Homeಮುಖಪುಟ'ರೈತರಿಂದ ನೇರ ಗ್ರಾಹಕರಿಗೆ' ಫೇಸ್‌ಬುಕ್‌ ಗ್ರೂಪ್: ವಿಭಿನ್ನ ಪ್ರಯೋಗಕ್ಕೆ ಅಭೂತಪೂರ್ವ ಪ್ರತಿಕ್ರಿಯೆ

‘ರೈತರಿಂದ ನೇರ ಗ್ರಾಹಕರಿಗೆ’ ಫೇಸ್‌ಬುಕ್‌ ಗ್ರೂಪ್: ವಿಭಿನ್ನ ಪ್ರಯೋಗಕ್ಕೆ ಅಭೂತಪೂರ್ವ ಪ್ರತಿಕ್ರಿಯೆ

ಕರ್ನಾಟಕ ರಾಜ್ಯ ರೈತ ಸಂಘದ ಪಚ್ಚೆ ನಂಜುಂಡಸ್ವಾಮಿ ಮತ್ತು ಯುವ ರೈತ ಸಂಘದ ಕಾರ್ಯಕರ್ತರ ಈ ಪ್ರಯತ್ನದಿಂದ ಹಲವಾರು ರೈತರು ಭವಿಷ್ಯದ ಬಗ್ಗೆ ಆಶಾವಾದ ಹೊಂದುವಂತಾಗಿದೆ.

- Advertisement -
- Advertisement -

“ಸಾವಯುವ ಕೃಷಿಯಲ್ಲಿ ಬೆಳೆದ ಅರಿಶಿನದಿಂದ ತಯಾರಿಸಿದ ಪರಿಶುದ್ಧ ಅರಿಶಿನ ಪುಡಿ. 200 ರೂಪಾಯಿ ಒಂದು ಕೆಜಿ”.. ಎಂದು ಶಿವಮೊಗ್ಗ ಜಿಲ್ಲೆಯ ಹೊಸನಗರದ ಸಂತೋಷ್ ಕೆ.ಎಸ್ ಎಂಬುವವರು ಒಂದು ಪೋಸ್ಟ್ ಹಾಕುತ್ತಾರೆ. ಎರಡೇ ದಿನದಲ್ಲಿ ಸುಮಾರು 30ಕ್ಕೂ ಹೆಚ್ಚು ಜನ ನಮಗೆ ಎರಡು ಕೆಜಿ ಬೇಕು, ಒಂದು, ಅರ್ಧ ಕೆಜಿ ಬೇಕು ಎಂದು ಕಮೆಂಟ್ ಮಾಡುತ್ತಾರೆ. ನಿಮ್ಮ ಫೋನ್ ನಂಬರ್ ಕೊಡಿ ಎಂದು ಕೇಳುತ್ತಾರೆ. ಇದೇ ರೀತಿ ತೋಟದ ಅವರೆಕಾಯಿ, ಶುದ್ದ ಹರಳೆಣ್ಣೆ, ಏಲಕ್ಕಿ, ಕಾಳುಮೆಣಸು, ಜೋನಿ ಬೆಲ್ಲ, ಉಪ್ಪಿನಕಾಯಿ ರೀತಿಯ ಹಲವಾರು ಉತ್ಪನ್ನಗಳನ್ನು ಮಾರಲು ಹಲವಾರು ರೈತರು ಮುಂದೆ ಬಂದಿದ್ದಾರೆ.

ಇದು ಸಾಧ್ಯವಾಗಿರುವುದು ಪ್ರೊ.ಎಂ.ಡಿ ನಂಜುಂಡಸ್ವಾಮಿ ಕನಸಿನ ವೈಜ್ಞಾನಿಕ ಬೆಲೆಯ ಮಾರುಕಟ್ಟೆ ವ್ಯವಸ್ಥೆ ‘ರೈತರಿಂದ ನೇರ ಗ್ರಾಹಕರಿಗೆ’ ಎಂಬ ಹೆಸರಿನ ಫೇಸ್‌ಬುಕ್‌ ಗ್ರೂಪ್ ಮೂಲಕ. “ರೈತರಿಗೆ ಆರ್ಥಿಕ ಭದ್ರತೆಯನ್ನು ತಂದುಕೊಡುವುದು ಈ ಗ್ರೂಪ್‌ನ ಉದ್ದೇಶ. ರೈತರಿಗೆ ಸಿಗಲೇಬೇಕಾದ ವೈಜ್ಞಾನಿಕ ಬೆಲೆಯು ಮಧ್ಯವರ್ತಿಗಳಿಂದ ತಪ್ಪಿಹೋಗುತ್ತಿರುವುದರಿಂದ, ರೈತರೇ ತಮ್ಮ ಬೆಳೆ ಹಾಗೂ ಉತ್ಪನ್ನಗಳನ್ನು ಫೇಸ್ ಬುಕ್‌ನ ಈ ಗ್ರೂಪ್‌ನ ಮುಖಾಂತರ ಗ್ರಾಹಕರಿಗೆ ನೇರವಾಗಿ ಸ್ಪರ್ಧಾತ್ಮಕ ಬೆಲೆಯಲ್ಲಿ ಮಾರಾಟ ಮಾಡುವ ವಿನೂತನ ಪ್ರಯತ್ನವಿದು. ರೈತರೆಲ್ಲರೂ ಸಹಕರಿಸಿ” ಎಂದು ಗ್ರೂಪ್‌ನ ಉದ್ದೇಶವನ್ನು ಸರಳವಾಗಿ ವಿವರಿಸಲಾಗಿದೆ.

