ಲಿ ಗಟ್ಟಿ ಹೋರಾಟ ನಡೆಸಲು ಸಾಧ್ಯವಾಯಿತು. ಅದೇ ರೀತಿ ನೀವು ಸಹ ಒಂದುಗೂಡಿ ಹೋರಾಡುತ್ತೀರಿ ಎಂದು ನಂಬಿದ್ದೇವೆ. ಈ ಕಾರ್ಪೋರೇಟ್‌ಗಳ ವಿರುದ್ದದ ಹೋರಾಟದಲ್ಲಿ ನೀವು ಕೈ ಜೋಡಿಸುತ್ತೀರಿ ಅಲ್ಲವೇ ಎಂದು ಪಾಲ್ ಪ್ರಶ್ನಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಮುಖಂಡರಾದ ಕೆ.ಟಿ ಗಂಗಾಧರ್‌ರವರು ಮಾತನಾಡಿ “ಶಿವಮೊಗ್ಗ ಸಮಾಜವಾದಿ ಚಳವಳಿಯ ತವರೂರು. ರೈತ ಚಳವಳಿಯ ನೆಲೆ. ಕೇಂದ್ರದ ಈ ಕರಾಳ ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಮೊದಲ ರೈತ ಮಹಾಪಂಚಾಯತ್‌ಗು ಇದು ಸಾಕ್ಷಿಯಾಗಿದೆ. ಮೋದಿ ಸರ್ಕಾರ ಹಿಂದೆ ಸರಿಯುವವರೆಗೂ, ಎಂಎಸ್‌ಪಿಗಾಗಿ ಕಾನೂನು ಜಾರಿಗೊಳಿಸುವವರೆಗೂ ನಾವು ವಿರಮಿಸುವುದಿಲ್ಲ ಎಂದರು.

ಎಂಎಸ್‌ಪಿ ಇದೆ ಎಂದು ಪಿಎಂ ನರೇಂದ್ರ ಮೋದಿ ಮತ್ತು ಸಿಎಂ ಯಡಿಯೂರಪ್ಪನವರು ರೈತರಿಗೆ ಸುಳ್ಳು ಹೇಳುತ್ತಿದ್ದಾರೆ. ರೈತರ ಭೂಮಿ ಕಿತ್ತುಕೊಳ್ಳುವ ಕಾನೂನು ಮಾಡುತ್ತಿದ್ದಾರೆ. ಹಾಗಾಗಿ ಈ ಮಹಾಪಂಚಾಯತ್‌ ಮೂಲಕ ರೈತರ ಶಕ್ತಿ ಪ್ರದರ್ಶನ ಮಾಡುತ್ತಿದ್ದು, ಈ ಕಾನೂನುಗಳನ್ನು ವಾಪಸ್ ಪಡೆಯದಿದ್ದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುತ್ತೇವೆ ಎಂದು ಸವಾಲು ಹಾಕಿದರು.


ಇದನ್ನೂ ಓದಿ: ಶಿವಮೊಗ್ಗ- ದಕ್ಷಿಣ ಭಾರತದ ಮೊದಲ ಐತಿಹಾಸಿಕ ರೈತ ಮಹಾಪಂಚಾಯತ್ ಲೈವ್ ನೋಡಿ‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...