Homeಕರ್ನಾಟಕಆ.31ರಂದು 'ರಾಜಭವನ ಚಲೋ' : ಡಿಸಿಎಂ ಡಿ ಕೆ ಶಿವಕುಮಾರ್

ಆ.31ರಂದು ‘ರಾಜಭವನ ಚಲೋ’ : ಡಿಸಿಎಂ ಡಿ ಕೆ ಶಿವಕುಮಾರ್

- Advertisement -
- Advertisement -

ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ ಸೇರಿದಂತೆ ರಾಜ್ಯಪಾಲರ ಮುಂದೆ ಬಾಕಿ ಇರುವ ಹಲವರ ಪ್ರಕರಣಗಳ ವಿಚಾರಣೆಗೆ ಅನುಮತಿ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್ ವತಿಯಿಂದ ಆಗಸ್ಟ್ 31ರಂದು ‘ರಾಜಭವನ ಚಲೋ’ ಹಮ್ಮಿಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಇಂದು (ಆ.27) ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,”ಆಗಸ್ಟ್ 31ರ ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು. ಈ ವೇಳೆ ಮುಖ್ಯಮಂತ್ರಿ, ಎಲ್ಲಾ ಸಚಿವರು, ಕಾಂಗ್ರೆಸ್‌ನ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಸಂಸದರು ಉಪಸ್ಥಿತರಿರಲಿದ್ದಾರೆ” ಎಂದು ಹೇಳಿದರು.

“ಬೇರೆ ನಾಯಕರ ವಿರುದ್ಧ ಪ್ರಾಥಮಿಕ ತನಿಖೆ ನಡೆದು ವಿಚಾರಣೆಗೆ ಅನುಮತಿ ಕೇಳಿದ್ದರೂ ರಾಜ್ಯಪಾಲರು ನೀಡಿಲ್ಲ. ಆದರೆ, ಯಾವುದೇ ಪ್ರಾಥಮಿಕ ತನಿಖೆ ನಡೆಯದಿದ್ದರೂ ಮುಖ್ಯಮಂತ್ರಿಗಳ ವಿರುದ್ಧ ವಿಚಾರಣೆಗೆ ತರಾತುರಿಯಲ್ಲಿ ಅನುಮತಿ ನೀಡಿದ್ದಾರೆ. ಹೀಗಾಗಿ, ಕಳೆದ ವಾರ ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರಿಗೆ ಕೆಲವು ಸಲಹೆಗಳನ್ನು ಕಳುಹಿಸಿದ್ದೆವು. ಮಖ್ಯಮಂತ್ರಿಗಳ ಪ್ರಕರಣ ನ್ಯಾಯಾಲಯದಲ್ಲಿದೆ. ಆದ್ದರಿಂದ ಈ ಬಗ್ಗೆ ಹೆಚ್ಚಿನ ವಿಚಾರ ಪ್ರಸ್ತಾಪ ಮಾಡುವುದಿಲ್ಲ. ನ್ಯಾಯಾಲಯ ಕಾನೂನಿನ ಪ್ರಕಾರ ಯಾವ ತೀರ್ಮಾನ ಮಾಡಬೇಕೋ ಮಾಡಲಿದೆ” ಎಂದರು.