ಈ ಗ್ರೂಪ್ ಆರಂಭವಾದ ಎರಡೇ ದಿನದಲ್ಲಿ ರೈತರು ಮತ್ತು ಗ್ರಾಹಕರಿಗೆ ಬಹುದೊಡ್ಡ ಭರವಸೆಯಾಗಿ ಕಂಡುಬಂದಿದೆ. ಜುಲೈ 9ರಂದು ಆರಂಭವಾದ ಈ ವಿಭಿನ್ನ ಪ್ರಯೋಗಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈಗಾಗಲೇ ಹತ್ತಾರು ಉತ್ಪನ್ನಗಳನ್ನು ಪೋಸ್ಟ್ ಮಾಡಲಾಗಿದೆ. ನೂರಾರು ರೈತರು ಮತ್ತು ಗ್ರಾಹಕರು ಈ ಗ್ರೂಪ್‌ಗೆ ಎಡತಾಕುತ್ತಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘದ ಪಚ್ಚೆ ನಂಜುಂಡಸ್ವಾಮಿ ಮತ್ತು ಯುವ ರೈತ ಸಂಘದ ಕಾರ್ಯಕರ್ತರ ಈ ಪ್ರಯತ್ನದಿಂದ ಹಲವಾರು ರೈತರು ಭವಿಷ್ಯದ ಬಗ್ಗೆ ಆಶಾವಾದ ಹೊಂದುವಂತಾಗಿದೆ.

ಪಚ್ಚೆ ನಂಜುಂಡಸ್ವಾಮಿ

ಈ ಪ್ರಯತ್ನ ಚಿಗುರೊಡೆದಿದ್ದು ಹೇಗೆ? ಎಂಬುದರ ಕುರಿತು ಇದರ ಸ್ಥಾಪಕರಾದ ಪಚ್ಚೆ ನಂಜುಂಡಸ್ವಾಮಿಯವರು ನಾನುಗೌರಿ.ಕಾಂ ಮಾತನಾಡಿದರು. “ನನ್ನ ಮನಸ್ಸು ಆತ್ಮಹತ್ಯೆ ಮಾಡಿಕೊಂಡ ರೈತರ ಬಗ್ಗೆ ಸದಾ ಮಿಡಿಯುತ್ತದೆ. ಈ ಕೋವಿಡ್ ಕಾಲದಲ್ಲಿಯೂ ಸಹ ಬೆಳೆ ಬೆಳೆದ ಎಷ್ಟೊ ರೈತರು ಮಾರಲಾಗದೇ ಬೆಳೆಯನ್ನು ಸುಟ್ಟುಬಿಟ್ಟ, ಹೊಲದಲ್ಲಿಯೇ ಉತ್ತುಬಿಟ್ಟಂತ ಘಟನೆಗಳನ್ನು ಕೇಳಿದ್ದೇವೆ. ಕೋವಿಡ್ ಬರುವುದಕ್ಕೂ ಮುಂಚೆಯೇ 16-17 ವರ್ಷಗಳಿಂದ ಲಕ್ಷಾಂತರ ರೈತರ ಆತ್ಮಹತ್ಯೆಗಳು ನಡೆದುಹೋಗಿವೆ. ಇವೆಲ್ಲವುಗಳಿಂದ ರೈತರ ಪರವಾಗಿ ಏನಾದರೂ ಮಾಡುವಂತೆ ತುಡಿಯುತ್ತಿತ್ತು. ಅದರ ಭಾಗವೇ ಈ ಗ್ರೂಪ್ ಆಗಿದೆ” ಎಂದರು.

