Homeಮುಖಪುಟ'ರೈತರಿಂದ ನೇರ ಗ್ರಾಹಕರಿಗೆ' ಫೇಸ್‌ಬುಕ್‌ ಗ್ರೂಪ್: ವಿಭಿನ್ನ ಪ್ರಯೋಗಕ್ಕೆ ಅಭೂತಪೂರ್ವ ಪ್ರತಿಕ್ರಿಯೆ

‘ರೈತರಿಂದ ನೇರ ಗ್ರಾಹಕರಿಗೆ’ ಫೇಸ್‌ಬುಕ್‌ ಗ್ರೂಪ್: ವಿಭಿನ್ನ ಪ್ರಯೋಗಕ್ಕೆ ಅಭೂತಪೂರ್ವ ಪ್ರತಿಕ್ರಿಯೆ

ಕರ್ನಾಟಕ ರಾಜ್ಯ ರೈತ ಸಂಘದ ಪಚ್ಚೆ ನಂಜುಂಡಸ್ವಾಮಿ ಮತ್ತು ಯುವ ರೈತ ಸಂಘದ ಕಾರ್ಯಕರ್ತರ ಈ ಪ್ರಯತ್ನದಿಂದ ಹಲವಾರು ರೈತರು ಭವಿಷ್ಯದ ಬಗ್ಗೆ ಆಶಾವಾದ ಹೊಂದುವಂತಾಗಿದೆ.

- Advertisement -
- Advertisement -

“ಸಾವಯುವ ಕೃಷಿಯಲ್ಲಿ ಬೆಳೆದ ಅರಿಶಿನದಿಂದ ತಯಾರಿಸಿದ ಪರಿಶುದ್ಧ ಅರಿಶಿನ ಪುಡಿ. 200 ರೂಪಾಯಿ ಒಂದು ಕೆಜಿ”.. ಎಂದು ಶಿವಮೊಗ್ಗ ಜಿಲ್ಲೆಯ ಹೊಸನಗರದ ಸಂತೋಷ್ ಕೆ.ಎಸ್ ಎಂಬುವವರು ಒಂದು ಪೋಸ್ಟ್ ಹಾಕುತ್ತಾರೆ. ಎರಡೇ ದಿನದಲ್ಲಿ ಸುಮಾರು 30ಕ್ಕೂ ಹೆಚ್ಚು ಜನ ನಮಗೆ ಎರಡು ಕೆಜಿ ಬೇಕು, ಒಂದು, ಅರ್ಧ ಕೆಜಿ ಬೇಕು ಎಂದು ಕಮೆಂಟ್ ಮಾಡುತ್ತಾರೆ. ನಿಮ್ಮ ಫೋನ್ ನಂಬರ್ ಕೊಡಿ ಎಂದು ಕೇಳುತ್ತಾರೆ. ಇದೇ ರೀತಿ ತೋಟದ ಅವರೆಕಾಯಿ, ಶುದ್ದ ಹರಳೆಣ್ಣೆ, ಏಲಕ್ಕಿ, ಕಾಳುಮೆಣಸು, ಜೋನಿ ಬೆಲ್ಲ, ಉಪ್ಪಿನಕಾಯಿ ರೀತಿಯ ಹಲವಾರು ಉತ್ಪನ್ನಗಳನ್ನು ಮಾರಲು ಹಲವಾರು ರೈತರು ಮುಂದೆ ಬಂದಿದ್ದಾರೆ.

ಇದು ಸಾಧ್ಯವಾಗಿರುವುದು ಪ್ರೊ.ಎಂ.ಡಿ ನಂಜುಂಡಸ್ವಾಮಿ ಕನಸಿನ ವೈಜ್ಞಾನಿಕ ಬೆಲೆಯ ಮಾರುಕಟ್ಟೆ ವ್ಯವಸ್ಥೆ ‘ರೈತರಿಂದ ನೇರ ಗ್ರಾಹಕರಿಗೆ’ ಎಂಬ ಹೆಸರಿನ ಫೇಸ್‌ಬುಕ್‌ ಗ್ರೂಪ್ ಮೂಲಕ. “ರೈತರಿಗೆ ಆರ್ಥಿಕ ಭದ್ರತೆಯನ್ನು ತಂದುಕೊಡುವುದು ಈ ಗ್ರೂಪ್‌ನ ಉದ್ದೇಶ. ರೈತರಿಗೆ ಸಿಗಲೇಬೇಕಾದ ವೈಜ್ಞಾನಿಕ ಬೆಲೆಯು ಮಧ್ಯವರ್ತಿಗಳಿಂದ ತಪ್ಪಿಹೋಗುತ್ತಿರುವುದರಿಂದ, ರೈತರೇ ತಮ್ಮ ಬೆಳೆ ಹಾಗೂ ಉತ್ಪನ್ನಗಳನ್ನು ಫೇಸ್ ಬುಕ್‌ನ ಈ ಗ್ರೂಪ್‌ನ ಮುಖಾಂತರ ಗ್ರಾಹಕರಿಗೆ ನೇರವಾಗಿ ಸ್ಪರ್ಧಾತ್ಮಕ ಬೆಲೆಯಲ್ಲಿ ಮಾರಾಟ ಮಾಡುವ ವಿನೂತನ ಪ್ರಯತ್ನವಿದು. ರೈತರೆಲ್ಲರೂ ಸಹಕರಿಸಿ” ಎಂದು ಗ್ರೂಪ್‌ನ ಉದ್ದೇಶವನ್ನು ಸರಳವಾಗಿ ವಿವರಿಸಲಾಗಿದೆ.

