Homeಮುಖಪುಟಶಿವಮೊಗ್ಗದ ರೈತ ಮಹಾಪಂಚಾಯತ್‌ಗೆ ಹರಿದು ಬಂದ ರೈತಸಾಗರ: ಮೋದಿ ಸರ್ಕಾರದ ವಿರುದ್ದ ಜನಾಕ್ರೋಶ

ಶಿವಮೊಗ್ಗದ ರೈತ ಮಹಾಪಂಚಾಯತ್‌ಗೆ ಹರಿದು ಬಂದ ರೈತಸಾಗರ: ಮೋದಿ ಸರ್ಕಾರದ ವಿರುದ್ದ ಜನಾಕ್ರೋಶ

- Advertisement -
- Advertisement -

ದಕ್ಷಿಣ ಭಾರತದ ಮತ್ತು ಕರ್ನಾಟಕದ ಮೊದಲ ರೈತ ಮಹಾಪಂಚಾಯತ್‌ಗೆ ಇಂದು ಶಿವಮೊಗ್ಗ ಸಾಕ್ಷಿಯಾಯಿತು. ಐತಿಹಾಸಿಕ ಮಹಾಪಂಚಾಯತ್‌ನಲ್ಲಿ ಹತ್ತಾರು ಸಾವಿರ ರೈತರು ನೆರೆದು ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಬಿಜೆಪಿ ಮತ್ತು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ನಗರದ ಸೈನ್ಸ್ ಕಾಲೇಜು ಮೈದಾನದಲ್ಲಿ ನಡೆದ ಮಹಾಪಂಚಾಯತ್‌ನಲ್ಲಿ ದೆಹಲಿಯ ರೈತ ಹೋರಾಟವನ್ನು ಮುನ್ನಡೆಸುತ್ತಿರುವ ಡಾ.ದರ್ಶನ್ ಪಾಲ್, ರಾಕೇಶ್ ಟಿಕಾಯತ್ ಮತ್ತು ಯುದುವೀರ್‌ ಸಿಂಗ್‌ರವರು ಭಾಗವಹಿಸಿ ಹೋರಾಟಕ್ಕೆ ಚಾಲನೆ ನೀಡಿದರು.

ಡಾ.ದರ್ಶನ್ ಪಾಲ್ ಮಾತನಾಡಿ, “ಈ ಮಣ್ಣಿಗೆ ನಾನು ನಮನ ಸಲ್ಲಿಸಲು ಬಯಸುತ್ತೇನೆ. ಏಕೆಂದರೆ ಬಸವಣ್ಣ ಮತ್ತು ಟಿಪ್ಪುಗೆ ಜನ್ಮಕೊಟ್ಟ ಭೂಮಿ ಇದು, ಇಲ್ಲಿನ ಜನರಿಗೆ ನಮನ ಸಲ್ಲಿಸಲು ಬಯಸುತ್ತೇನೆ. ಏಕೆಂದರೆ ತುಂಗಾ ಮೂಲ ಉಳಿಸಿ ಹೋರಾಟದ ಮೂಲಕ ದಿಟ್ಟ ಹೋರಾಟ ಮಾಡಿದವರು, ನಿಮಗೆ ನಮನ” ಎಂದರು.

ದೆಹಲಿಯ ಗಡಿಗಳಲ್ಲಿ ಕೂತಿರುವ ರೈತರು ದೇಶದ ಎಲ್ಲಾ ಭಾಗದಲ್ಲಿರುವ ರೈತರು ಈ ಆಂದೋಲನದ ಬಗ್ಗೆ ಏನು ಭಾವಿಸುತ್ತಾರೆ ಎಂದು ಯೋಚಿಸುತ್ತಿದ್ದಾರೆ. ನೀವು ಇಲ್ಲಿ ಸಹಸ್ರಾರು ಜನ ಒಟ್ಟು ಸೇರಿ ಆ ರೈತ ಬಂಧುಗಳಿಗೆ ಗಟ್ಟಿ ಸಂದೇಶ ನೀಡಿದ್ದೀರಿ.. ನಾವು ಜೊತೆಗಿದ್ದೇವೆ ಎಂದು ನೀವು ಹೇಳಿದ್ಧೀರಿ ನಿಮಗೆ ಧನ್ಯವಾದ ಎಂದರು.

32 ವರ್ಷಗಳಿಂದ ಎಂಎಸ್‌ಪಿಗಾಗಿ ಹೋರಾಡುತ್ತಿದ್ದೇವೆ. ರೈತರ ಆತ್ಮಹತ್ಯೆಗಳ ವಿರುದ್ಧ ನಾವು ಹೋರಾಡುತ್ತಿರುವಾಗ ಕೋವಿಡ್ ಕಾಲದಲ್ಲಿ ಕೇಂದ್ರ ಸರ್ಕಾರ ಈ ಕರಾಳ ಕಾನೂನುಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿದೆ. ಇದರ ವಿರುದ್ಧ ಕಳೆದ 8 ತಿಂಗಳುಗಳಿಂದ ಹೋರಾಟ ನಡೆಸುತ್ತಿದ್ದೇವೆ. ನಾವು ಇಡೀ ಪಂಜಾಬ್‌ ಬಂದ್ ಮಾಡಿದ್ದೇವೆ. ರೈಲು ಸೇವೆ ಸ್ಥಗಿತಗೊಳಿಸಿದ್ದೇವೆ. ರಿಲಾಯನ್ಸ್ ಮತ್ತು ಎಸ್ಸಾರ್ ಪೆಟ್ರೋಲ್ ಬಂಕ್‌ಗಳನ್ನು ಬಂದ್ ಮಾಡಿ ಹೋರಾಟ ಮಾಡಿದ್ದೇವೆ ಎಂದು ದರ್ಶನ್ ಪಾಲ್ ಪಂಜಾಬ್‌ ಹೋರಾಟದ ಕುರಿತು ಮಾಹಿತಿ ನೀಡಿದರು.