ಮತ್ತೊಬ್ಬ ರೈತರ ಪೋಸ್ಟ್

ಇದು ಎರಡು ದಿನ ಮಗು ಅಷ್ಟೇ. ಇದರ ಹಿಂದೆ ಒಂದು ಇತಿಹಾಸವಿದೆ. ನೀರಾ ಚಳವಳಿ ಮಾಡುವಂತಹ ಸಂದರ್ಭದಲ್ಲಿ ಚಿತ್ರನಟ ಅಶೋಕ್‌ರವರು ಈ ಪರಿಕಲ್ಪನೆ ಇಟ್ಟುಕೊಂಡು ನಮ್ಮ ಮನೆಗೆ ಬಂದಿದ್ದರು. ನಮ್ಮ ತಂದೆ ಪ್ರೊ. ನಂಜುಂಡಸ್ವಾಮಿಯವರು ‘ಸ್ವದೇಶಿ’ ಎಂಬ ಹೆಸರಿನಲ್ಲಿ ಇದನ್ನು ಶುರು ಮಾಡಲು ಆರಂಭಿಸಿದ್ದರು. ಇದಕ್ಕೆ ತಮಿಳು ಚಿತ್ರನಟ ರಜಿನಿಕಾಂತ್‌ ಕೂಡ ‘ನಮ್ದು’ ಎಂಬ ಹೆಸರಿಡಿ ಎಂದು ಸಲಹೆ ನೀಡಿದ್ದರು. ಈ ಪ್ರಕ್ರಿಯೆ ನಡೆಯುತ್ತಿರುವಾಗಲೇ ಪ್ರೊ. ಎಂಡಿಎನ್ ಕ್ಯಾನ್ಸರ್‌ಗೆ ತುತ್ತಾದರು. ಈಗ ಬಹಳ ವರ್ಷಗಳ ನಂತರ ನಾವು ಇದನ್ನು ಆರಂಭಿಸಿದ್ದೇವೆ. ಸಮಾಜ ಕಟ್ಟುವ ಆರೋಗ್ಯಕರ ಚೇಷ್ಟೇ ಇದು. ಇದು ಸಮಾಜದಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಜನರಿಗೆ ಸಹಾಯವಾದರೆ ಅದೇ ನೆಮ್ಮದಿ ಎನ್ನುತ್ತಾರೆ ಪಚ್ಚೆ ನಂಜುಂಡಸ್ವಾಮಿಯವರು…

“ಇದು ಒಳ್ಳೆಯ ಸಮಯ. ಪ್ರತಿ ತಾಲೂಕಿನಲ್ಲೂ ರೈತರಿಂದ ನೇರವಾಗಿ ಗ್ರಾಹಕರಿಗೆ ತಲುಪಿಸುವ ವ್ಯವಸ್ಥೆ ಮಾಡಿ. ಇದರಿಂದ ದಲ್ಲಾಳಿಗಳ ಹಾವಳಿ ಕಡಿಮೆಯಾಗಿ ರೈತರಿಗೆ ತುಂಬಾ ಸಹಾಯ ಆಗುತ್ತದೆ . ರೈತರಿಂದ, ರೈತರಿಗಾಗಿ, ರೈತರಿಗೋಸ್ಕರ” ಎಂದು ವೆಂಕಟೇಶಯ್ಯ ಹೆಬ್ಬಸುರು ಎಂಬುವವರು ಗ್ರೂಪ್ ಕುರಿತು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಇಂದು ಇರುವ ಸಾಮಾನ್ಯ ಮಾರುಕಟ್ಟೆ ವ್ಯವಸ್ಥೆಯಲ್ಲಿ ಆಹಾರ ಬೆಳೆವ ರೈತ ಸುಖವಾಗಿಲ್ಲ. ಅದೇ ಆಹಾರ ಖರೀದಿಸುವ ಗ್ರಾಹಕರು ಕೂಡ ದುಬಾರಿ ಬೆಲೆಗೆ ಕೊಳ್ಳಬೇಕೆಂಬ ಮನೋಭಾವನೆ ಹೊಂದಿದ್ದಾರೆ. ಮಧ್ಯವರ್ತಿಗಳ ಹಾವಳಿಯ ಇಂತಹ ಪರಿಸ್ಥಿತಿಯಲ್ಲಿ ರೈತ ಮತ್ತು ಗ್ರಾಹಕ ಸ್ನೇಹಿಯಾದ ಹಲವಾರು ಪ್ರಯೋಗಗಳು ಹೊರಬರುತ್ತಿವೆ. ಅಂತಹ ಸಾಲಿಗೆ ಹೊಸ ಸೇರ್ಪಡೆಯಾದ ‘ರೈತರಿಂದ ನೇರ ಗ್ರಾಹಕರಿಗೆ’ ಪ್ರಯೋಗ ಯಶಸ್ವಿಯಾಗಲಿ. ಇದೇ ಮಾದರಿಯ ಹತ್ತಾರು ಯೋಜನೆಗಳು ಹೊರಬಂದು ರೈತರು ನೆಮ್ಮದಿಯ ಬದುಕು ಕಾಣುವಂತಾಗಲಿ ಎಂಬುದು ನಮ್ಮ ಆಶಯ. ನೀವೂ ಆ ಗ್ರೂಪ್ ಸೇರುವ ಮನಸ್ಸಿದ್ದಲ್ಲಿ ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಕೊರೊನಾ: ರೋಗ ನಿರೋಧಕತೆ ಕುರಿತು ಆಯುರ್ವೇದದ ದೃಷ್ಟಿಕೋನ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...