ಈ ಗ್ರೂಪ್ ಆರಂಭವಾದ ಎರಡೇ ದಿನದಲ್ಲಿ ರೈತರು ಮತ್ತು ಗ್ರಾಹಕರಿಗೆ ಬಹುದೊಡ್ಡ ಭರವಸೆಯಾಗಿ ಕಂಡುಬಂದಿದೆ. ಜುಲೈ 9ರಂದು ಆರಂಭವಾದ ಈ ವಿಭಿನ್ನ ಪ್ರಯೋಗಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈಗಾಗಲೇ ಹತ್ತಾರು ಉತ್ಪನ್ನಗಳನ್ನು ಪೋಸ್ಟ್ ಮಾಡಲಾಗಿದೆ. ನೂರಾರು ರೈತರು ಮತ್ತು ಗ್ರಾಹಕರು ಈ ಗ್ರೂಪ್‌ಗೆ ಎಡತಾಕುತ್ತಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘದ ಪಚ್ಚೆ ನಂಜುಂಡಸ್ವಾಮಿ ಮತ್ತು ಯುವ ರೈತ ಸಂಘದ ಕಾರ್ಯಕರ್ತರ ಈ ಪ್ರಯತ್ನದಿಂದ ಹಲವಾರು ರೈತರು ಭವಿಷ್ಯದ ಬಗ್ಗೆ ಆಶಾವಾದ ಹೊಂದುವಂತಾಗಿದೆ.

ಪಚ್ಚೆ ನಂಜುಂಡಸ್ವಾಮಿ

ಈ ಪ್ರಯತ್ನ ಚಿಗುರೊಡೆದಿದ್ದು ಹೇಗೆ? ಎಂಬುದರ ಕುರಿತು ಇದರ ಸ್ಥಾಪಕರಾದ ಪಚ್ಚೆ ನಂಜುಂಡಸ್ವಾಮಿಯವರು ನಾನುಗೌರಿ.ಕಾಂ ಮಾತನಾಡಿದರು. “ನನ್ನ ಮನಸ್ಸು ಆತ್ಮಹತ್ಯೆ ಮಾಡಿಕೊಂಡ ರೈತರ ಬಗ್ಗೆ ಸದಾ ಮಿಡಿಯುತ್ತದೆ. ಈ ಕೋವಿಡ್ ಕಾಲದಲ್ಲಿಯೂ ಸಹ ಬೆಳೆ ಬೆಳೆದ ಎಷ್ಟೊ ರೈತರು ಮಾರಲಾಗದೇ ಬೆಳೆಯನ್ನು ಸುಟ್ಟುಬಿಟ್ಟ, ಹೊಲದಲ್ಲಿಯೇ ಉತ್ತುಬಿಟ್ಟಂತ ಘಟನೆಗಳನ್ನು ಕೇಳಿದ್ದೇವೆ. ಕೋವಿಡ್ ಬರುವುದಕ್ಕೂ ಮುಂಚೆಯೇ 16-17 ವರ್ಷಗಳಿಂದ ಲಕ್ಷಾಂತರ ರೈತರ ಆತ್ಮಹತ್ಯೆಗಳು ನಡೆದುಹೋಗಿವೆ. ಇವೆಲ್ಲವುಗಳಿಂದ ರೈತರ ಪರವಾಗಿ ಏನಾದರೂ ಮಾಡುವಂತೆ ತುಡಿಯುತ್ತಿತ್ತು. ಅದರ ಭಾಗವೇ ಈ ಗ್ರೂಪ್ ಆಗಿದೆ” ಎಂದರು.

