Homeಮುಖಪುಟ'ರೈತರಿಂದ ನೇರ ಗ್ರಾಹಕರಿಗೆ' ಫೇಸ್‌ಬುಕ್‌ ಗ್ರೂಪ್: ವಿಭಿನ್ನ ಪ್ರಯೋಗಕ್ಕೆ ಅಭೂತಪೂರ್ವ ಪ್ರತಿಕ್ರಿಯೆ

‘ರೈತರಿಂದ ನೇರ ಗ್ರಾಹಕರಿಗೆ’ ಫೇಸ್‌ಬುಕ್‌ ಗ್ರೂಪ್: ವಿಭಿನ್ನ ಪ್ರಯೋಗಕ್ಕೆ ಅಭೂತಪೂರ್ವ ಪ್ರತಿಕ್ರಿಯೆ

ಕರ್ನಾಟಕ ರಾಜ್ಯ ರೈತ ಸಂಘದ ಪಚ್ಚೆ ನಂಜುಂಡಸ್ವಾಮಿ ಮತ್ತು ಯುವ ರೈತ ಸಂಘದ ಕಾರ್ಯಕರ್ತರ ಈ ಪ್ರಯತ್ನದಿಂದ ಹಲವಾರು ರೈತರು ಭವಿಷ್ಯದ ಬಗ್ಗೆ ಆಶಾವಾದ ಹೊಂದುವಂತಾಗಿದೆ.

- Advertisement -
- Advertisement -

“ಸಾವಯುವ ಕೃಷಿಯಲ್ಲಿ ಬೆಳೆದ ಅರಿಶಿನದಿಂದ ತಯಾರಿಸಿದ ಪರಿಶುದ್ಧ ಅರಿಶಿನ ಪುಡಿ. 200 ರೂಪಾಯಿ ಒಂದು ಕೆಜಿ”.. ಎಂದು ಶಿವಮೊಗ್ಗ ಜಿಲ್ಲೆಯ ಹೊಸನಗರದ ಸಂತೋಷ್ ಕೆ.ಎಸ್ ಎಂಬುವವರು ಒಂದು ಪೋಸ್ಟ್ ಹಾಕುತ್ತಾರೆ. ಎರಡೇ ದಿನದಲ್ಲಿ ಸುಮಾರು 30ಕ್ಕೂ ಹೆಚ್ಚು ಜನ ನಮಗೆ ಎರಡು ಕೆಜಿ ಬೇಕು, ಒಂದು, ಅರ್ಧ ಕೆಜಿ ಬೇಕು ಎಂದು ಕಮೆಂಟ್ ಮಾಡುತ್ತಾರೆ. ನಿಮ್ಮ ಫೋನ್ ನಂಬರ್ ಕೊಡಿ ಎಂದು ಕೇಳುತ್ತಾರೆ. ಇದೇ ರೀತಿ ತೋಟದ ಅವರೆಕಾಯಿ, ಶುದ್ದ ಹರಳೆಣ್ಣೆ, ಏಲಕ್ಕಿ, ಕಾಳುಮೆಣಸು, ಜೋನಿ ಬೆಲ್ಲ, ಉಪ್ಪಿನಕಾಯಿ ರೀತಿಯ ಹಲವಾರು ಉತ್ಪನ್ನಗಳನ್ನು ಮಾರಲು ಹಲವಾರು ರೈತರು ಮುಂದೆ ಬಂದಿದ್ದಾರೆ.

ಇದು ಸಾಧ್ಯವಾಗಿರುವುದು ಪ್ರೊ.ಎಂ.ಡಿ ನಂಜುಂಡಸ್ವಾಮಿ ಕನಸಿನ ವೈಜ್ಞಾನಿಕ ಬೆಲೆಯ ಮಾರುಕಟ್ಟೆ ವ್ಯವಸ್ಥೆ ‘ರೈತರಿಂದ ನೇರ ಗ್ರಾಹಕರಿಗೆ’ ಎಂಬ ಹೆಸರಿನ ಫೇಸ್‌ಬುಕ್‌ ಗ್ರೂಪ್ ಮೂಲಕ. “ರೈತರಿಗೆ ಆರ್ಥಿಕ ಭದ್ರತೆಯನ್ನು ತಂದುಕೊಡುವುದು ಈ ಗ್ರೂಪ್‌ನ ಉದ್ದೇಶ. ರೈತರಿಗೆ ಸಿಗಲೇಬೇಕಾದ ವೈಜ್ಞಾನಿಕ ಬೆಲೆಯು ಮಧ್ಯವರ್ತಿಗಳಿಂದ ತಪ್ಪಿಹೋಗುತ್ತಿರುವುದರಿಂದ, ರೈತರೇ ತಮ್ಮ ಬೆಳೆ ಹಾಗೂ ಉತ್ಪನ್ನಗಳನ್ನು ಫೇಸ್ ಬುಕ್‌ನ ಈ ಗ್ರೂಪ್‌ನ ಮುಖಾಂತರ ಗ್ರಾಹಕರಿಗೆ ನೇರವಾಗಿ ಸ್ಪರ್ಧಾತ್ಮಕ ಬೆಲೆಯಲ್ಲಿ ಮಾರಾಟ ಮಾಡುವ ವಿನೂತನ ಪ್ರಯತ್ನವಿದು. ರೈತರೆಲ್ಲರೂ ಸಹಕರಿಸಿ” ಎಂದು ಗ್ರೂಪ್‌ನ ಉದ್ದೇಶವನ್ನು ಸರಳವಾಗಿ ವಿವರಿಸಲಾಗಿದೆ.

