Homeಮುಖಪುಟ'ರೈತರಿಂದ ನೇರ ಗ್ರಾಹಕರಿಗೆ' ಫೇಸ್‌ಬುಕ್‌ ಗ್ರೂಪ್: ವಿಭಿನ್ನ ಪ್ರಯೋಗಕ್ಕೆ ಅಭೂತಪೂರ್ವ ಪ್ರತಿಕ್ರಿಯೆ

‘ರೈತರಿಂದ ನೇರ ಗ್ರಾಹಕರಿಗೆ’ ಫೇಸ್‌ಬುಕ್‌ ಗ್ರೂಪ್: ವಿಭಿನ್ನ ಪ್ರಯೋಗಕ್ಕೆ ಅಭೂತಪೂರ್ವ ಪ್ರತಿಕ್ರಿಯೆ

ಕರ್ನಾಟಕ ರಾಜ್ಯ ರೈತ ಸಂಘದ ಪಚ್ಚೆ ನಂಜುಂಡಸ್ವಾಮಿ ಮತ್ತು ಯುವ ರೈತ ಸಂಘದ ಕಾರ್ಯಕರ್ತರ ಈ ಪ್ರಯತ್ನದಿಂದ ಹಲವಾರು ರೈತರು ಭವಿಷ್ಯದ ಬಗ್ಗೆ ಆಶಾವಾದ ಹೊಂದುವಂತಾಗಿದೆ.

- Advertisement -
- Advertisement -

“ಸಾವಯುವ ಕೃಷಿಯಲ್ಲಿ ಬೆಳೆದ ಅರಿಶಿನದಿಂದ ತಯಾರಿಸಿದ ಪರಿಶುದ್ಧ ಅರಿಶಿನ ಪುಡಿ. 200 ರೂಪಾಯಿ ಒಂದು ಕೆಜಿ”.. ಎಂದು ಶಿವಮೊಗ್ಗ ಜಿಲ್ಲೆಯ ಹೊಸನಗರದ ಸಂತೋಷ್ ಕೆ.ಎಸ್ ಎಂಬುವವರು ಒಂದು ಪೋಸ್ಟ್ ಹಾಕುತ್ತಾರೆ. ಎರಡೇ ದಿನದಲ್ಲಿ ಸುಮಾರು 30ಕ್ಕೂ ಹೆಚ್ಚು ಜನ ನಮಗೆ ಎರಡು ಕೆಜಿ ಬೇಕು, ಒಂದು, ಅರ್ಧ ಕೆಜಿ ಬೇಕು ಎಂದು ಕಮೆಂಟ್ ಮಾಡುತ್ತಾರೆ. ನಿಮ್ಮ ಫೋನ್ ನಂಬರ್ ಕೊಡಿ ಎಂದು ಕೇಳುತ್ತಾರೆ. ಇದೇ ರೀತಿ ತೋಟದ ಅವರೆಕಾಯಿ, ಶುದ್ದ ಹರಳೆಣ್ಣೆ, ಏಲಕ್ಕಿ, ಕಾಳುಮೆಣಸು, ಜೋನಿ ಬೆಲ್ಲ, ಉಪ್ಪಿನಕಾಯಿ ರೀತಿಯ ಹಲವಾರು ಉತ್ಪನ್ನಗಳನ್ನು ಮಾರಲು ಹಲವಾರು ರೈತರು ಮುಂದೆ ಬಂದಿದ್ದಾರೆ.

ಇದು ಸಾಧ್ಯವಾಗಿರುವುದು ಪ್ರೊ.ಎಂ.ಡಿ ನಂಜುಂಡಸ್ವಾಮಿ ಕನಸಿನ ವೈಜ್ಞಾನಿಕ ಬೆಲೆಯ ಮಾರುಕಟ್ಟೆ ವ್ಯವಸ್ಥೆ ‘ರೈತರಿಂದ ನೇರ ಗ್ರಾಹಕರಿಗೆ’ ಎಂಬ ಹೆಸರಿನ ಫೇಸ್‌ಬುಕ್‌ ಗ್ರೂಪ್ ಮೂಲಕ. “ರೈತರಿಗೆ ಆರ್ಥಿಕ ಭದ್ರತೆಯನ್ನು ತಂದುಕೊಡುವುದು ಈ ಗ್ರೂಪ್‌ನ ಉದ್ದೇಶ. ರೈತರಿಗೆ ಸಿಗಲೇಬೇಕಾದ ವೈಜ್ಞಾನಿಕ ಬೆಲೆಯು ಮಧ್ಯವರ್ತಿಗಳಿಂದ ತಪ್ಪಿಹೋಗುತ್ತಿರುವುದರಿಂದ, ರೈತರೇ ತಮ್ಮ ಬೆಳೆ ಹಾಗೂ ಉತ್ಪನ್ನಗಳನ್ನು ಫೇಸ್ ಬುಕ್‌ನ ಈ ಗ್ರೂಪ್‌ನ ಮುಖಾಂತರ ಗ್ರಾಹಕರಿಗೆ ನೇರವಾಗಿ ಸ್ಪರ್ಧಾತ್ಮಕ ಬೆಲೆಯಲ್ಲಿ ಮಾರಾಟ ಮಾಡುವ ವಿನೂತನ ಪ್ರಯತ್ನವಿದು. ರೈತರೆಲ್ಲರೂ ಸಹಕರಿಸಿ” ಎಂದು ಗ್ರೂಪ್‌ನ ಉದ್ದೇಶವನ್ನು ಸರಳವಾಗಿ ವಿವರಿಸಲಾಗಿದೆ.

