Homeಮುಖಪುಟ'ರೈತರಿಂದ ನೇರ ಗ್ರಾಹಕರಿಗೆ' ಫೇಸ್‌ಬುಕ್‌ ಗ್ರೂಪ್: ವಿಭಿನ್ನ ಪ್ರಯೋಗಕ್ಕೆ ಅಭೂತಪೂರ್ವ ಪ್ರತಿಕ್ರಿಯೆ

‘ರೈತರಿಂದ ನೇರ ಗ್ರಾಹಕರಿಗೆ’ ಫೇಸ್‌ಬುಕ್‌ ಗ್ರೂಪ್: ವಿಭಿನ್ನ ಪ್ರಯೋಗಕ್ಕೆ ಅಭೂತಪೂರ್ವ ಪ್ರತಿಕ್ರಿಯೆ

ಕರ್ನಾಟಕ ರಾಜ್ಯ ರೈತ ಸಂಘದ ಪಚ್ಚೆ ನಂಜುಂಡಸ್ವಾಮಿ ಮತ್ತು ಯುವ ರೈತ ಸಂಘದ ಕಾರ್ಯಕರ್ತರ ಈ ಪ್ರಯತ್ನದಿಂದ ಹಲವಾರು ರೈತರು ಭವಿಷ್ಯದ ಬಗ್ಗೆ ಆಶಾವಾದ ಹೊಂದುವಂತಾಗಿದೆ.

- Advertisement -
- Advertisement -

“ಸಾವಯುವ ಕೃಷಿಯಲ್ಲಿ ಬೆಳೆದ ಅರಿಶಿನದಿಂದ ತಯಾರಿಸಿದ ಪರಿಶುದ್ಧ ಅರಿಶಿನ ಪುಡಿ. 200 ರೂಪಾಯಿ ಒಂದು ಕೆಜಿ”.. ಎಂದು ಶಿವಮೊಗ್ಗ ಜಿಲ್ಲೆಯ ಹೊಸನಗರದ ಸಂತೋಷ್ ಕೆ.ಎಸ್ ಎಂಬುವವರು ಒಂದು ಪೋಸ್ಟ್ ಹಾಕುತ್ತಾರೆ. ಎರಡೇ ದಿನದಲ್ಲಿ ಸುಮಾರು 30ಕ್ಕೂ ಹೆಚ್ಚು ಜನ ನಮಗೆ ಎರಡು ಕೆಜಿ ಬೇಕು, ಒಂದು, ಅರ್ಧ ಕೆಜಿ ಬೇಕು ಎಂದು ಕಮೆಂಟ್ ಮಾಡುತ್ತಾರೆ. ನಿಮ್ಮ ಫೋನ್ ನಂಬರ್ ಕೊಡಿ ಎಂದು ಕೇಳುತ್ತಾರೆ. ಇದೇ ರೀತಿ ತೋಟದ ಅವರೆಕಾಯಿ, ಶುದ್ದ ಹರಳೆಣ್ಣೆ, ಏಲಕ್ಕಿ, ಕಾಳುಮೆಣಸು, ಜೋನಿ ಬೆಲ್ಲ, ಉಪ್ಪಿನಕಾಯಿ ರೀತಿಯ ಹಲವಾರು ಉತ್ಪನ್ನಗಳನ್ನು ಮಾರಲು ಹಲವಾರು ರೈತರು ಮುಂದೆ ಬಂದಿದ್ದಾರೆ.

ಇದು ಸಾಧ್ಯವಾಗಿರುವುದು ಪ್ರೊ.ಎಂ.ಡಿ ನಂಜುಂಡಸ್ವಾಮಿ ಕನಸಿನ ವೈಜ್ಞಾನಿಕ ಬೆಲೆಯ ಮಾರುಕಟ್ಟೆ ವ್ಯವಸ್ಥೆ ‘ರೈತರಿಂದ ನೇರ ಗ್ರಾಹಕರಿಗೆ’ ಎಂಬ ಹೆಸರಿನ ಫೇಸ್‌ಬುಕ್‌ ಗ್ರೂಪ್ ಮೂಲಕ. “ರೈತರಿಗೆ ಆರ್ಥಿಕ ಭದ್ರತೆಯನ್ನು ತಂದುಕೊಡುವುದು ಈ ಗ್ರೂಪ್‌ನ ಉದ್ದೇಶ. ರೈತರಿಗೆ ಸಿಗಲೇಬೇಕಾದ ವೈಜ್ಞಾನಿಕ ಬೆಲೆಯು ಮಧ್ಯವರ್ತಿಗಳಿಂದ ತಪ್ಪಿಹೋಗುತ್ತಿರುವುದರಿಂದ, ರೈತರೇ ತಮ್ಮ ಬೆಳೆ ಹಾಗೂ ಉತ್ಪನ್ನಗಳನ್ನು ಫೇಸ್ ಬುಕ್‌ನ ಈ ಗ್ರೂಪ್‌ನ ಮುಖಾಂತರ ಗ್ರಾಹಕರಿಗೆ ನೇರವಾಗಿ ಸ್ಪರ್ಧಾತ್ಮಕ ಬೆಲೆಯಲ್ಲಿ ಮಾರಾಟ ಮಾಡುವ ವಿನೂತನ ಪ್ರಯತ್ನವಿದು. ರೈತರೆಲ್ಲರೂ ಸಹಕರಿಸಿ” ಎಂದು ಗ್ರೂಪ್‌ನ ಉದ್ದೇಶವನ್ನು ಸರಳವಾಗಿ ವಿವರಿಸಲಾಗಿದೆ.

