Homeಮುಖಪುಟ'ರೈತರಿಂದ ನೇರ ಗ್ರಾಹಕರಿಗೆ' ಫೇಸ್‌ಬುಕ್‌ ಗ್ರೂಪ್: ವಿಭಿನ್ನ ಪ್ರಯೋಗಕ್ಕೆ ಅಭೂತಪೂರ್ವ ಪ್ರತಿಕ್ರಿಯೆ

‘ರೈತರಿಂದ ನೇರ ಗ್ರಾಹಕರಿಗೆ’ ಫೇಸ್‌ಬುಕ್‌ ಗ್ರೂಪ್: ವಿಭಿನ್ನ ಪ್ರಯೋಗಕ್ಕೆ ಅಭೂತಪೂರ್ವ ಪ್ರತಿಕ್ರಿಯೆ

ಕರ್ನಾಟಕ ರಾಜ್ಯ ರೈತ ಸಂಘದ ಪಚ್ಚೆ ನಂಜುಂಡಸ್ವಾಮಿ ಮತ್ತು ಯುವ ರೈತ ಸಂಘದ ಕಾರ್ಯಕರ್ತರ ಈ ಪ್ರಯತ್ನದಿಂದ ಹಲವಾರು ರೈತರು ಭವಿಷ್ಯದ ಬಗ್ಗೆ ಆಶಾವಾದ ಹೊಂದುವಂತಾಗಿದೆ.

- Advertisement -
- Advertisement -

“ಸಾವಯುವ ಕೃಷಿಯಲ್ಲಿ ಬೆಳೆದ ಅರಿಶಿನದಿಂದ ತಯಾರಿಸಿದ ಪರಿಶುದ್ಧ ಅರಿಶಿನ ಪುಡಿ. 200 ರೂಪಾಯಿ ಒಂದು ಕೆಜಿ”.. ಎಂದು ಶಿವಮೊಗ್ಗ ಜಿಲ್ಲೆಯ ಹೊಸನಗರದ ಸಂತೋಷ್ ಕೆ.ಎಸ್ ಎಂಬುವವರು ಒಂದು ಪೋಸ್ಟ್ ಹಾಕುತ್ತಾರೆ. ಎರಡೇ ದಿನದಲ್ಲಿ ಸುಮಾರು 30ಕ್ಕೂ ಹೆಚ್ಚು ಜನ ನಮಗೆ ಎರಡು ಕೆಜಿ ಬೇಕು, ಒಂದು, ಅರ್ಧ ಕೆಜಿ ಬೇಕು ಎಂದು ಕಮೆಂಟ್ ಮಾಡುತ್ತಾರೆ. ನಿಮ್ಮ ಫೋನ್ ನಂಬರ್ ಕೊಡಿ ಎಂದು ಕೇಳುತ್ತಾರೆ. ಇದೇ ರೀತಿ ತೋಟದ ಅವರೆಕಾಯಿ, ಶುದ್ದ ಹರಳೆಣ್ಣೆ, ಏಲಕ್ಕಿ, ಕಾಳುಮೆಣಸು, ಜೋನಿ ಬೆಲ್ಲ, ಉಪ್ಪಿನಕಾಯಿ ರೀತಿಯ ಹಲವಾರು ಉತ್ಪನ್ನಗಳನ್ನು ಮಾರಲು ಹಲವಾರು ರೈತರು ಮುಂದೆ ಬಂದಿದ್ದಾರೆ.

ಇದು ಸಾಧ್ಯವಾಗಿರುವುದು ಪ್ರೊ.ಎಂ.ಡಿ ನಂಜುಂಡಸ್ವಾಮಿ ಕನಸಿನ ವೈಜ್ಞಾನಿಕ ಬೆಲೆಯ ಮಾರುಕಟ್ಟೆ ವ್ಯವಸ್ಥೆ ‘ರೈತರಿಂದ ನೇರ ಗ್ರಾಹಕರಿಗೆ’ ಎಂಬ ಹೆಸರಿನ ಫೇಸ್‌ಬುಕ್‌ ಗ್ರೂಪ್ ಮೂಲಕ. “ರೈತರಿಗೆ ಆರ್ಥಿಕ ಭದ್ರತೆಯನ್ನು ತಂದುಕೊಡುವುದು ಈ ಗ್ರೂಪ್‌ನ ಉದ್ದೇಶ. ರೈತರಿಗೆ ಸಿಗಲೇಬೇಕಾದ ವೈಜ್ಞಾನಿಕ ಬೆಲೆಯು ಮಧ್ಯವರ್ತಿಗಳಿಂದ ತಪ್ಪಿಹೋಗುತ್ತಿರುವುದರಿಂದ, ರೈತರೇ ತಮ್ಮ ಬೆಳೆ ಹಾಗೂ ಉತ್ಪನ್ನಗಳನ್ನು ಫೇಸ್ ಬುಕ್‌ನ ಈ ಗ್ರೂಪ್‌ನ ಮುಖಾಂತರ ಗ್ರಾಹಕರಿಗೆ ನೇರವಾಗಿ ಸ್ಪರ್ಧಾತ್ಮಕ ಬೆಲೆಯಲ್ಲಿ ಮಾರಾಟ ಮಾಡುವ ವಿನೂತನ ಪ್ರಯತ್ನವಿದು. ರೈತರೆಲ್ಲರೂ ಸಹಕರಿಸಿ” ಎಂದು ಗ್ರೂಪ್‌ನ ಉದ್ದೇಶವನ್ನು ಸರಳವಾಗಿ ವಿವರಿಸಲಾಗಿದೆ.

