Homeಕರ್ನಾಟಕಆ.31ರಂದು 'ರಾಜಭವನ ಚಲೋ' : ಡಿಸಿಎಂ ಡಿ ಕೆ ಶಿವಕುಮಾರ್

ಆ.31ರಂದು ‘ರಾಜಭವನ ಚಲೋ’ : ಡಿಸಿಎಂ ಡಿ ಕೆ ಶಿವಕುಮಾರ್

- Advertisement -
- Advertisement -

ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ ಸೇರಿದಂತೆ ರಾಜ್ಯಪಾಲರ ಮುಂದೆ ಬಾಕಿ ಇರುವ ಹಲವರ ಪ್ರಕರಣಗಳ ವಿಚಾರಣೆಗೆ ಅನುಮತಿ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್ ವತಿಯಿಂದ ಆಗಸ್ಟ್ 31ರಂದು ‘ರಾಜಭವನ ಚಲೋ’ ಹಮ್ಮಿಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಇಂದು (ಆ.27) ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,”ಆಗಸ್ಟ್ 31ರ ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು. ಈ ವೇಳೆ ಮುಖ್ಯಮಂತ್ರಿ, ಎಲ್ಲಾ ಸಚಿವರು, ಕಾಂಗ್ರೆಸ್‌ನ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಸಂಸದರು ಉಪಸ್ಥಿತರಿರಲಿದ್ದಾರೆ” ಎಂದು ಹೇಳಿದರು.

“ಬೇರೆ ನಾಯಕರ ವಿರುದ್ಧ ಪ್ರಾಥಮಿಕ ತನಿಖೆ ನಡೆದು ವಿಚಾರಣೆಗೆ ಅನುಮತಿ ಕೇಳಿದ್ದರೂ ರಾಜ್ಯಪಾಲರು ನೀಡಿಲ್ಲ. ಆದರೆ, ಯಾವುದೇ ಪ್ರಾಥಮಿಕ ತನಿಖೆ ನಡೆಯದಿದ್ದರೂ ಮುಖ್ಯಮಂತ್ರಿಗಳ ವಿರುದ್ಧ ವಿಚಾರಣೆಗೆ ತರಾತುರಿಯಲ್ಲಿ ಅನುಮತಿ ನೀಡಿದ್ದಾರೆ. ಹೀಗಾಗಿ, ಕಳೆದ ವಾರ ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರಿಗೆ ಕೆಲವು ಸಲಹೆಗಳನ್ನು ಕಳುಹಿಸಿದ್ದೆವು. ಮಖ್ಯಮಂತ್ರಿಗಳ ಪ್ರಕರಣ ನ್ಯಾಯಾಲಯದಲ್ಲಿದೆ. ಆದ್ದರಿಂದ ಈ ಬಗ್ಗೆ ಹೆಚ್ಚಿನ ವಿಚಾರ ಪ್ರಸ್ತಾಪ ಮಾಡುವುದಿಲ್ಲ. ನ್ಯಾಯಾಲಯ ಕಾನೂನಿನ ಪ್ರಕಾರ ಯಾವ ತೀರ್ಮಾನ ಮಾಡಬೇಕೋ ಮಾಡಲಿದೆ” ಎಂದರು.