ಈ ಗ್ರೂಪ್ ಆರಂಭವಾದ ಎರಡೇ ದಿನದಲ್ಲಿ ರೈತರು ಮತ್ತು ಗ್ರಾಹಕರಿಗೆ ಬಹುದೊಡ್ಡ ಭರವಸೆಯಾಗಿ ಕಂಡುಬಂದಿದೆ. ಜುಲೈ 9ರಂದು ಆರಂಭವಾದ ಈ ವಿಭಿನ್ನ ಪ್ರಯೋಗಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈಗಾಗಲೇ ಹತ್ತಾರು ಉತ್ಪನ್ನಗಳನ್ನು ಪೋಸ್ಟ್ ಮಾಡಲಾಗಿದೆ. ನೂರಾರು ರೈತರು ಮತ್ತು ಗ್ರಾಹಕರು ಈ ಗ್ರೂಪ್‌ಗೆ ಎಡತಾಕುತ್ತಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘದ ಪಚ್ಚೆ ನಂಜುಂಡಸ್ವಾಮಿ ಮತ್ತು ಯುವ ರೈತ ಸಂಘದ ಕಾರ್ಯಕರ್ತರ ಈ ಪ್ರಯತ್ನದಿಂದ ಹಲವಾರು ರೈತರು ಭವಿಷ್ಯದ ಬಗ್ಗೆ ಆಶಾವಾದ ಹೊಂದುವಂತಾಗಿದೆ.

ಪಚ್ಚೆ ನಂಜುಂಡಸ್ವಾಮಿ

ಈ ಪ್ರಯತ್ನ ಚಿಗುರೊಡೆದಿದ್ದು ಹೇಗೆ? ಎಂಬುದರ ಕುರಿತು ಇದರ ಸ್ಥಾಪಕರಾದ ಪಚ್ಚೆ ನಂಜುಂಡಸ್ವಾಮಿಯವರು ನಾನುಗೌರಿ.ಕಾಂ ಮಾತನಾಡಿದರು. “ನನ್ನ ಮನಸ್ಸು ಆತ್ಮಹತ್ಯೆ ಮಾಡಿಕೊಂಡ ರೈತರ ಬಗ್ಗೆ ಸದಾ ಮಿಡಿಯುತ್ತದೆ. ಈ ಕೋವಿಡ್ ಕಾಲದಲ್ಲಿಯೂ ಸಹ ಬೆಳೆ ಬೆಳೆದ ಎಷ್ಟೊ ರೈತರು ಮಾರಲಾಗದೇ ಬೆಳೆಯನ್ನು ಸುಟ್ಟುಬಿಟ್ಟ, ಹೊಲದಲ್ಲಿಯೇ ಉತ್ತುಬಿಟ್ಟಂತ ಘಟನೆಗಳನ್ನು ಕೇಳಿದ್ದೇವೆ. ಕೋವಿಡ್ ಬರುವುದಕ್ಕೂ ಮುಂಚೆಯೇ 16-17 ವರ್ಷಗಳಿಂದ ಲಕ್ಷಾಂತರ ರೈತರ ಆತ್ಮಹತ್ಯೆಗಳು ನಡೆದುಹೋಗಿವೆ. ಇವೆಲ್ಲವುಗಳಿಂದ ರೈತರ ಪರವಾಗಿ ಏನಾದರೂ ಮಾಡುವಂತೆ ತುಡಿಯುತ್ತಿತ್ತು. ಅದರ ಭಾಗವೇ ಈ ಗ್ರೂಪ್ ಆಗಿದೆ” ಎಂದರು.