ಈ ಗ್ರೂಪ್ ಆರಂಭವಾದ ಎರಡೇ ದಿನದಲ್ಲಿ ರೈತರು ಮತ್ತು ಗ್ರಾಹಕರಿಗೆ ಬಹುದೊಡ್ಡ ಭರವಸೆಯಾಗಿ ಕಂಡುಬಂದಿದೆ. ಜುಲೈ 9ರಂದು ಆರಂಭವಾದ ಈ ವಿಭಿನ್ನ ಪ್ರಯೋಗಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈಗಾಗಲೇ ಹತ್ತಾರು ಉತ್ಪನ್ನಗಳನ್ನು ಪೋಸ್ಟ್ ಮಾಡಲಾಗಿದೆ. ನೂರಾರು ರೈತರು ಮತ್ತು ಗ್ರಾಹಕರು ಈ ಗ್ರೂಪ್‌ಗೆ ಎಡತಾಕುತ್ತಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘದ ಪಚ್ಚೆ ನಂಜುಂಡಸ್ವಾಮಿ ಮತ್ತು ಯುವ ರೈತ ಸಂಘದ ಕಾರ್ಯಕರ್ತರ ಈ ಪ್ರಯತ್ನದಿಂದ ಹಲವಾರು ರೈತರು ಭವಿಷ್ಯದ ಬಗ್ಗೆ ಆಶಾವಾದ ಹೊಂದುವಂತಾಗಿದೆ.

ಪಚ್ಚೆ ನಂಜುಂಡಸ್ವಾಮಿ

ಈ ಪ್ರಯತ್ನ ಚಿಗುರೊಡೆದಿದ್ದು ಹೇಗೆ? ಎಂಬುದರ ಕುರಿತು ಇದರ ಸ್ಥಾಪಕರಾದ ಪಚ್ಚೆ ನಂಜುಂಡಸ್ವಾಮಿಯವರು ನಾನುಗೌರಿ.ಕಾಂ ಮಾತನಾಡಿದರು. “ನನ್ನ ಮನಸ್ಸು ಆತ್ಮಹತ್ಯೆ ಮಾಡಿಕೊಂಡ ರೈತರ ಬಗ್ಗೆ ಸದಾ ಮಿಡಿಯುತ್ತದೆ. ಈ ಕೋವಿಡ್ ಕಾಲದಲ್ಲಿಯೂ ಸಹ ಬೆಳೆ ಬೆಳೆದ ಎಷ್ಟೊ ರೈತರು ಮಾರಲಾಗದೇ ಬೆಳೆಯನ್ನು ಸುಟ್ಟುಬಿಟ್ಟ, ಹೊಲದಲ್ಲಿಯೇ ಉತ್ತುಬಿಟ್ಟಂತ ಘಟನೆಗಳನ್ನು ಕೇಳಿದ್ದೇವೆ. ಕೋವಿಡ್ ಬರುವುದಕ್ಕೂ ಮುಂಚೆಯೇ 16-17 ವರ್ಷಗಳಿಂದ ಲಕ್ಷಾಂತರ ರೈತರ ಆತ್ಮಹತ್ಯೆಗಳು ನಡೆದುಹೋಗಿವೆ. ಇವೆಲ್ಲವುಗಳಿಂದ ರೈತರ ಪರವಾಗಿ ಏನಾದರೂ ಮಾಡುವಂತೆ ತುಡಿಯುತ್ತಿತ್ತು. ಅದರ ಭಾಗವೇ ಈ ಗ್ರೂಪ್ ಆಗಿದೆ” ಎಂದರು.