ಹೆಚ್​ಡಿಕೆ ವಿರುದ್ದ ಕಿಡಿ

“ನಮ್ಮ ಬಿಗ್ ಬ್ರದರ್ ಕುಮಾರಸ್ವಾಮಿ ಸಾಚಾ ಕೆಲಸ ಮಾಡುವವರು. ಅವರ ವಿರುದ್ಧ 10 ವರ್ಷಗಳ ಹಿಂದೆಯೇ ಕೇಸು ದಾಖಲಾಗಿದೆ. 2023ರ ನವೆಂಬರ್ 21ರಂದು ಲೋಕಾಯುಕ್ತ ಎಸ್‌ಐಟಿ ಅಧಿಕಾರಿಗಳು ಕೂಡ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ನಾವೇನೂ ತಿರುಚಿ ಪರಚಿ ಮಾತಾಡುತ್ತಿಲ್ಲ. 218 ಪುಟಗಳ ತನಿಖಾ ವರದಿಯನ್ನು ರಾಜ್ಯಪಾಲರಿಗೆ ಎಸ್‌ಐಟಿ ನೀಡಿದೆ. ಬಹಳ ಸತ್ಯಕ್ಕೆ ಹೆಸರಾದವರು ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ, ನಾನು ಸಹಿಯೇ ಮಾಡಿಲ್ಲ ಎಂದು ಹೇಳಿದ್ದಾರೆ. ಅವರ ಹೇಳಿಕೆ ನೋಡಿ ನನಗೆ ಆಶ್ಚರ್ಯ ಆಯ್ತು” ಎಂದು ಡಿಕೆಶಿ ಕುಮಾರಸ್ವಾಮಿ ವಿರುದ್ದ ಕಿಡಿಕಾರಿದರು.

“ಅವರ ಸಹಿ ಅಲ್ಲ ಅಂದಮೇಲೆ ಯಾರೋ ಫೋರ್ಜರಿ ಮಾಡಿದ್ದಾರೆ. ಸಹಿ ಫೋರ್ಜರಿ ಮಾಡಿದ್ದಾರೆ ಎಂದು ಯಾಕೆ ದೂರು ಕೊಟ್ಟಿಲ್ಲ?. ಸಹಿ ಫೋರ್ಜರಿ ಆಗಿದ್ದಿದ್ದರೆ ಒಬ್ಬ ಪಿಸಿಗಾದರೂ ದೂರು ಕೊಡಬೇಕಲ್ವಾ? ಎಂದು ಪ್ರಶ್ನಿಸಿದರು.

“ನಾನು ಅವರ ಕುಟುಂಬದ ಆಸ್ತಿ ಬಗ್ಗೆ ಅನೇಕ ಪ್ರಶ್ನೆ ಕೇಳಿದ್ದೆ. ಈವರೆಗೂ ಅವರು ಅದಕ್ಕೆ ಉತ್ತರ ನೀಡಿಲ್ಲ. ನನ್ನ ಕುಟುಂಬದ ಸುದ್ದಿಗೆ ಬರುತ್ತೀಯಾ? ಎಂದೆಲ್ಲಾ ಅವರು ಕಿಡಿಕಾರಿದ್ದಾರೆ. ಅವರು ಕೂಡ ಯಾರ ಕುಟುಂಬದ ವಿಚಾರಕ್ಕೆ ಹೋಗಿದ್ದಾರೆ ಎಂಬುವುದನ್ನು ಹೇಳಬೇಕು. ಅವರು ಹೇಗೆ ಬೇರೆಯವರ ಕುಟುಂಬದ ವಿಚಾರಕ್ಕೆ ಹೋಗುತ್ತಾರೋ, ಅದೇ ರೀತಿ ಬೇರೆಯವರು ಅವರ ಕುಟುಂಬದ ವಿಚಾರಕ್ಕೆ ಹೋಗುತ್ತಾರೆ” ಎಂದು ವಾಗ್ದಾಳಿ ನಡೆಸಿದರು.

ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್, ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ, ಕೆಪಿಸಿಸಿ ಅಧ್ಯಕ್ಷರ ರಾಜಕೀಯ ಕಾರ್ಯದರ್ಶಿ ದೀಪಕ್ ತಿಮ್ಮಯ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿಜಯ್ ಮುಳಗುಂದ, ರಾಮಚಂದ್ರಪ್ಪ ಉಪಸ್ಥಿತರಿದ್ದರು.

ಇದನ್ನೂ ಓದಿ : ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ : ಸಚಿವ ಜಾರ್ಜ್‌ಗೆ ಕ್ಲೀನ್ ಚಿಟ್ ನೀಡಿದ್ದ ಸಿಬಿಐ ವರದಿ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...