Homeಕರ್ನಾಟಕಆ.31ರಂದು 'ರಾಜಭವನ ಚಲೋ' : ಡಿಸಿಎಂ ಡಿ ಕೆ ಶಿವಕುಮಾರ್

ಆ.31ರಂದು ‘ರಾಜಭವನ ಚಲೋ’ : ಡಿಸಿಎಂ ಡಿ ಕೆ ಶಿವಕುಮಾರ್

- Advertisement -
- Advertisement -

ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ ಸೇರಿದಂತೆ ರಾಜ್ಯಪಾಲರ ಮುಂದೆ ಬಾಕಿ ಇರುವ ಹಲವರ ಪ್ರಕರಣಗಳ ವಿಚಾರಣೆಗೆ ಅನುಮತಿ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್ ವತಿಯಿಂದ ಆಗಸ್ಟ್ 31ರಂದು ‘ರಾಜಭವನ ಚಲೋ’ ಹಮ್ಮಿಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಇಂದು (ಆ.27) ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,”ಆಗಸ್ಟ್ 31ರ ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು. ಈ ವೇಳೆ ಮುಖ್ಯಮಂತ್ರಿ, ಎಲ್ಲಾ ಸಚಿವರು, ಕಾಂಗ್ರೆಸ್‌ನ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಸಂಸದರು ಉಪಸ್ಥಿತರಿರಲಿದ್ದಾರೆ” ಎಂದು ಹೇಳಿದರು.

“ಬೇರೆ ನಾಯಕರ ವಿರುದ್ಧ ಪ್ರಾಥಮಿಕ ತನಿಖೆ ನಡೆದು ವಿಚಾರಣೆಗೆ ಅನುಮತಿ ಕೇಳಿದ್ದರೂ ರಾಜ್ಯಪಾಲರು ನೀಡಿಲ್ಲ. ಆದರೆ, ಯಾವುದೇ ಪ್ರಾಥಮಿಕ ತನಿಖೆ ನಡೆಯದಿದ್ದರೂ ಮುಖ್ಯಮಂತ್ರಿಗಳ ವಿರುದ್ಧ ವಿಚಾರಣೆಗೆ ತರಾತುರಿಯಲ್ಲಿ ಅನುಮತಿ ನೀಡಿದ್ದಾರೆ. ಹೀಗಾಗಿ, ಕಳೆದ ವಾರ ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರಿಗೆ ಕೆಲವು ಸಲಹೆಗಳನ್ನು ಕಳುಹಿಸಿದ್ದೆವು. ಮಖ್ಯಮಂತ್ರಿಗಳ ಪ್ರಕರಣ ನ್ಯಾಯಾಲಯದಲ್ಲಿದೆ. ಆದ್ದರಿಂದ ಈ ಬಗ್ಗೆ ಹೆಚ್ಚಿನ ವಿಚಾರ ಪ್ರಸ್ತಾಪ ಮಾಡುವುದಿಲ್ಲ. ನ್ಯಾಯಾಲಯ ಕಾನೂನಿನ ಪ್ರಕಾರ ಯಾವ ತೀರ್ಮಾನ ಮಾಡಬೇಕೋ ಮಾಡಲಿದೆ” ಎಂದರು.