ಶಿವಮೊಗ್ಗದ ರೈತ ಮಹಾಪಂಚಾಯತ್ ಲೈವ್ ನೋಡಲು ಇಲ್ಲಿ ಕ್ಲಿಕ್ ಮಾಡಿ

ಇಂದಿಗೆ ದೆಹಲಿಯ ರೈತ ಹೋರಾಟಕ್ಕೆ 115 ದಿನಗಳಾಗಿವೆ. ಸರ್ಕಾರ ಈ ಆಂದೋಲನ ಮುರಿಯಲು ಪ್ರಯತ್ನಿಸಿತು. ಆದರೆ ಮೀನಾ ಮುತ್ತು ಗುಜ್ಜರ್‌ ರೈತರು ಒಂದೂಗೂಡಿ ರಾಜಸ್ಥಾನದಲ್ಲಿ ಹೋರಾಡುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಹಿಂದೂ ಮುಸ್ಲಿಮರು ಒಂದುಗೂಡಿ ಹೋರಾಡುತ್ತಿದ್ದಾರೆ. ಅಂದರೆ ಈ ರೈತ ಹೋರಾಟ ದಿನೇ ದಿನೇ ಗಟ್ಟಿಗೊಳ್ಳುತ್ತಿದೆ ಮತ್ತು ದೇಶಕ್ಕೆ ವಿಸ್ತರಿಸುತ್ತಿದೆ ಎಂದರು.

ಕರ್ನಾಟಕದಲ್ಲಿ ನೀವು ಐಕ್ಯ ಹೋರಾಟ ಮಾಡುತ್ತಿದ್ದೀರಿ. ಸಂಯುಕ್ತ ಹೋರಾಟ ನಡೆಸುತ್ತಿದ್ದಾರೆ. ನಾವು ಪಂಜಾಬ್‌ನಲ್ಲಿ 31 ಸಂಘಟನೆಗಳು ಒಂದುಗೂಡಿದ್ದಕ್ಕೆ ದೆಹಲಿಯ ಗಡಿಗಳಲ್ಲಿ ಗಟ್ಟಿ ಹೋರಾಟ ನಡೆಸಲು ಸಾಧ್ಯವಾಯಿತು. ಅದೇ ರೀತಿ ನೀವು ಸಹ ಒಂದುಗೂಡಿ ಹೋರಾಡುತ್ತೀರಿ ಎಂದು ನಂಬಿದ್ದೇವೆ. ಈ ಕಾರ್ಪೋರೇಟ್‌ಗಳ ವಿರುದ್ದದ ಹೋರಾಟದಲ್ಲಿ ನೀವು ಕೈ ಜೋಡಿಸುತ್ತೀರಿ ಅಲ್ಲವೇ ಎಂದು ಪಾಲ್ ಪ್ರಶ್ನಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಮುಖಂಡರಾದ ಕೆ.ಟಿ ಗಂಗಾಧರ್‌ರವರು ಮಾತನಾಡಿ “ಶಿವಮೊಗ್ಗ ಸಮಾಜವಾದಿ ಚಳವಳಿಯ ತವರೂರು. ರೈತ ಚಳವಳಿಯ ನೆಲೆ. ಕೇಂದ್ರದ ಈ ಕರಾಳ ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಮೊದಲ ರೈತ ಮಹಾಪಂಚಾಯತ್‌ಗು ಇದು ಸಾಕ್ಷಿಯಾಗಿದೆ. ಮೋದಿ ಸರ್ಕಾರ ಹಿಂದೆ ಸರಿಯುವವರೆಗೂ, ಎಂಎಸ್‌ಪಿಗಾಗಿ ಕಾನೂನು ಜಾರಿಗೊಳಿಸುವವರೆಗೂ ನಾವು ವಿರಮಿಸುವುದಿಲ್ಲ ಎಂದರು.

ಎಂಎಸ್‌ಪಿ ಇದೆ ಎಂದು ಪಿಎಂ ನರೇಂದ್ರ ಮೋದಿ ಮತ್ತು ಸಿಎಂ ಯಡಿಯೂರಪ್ಪನವರು ರೈತರಿಗೆ ಸುಳ್ಳು ಹೇಳುತ್ತಿದ್ದಾರೆ. ರೈತರ ಭೂಮಿ ಕಿತ್ತುಕೊಳ್ಳುವ ಕಾನೂನು ಮಾಡುತ್ತಿದ್ದಾರೆ. ಹಾಗಾಗಿ ಈ ಮಹಾಪಂಚಾಯತ್‌ ಮೂಲಕ ರೈತರ ಶಕ್ತಿ ಪ್ರದರ್ಶನ ಮಾಡುತ್ತಿದ್ದು, ಈ ಕಾನೂನುಗಳನ್ನು ವಾಪಸ್ ಪಡೆಯದಿದ್ದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುತ್ತೇವೆ ಎಂದು ಸವಾಲು ಹಾಕಿದರು.


ಇದನ್ನೂ ಓದಿ: ಶಿವಮೊಗ್ಗ- ದಕ್ಷಿಣ ಭಾರತದ ಮೊದಲ ಐತಿಹಾಸಿಕ ರೈತ ಮಹಾಪಂಚಾಯತ್ ಲೈವ್ ನೋಡಿ‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...