ಮತ್ತೊಬ್ಬ ರೈತರ ಪೋಸ್ಟ್

ಇದು ಎರಡು ದಿನ ಮಗು ಅಷ್ಟೇ. ಇದರ ಹಿಂದೆ ಒಂದು ಇತಿಹಾಸವಿದೆ. ನೀರಾ ಚಳವಳಿ ಮಾಡುವಂತಹ ಸಂದರ್ಭದಲ್ಲಿ ಚಿತ್ರನಟ ಅಶೋಕ್‌ರವರು ಈ ಪರಿಕಲ್ಪನೆ ಇಟ್ಟುಕೊಂಡು ನಮ್ಮ ಮನೆಗೆ ಬಂದಿದ್ದರು. ನಮ್ಮ ತಂದೆ ಪ್ರೊ. ನಂಜುಂಡಸ್ವಾಮಿಯವರು ‘ಸ್ವದೇಶಿ’ ಎಂಬ ಹೆಸರಿನಲ್ಲಿ ಇದನ್ನು ಶುರು ಮಾಡಲು ಆರಂಭಿಸಿದ್ದರು. ಇದಕ್ಕೆ ತಮಿಳು ಚಿತ್ರನಟ ರಜಿನಿಕಾಂತ್‌ ಕೂಡ ‘ನಮ್ದು’ ಎಂಬ ಹೆಸರಿಡಿ ಎಂದು ಸಲಹೆ ನೀಡಿದ್ದರು. ಈ ಪ್ರಕ್ರಿಯೆ ನಡೆಯುತ್ತಿರುವಾಗಲೇ ಪ್ರೊ. ಎಂಡಿಎನ್ ಕ್ಯಾನ್ಸರ್‌ಗೆ ತುತ್ತಾದರು. ಈಗ ಬಹಳ ವರ್ಷಗಳ ನಂತರ ನಾವು ಇದನ್ನು ಆರಂಭಿಸಿದ್ದೇವೆ. ಸಮಾಜ ಕಟ್ಟುವ ಆರೋಗ್ಯಕರ ಚೇಷ್ಟೇ ಇದು. ಇದು ಸಮಾಜದಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಜನರಿಗೆ ಸಹಾಯವಾದರೆ ಅದೇ ನೆಮ್ಮದಿ ಎನ್ನುತ್ತಾರೆ ಪಚ್ಚೆ ನಂಜುಂಡಸ್ವಾಮಿಯವರು…

“ಇದು ಒಳ್ಳೆಯ ಸಮಯ. ಪ್ರತಿ ತಾಲೂಕಿನಲ್ಲೂ ರೈತರಿಂದ ನೇರವಾಗಿ ಗ್ರಾಹಕರಿಗೆ ತಲುಪಿಸುವ ವ್ಯವಸ್ಥೆ ಮಾಡಿ. ಇದರಿಂದ ದಲ್ಲಾಳಿಗಳ ಹಾವಳಿ ಕಡಿಮೆಯಾಗಿ ರೈತರಿಗೆ ತುಂಬಾ ಸಹಾಯ ಆಗುತ್ತದೆ . ರೈತರಿಂದ, ರೈತರಿಗಾಗಿ, ರೈತರಿಗೋಸ್ಕರ” ಎಂದು ವೆಂಕಟೇಶಯ್ಯ ಹೆಬ್ಬಸುರು ಎಂಬುವವರು ಗ್ರೂಪ್ ಕುರಿತು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಇಂದು ಇರುವ ಸಾಮಾನ್ಯ ಮಾರುಕಟ್ಟೆ ವ್ಯವಸ್ಥೆಯಲ್ಲಿ ಆಹಾರ ಬೆಳೆವ ರೈತ ಸುಖವಾಗಿಲ್ಲ. ಅದೇ ಆಹಾರ ಖರೀದಿಸುವ ಗ್ರಾಹಕರು ಕೂಡ ದುಬಾರಿ ಬೆಲೆಗೆ ಕೊಳ್ಳಬೇಕೆಂಬ ಮನೋಭಾವನೆ ಹೊಂದಿದ್ದಾರೆ. ಮಧ್ಯವರ್ತಿಗಳ ಹಾವಳಿಯ ಇಂತಹ ಪರಿಸ್ಥಿತಿಯಲ್ಲಿ ರೈತ ಮತ್ತು ಗ್ರಾಹಕ ಸ್ನೇಹಿಯಾದ ಹಲವಾರು ಪ್ರಯೋಗಗಳು ಹೊರಬರುತ್ತಿವೆ. ಅಂತಹ ಸಾಲಿಗೆ ಹೊಸ ಸೇರ್ಪಡೆಯಾದ ‘ರೈತರಿಂದ ನೇರ ಗ್ರಾಹಕರಿಗೆ’ ಪ್ರಯೋಗ ಯಶಸ್ವಿಯಾಗಲಿ. ಇದೇ ಮಾದರಿಯ ಹತ್ತಾರು ಯೋಜನೆಗಳು ಹೊರಬಂದು ರೈತರು ನೆಮ್ಮದಿಯ ಬದುಕು ಕಾಣುವಂತಾಗಲಿ ಎಂಬುದು ನಮ್ಮ ಆಶಯ. ನೀವೂ ಆ ಗ್ರೂಪ್ ಸೇರುವ ಮನಸ್ಸಿದ್ದಲ್ಲಿ ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಕೊರೊನಾ: ರೋಗ ನಿರೋಧಕತೆ ಕುರಿತು ಆಯುರ್ವೇದದ ದೃಷ್ಟಿಕೋನ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....