ಈ ಗ್ರೂಪ್ ಆರಂಭವಾದ ಎರಡೇ ದಿನದಲ್ಲಿ ರೈತರು ಮತ್ತು ಗ್ರಾಹಕರಿಗೆ ಬಹುದೊಡ್ಡ ಭರವಸೆಯಾಗಿ ಕಂಡುಬಂದಿದೆ. ಜುಲೈ 9ರಂದು ಆರಂಭವಾದ ಈ ವಿಭಿನ್ನ ಪ್ರಯೋಗಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈಗಾಗಲೇ ಹತ್ತಾರು ಉತ್ಪನ್ನಗಳನ್ನು ಪೋಸ್ಟ್ ಮಾಡಲಾಗಿದೆ. ನೂರಾರು ರೈತರು ಮತ್ತು ಗ್ರಾಹಕರು ಈ ಗ್ರೂಪ್‌ಗೆ ಎಡತಾಕುತ್ತಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘದ ಪಚ್ಚೆ ನಂಜುಂಡಸ್ವಾಮಿ ಮತ್ತು ಯುವ ರೈತ ಸಂಘದ ಕಾರ್ಯಕರ್ತರ ಈ ಪ್ರಯತ್ನದಿಂದ ಹಲವಾರು ರೈತರು ಭವಿಷ್ಯದ ಬಗ್ಗೆ ಆಶಾವಾದ ಹೊಂದುವಂತಾಗಿದೆ.

ಪಚ್ಚೆ ನಂಜುಂಡಸ್ವಾಮಿ

ಈ ಪ್ರಯತ್ನ ಚಿಗುರೊಡೆದಿದ್ದು ಹೇಗೆ? ಎಂಬುದರ ಕುರಿತು ಇದರ ಸ್ಥಾಪಕರಾದ ಪಚ್ಚೆ ನಂಜುಂಡಸ್ವಾಮಿಯವರು ನಾನುಗೌರಿ.ಕಾಂ ಮಾತನಾಡಿದರು. “ನನ್ನ ಮನಸ್ಸು ಆತ್ಮಹತ್ಯೆ ಮಾಡಿಕೊಂಡ ರೈತರ ಬಗ್ಗೆ ಸದಾ ಮಿಡಿಯುತ್ತದೆ. ಈ ಕೋವಿಡ್ ಕಾಲದಲ್ಲಿಯೂ ಸಹ ಬೆಳೆ ಬೆಳೆದ ಎಷ್ಟೊ ರೈತರು ಮಾರಲಾಗದೇ ಬೆಳೆಯನ್ನು ಸುಟ್ಟುಬಿಟ್ಟ, ಹೊಲದಲ್ಲಿಯೇ ಉತ್ತುಬಿಟ್ಟಂತ ಘಟನೆಗಳನ್ನು ಕೇಳಿದ್ದೇವೆ. ಕೋವಿಡ್ ಬರುವುದಕ್ಕೂ ಮುಂಚೆಯೇ 16-17 ವರ್ಷಗಳಿಂದ ಲಕ್ಷಾಂತರ ರೈತರ ಆತ್ಮಹತ್ಯೆಗಳು ನಡೆದುಹೋಗಿವೆ. ಇವೆಲ್ಲವುಗಳಿಂದ ರೈತರ ಪರವಾಗಿ ಏನಾದರೂ ಮಾಡುವಂತೆ ತುಡಿಯುತ್ತಿತ್ತು. ಅದರ ಭಾಗವೇ ಈ ಗ್ರೂಪ್ ಆಗಿದೆ” ಎಂದರು.