ಹೆಚ್​ಡಿಕೆ ವಿರುದ್ದ ಕಿಡಿ

“ನಮ್ಮ ಬಿಗ್ ಬ್ರದರ್ ಕುಮಾರಸ್ವಾಮಿ ಸಾಚಾ ಕೆಲಸ ಮಾಡುವವರು. ಅವರ ವಿರುದ್ಧ 10 ವರ್ಷಗಳ ಹಿಂದೆಯೇ ಕೇಸು ದಾಖಲಾಗಿದೆ. 2023ರ ನವೆಂಬರ್ 21ರಂದು ಲೋಕಾಯುಕ್ತ ಎಸ್‌ಐಟಿ ಅಧಿಕಾರಿಗಳು ಕೂಡ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ನಾವೇನೂ ತಿರುಚಿ ಪರಚಿ ಮಾತಾಡುತ್ತಿಲ್ಲ. 218 ಪುಟಗಳ ತನಿಖಾ ವರದಿಯನ್ನು ರಾಜ್ಯಪಾಲರಿಗೆ ಎಸ್‌ಐಟಿ ನೀಡಿದೆ. ಬಹಳ ಸತ್ಯಕ್ಕೆ ಹೆಸರಾದವರು ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ, ನಾನು ಸಹಿಯೇ ಮಾಡಿಲ್ಲ ಎಂದು ಹೇಳಿದ್ದಾರೆ. ಅವರ ಹೇಳಿಕೆ ನೋಡಿ ನನಗೆ ಆಶ್ಚರ್ಯ ಆಯ್ತು” ಎಂದು ಡಿಕೆಶಿ ಕುಮಾರಸ್ವಾಮಿ ವಿರುದ್ದ ಕಿಡಿಕಾರಿದರು.

“ಅವರ ಸಹಿ ಅಲ್ಲ ಅಂದಮೇಲೆ ಯಾರೋ ಫೋರ್ಜರಿ ಮಾಡಿದ್ದಾರೆ. ಸಹಿ ಫೋರ್ಜರಿ ಮಾಡಿದ್ದಾರೆ ಎಂದು ಯಾಕೆ ದೂರು ಕೊಟ್ಟಿಲ್ಲ?. ಸಹಿ ಫೋರ್ಜರಿ ಆಗಿದ್ದಿದ್ದರೆ ಒಬ್ಬ ಪಿಸಿಗಾದರೂ ದೂರು ಕೊಡಬೇಕಲ್ವಾ? ಎಂದು ಪ್ರಶ್ನಿಸಿದರು.

“ನಾನು ಅವರ ಕುಟುಂಬದ ಆಸ್ತಿ ಬಗ್ಗೆ ಅನೇಕ ಪ್ರಶ್ನೆ ಕೇಳಿದ್ದೆ. ಈವರೆಗೂ ಅವರು ಅದಕ್ಕೆ ಉತ್ತರ ನೀಡಿಲ್ಲ. ನನ್ನ ಕುಟುಂಬದ ಸುದ್ದಿಗೆ ಬರುತ್ತೀಯಾ? ಎಂದೆಲ್ಲಾ ಅವರು ಕಿಡಿಕಾರಿದ್ದಾರೆ. ಅವರು ಕೂಡ ಯಾರ ಕುಟುಂಬದ ವಿಚಾರಕ್ಕೆ ಹೋಗಿದ್ದಾರೆ ಎಂಬುವುದನ್ನು ಹೇಳಬೇಕು. ಅವರು ಹೇಗೆ ಬೇರೆಯವರ ಕುಟುಂಬದ ವಿಚಾರಕ್ಕೆ ಹೋಗುತ್ತಾರೋ, ಅದೇ ರೀತಿ ಬೇರೆಯವರು ಅವರ ಕುಟುಂಬದ ವಿಚಾರಕ್ಕೆ ಹೋಗುತ್ತಾರೆ” ಎಂದು ವಾಗ್ದಾಳಿ ನಡೆಸಿದರು.

ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್, ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ, ಕೆಪಿಸಿಸಿ ಅಧ್ಯಕ್ಷರ ರಾಜಕೀಯ ಕಾರ್ಯದರ್ಶಿ ದೀಪಕ್ ತಿಮ್ಮಯ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿಜಯ್ ಮುಳಗುಂದ, ರಾಮಚಂದ್ರಪ್ಪ ಉಪಸ್ಥಿತರಿದ್ದರು.

ಇದನ್ನೂ ಓದಿ : ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ : ಸಚಿವ ಜಾರ್ಜ್‌ಗೆ ಕ್ಲೀನ್ ಚಿಟ್ ನೀಡಿದ್ದ ಸಿಬಿಐ ವರದಿ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...