ಹೆಚ್​ಡಿಕೆ ವಿರುದ್ದ ಕಿಡಿ

“ನಮ್ಮ ಬಿಗ್ ಬ್ರದರ್ ಕುಮಾರಸ್ವಾಮಿ ಸಾಚಾ ಕೆಲಸ ಮಾಡುವವರು. ಅವರ ವಿರುದ್ಧ 10 ವರ್ಷಗಳ ಹಿಂದೆಯೇ ಕೇಸು ದಾಖಲಾಗಿದೆ. 2023ರ ನವೆಂಬರ್ 21ರಂದು ಲೋಕಾಯುಕ್ತ ಎಸ್‌ಐಟಿ ಅಧಿಕಾರಿಗಳು ಕೂಡ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ನಾವೇನೂ ತಿರುಚಿ ಪರಚಿ ಮಾತಾಡುತ್ತಿಲ್ಲ. 218 ಪುಟಗಳ ತನಿಖಾ ವರದಿಯನ್ನು ರಾಜ್ಯಪಾಲರಿಗೆ ಎಸ್‌ಐಟಿ ನೀಡಿದೆ. ಬಹಳ ಸತ್ಯಕ್ಕೆ ಹೆಸರಾದವರು ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ, ನಾನು ಸಹಿಯೇ ಮಾಡಿಲ್ಲ ಎಂದು ಹೇಳಿದ್ದಾರೆ. ಅವರ ಹೇಳಿಕೆ ನೋಡಿ ನನಗೆ ಆಶ್ಚರ್ಯ ಆಯ್ತು” ಎಂದು ಡಿಕೆಶಿ ಕುಮಾರಸ್ವಾಮಿ ವಿರುದ್ದ ಕಿಡಿಕಾರಿದರು.

“ಅವರ ಸಹಿ ಅಲ್ಲ ಅಂದಮೇಲೆ ಯಾರೋ ಫೋರ್ಜರಿ ಮಾಡಿದ್ದಾರೆ. ಸಹಿ ಫೋರ್ಜರಿ ಮಾಡಿದ್ದಾರೆ ಎಂದು ಯಾಕೆ ದೂರು ಕೊಟ್ಟಿಲ್ಲ?. ಸಹಿ ಫೋರ್ಜರಿ ಆಗಿದ್ದಿದ್ದರೆ ಒಬ್ಬ ಪಿಸಿಗಾದರೂ ದೂರು ಕೊಡಬೇಕಲ್ವಾ? ಎಂದು ಪ್ರಶ್ನಿಸಿದರು.

“ನಾನು ಅವರ ಕುಟುಂಬದ ಆಸ್ತಿ ಬಗ್ಗೆ ಅನೇಕ ಪ್ರಶ್ನೆ ಕೇಳಿದ್ದೆ. ಈವರೆಗೂ ಅವರು ಅದಕ್ಕೆ ಉತ್ತರ ನೀಡಿಲ್ಲ. ನನ್ನ ಕುಟುಂಬದ ಸುದ್ದಿಗೆ ಬರುತ್ತೀಯಾ? ಎಂದೆಲ್ಲಾ ಅವರು ಕಿಡಿಕಾರಿದ್ದಾರೆ. ಅವರು ಕೂಡ ಯಾರ ಕುಟುಂಬದ ವಿಚಾರಕ್ಕೆ ಹೋಗಿದ್ದಾರೆ ಎಂಬುವುದನ್ನು ಹೇಳಬೇಕು. ಅವರು ಹೇಗೆ ಬೇರೆಯವರ ಕುಟುಂಬದ ವಿಚಾರಕ್ಕೆ ಹೋಗುತ್ತಾರೋ, ಅದೇ ರೀತಿ ಬೇರೆಯವರು ಅವರ ಕುಟುಂಬದ ವಿಚಾರಕ್ಕೆ ಹೋಗುತ್ತಾರೆ” ಎಂದು ವಾಗ್ದಾಳಿ ನಡೆಸಿದರು.

ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್, ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ, ಕೆಪಿಸಿಸಿ ಅಧ್ಯಕ್ಷರ ರಾಜಕೀಯ ಕಾರ್ಯದರ್ಶಿ ದೀಪಕ್ ತಿಮ್ಮಯ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿಜಯ್ ಮುಳಗುಂದ, ರಾಮಚಂದ್ರಪ್ಪ ಉಪಸ್ಥಿತರಿದ್ದರು.

ಇದನ್ನೂ ಓದಿ : ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ : ಸಚಿವ ಜಾರ್ಜ್‌ಗೆ ಕ್ಲೀನ್ ಚಿಟ್ ನೀಡಿದ್ದ ಸಿಬಿಐ ವರದಿ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...