Homeಮುಖಪುಟರಾಜ್ ಕುಂದ್ರಾ ಅಶ್ಲೀಲ ಚಿತ್ರಗಳಿಂದ ಪ್ರತಿದಿನ 6 ರಿಂದ 8 ಲಕ್ಷ ಗಳಿಸುತ್ತಿದ್ದರು: ಪೊಲೀಸರು

ರಾಜ್ ಕುಂದ್ರಾ ಅಶ್ಲೀಲ ಚಿತ್ರಗಳಿಂದ ಪ್ರತಿದಿನ 6 ರಿಂದ 8 ಲಕ್ಷ ಗಳಿಸುತ್ತಿದ್ದರು: ಪೊಲೀಸರು

- Advertisement -
- Advertisement -

ಅಶ್ಲೀಲ ಚಿತ್ರಗಳನ್ನು ತಯಾರಿಸುವುದು ಮತ್ತು ಮೊಬೈಲ್ ಆ್ಯಪ್‌ಗಳ ಮೂಲಕ ಅದನ್ನು ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಾಲಿವುಡ್‌‌‌‌ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಈ ವ್ಯವಹಾರದಿಂದ ರಾಜ್‌ ಕುಂದ್ರಾ ಅವರು ಪ್ರತಿದಿನ 6 ರಿಂದ 8 ಲಕ್ಷ ರೂ. ಸಂಪಾದನೆ ಮಾಡುತ್ತಿದ್ದರು ಎಂದು ಜಂಟಿ ಪೊಲೀಸ್ ಆಯುಕ್ತ (ಅಪರಾಧ ವಿಭಾಗ) ಮಿಲಿಂದ್ ಭರಂಬೆ ತಿಳಿಸಿದ್ದಾರೆ. ರಾಜ್‌ ಕುಂದ್ರಾ ಅವರು ಯುಕೆ ಮೂಲದ ಬ್ರದರ್-ಇನ್‌-ಲಾ ಪ್ರದೀಪ್ ಬಕ್ಷಿಯ ಕೆನ್ರಿನ್ ಲಿಮಿಟೆಡ್ ಜೊತೆ ಕೈಜೋಡಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

“ರಾಜ್ ಕುಂದ್ರಾ ಅವರು ಭಾರತದಿಂದ ವೀಡಿಯೊಗಳನ್ನು ಹಾಟ್‌ಶಾಟ್ ಎಂಬ ಅಪ್ಲಿಕೇಶನ್‌ನಲ್ಲಿ ಅಪ್‌ಲೋಡ್ ಮಾಡಲು ಸಾಧ್ಯವಾಗದ ಕಾರಣ, ಅವರು ಅವುಗಳನ್ನು ವೆಟ್ರಾನ್ಸ್‌ಫರ್ ಮೂಲಕ ವಿದೇಶಿ ಪ್ಲಾಟ್‌ಫಾರ್ಮ್‌ಗೆ ಕಳುಹಿಸುತ್ತಿದ್ದರು” ಎಂದು ಪೊಲೀಸ್‌ ಆಯುಕ್ತರು ಹೇಳಿದ್ದಾರೆ.

ಇದನ್ನೂ ಓದಿ: ಹಿರಿಯ ನಟ ವೈಜನಾಥ ಬಿರಾದಾರ ಅವರಿಗೆ ‘ಪದ್ಮಶ್ರೀ’ ನೀಡಲು ಆಗ್ರಹಿಸಿ ಆನ್‌ಲೈನ್‌ ಅಭಿಯಾನ

ಅಶ್ಲೀಲ ಚಿತ್ರಗಳ ತಯಾರಿಕೆ ಮತ್ತು ಅವುಗಳನ್ನು ಕೆಲವು ಅಪ್ಲಿಕೇಶನ್‌ಗಳ ಮೂಲಕ ಪ್ರಸಾರ ಮಾಡುವ ಬಗ್ಗೆ, ಫೆಬ್ರವರಿಯಲ್ಲಿ ಮುಂಬಯಿಯ ಅಪರಾಧ ವಿಭಾಗದಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ರಾಜ್ ಕುಂದ್ರಾ ಅವರನ್ನು ಜುಲೈ 19 ರಂದು ಬಂಧಿಸಿದ್ದೇವೆ. ಈ ಬಗ್ಗೆ ನಮಲ್ಲಿ ಸಾಕಷ್ಟು ಪುರಾವೆಗಳಿವೆ” ಎಂದು ಮುಂಬೈ ಪೊಲೀಸ್ ಆಯುಕ್ತರು ಹೇಳಿಕೆಯಲ್ಲಿ ತಿಳಿಸಿದ್ದರು.