ಈ ಗ್ರೂಪ್ ಆರಂಭವಾದ ಎರಡೇ ದಿನದಲ್ಲಿ ರೈತರು ಮತ್ತು ಗ್ರಾಹಕರಿಗೆ ಬಹುದೊಡ್ಡ ಭರವಸೆಯಾಗಿ ಕಂಡುಬಂದಿದೆ. ಜುಲೈ 9ರಂದು ಆರಂಭವಾದ ಈ ವಿಭಿನ್ನ ಪ್ರಯೋಗಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈಗಾಗಲೇ ಹತ್ತಾರು ಉತ್ಪನ್ನಗಳನ್ನು ಪೋಸ್ಟ್ ಮಾಡಲಾಗಿದೆ. ನೂರಾರು ರೈತರು ಮತ್ತು ಗ್ರಾಹಕರು ಈ ಗ್ರೂಪ್‌ಗೆ ಎಡತಾಕುತ್ತಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘದ ಪಚ್ಚೆ ನಂಜುಂಡಸ್ವಾಮಿ ಮತ್ತು ಯುವ ರೈತ ಸಂಘದ ಕಾರ್ಯಕರ್ತರ ಈ ಪ್ರಯತ್ನದಿಂದ ಹಲವಾರು ರೈತರು ಭವಿಷ್ಯದ ಬಗ್ಗೆ ಆಶಾವಾದ ಹೊಂದುವಂತಾಗಿದೆ.

ಪಚ್ಚೆ ನಂಜುಂಡಸ್ವಾಮಿ

ಈ ಪ್ರಯತ್ನ ಚಿಗುರೊಡೆದಿದ್ದು ಹೇಗೆ? ಎಂಬುದರ ಕುರಿತು ಇದರ ಸ್ಥಾಪಕರಾದ ಪಚ್ಚೆ ನಂಜುಂಡಸ್ವಾಮಿಯವರು ನಾನುಗೌರಿ.ಕಾಂ ಮಾತನಾಡಿದರು. “ನನ್ನ ಮನಸ್ಸು ಆತ್ಮಹತ್ಯೆ ಮಾಡಿಕೊಂಡ ರೈತರ ಬಗ್ಗೆ ಸದಾ ಮಿಡಿಯುತ್ತದೆ. ಈ ಕೋವಿಡ್ ಕಾಲದಲ್ಲಿಯೂ ಸಹ ಬೆಳೆ ಬೆಳೆದ ಎಷ್ಟೊ ರೈತರು ಮಾರಲಾಗದೇ ಬೆಳೆಯನ್ನು ಸುಟ್ಟುಬಿಟ್ಟ, ಹೊಲದಲ್ಲಿಯೇ ಉತ್ತುಬಿಟ್ಟಂತ ಘಟನೆಗಳನ್ನು ಕೇಳಿದ್ದೇವೆ. ಕೋವಿಡ್ ಬರುವುದಕ್ಕೂ ಮುಂಚೆಯೇ 16-17 ವರ್ಷಗಳಿಂದ ಲಕ್ಷಾಂತರ ರೈತರ ಆತ್ಮಹತ್ಯೆಗಳು ನಡೆದುಹೋಗಿವೆ. ಇವೆಲ್ಲವುಗಳಿಂದ ರೈತರ ಪರವಾಗಿ ಏನಾದರೂ ಮಾಡುವಂತೆ ತುಡಿಯುತ್ತಿತ್ತು. ಅದರ ಭಾಗವೇ ಈ ಗ್ರೂಪ್ ಆಗಿದೆ” ಎಂದರು.