ಮತ್ತೊಬ್ಬ ರೈತರ ಪೋಸ್ಟ್

ಇದು ಎರಡು ದಿನ ಮಗು ಅಷ್ಟೇ. ಇದರ ಹಿಂದೆ ಒಂದು ಇತಿಹಾಸವಿದೆ. ನೀರಾ ಚಳವಳಿ ಮಾಡುವಂತಹ ಸಂದರ್ಭದಲ್ಲಿ ಚಿತ್ರನಟ ಅಶೋಕ್‌ರವರು ಈ ಪರಿಕಲ್ಪನೆ ಇಟ್ಟುಕೊಂಡು ನಮ್ಮ ಮನೆಗೆ ಬಂದಿದ್ದರು. ನಮ್ಮ ತಂದೆ ಪ್ರೊ. ನಂಜುಂಡಸ್ವಾಮಿಯವರು ‘ಸ್ವದೇಶಿ’ ಎಂಬ ಹೆಸರಿನಲ್ಲಿ ಇದನ್ನು ಶುರು ಮಾಡಲು ಆರಂಭಿಸಿದ್ದರು. ಇದಕ್ಕೆ ತಮಿಳು ಚಿತ್ರನಟ ರಜಿನಿಕಾಂತ್‌ ಕೂಡ ‘ನಮ್ದು’ ಎಂಬ ಹೆಸರಿಡಿ ಎಂದು ಸಲಹೆ ನೀಡಿದ್ದರು. ಈ ಪ್ರಕ್ರಿಯೆ ನಡೆಯುತ್ತಿರುವಾಗಲೇ ಪ್ರೊ. ಎಂಡಿಎನ್ ಕ್ಯಾನ್ಸರ್‌ಗೆ ತುತ್ತಾದರು. ಈಗ ಬಹಳ ವರ್ಷಗಳ ನಂತರ ನಾವು ಇದನ್ನು ಆರಂಭಿಸಿದ್ದೇವೆ. ಸಮಾಜ ಕಟ್ಟುವ ಆರೋಗ್ಯಕರ ಚೇಷ್ಟೇ ಇದು. ಇದು ಸಮಾಜದಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಜನರಿಗೆ ಸಹಾಯವಾದರೆ ಅದೇ ನೆಮ್ಮದಿ ಎನ್ನುತ್ತಾರೆ ಪಚ್ಚೆ ನಂಜುಂಡಸ್ವಾಮಿಯವರು…

“ಇದು ಒಳ್ಳೆಯ ಸಮಯ. ಪ್ರತಿ ತಾಲೂಕಿನಲ್ಲೂ ರೈತರಿಂದ ನೇರವಾಗಿ ಗ್ರಾಹಕರಿಗೆ ತಲುಪಿಸುವ ವ್ಯವಸ್ಥೆ ಮಾಡಿ. ಇದರಿಂದ ದಲ್ಲಾಳಿಗಳ ಹಾವಳಿ ಕಡಿಮೆಯಾಗಿ ರೈತರಿಗೆ ತುಂಬಾ ಸಹಾಯ ಆಗುತ್ತದೆ . ರೈತರಿಂದ, ರೈತರಿಗಾಗಿ, ರೈತರಿಗೋಸ್ಕರ” ಎಂದು ವೆಂಕಟೇಶಯ್ಯ ಹೆಬ್ಬಸುರು ಎಂಬುವವರು ಗ್ರೂಪ್ ಕುರಿತು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಇಂದು ಇರುವ ಸಾಮಾನ್ಯ ಮಾರುಕಟ್ಟೆ ವ್ಯವಸ್ಥೆಯಲ್ಲಿ ಆಹಾರ ಬೆಳೆವ ರೈತ ಸುಖವಾಗಿಲ್ಲ. ಅದೇ ಆಹಾರ ಖರೀದಿಸುವ ಗ್ರಾಹಕರು ಕೂಡ ದುಬಾರಿ ಬೆಲೆಗೆ ಕೊಳ್ಳಬೇಕೆಂಬ ಮನೋಭಾವನೆ ಹೊಂದಿದ್ದಾರೆ. ಮಧ್ಯವರ್ತಿಗಳ ಹಾವಳಿಯ ಇಂತಹ ಪರಿಸ್ಥಿತಿಯಲ್ಲಿ ರೈತ ಮತ್ತು ಗ್ರಾಹಕ ಸ್ನೇಹಿಯಾದ ಹಲವಾರು ಪ್ರಯೋಗಗಳು ಹೊರಬರುತ್ತಿವೆ. ಅಂತಹ ಸಾಲಿಗೆ ಹೊಸ ಸೇರ್ಪಡೆಯಾದ ‘ರೈತರಿಂದ ನೇರ ಗ್ರಾಹಕರಿಗೆ’ ಪ್ರಯೋಗ ಯಶಸ್ವಿಯಾಗಲಿ. ಇದೇ ಮಾದರಿಯ ಹತ್ತಾರು ಯೋಜನೆಗಳು ಹೊರಬಂದು ರೈತರು ನೆಮ್ಮದಿಯ ಬದುಕು ಕಾಣುವಂತಾಗಲಿ ಎಂಬುದು ನಮ್ಮ ಆಶಯ. ನೀವೂ ಆ ಗ್ರೂಪ್ ಸೇರುವ ಮನಸ್ಸಿದ್ದಲ್ಲಿ ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಕೊರೊನಾ: ರೋಗ ನಿರೋಧಕತೆ ಕುರಿತು ಆಯುರ್ವೇದದ ದೃಷ್ಟಿಕೋನ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...