“ಮುಂಬೈ ಪೊಲೀಸರು ತಮ್ಮ ತನಿಖೆಯ ಸಮಯದಲ್ಲಿ ಹಾಟ್‌ಶಾಟ್ ಚಿತ್ರಗಳು, ವಿಡಿಯೋ ತುಣುಕುಗಳು ಮತ್ತು ವಾಟ್ಸಾಪ್ ಚಾಟ್‌ಗಳು ಸೇರಿದಂತೆ ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದ್ದಾರೆ” ಎಂದು ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ.

ಉದ್ಯಮಿ ರಾಜ್ ಕುಂದ್ರಾ ಅವರು ಈ ವ್ಯವಹಾರದಿಂದ ಪ್ರತಿದಿನ ಸುಮಾರು 6 ರಿಂದ 8 ಲಕ್ಷಗಳನ್ನು ಗಳಿಸುತ್ತಿದ್ದರು. ಹಣಕಾಸಿನ ವಹಿವಾಟಿನ ದಾಖಲೆಗಳು ಸಾವಿರಾರು ಸಂಖ್ಯೆಯಲ್ಲಿವೆ. ನಿಖರವಾದ ಗಳಿಕೆಯನ್ನು ಪಡೆಯಲು ನಾವು ವಿವರಗಳನ್ನು ವಿಶ್ಲೇಷಿಸುತ್ತಿದ್ದೇವೆ. ಇದನ್ನು ಅಪರಾಧದ ಆದಾಯವೆಂದು ಪರಿಗಣಿಸಲಾಗುತ್ತದೆ. ಇಲ್ಲಿಯವರೆಗೆ ನಾವು ವಿವಿಧ ಖಾತೆಗಳಲ್ಲಿ 7.5 ಕೋಟಿ ರೂಗಳನ್ನು ಸ್ಥಗಿತಗೊಳಿಸಿದ್ದೇವೆ” ಎಂದು ಮಿಲಿಂದ್ ಭರಂಬೆ ತಿಳಿಸಿದ್ದಾರೆ.

ಈಗ ಹೆಚ್ಚು ಪ್ರಚಲಿತದಲ್ಲಿರುವ ವೆಬ್ ಶೋಗಳಲ್ಲಿ ಅವಕಾಶ ನೀಡುವ ನೆಪದಲ್ಲಿ ಸಣ್ಣ ಸಣ್ಣ ನಟರನ್ನು ಆಮಿಷಕ್ಕೆ ಒಳಪಡಿಸಲಾಗಿದೆ. ಅವರನ್ನು ಬೋಲ್ಡ್‌ ಸೀನ್‌ಗಳಲ್ಲಿ ನಟಿಸುವಂತೆ ಕೇಳಲಾಗಿದೆ. ಅವರ ಇಚ್ಛೆಗೆ ವಿರುದ್ದವಾಗಿ ಅರೆ-ನಗ್ನ ಮತ್ತು ನಗ್ನ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಹೀಗೆ ದೌರ್ಜನ್ಯಕ್ಕೆ ಒಳಗಾದವರಲ್ಲಿ ಕೆಲವರು ಪೊಲೀಸರನ್ನು ಸಂಪರ್ಕಿಸಿದ್ದಾರೆ ಎಂದು ಈ ಹಿಂದೆ ಭರಂಬೆ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದರು.


ಇದನ್ನೂ ಓದಿ: ಅಶ್ಲೀಲ ಚಿತ್ರ ತಯಾರಿಸಿ ಪ್ರಸಾರ: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್‌ ಕುಂದ್ರಾ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...