ಮತ್ತೊಬ್ಬ ರೈತರ ಪೋಸ್ಟ್

ಇದು ಎರಡು ದಿನ ಮಗು ಅಷ್ಟೇ. ಇದರ ಹಿಂದೆ ಒಂದು ಇತಿಹಾಸವಿದೆ. ನೀರಾ ಚಳವಳಿ ಮಾಡುವಂತಹ ಸಂದರ್ಭದಲ್ಲಿ ಚಿತ್ರನಟ ಅಶೋಕ್‌ರವರು ಈ ಪರಿಕಲ್ಪನೆ ಇಟ್ಟುಕೊಂಡು ನಮ್ಮ ಮನೆಗೆ ಬಂದಿದ್ದರು. ನಮ್ಮ ತಂದೆ ಪ್ರೊ. ನಂಜುಂಡಸ್ವಾಮಿಯವರು ‘ಸ್ವದೇಶಿ’ ಎಂಬ ಹೆಸರಿನಲ್ಲಿ ಇದನ್ನು ಶುರು ಮಾಡಲು ಆರಂಭಿಸಿದ್ದರು. ಇದಕ್ಕೆ ತಮಿಳು ಚಿತ್ರನಟ ರಜಿನಿಕಾಂತ್‌ ಕೂಡ ‘ನಮ್ದು’ ಎಂಬ ಹೆಸರಿಡಿ ಎಂದು ಸಲಹೆ ನೀಡಿದ್ದರು. ಈ ಪ್ರಕ್ರಿಯೆ ನಡೆಯುತ್ತಿರುವಾಗಲೇ ಪ್ರೊ. ಎಂಡಿಎನ್ ಕ್ಯಾನ್ಸರ್‌ಗೆ ತುತ್ತಾದರು. ಈಗ ಬಹಳ ವರ್ಷಗಳ ನಂತರ ನಾವು ಇದನ್ನು ಆರಂಭಿಸಿದ್ದೇವೆ. ಸಮಾಜ ಕಟ್ಟುವ ಆರೋಗ್ಯಕರ ಚೇಷ್ಟೇ ಇದು. ಇದು ಸಮಾಜದಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಜನರಿಗೆ ಸಹಾಯವಾದರೆ ಅದೇ ನೆಮ್ಮದಿ ಎನ್ನುತ್ತಾರೆ ಪಚ್ಚೆ ನಂಜುಂಡಸ್ವಾಮಿಯವರು…

“ಇದು ಒಳ್ಳೆಯ ಸಮಯ. ಪ್ರತಿ ತಾಲೂಕಿನಲ್ಲೂ ರೈತರಿಂದ ನೇರವಾಗಿ ಗ್ರಾಹಕರಿಗೆ ತಲುಪಿಸುವ ವ್ಯವಸ್ಥೆ ಮಾಡಿ. ಇದರಿಂದ ದಲ್ಲಾಳಿಗಳ ಹಾವಳಿ ಕಡಿಮೆಯಾಗಿ ರೈತರಿಗೆ ತುಂಬಾ ಸಹಾಯ ಆಗುತ್ತದೆ . ರೈತರಿಂದ, ರೈತರಿಗಾಗಿ, ರೈತರಿಗೋಸ್ಕರ” ಎಂದು ವೆಂಕಟೇಶಯ್ಯ ಹೆಬ್ಬಸುರು ಎಂಬುವವರು ಗ್ರೂಪ್ ಕುರಿತು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಇಂದು ಇರುವ ಸಾಮಾನ್ಯ ಮಾರುಕಟ್ಟೆ ವ್ಯವಸ್ಥೆಯಲ್ಲಿ ಆಹಾರ ಬೆಳೆವ ರೈತ ಸುಖವಾಗಿಲ್ಲ. ಅದೇ ಆಹಾರ ಖರೀದಿಸುವ ಗ್ರಾಹಕರು ಕೂಡ ದುಬಾರಿ ಬೆಲೆಗೆ ಕೊಳ್ಳಬೇಕೆಂಬ ಮನೋಭಾವನೆ ಹೊಂದಿದ್ದಾರೆ. ಮಧ್ಯವರ್ತಿಗಳ ಹಾವಳಿಯ ಇಂತಹ ಪರಿಸ್ಥಿತಿಯಲ್ಲಿ ರೈತ ಮತ್ತು ಗ್ರಾಹಕ ಸ್ನೇಹಿಯಾದ ಹಲವಾರು ಪ್ರಯೋಗಗಳು ಹೊರಬರುತ್ತಿವೆ. ಅಂತಹ ಸಾಲಿಗೆ ಹೊಸ ಸೇರ್ಪಡೆಯಾದ ‘ರೈತರಿಂದ ನೇರ ಗ್ರಾಹಕರಿಗೆ’ ಪ್ರಯೋಗ ಯಶಸ್ವಿಯಾಗಲಿ. ಇದೇ ಮಾದರಿಯ ಹತ್ತಾರು ಯೋಜನೆಗಳು ಹೊರಬಂದು ರೈತರು ನೆಮ್ಮದಿಯ ಬದುಕು ಕಾಣುವಂತಾಗಲಿ ಎಂಬುದು ನಮ್ಮ ಆಶಯ. ನೀವೂ ಆ ಗ್ರೂಪ್ ಸೇರುವ ಮನಸ್ಸಿದ್ದಲ್ಲಿ ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಕೊರೊನಾ: ರೋಗ ನಿರೋಧಕತೆ ಕುರಿತು ಆಯುರ್ವೇದದ ದೃಷ್ಟಿಕೋನ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...