ಮತ್ತೊಬ್ಬ ರೈತರ ಪೋಸ್ಟ್

ಇದು ಎರಡು ದಿನ ಮಗು ಅಷ್ಟೇ. ಇದರ ಹಿಂದೆ ಒಂದು ಇತಿಹಾಸವಿದೆ. ನೀರಾ ಚಳವಳಿ ಮಾಡುವಂತಹ ಸಂದರ್ಭದಲ್ಲಿ ಚಿತ್ರನಟ ಅಶೋಕ್‌ರವರು ಈ ಪರಿಕಲ್ಪನೆ ಇಟ್ಟುಕೊಂಡು ನಮ್ಮ ಮನೆಗೆ ಬಂದಿದ್ದರು. ನಮ್ಮ ತಂದೆ ಪ್ರೊ. ನಂಜುಂಡಸ್ವಾಮಿಯವರು ‘ಸ್ವದೇಶಿ’ ಎಂಬ ಹೆಸರಿನಲ್ಲಿ ಇದನ್ನು ಶುರು ಮಾಡಲು ಆರಂಭಿಸಿದ್ದರು. ಇದಕ್ಕೆ ತಮಿಳು ಚಿತ್ರನಟ ರಜಿನಿಕಾಂತ್‌ ಕೂಡ ‘ನಮ್ದು’ ಎಂಬ ಹೆಸರಿಡಿ ಎಂದು ಸಲಹೆ ನೀಡಿದ್ದರು. ಈ ಪ್ರಕ್ರಿಯೆ ನಡೆಯುತ್ತಿರುವಾಗಲೇ ಪ್ರೊ. ಎಂಡಿಎನ್ ಕ್ಯಾನ್ಸರ್‌ಗೆ ತುತ್ತಾದರು. ಈಗ ಬಹಳ ವರ್ಷಗಳ ನಂತರ ನಾವು ಇದನ್ನು ಆರಂಭಿಸಿದ್ದೇವೆ. ಸಮಾಜ ಕಟ್ಟುವ ಆರೋಗ್ಯಕರ ಚೇಷ್ಟೇ ಇದು. ಇದು ಸಮಾಜದಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಜನರಿಗೆ ಸಹಾಯವಾದರೆ ಅದೇ ನೆಮ್ಮದಿ ಎನ್ನುತ್ತಾರೆ ಪಚ್ಚೆ ನಂಜುಂಡಸ್ವಾಮಿಯವರು…

“ಇದು ಒಳ್ಳೆಯ ಸಮಯ. ಪ್ರತಿ ತಾಲೂಕಿನಲ್ಲೂ ರೈತರಿಂದ ನೇರವಾಗಿ ಗ್ರಾಹಕರಿಗೆ ತಲುಪಿಸುವ ವ್ಯವಸ್ಥೆ ಮಾಡಿ. ಇದರಿಂದ ದಲ್ಲಾಳಿಗಳ ಹಾವಳಿ ಕಡಿಮೆಯಾಗಿ ರೈತರಿಗೆ ತುಂಬಾ ಸಹಾಯ ಆಗುತ್ತದೆ . ರೈತರಿಂದ, ರೈತರಿಗಾಗಿ, ರೈತರಿಗೋಸ್ಕರ” ಎಂದು ವೆಂಕಟೇಶಯ್ಯ ಹೆಬ್ಬಸುರು ಎಂಬುವವರು ಗ್ರೂಪ್ ಕುರಿತು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಇಂದು ಇರುವ ಸಾಮಾನ್ಯ ಮಾರುಕಟ್ಟೆ ವ್ಯವಸ್ಥೆಯಲ್ಲಿ ಆಹಾರ ಬೆಳೆವ ರೈತ ಸುಖವಾಗಿಲ್ಲ. ಅದೇ ಆಹಾರ ಖರೀದಿಸುವ ಗ್ರಾಹಕರು ಕೂಡ ದುಬಾರಿ ಬೆಲೆಗೆ ಕೊಳ್ಳಬೇಕೆಂಬ ಮನೋಭಾವನೆ ಹೊಂದಿದ್ದಾರೆ. ಮಧ್ಯವರ್ತಿಗಳ ಹಾವಳಿಯ ಇಂತಹ ಪರಿಸ್ಥಿತಿಯಲ್ಲಿ ರೈತ ಮತ್ತು ಗ್ರಾಹಕ ಸ್ನೇಹಿಯಾದ ಹಲವಾರು ಪ್ರಯೋಗಗಳು ಹೊರಬರುತ್ತಿವೆ. ಅಂತಹ ಸಾಲಿಗೆ ಹೊಸ ಸೇರ್ಪಡೆಯಾದ ‘ರೈತರಿಂದ ನೇರ ಗ್ರಾಹಕರಿಗೆ’ ಪ್ರಯೋಗ ಯಶಸ್ವಿಯಾಗಲಿ. ಇದೇ ಮಾದರಿಯ ಹತ್ತಾರು ಯೋಜನೆಗಳು ಹೊರಬಂದು ರೈತರು ನೆಮ್ಮದಿಯ ಬದುಕು ಕಾಣುವಂತಾಗಲಿ ಎಂಬುದು ನಮ್ಮ ಆಶಯ. ನೀವೂ ಆ ಗ್ರೂಪ್ ಸೇರುವ ಮನಸ್ಸಿದ್ದಲ್ಲಿ ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಕೊರೊನಾ: ರೋಗ ನಿರೋಧಕತೆ ಕುರಿತು ಆಯುರ್ವೇದದ ದೃಷ್ಟಿಕೋನ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...