ಮತ್ತೊಬ್ಬ ರೈತರ ಪೋಸ್ಟ್

ಇದು ಎರಡು ದಿನ ಮಗು ಅಷ್ಟೇ. ಇದರ ಹಿಂದೆ ಒಂದು ಇತಿಹಾಸವಿದೆ. ನೀರಾ ಚಳವಳಿ ಮಾಡುವಂತಹ ಸಂದರ್ಭದಲ್ಲಿ ಚಿತ್ರನಟ ಅಶೋಕ್‌ರವರು ಈ ಪರಿಕಲ್ಪನೆ ಇಟ್ಟುಕೊಂಡು ನಮ್ಮ ಮನೆಗೆ ಬಂದಿದ್ದರು. ನಮ್ಮ ತಂದೆ ಪ್ರೊ. ನಂಜುಂಡಸ್ವಾಮಿಯವರು ‘ಸ್ವದೇಶಿ’ ಎಂಬ ಹೆಸರಿನಲ್ಲಿ ಇದನ್ನು ಶುರು ಮಾಡಲು ಆರಂಭಿಸಿದ್ದರು. ಇದಕ್ಕೆ ತಮಿಳು ಚಿತ್ರನಟ ರಜಿನಿಕಾಂತ್‌ ಕೂಡ ‘ನಮ್ದು’ ಎಂಬ ಹೆಸರಿಡಿ ಎಂದು ಸಲಹೆ ನೀಡಿದ್ದರು. ಈ ಪ್ರಕ್ರಿಯೆ ನಡೆಯುತ್ತಿರುವಾಗಲೇ ಪ್ರೊ. ಎಂಡಿಎನ್ ಕ್ಯಾನ್ಸರ್‌ಗೆ ತುತ್ತಾದರು. ಈಗ ಬಹಳ ವರ್ಷಗಳ ನಂತರ ನಾವು ಇದನ್ನು ಆರಂಭಿಸಿದ್ದೇವೆ. ಸಮಾಜ ಕಟ್ಟುವ ಆರೋಗ್ಯಕರ ಚೇಷ್ಟೇ ಇದು. ಇದು ಸಮಾಜದಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಜನರಿಗೆ ಸಹಾಯವಾದರೆ ಅದೇ ನೆಮ್ಮದಿ ಎನ್ನುತ್ತಾರೆ ಪಚ್ಚೆ ನಂಜುಂಡಸ್ವಾಮಿಯವರು…

“ಇದು ಒಳ್ಳೆಯ ಸಮಯ. ಪ್ರತಿ ತಾಲೂಕಿನಲ್ಲೂ ರೈತರಿಂದ ನೇರವಾಗಿ ಗ್ರಾಹಕರಿಗೆ ತಲುಪಿಸುವ ವ್ಯವಸ್ಥೆ ಮಾಡಿ. ಇದರಿಂದ ದಲ್ಲಾಳಿಗಳ ಹಾವಳಿ ಕಡಿಮೆಯಾಗಿ ರೈತರಿಗೆ ತುಂಬಾ ಸಹಾಯ ಆಗುತ್ತದೆ . ರೈತರಿಂದ, ರೈತರಿಗಾಗಿ, ರೈತರಿಗೋಸ್ಕರ” ಎಂದು ವೆಂಕಟೇಶಯ್ಯ ಹೆಬ್ಬಸುರು ಎಂಬುವವರು ಗ್ರೂಪ್ ಕುರಿತು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಇಂದು ಇರುವ ಸಾಮಾನ್ಯ ಮಾರುಕಟ್ಟೆ ವ್ಯವಸ್ಥೆಯಲ್ಲಿ ಆಹಾರ ಬೆಳೆವ ರೈತ ಸುಖವಾಗಿಲ್ಲ. ಅದೇ ಆಹಾರ ಖರೀದಿಸುವ ಗ್ರಾಹಕರು ಕೂಡ ದುಬಾರಿ ಬೆಲೆಗೆ ಕೊಳ್ಳಬೇಕೆಂಬ ಮನೋಭಾವನೆ ಹೊಂದಿದ್ದಾರೆ. ಮಧ್ಯವರ್ತಿಗಳ ಹಾವಳಿಯ ಇಂತಹ ಪರಿಸ್ಥಿತಿಯಲ್ಲಿ ರೈತ ಮತ್ತು ಗ್ರಾಹಕ ಸ್ನೇಹಿಯಾದ ಹಲವಾರು ಪ್ರಯೋಗಗಳು ಹೊರಬರುತ್ತಿವೆ. ಅಂತಹ ಸಾಲಿಗೆ ಹೊಸ ಸೇರ್ಪಡೆಯಾದ ‘ರೈತರಿಂದ ನೇರ ಗ್ರಾಹಕರಿಗೆ’ ಪ್ರಯೋಗ ಯಶಸ್ವಿಯಾಗಲಿ. ಇದೇ ಮಾದರಿಯ ಹತ್ತಾರು ಯೋಜನೆಗಳು ಹೊರಬಂದು ರೈತರು ನೆಮ್ಮದಿಯ ಬದುಕು ಕಾಣುವಂತಾಗಲಿ ಎಂಬುದು ನಮ್ಮ ಆಶಯ. ನೀವೂ ಆ ಗ್ರೂಪ್ ಸೇರುವ ಮನಸ್ಸಿದ್ದಲ್ಲಿ ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಕೊರೊನಾ: ರೋಗ ನಿರೋಧಕತೆ ಕುರಿತು ಆಯುರ್ವೇದದ ದೃಷ್ಟಿಕೋನ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...